ಮಣಿಪಾಲ: ಶಾಲಾ ಬಸ್ ರಸ್ತೆ ಬದಿಯ ತೋಡಿಗೆ ಉರುಳಿ ಬಿದ್ದ ಪರಿಣಾಮ ಏಳು ಮಂದಿ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಸರಳೆಬೆಟ್ಟು ಕೊಡಂಗೆ ದೇವಸ್ಥಾನದ ಸಮೀಪ ನಡೆದಿದೆ.
ಮಣಿಪಾಲ ಕ್ರೈಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳನ್ನು ಕರೆದೊಯ್ಯುತ್ತಿದ್ದ ಸ್ಕೂಲ್ ಬಸ್ ತಿರುವಿನಲ್ಲಿ ಹಿಂದಕ್ಕೆ ತೆಗೆಯುವಾಗ ಚಾಲಕನ ನಿಯಂತ್ರಣ ತಪ್ಪಿ ಸಮೀಪದ ತೋಡಿಗೆ ಉರುಳಿ ಬಿದ್ದಿದೆ ಎಂದು ತಿಳಿದು ಬಂದಿದೆ.
ಈ ಬಸ್ ನಲ್ಲಿ 20 ಮಕ್ಕಳಿದ್ದು, ಇದರಲ್ಲಿ ಏಳು ಮಕ್ಕಳಿಗೆ ಗಾಯಗಳಾಗಿವೆ. ಈ ಪೈಕಿ ಬಾಲಕಿಗೆ ತೀವ್ರ ಗಾಯಗಳಾಗಿವೆ, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಮಣಿಪಾಲ ಪೊಲೀಸರು ದೌಡಾಯಿಸಿ ಬಂದು ಪರಿಶೀಲನೆ ನಡೆಸಿದ್ದರು.
ಶಾಲೆ ಬಸ್ ಗೆ ಹತ್ತಲು ಐದಾರು ಮಕ್ಕಳು ಪ್ರತಿದಿನ ರಸ್ತೆಯ ಬಲಭಾಗದಲ್ಲಿ ನಿಲ್ಲುತ್ತಿದ್ದರು. ಆದರೆ ಇವತ್ತು ರಸ್ತೆ ಎಡಭಾಗದಲ್ಲಿ ನಿಂತಿದ್ದರು. ಇಲ್ಲದಿದ್ದರೆ ಬಸ್ ಮಕ್ಕಳ ಮೇಲೆ ಉರುಳು ಬೀಳುತ್ತಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.
What do you feel about this post?
0%
Like
0%
Love
0%
Happy
0%
Haha
0%
Sad
0%



