ಧರ್ಮಸ್ಥಳ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಅವರು ಕುಟುಂಬ ಸದಸ್ಯರ ಜತೆಗೆ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಹಾಗೂ ಸೇವೆ ಸಲ್ಲಿಸಿದರು.
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆ ಅವರ ಆಶೀರ್ವಾದ ಪಡೆದುಕೊಂಡರು. ಭೇಟಿಯ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ಕ್ಯಾ. ಬ್ರಿಜೇಶ್ ಚೌಟ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯ ಪ್ರತಾಪ್ಸಿಂಹ ನಾಯಕ್ ಸೇರಿದಂತೆ ಹಲವು ಹಲವರು ಇದ್ದರು.




