ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಬಹುನಿರೀಕ್ಷಿತ ಅಧಿಕಾರ ಹಸ್ತಾಂತರ ಪ್ರಕ್ರಿಯೆಗೆ ಬುಧವಾರ ಅಧಿಕೃತ ತೆರೆ ಬಿದ್ದಿದ್ದು, ಕೆಪಿಸಿಸಿ ಅಧ್ಯಕ್ಷ ಹಾಗೂ ‘ಟ್ರಬಲ್ ಶೂಟರ್’ ಖ್ಯಾತಿಯ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ಬೆಂಗಳೂರಿನ ಲೋಕಭವನದ ಗ್ಲಾಸ್ ಹೌಸ್ನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಡಿ.ಕೆ. ಶಿವಕುಮಾರ್ ಅವರಿಗೆ ಪ್ರಮಾಣವಚನ ಬೋಧಿಸಿದರು. ವಿಶೇಷವೆಂದರೆ, ಡಿ.ಕೆ. ಶಿವಕುಮಾರ್ ಅವರು ಸಂವಿಧಾನದ ಪುಸ್ತಕವನ್ನು ಕೈಯಲ್ಲಿ ಹಿಡಿದು ಪ್ರತಿಜ್ಞಾವಿಧಿ ಸ್ವೀಕರಿಸಿದರು.
ಪ್ರಮಾಣವಚನ ಸ್ವೀಕರಿಸುವ ವೇಳೆ ಅವರು ವೀರ ಗಂಗಾಧರ ಅಜ್ಜಯ್ಯನ ಹೆಸರನ್ನು ಉಲ್ಲೇಖಿಸಿ ಪ್ರತಿಜ್ಞೆ ಸ್ವೀಕರಿಸಿದ್ದು ಗಮನ ಸೆಳೆಯಿತು. ರಾಜ್ಯದ ಆಡಳಿತ ಚುಕ್ಕಾಣಿ ಹಿಡಿದಿರುವ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಹೊಸ ಸರ್ಕಾರ ಕಾರ್ಯಾರಂಭ ಮಾಡಿದೆ.
ಸಮಾರಂಭದಲ್ಲಿ ಸಚಿವರು, ಶಾಸಕರು, ಸಂಸದರು, ವಿವಿಧ ಗಣ್ಯರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿ ನೂತನ ಮುಖ್ಯಮಂತ್ರಿಗೆ ಶುಭ ಹಾರೈಸಿದರು.
ಹೈಲೈಟ್ಸ್
▶ ಡಿ.ಕೆ. ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ
▶ ಲೋಕಭವನದ ಗ್ಲಾಸ್ ಹೌಸ್ನಲ್ಲಿ ಪ್ರತಿಜ್ಞಾವಿಧಿ
▶ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಪ್ರಮಾಣವಚನ ಬೋಧನೆ
▶ ಸಂವಿಧಾನ ಪುಸ್ತಕ ಹಿಡಿದು ಪ್ರಮಾಣ ಸ್ವೀಕಾರ
▶ ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರತಿಜ್ಞೆ
What do you feel about this post?
Like
Love
Happy
Haha
Sad
