ಪಾಟ್ನಾ: ದಿಲ್ಲಿಯ ಜಂತರ್ ಮಂತರ್ನಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಗೆ ಬೆಂಬಲವಾಗಿ ಪಾಟ್ನಾದಲ್ಲಿ ಎಐಎಸ್ಎ ನೇತೃತ್ವದಲ್ಲಿ ರಾಜಭವನ ಚಲೋ ಜಾಥಾ ನಡೆಯಿತು. ಜೆಪಿ ಗೋಲಂಬರ್ನಲ್ಲಿ ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಜಲಫಿರಂಗಿ, ಅಶ್ರುವಾಯು ಹಾಗೂ ಲಾಠಿ ಪ್ರಹಾರ ನಡೆಸಿದ ಪರಿಣಾಮ ಘರ್ಷಣೆ ಉಂಟಾಯಿತು.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಶಿಕ್ಷಣ ಕ್ಷೇತ್ರದಲ್ಲಿನ ಭ್ರಷ್ಟಾಚಾರ ಮತ್ತು ಶಿಕ್ಷಣದ ವಾಣಿಜ್ಯೀಕರಣವನ್ನು ಖಂಡಿಸಿದ ಪ್ರತಿಭಟನಾಕಾರರು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದರು. ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮವನ್ನು ವಿರೋಧಿಸಿ ಈ ಪ್ರತಿಭಟನೆ ಆಯೋಜಿಸಲಾಗಿತ್ತು.
What do you feel about this post?
0%
Like
0%
Love
0%
Happy
0%
Haha
0%
Sad
0%





