ಕುದ್ಮುಲ್ ರಂಗರಾವ್ ಸಮಾಧಿ ಅಭಿವೃದ್ಧಿಗೆ ವಿಳಂಬ ಬೇಡ: ಅಧಿಕಾರಿಗಳಿಗೆ ಶಾಸಕ ಕಾಮತ್ ಚಾಟಿ

ಮಂಗಳೂರು: ನಗರದ ಅತ್ತಾವರ ಬಾಬುಗುಡ್ಡೆಯಲ್ಲಿರುವ ದಲಿತೋದ್ದಾರಕ ಕುದ್ಮುಲ್ ರಂಗರಾವ್ ಅವರ ಸಮಾಧಿ ಹಾಗೂ ಪ್ರವಾಸಿ ತಾಣ ಅಭಿವೃದ್ಧಿ ಕಾಮಗಾರಿ ಅನಗತ್ಯವಾಗಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಸಂಬಂಧಿತ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಶೀಘ್ರ ಸಮಸ್ಯೆ ಬಗೆಹರಿಸಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂಬಂಧ ಸೋಮವಾರ ಮಹಾನಗರ ಪಾಲಿಕೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, 2022ರ ಬಿಜೆಪಿ ಸರ್ಕಾರದ ಅವಧಿಯಲ್ಲೇ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ-1ರಡಿ 3 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿತ್ತು. […]

Continue Reading

ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 86 ಮಕ್ಕಳು ಕಾಣೆಯಾದ ಪ್ರಕರಣ ದಾಖಲು: ಜಿಲ್ಲಾಧಿಕಾರಿ ದರ್ಶನ್

ಮಂಗಳೂರು: ದ.ಕ ಜಿಲ್ಲೆಯಲ್ಲಿ ಮಕ್ಕಳ ನಾಪತ್ತೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ವಿಳಂಬವಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಕ್ಕಳ ಕಲ್ಯಾಣ ಹಾಗೂ ರಕ್ಷಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಳೆದ ಒಂದು ವರ್ಷದಲ್ಲಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 86 ಮಕ್ಕಳು ಕಾಣೆಯಾದ ಪ್ರಕರಣಗಳು ದಾಖಲಾಗಿದ್ದು, ಅವರಲ್ಲಿ 79 ಮಕ್ಕಳು ಪತ್ತೆಯಾಗಿದ್ದಾರೆ. ಉಳಿದ ಪ್ರಕರಣಗಳನ್ನೂ ಆದ್ಯತೆಯ ಮೇರೆಗೆ ತನಿಖೆ ನಡೆಸಿ […]

Continue Reading

ಪಲ್ಸ್ ಪೊಲಿಯೋ ಸಿದ್ದತೆ ಮಾಡಿಕೊಳ್ಳಲು ಕಮಿಷನರ್ ರವಿಚಂದ್ರ ನಾಯಕ್ ಸೂಚನೆ

ಮಂಗಳೂರು: ಇದೇ 28 ರಂದು ನಡೆವ ರಾಷ್ಟ್ರೀಯ ಪಲ್ಸ್ ಪೊಲಿಯೋ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಪಾಲಿಕೆ ಕಮಿಷನರ್ ರವಿಚಂದ್ರ ನಾಯಕ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ಮಹಾನಗರ ಪಾಲಿಕೆ ಮಂಗಳಾ ಸಭಾಂಗಣದಲ್ಲಿ ಸೋಮವಾರ ನಡೆದ ನಗರ ಮಟ್ಟದ ಚಾಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ,0 ರಿಂದ 5 ವರ್ಷದೊಳಗಿನ ಯಾವುದೇ ಮಗುವೂ ಲಸಿಕೆಯಿಂದ ವಂಚಿತರಾಗಬಾರದು. ಮುಂಜಾಗೃತಾ ಕ್ರಮವಾಗಿ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಬೇಕು ಎಂದು ಹೇಳಿದರು. ಕಾರ್ಮಿಕರ ಮಕ್ಕಳಿಗೂ ಲಸಿಕೆ […]

Continue Reading

ವಿದ್ವತ್ ಪಿಯು ಕಾಲೇಜಿನಲ್ಲಿ ಯೋಗ ದಿನ: ವಿದ್ಯಾರ್ಥಿಗಳಿಂದ ಯೋಗಾಭ್ಯಾಸ ಪ್ರದರ್ಶನ

ಬೆಳ್ತಂಗಡಿ: ಅಂತರ ರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ಯೋಗಾಭ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ನ್ಯಾಚುರೋಪತಿ ವೈದ್ಯಕೀಯ ಅಧಿಕಾರಿ ಡಾ. ರಿಶಿಕಾ ರೈ ಅವರು ಮಾತನಾಡಿ, ಯೋಗವು ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಉತ್ತಮಗೊಳಿಸುವ ಮಹತ್ವದ ಸಾಧನವಾಗಿದೆ ಎಂದು ಹೇಳಿದರು. ನಿಯಮಿತ ಯೋಗಾಭ್ಯಾಸದಿಂದ ದೇಹದ ಲವಲವಿಕೆ ಹೆಚ್ಚುವುದರ ಜೊತೆಗೆ ಒತ್ತಡ ನಿಯಂತ್ರಣಕ್ಕೂ ಸಹಕಾರಿಯಾಗುತ್ತದೆ ಎಂದರು. ಯೋಗವು ಮನಸ್ಸಿಗೆ ಶಾಂತಿ ನೀಡುವುದರೊಂದಿಗೆ ಏಕಾಗ್ರತೆಯನ್ನು ವೃದ್ಧಿಸಿ ಆರೋಗ್ಯಕರ ಜೀವನಶೈಲಿಯನ್ನು ರೂಪಿಸಲು ನೆರವಾಗುತ್ತದೆ. […]

Continue Reading

ಮತದಾರರ ಪಟ್ಟಿ ಪರಿಷ್ಕರಣೆ,ಮನೆಮಟ್ಟದ ಜಾಗೃತಿಗೆ ಒತ್ತು ನೀಡಲು ಸಿಇಒ ಡಾ. ದಿಲೀಷ್ ಶಶಿ ಸೂಚನೆ

ಕಾರವಾರ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದ ಯಶಸ್ವಿಗಾಗಿ ಜಿಲ್ಲೆಯಾದ್ಯಂತ ಮನೆಮಟ್ಟದ ಜಾಗೃತಿ ಕಾರ್ಯಕ್ರಮಗಳನ್ನು ಮತ್ತಷ್ಟು ಬಲಪಡಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜೂನ್ 30 ರಿಂದ ಜುಲೈ 29 ರವರೆಗೆ ಮತಗಟ್ಟೆ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಮತದಾರರಿಗೆ ಎನ್ಯೂಮರೇಷನ್ ಫಾರ್ಮ್ ವಿತರಣೆ ಹಾಗೂ ಸಂಗ್ರಹ ಕಾರ್ಯ ನಡೆಸಲಿದ್ದಾರೆ ಎಂದು […]

Continue Reading

ಯೋಗದಿಂದ ಮನಸ್ಸಿನಲ್ಲಿ ಸಕಾರಾತ್ಮಕ ಚಿಂತನೆಗಳು ಮೂಡಲಿವೆ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ

ಕಾರವಾರ: ಇತ್ತೀಚಿನ ದಿನಗಳಲ್ಲಿ ತಂತ್ರಜ್ಞಾನ ವೃದ್ಧಿಯೊಂದಿಗೆ ದೈಹಿಕ ಶ್ರಮ ಕಡಿಮೆಯಾಗಿದ್ದು, ಆರೋಗ್ಯದ ಕಡೆ ನಿರ್ಲಕ್ಷ್ಯ ಹೆಚ್ಚಾಗಿದೆ. ಆಧುನಿಕ ಜೀವನಶೈಲಿಯಿಂದ ಮಕ್ಕಳಲ್ಲಿಯೂ ಒತ್ತಡ, ಖಿನ್ನತೆ ಹಾಗೂ ವಿದ್ಯಾರ್ಥಿಗಳಲ್ಲಿ ಆತ್ಮಹತ್ಯೆಯಂತಹ ನಕಾರಾತ್ಮಕ ಪ್ರವೃತ್ತಿಗಳು ಕಂಡುಬರುತ್ತಿವೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಹೇಳಿದರು. ಪೊಲೀಸ್ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಯೋಗ ಮತ್ತು ಕ್ರೀಡೆಯಿಂದ ಒತ್ತಡರಹಿತ, ಆರೋಗ್ಯಪೂರ್ಣ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. […]

Continue Reading

ಉಕ ಜಿಲ್ಲೆಯಲ್ಲಿ 873 ಲಸಿಕಾ ಕೇಂದ್ರ, 28ಕ್ಕೆ ಪಲ್ಸ್ ಪೊಲಿಯೋ ಅಭಿಯಾನ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ

ಕಾರವಾರ: ಉ.ಕ ಜಿಲ್ಲೆಯಾದ್ಯಂತ ಇದೇ 28 ರಂದು ನಡೆವ ಪಲ್ಸ್ ಪೊಲಿಯೋ ಲಸಿಕಾ ಅಭಿಯಾನ ಯಶಸ್ವಿಗೊಳಿವುದಕ್ಕೆ ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಲಸಿಕೆ ತಲುಪಬೇಕು ಹಾಗೂ ಯಾವುದೇ ಮಗು ಲಸಿಕೆಯಿಂದ ವಂಚಿತರಾಗಬಾರದು ಎಂದು ತಿಳಿಸಿದರು. ಜಿಲ್ಲೆಯಲ್ಲಿ ಒಟ್ಟು 873 ಲಸಿಕಾ […]

Continue Reading

ಸಹ್ಯಾದ್ರಿ ಕಾಲೇಜು–ಕ್ರಿಸ್ತು ಜಯಂತಿ ವಿವಿ ನಡುವೆ ಶೈಕ್ಷಣಿಕ ಸಹಕಾರ ಒಪ್ಪಂದಕ್ಕೆ ಸಹಿ

ಮಂಗಳೂರು: ಇಲ್ಲಿನ ಸಹ್ಯಾದ್ರಿ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಕಾಲೇಜು ಹಾಗೂ ಬೆಂಗಳೂರಿನ ಕ್ರಿಸ್ತು ಜಯಂತಿ ಡೀಮ್ಡ್ ಟು ಬಿ ವಿವಿ ನಡುವೆ ಶೈಕ್ಷಣಿಕ ಸಹಕಾರ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಸಹ್ಯಾದ್ರಿ ಕಾಲೇಜು ಆವರಣದಲ್ಲಿ ನಡೆದ ಸಮಾರಂಭದಲ್ಲಿ ಒಪ್ಪಂದ ಕಾರ್ಯಕ್ರಮ ನೆರವೇರಿತು. ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ ಕುಲಪತಿ ರೆವ್. ಡಾ. ಅಗಸ್ಟಿನ್ ಜಾರ್ಜ್ ಸಿ.ಎಂ.ಐ ಹಾಗೂ ಮುಖ್ಯ ಮಾನವ ಸಂಪನ್ಮೂಲ ಅಧಿಕಾರಿ ರೆವ್. ಫಾ. ಜೋಶಿ ಮ್ಯಾಥ್ಯೂ ಸಿ.ಎಂ.ಐ ಇದ್ದರು. ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜಿನ ಸಂಸ್ಥಾಪಕ ಡಾ. ಮಂಜುನಾಥ […]

Continue Reading

ಆರೋಗ್ಯದಲ್ಲಿ ಏರುಪೇರು: ನಟ ವಿನೋದ್ ಪ್ರಭಾಕರ್ ಆಸ್ಪತ್ರೆಗೆ ದಾಖಲು, ಆರೋಗ್ಯ ಸ್ಥಿರ

ಬೆಂಗಳೂರು: ಸ್ಯಾಂಡಲ್‌ವುಡ್ ನಟ ವಿನೋದ ಪ್ರಭಾಕರ್ ಅವರ ಆರೋಗ್ಯದಲ್ಲಿ ಏರುಪೇರು ಆಗಿದ್ದು, ಬೆಂಗಳೂರಿನ ನಾಗರಬಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮನೆಯಲ್ಲಿದ್ದ ವೇಳೆ ಅವರಿಗೆ ರಕ್ತದೊತ್ತಡ ಸಂಬಂಧಿತ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರು ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ. ಪ್ರಸ್ತುತ ಅವರಿಗೆ ಹೃದಯ ಆರೈಕೆ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ವೈದ್ಯರು ತೀವ್ರ ನಿಗಾ ಘಟಕದಲ್ಲಿ ಆರೋಗ್ಯ ಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸುತ್ತಿದ್ದಾರೆ. ಬಲಗೈ ಹಾಗೂ ಮುಖದ ಭಾಗದಲ್ಲಿ ಪಕ್ಷಾಘಾತದ ಲಕ್ಷಣಗಳಂತಿರುವ ತೊಂದರೆ** […]

Continue Reading

16ನೇ ಆವೃತ್ತಿಯ ಆಳ್ವಾಸ್ ಪ್ರಗತಿ ಉದ್ಯೋಗ ಮೇಳ ಅಗಸ್ಟ್ 7, 8ಕ್ಕೆ, ಗ್ರಾಮೀಣ ಮಟ್ಟದ ಪ್ರತಿಭೆಗಳಿಗೆ ಉದ್ಯೋಗ ಒದಗಿಸುವ ವೇದಿಕೆ: ಡಾ. ಮೋಹನ್ ಆಳ್ವ

ಮಂಗಳೂರು: ಗ್ರಾಮೀಣ ಪ್ರತಿಭೆಗಳಿಗೆ ಗುಣಮಟ್ಟದ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸುತ್ತಿರುವ 16ನೇ ಆವೃತ್ತಿಯ ಆಳ್ವಾಸ್ ಪ್ರಗತಿ ಉದ್ಯೋಗ ಮೇಳ ಆಗಸ್ಟ್ 7 ಮತ್ತು 8ರಂದು ಮೂಡುಬಿದಿರೆಯ ವಿದ್ಯಾಗಿರಿ ಆವರಣದಲ್ಲಿ ನಡೆಯಲಿದೆ. ಈ ಬಾರಿ 300ಕ್ಕೂ ಅಧಿಕ ಕಂಪೆನಿಗಳು ಭಾಗವಹಿಸುವ ನಿರೀಕ್ಷೆಯಿದ್ದು, ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯಗಳ ಅಭ್ಯರ್ಥಿಗಳಿಗೆ ಸ್ಥಳೀಯ, ರಾಷ್ಟ್ರೀಯ ಹಾಗೂ ಅಂತರ ರಾಷ್ಟ್ರೀಯ ಮಟ್ಟದ ಉದ್ಯೋಗಾವಕಾಶಗಳು ಲಭ್ಯವಾಗಲಿವೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅವರು ಶನಿವಾರ ಸುದ್ದಿಗೋಷ್ಟಿಯಲ್ಲಿ […]

Continue Reading