ಅರಬ್ಬಿ ಸಮುದ್ರದಲ್ಲಿ ಮುಳುಗುತ್ತಿದ್ದ ಭಾರತೀಯ ಹಡಗು ವಿರಾಟ್-1: 14 ನಾವಿಕರು ಸುರಕ್ಷಿತ ರಕ್ಷಣೆ

ಮಸ್ಕತ್: ತಾಂತ್ರಿಕ ವೈಫಲ್ಯದಿಂದ ಒಮಾನ್ ಕರಾವಳಿ ಸಮೀಪ ಅರಬ್ಬಿ ಸಮುದ್ರದಲ್ಲಿ ಮುಳುಗುವ ಸ್ಥಿತಿಗೆ ತಲುಪಿದ್ದ ಭಾರತೀಯ ವ್ಯಾಪಾರಿ ಹಡಗು ವಿರಾಟ್-1ನಲ್ಲಿದ್ದ 14 ನಾವಿಕರನ್ನು ಅಮೆರಿಕ ನೌಕಾಪಡೆ ಯಶಸ್ವಿಯಾಗಿ ರಕ್ಷಿಸಿದ ಘಟನೆ ನಡೆದಿದೆ. ರಕ್ಷಿಸಲ್ಪಟ್ಟ ಎಲ್ಲಾ ಭಾರತೀಯ ನಾವಿಕರು ಸುರಕ್ಷಿತವಾಗಿದ್ದು ಉತ್ತಮ ಆರೋಗ್ಯದಲ್ಲಿದ್ದಾರೆ ಎಂದು ಒಮಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ. ನಂತರ ಅವರನ್ನು ಮುಂಬೈಗೆ ತೆರಳುತ್ತಿದ್ದ ಮತ್ತೊಂದು ಹಡಗಿಗೆ ಸ್ಥಳಾಂತರಿಸಲಾಗಿದೆ. ಮಧ್ಯಪ್ರಾಚ್ಯ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಜೂನ್ 14ರಂದು ಅರಬ್ಬಿ ಸಮುದ್ರದಲ್ಲಿ ಅತಂತ್ರ ಸ್ಥಿತಿಯಲ್ಲಿ ಸಿಲುಕಿದ್ದ […]

Continue Reading

ರೋಗಿಗಳ ಸುರಕ್ಷತೆಗಾಗಿ ಪರಿಣಾಮಕಾರಿ ಕ್ರಮಗಳ ಅನುಷ್ಠಾನ ಮುಖ್ಯ: ಡೀನ್ ಡಾ. ಪೂರ್ಣಿಮಾ

ಕಾರವಾರ: ಆರೋಗ್ಯ ಸಂಸ್ಥೆಗಳಲ್ಲಿ ರೋಗಿಗಳ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸೋಂಕು ತಡೆ ಹಾಗೂ ನಿಯಂತ್ರಣ ಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಮತ್ತು ನಿರ್ದೇಶಕಿ ಡಾ. ಪೂರ್ಣಿಮಾ ಆರ್.ಟಿ. ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಗುಣಮಟ್ಟ ಭರವಸೆ ಘಟಕ ಹಾಗೂ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸೂಕ್ಷ್ಮಜೀವಶಾಸ್ತ್ರ ವಿಭಾಗದ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಆಸ್ಪತ್ರೆ ಸೋಂಕು ನಿಯಂತ್ರಣ […]

Continue Reading

ಬಾಲ ಕಾರ್ಮಿಕರು ಕಂಡು ಬಂದರೆ 1098 ಕ್ಕೆ ಕರೆ ಮಾಡಿ: ನ್ಯಾಯಾಧೀಶೆ ದಿವ್ಯಶ್ರೀ

ಕಾರವಾರ: ಬಾಲ ಕಾರ್ಮಿಕ ಪದ್ಧತಿ ಮಕ್ಕಳ ಭೌತಿಕ ಹಾಗೂ ಮಾನಸಿಕ ಬೆಳವಣಿಗೆಯನ್ನು ಕುಂಠಿತಗೊಳಿಸುವ ಗಂಭೀರ ಸಾಮಾಜಿಕ ಸಮಸ್ಯೆಯಾಗಿದ್ದು, ಮಕ್ಕಳಿಗೆ ಉತ್ತಮ ಆರೋಗ್ಯ, ಶಿಕ್ಷಣ ಮತ್ತು ಸುರಕ್ಷಿತ ಬಾಲ್ಯ ದೊರಕುವಂತೆ ಮಾಡಲು ಬಾಲ ಕಾರ್ಮಿಕ ಪದ್ಧತಿಯ ಸಂಪೂರ್ಣ ನಿರ್ಮೂಲನೆ ಅಗತ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ.ಎಂ. ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಬಾಲ […]

Continue Reading

ಚಿನ್ನಯ್ಯ ಜಾಮೀನು ರದ್ದತಿಗೆ ಮಟ್ಟಣ್ಣವರ್ ತಂಡದಿಂದ ಎಸ್ ಐಟಿಗೆ ಮನವಿ

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನಯ್ಯ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿರುವ ಬೆನ್ನಲ್ಲೆ, ಜಾಮೀನು ಷರತ್ತು ಉಲ್ಲಂಘನೆ ಆಗಿದೆ ಎಂದು ಆರೋಪಿಸಿ ಗಿರೀಶ್ ಮಟ್ಟಣ್ಣವರ್ ಹಾಗೂ ಜಯಂತ್ ಟಿ ನೇತೃತ್ವದ ತಂಡವು ಬೆಳ್ತಂಗಡಿ ಎಸ್‌ಐಟಿ ದೂರು ಸಲ್ಲಿಸಿದೆ. ಎಸ್‌ಐಟಿ ಕಚೇರಿಗೆ ಭೇಟಿ ನೀಡಿದ ತಂಡ, ಪ್ರಕರಣದ ಆರೋಪಿ ಚಿನ್ನಯ್ಯನಿಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸುವಂತೆ ಆಗ್ರಹಿಸಿತು. ಅಲ್ಲದೆ, ಪ್ರಕರಣದ ಸತ್ಯಾಸತ್ಯತೆ ಹೊರಬರಲು ಚಿನ್ನಯ್ಯನನ್ನು ಬ್ರೈನ್ ಮ್ಯಾಪಿಂಗ್ ಪರೀಕ್ಷೆಗೆ ಒಳಪಡಿಸಬೇಕು ಎಂದು ಮನವಿ ಮಾಡಿತು. ಹೈಕೋರ್ಟ್‌ಗೆ ಸಲ್ಲಿಸಿರುವ ಹೇಳಿಕೆಯನ್ನು […]

Continue Reading

ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕರಿಸಿರುವ ಕ್ರಮ ಪ್ರಜಾಪ್ರಭುತ್ವದ ಮೇಲಿನ ನಂಬಿಕೆಗೆ ಧಕ್ಕೆ: ಐವನ್ ಡಿಸೋಜ

ಮಂಗಳೂರು: ಬಿಜೆಪಿಯು ವೋಟ್ ಚೋರಿ ಜತೆಗೆ ಸೀಟ್ ಚೋರಿಯನ್ನೂ ನಡೆಸುತ್ತಿದ್ದು, ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಳಂಕ ತಂದಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರು ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಆರೋಪಿಸಿದರು. ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ತಿರಸ್ಕರಿಸಿರುವ ಕ್ರಮ ಪ್ರಜಾಪ್ರಭುತ್ವದ ಮೇಲಿನ ನಂಬಿಕೆಗೆ ಧಕ್ಕೆ ತಂದಿದೆ ಎಂದರು. ಜಾರ್ಖಂಡ್‌ನಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ನಾಮಪತ್ರದ ದೋಷ ಸರಿಪಡಿಸಲು ಅವಕಾಶ ನೀಡಿದ್ದರೂ, ಮೀನಾಕ್ಷಿ ನಟರಾಜನ್ ಅವರಿಗೆ ಅದೇ ಅವಕಾಶ […]

Continue Reading

ಬ್ಯಾಂಕ್ ಆಫ್ ಬರೋಡಾದ ಹೊಸ ವಿಶೇಷ ಉಳಿತಾಯ ಖಾತೆ; ಆರೋಗ್ಯ ಸೇವೆ, ಮನೆಬಾಗಿಲು ಬ್ಯಾಂಕಿಂಗ್ ಸೌಲಭ್ಯ

ಮಂಗಳೂರು: ಹಿರಿಯ ನಾಗರಿಕರ ಆರೋಗ್ಯ ಮತ್ತು ಆರ್ಥಿಕ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಬ್ಯಾಂಕ್ ಆಫ್ ಬರೋಡಾ ‘ಬಿಒಬಿ ಹಿರಿಯ ನಾಗರಿಕ ವಿಶೇಷ ಸಮ್ಮಾನ’ ಹೆಸರಿನ ಹೊಸ ವಿಶೇಷ ಉಳಿತಾಯ ಖಾತೆಯನ್ನು ಪರಿಚಯಿಸಿದೆ. 60 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಗ್ರಾಹಕರಿಗಾಗಿ ರೂಪಿಸಲಾದ ಈ ಖಾತೆಯು ಆರೋಗ್ಯ ಸೇವೆಗಳ ಪ್ರಯೋಜನಗಳು, ಉಚಿತ ಮನೆಬಾಗಿಲು ಬ್ಯಾಂಕಿಂಗ್ ಸೇವೆಗಳು ಹಾಗೂ ಹಲವು ಬ್ಯಾಂಕಿಂಗ್ ಮತ್ತು ಜೀವನಶೈಲಿ ಸೌಲಭ್ಯಗಳನ್ನು ಒಂದೇ ಯೋಜನೆಯಡಿ ಒದಗಿಸುತ್ತದೆ. ಈ ಖಾತೆಯ ಮೂಲಕ ಗರಿಷ್ಠ ಆರು ಕುಟುಂಬ ಸದಸ್ಯರು […]

Continue Reading

ಎಂಸಿಸಿ ಬ್ಯಾಂಕ್‌ಗೆ ಐತಿಹಾಸಿಕ ಶೇ 25 ರಷ್ಟು ಸಾಧನೆ, ಸಾಧಕರಿಗೆ ಪ್ರಶಸ್ತಿ ಪ್ರದಾನ

ಮಂಗಳೂರು: ಎಂಸಿಸಿ ಬ್ಯಾಂಕ್‌ನ 2025-26ನೇ ಹಣಕಾಸು ವರ್ಷದ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಮಂಗಳೂರು ಧರ್ಮಪ್ರಾಂತ್ಯದ ಎಸ್ಟೇಟ್ ವ್ಯವಸ್ಥಾಪಕ ವಂ. ಫಾ. ಮ್ಯಾಕ್ಸಿಂ ರೊಸಾರಿಯೊ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಎಂಸಿಸಿ ಬ್ಯಾಂಕ್ ಕ್ಯಾಥೋಲಿಕ್ ಸಮುದಾಯದ ಹೆಮ್ಮೆ ಹಾಗೂ ಅಮೂಲ್ಯ ಸಂಸ್ಥೆ ಆಗಿದೆ. ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೋ ಅವರ ನಾಯಕತ್ವ, ನಿರ್ದೇಶಕರ ಮಂಡಳಿಯ ಮಾರ್ಗದರ್ಶನ ಹಾಗೂ ಸಿಬ್ಬಂದಿ ಸಮರ್ಪಿತ ಸೇವೆ ಶ್ಲಾಘಿಸಿದರು. ಅಧ್ಯಕ್ಷ ಅನಿಲ್ ಲೋಬೊ ಅವರು ಮಾತನಾಡಿ, 2025-26ನೇ […]

Continue Reading

ಮಾಣಿಲ ಶ್ರೀಧಾಮದಲ್ಲಿ 48 ದಿನಗಳ ವರಮಹಾಲಕ್ಷ್ಮೀ ವ್ರತಾಚರಣೆಗೆ ಸಿದ್ಧತೆ: ಮೋಹನದಾಸ ಪರಮಹಂಸ ಸ್ವಾಮೀಜಿ

ಮಂಗಳೂರು: ಮಾಣಿಲ ಶ್ರೀಧಾಮ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ನಡೆಯಲಿರುವ 27ನೇ ವರ್ಷದ 48 ದಿನಗಳ ವರಮಹಾಲಕ್ಷ್ಮೀ ವ್ರತಾಚರಣೆಯ ಪೂರ್ವಭಾವಿ ಸಭೆ ಭಾನುವಾರ ನಡೆಯಿತು. ಈ ಸಂದರ್ಭದಲ್ಲಿ ಅನುಗ್ರಹ ಸಂದೇಶ ನೀಡಿದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಆರಾಧನೆ ಮತ್ತು ಆಧ್ಯಾತ್ಮಿಕ ಚಿಂತನೆಯ ಮೂಲಕ ಆತ್ಮೋನ್ನತಿ ಸಾಧಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಇಂದಿನ ಸಮಾಜದಲ್ಲಿ ಮಾದಕ ವಸ್ತುಗಳ ಸೇವನೆಯ ಹೊರತಾಗಿಯೂ ಜನರು ದಾರಿ ತಪ್ಪುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಆಧ್ಯಾತ್ಮವೇ ಇದಕ್ಕೆ ಶಾಶ್ವತ ಪರಿಹಾರವಾಗಿದ್ದು, ಭಜನೆ, ಧ್ಯಾನ, ಯಾಗ, ಯಜ್ಞ […]

Continue Reading

ಹೆದ್ದಾರಿ ವಿಸ್ತರಣೆಗೆ ಬಲಿಯಾದ ಸುಂದರರಾಮ್ ಶೆಟ್ಟಿ ಸಮಾಧಿ: ದಿನೇಶ್ ಹೆಗ್ಡೆ ಉಳೆಪಾಡಿ ಆಕ್ರೋಶ

ಮಂಗಳೂರು: ಮೂಲ್ಕಿಯ ಬಪ್ಪನಾಡು ದೇವಸ್ಥಾನದ ಪ್ರವೇಶದ್ವಾರದ ಸಮೀಪವಿದ್ದ ಸಮಾಜ ಸೇವಕ ಹಾಗೂ ಬ್ಯಾಂಕಿಂಗ್ ಕ್ಷೇತ್ರದ ಹಿರಿಯ ವ್ಯಕ್ತಿತ್ವ ಸುಂದರರಾಮ್ ಶೆಟ್ಟಿ ಅವರ ಸಮಾಧಿಯನ್ನು ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿಯ ವೇಳೆ ಯಾವುದೇ ಪರ್ಯಾಯ ವ್ಯವಸ್ಥೆ ಮಾಡದೆ ತೆರವುಗೊಳಿಸಿರುವುದನ್ನು ಖಂಡಿಸಲಾಗುತ್ತದೆ ಎಂದು ಅಭಿಮಾನಿ ಬಳಗದ ಪರ ವಕೀಲರಾದ ದಿನೇಶ್ ಹೆಗ್ಡೆ ಉಳೆಪಾಡಿ ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ಹೊರಹಾಕಿದರು. ಸಮಾಧಿ ತೆರವುಗೊಳಿಸುವ ಮುನ್ನ ಕುಟುಂಬಸ್ಥರು, ಅಭಿಮಾನಿಗಳು ಹಾಗೂ ಸ್ಥಳೀಯರೊಂದಿಗೆ ಯಾವುದೇ ಸಮಾಲೋಚನೆ ನಡೆಸದಿರುವುದು ಬೇಸರದ ಸಂಗತಿ. ಸುಂದರರಾಮ್ ಶೆಟ್ಟಿ […]

Continue Reading

ಉ.ಕ. ಜಿಲ್ಲೆಯಲ್ಲಿ 29 ಕಂದಾಯ ಸಿಬ್ಬಂದಿಗೆ ಬಡ್ತಿ; ಡಿಸಿ ಲಕ್ಷ್ಮೀಪ್ರಿಯಾ, ಎಡಿಸಿಗೆ ಸಂಘದ ಸನ್ಮಾನ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳು ಹಾಗೂ ದ್ವಿತೀಯ ದರ್ಜೆ ಸಹಾಯಕರಿಗೆ ಮಹತ್ವದ ಪದೋನ್ನತಿ ದೊರೆತಿದ್ದು, ಒಟ್ಟು 29 ಸಿಬ್ಬಂದಿಯನ್ನು ಪ್ರಥಮ ದರ್ಜೆ ಸಹಾಯಕ ಹಾಗೂ ಪ್ರಥಮ ದರ್ಜೆ ಕಂದಾಯ ನಿರೀಕ್ಷಕ ಹುದ್ದೆಗಳಿಗೆ ಬಡ್ತಿ ನೀಡಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ರಾಜ್ಯ ಕಂದಾಯ ಸೇವೆಗಳ (ವೃಂದ ಮತ್ತು ನೇಮಕಾತಿ) ನಿಯಮಗಳು–2026ರ ಅನ್ವಯ ಈ ಪದೋನ್ನತಿ ಪ್ರಕ್ರಿಯೆ ನಡೆಸಲಾಗಿದೆ. ಜಿಲ್ಲಾ ಕಂದಾಯ ಘಟಕದ ಗ್ರಾಮ ಆಡಳಿತ ಅಧಿಕಾರಿಗಳು ಮತ್ತು […]

Continue Reading