ಸಾವಯವ ಕೃಷಿಕರ ಮಾವು–ಹಲಸು ಮೇಳ, ವಿವಿಧ ತಳಿಯ ಮಾವು, ಹಲಸು ಪ್ರದರ್ಶನ, ಮಾರಾಟ: ಕಲ್ಕೂರ

ಮಂಗಳೂರು: ಕಲ್ಕೂರ ಪ್ರತಿಷ್ಠಾನ ಮಂಗಳೂರು ಹಾಗೂ ಸಾವಯವ ಕೃಷಿಕ ಗ್ರಾಹಕ ಬಳಗದ ಸಹಕಾರದಲ್ಲಿ ಸಾವಯವ ಕೃಷಿಕರು ಬೆಳೆಸಿದ ವಿಶಿಷ್ಟ ತಳಿಗಳ ಮಾವು ಮತ್ತು ಹಲಸಿನ ಸಮೃದ್ಧಿಯನ್ನು ಪರಿಚಯಿಸುವ ಮಾವು–ಹಲಸು ಮೇಳವನ್ನು ಜೂನ್ 20 ಮತ್ತು 21ರಂದು ನಗರದ ಕದ್ರಿ ಕಂಬಳ ಮಲ್ಲಿಕಾ ಬಡಾವಣೆಯ ‘ಮಂಜು ಪ್ರಾಸಾದ’ದ ಆವರಣದಲ್ಲಿ ಬೆಳಿಗ್ಗೆ 7ರಿಂದ ಸಂಜೆ 7 ಗಂಟೆಯವರೆಗೆ ಆಯೋಜನೆ ಮಾಡಲಾಗಿದೆ ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಅವರು ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ನಾಡು–ನುಡಿ ಜಾಗೃತಿ ಸಮ್ಮೇಳನ ಸರಣಿ […]

Continue Reading

ದ.ಕ ಜಿಲ್ಲೆಯಲ್ಲಿ ರೈತರ ಸಹಾಯಕ್ಕೆ ಕೃಷಿ ಇಲಾಖೆ ಸಜ್ಜು, ಬಿತ್ತನೆ ಬೀಜ, ಗೊಬ್ಬರ ದಾಸ್ತಾನು, ಎಂಒ 4 ಭತ್ತದ ತಳಿಗೆ ಬೇಡಿಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆ ಬಿರುಸು ಪಡೆದುಕೊಂಡಿದ್ದು, ಕೃಷಿ ಚಟುವಟಿಕೆಗಳು ಚುರುಕುಗೊಂಡಿವೆ. ಹದವಾದ ಮಳೆಯಿಂದಾಗಿ ಕೃಷಿಕರು ಭತ್ತದ ನಾಟಿ ಸೇರಿದಂತೆ ವಿವಿಧ ಕೃಷಿ ಕಾರ್ಯಗಳನ್ನು ಆರಂಭಿಸಿದ್ದಾರೆ. ಬೀಜ, ಗೊಬ್ಬರ ಖರೀದಿ ಭರಾಟೆ ಜೋರಾಗಿದೆ. ಜಿಲ್ಲೆಯಲ್ಲಿ 10 ಸಾವಿರ ಹೆಕ್ಟೇರ್ ಭತ್ತ ಬೆಳೆಯುವ ಕೃಷಿ ಭೂಮಿ ಇದ್ದು, 46 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆ ಕಾರ್ಯ ಆಗಿದೆ. ಜಿಲ್ಲೆಯ ಬೆಳ್ತಂಗಡಿ, ಪುತ್ತೂರು, ಕಡಬ, ಸುಳ್ಯ ತಾಲ್ಲೂಕಿನಲ್ಲಿ ಬಿತ್ತನೆ ಕಾರ್ಯ ಮಾಡಲಾಗಿದೆ. ಕೃಷಿ ಚಟುವಟಿಕೆಗಾಗಿ ರೈತರ ರೈತ […]

Continue Reading

ಜೂನ್ 10 ರಿಂದ ಕರಾವಳಿಯಲ್ಲಿ ಮುಂಗಾರು ಚುರುಕು; ಜಿಲ್ಲೆಯಲ್ಲಿ ಮತ್ತೆ ಮಳೆ ಚಟುವಟಿಕೆ ಆರಂಭ

ಮಂಗಳೂರು: ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸೋಮವಾರ ಮೋಡ ಕವಿದ ವಾತಾವರಣ ಮುಂದುವರೆದಿದ್ದು, ದಿನವಿಡೀ ಹವಾಮಾನದಲ್ಲಿ ಏರುಪೇರು ಕಂಡುಬಂತು. ಜಿಲ್ಲೆಯ ಹಲವೆಡೆ ಬಿಟ್ಟುಬಿಟ್ಟು ಮಳೆಯಾಗಿದ್ದು, ಸಂಜೆ ವೇಳೆಗೆ ಬೆಳ್ತಂಗಡಿ, ಸುಳ್ಯ ಹಾಗೂ ಪುತ್ತೂರು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಮಂಗಳೂರು, ಉಳ್ಳಾಲ, ಬಂಟ್ವಾಳ ಮತ್ತು ಮೂಲ್ಕಿ ತಾಲೂಕಿನ ಕೆಲವೆಡೆ ಸಾಧಾರಣ ಮಳೆಯಾದ ಬಗ್ಗೆ ವರದಿಯಾಗಿದೆ. ಕಳೆದ ಕೆಲವು ದಿನಗಳಿಂದ ಕುಂಠಿತಗೊಂಡಿದ್ದ ಮಳೆ ಚಟುವಟಿಕೆ ಮತ್ತೆ ಚುರುಕುಗೊಳ್ಳುವ ನಿರೀಕ್ಷೆ ಇದೆ. ಜಿಲ್ಲಾಡಳಿತದ ಮಳೆ ಅಂಕಿ-ಅಂಶಗಳ […]

Continue Reading

ಮಂಗಳೂರಿನಲ್ಲಿ ಎರಡು ದಿನ ರಾಜ್ಯ ಮಟ್ಟದ ಗೇರು ಮೇಳ, ಸಾಧಕರಿಗೆ ಸನ್ಮಾನ, ರೈತರಿಗೆ ಉಚಿತ ಕಣ್ಣಿನ ತಪಾಸಣೆ: ಮಮತಾ ಗಟ್ಟಿ

ಮಂಗಳೂರು: ಇದೇ 17, 18,ರಂದು ಮಂಗಳೂರು ಕದ್ರಿ ಉದ್ಯಾನದಲ್ಲಿ ನಡೆಯಲಿರುವ ಎರಡು ದಿನಗಳ ಗೇರು ಮೇಳದ ಉದ್ಘಾಟನೆ ಮೇ17ರಂದು ಬೆಳಿಗ್ಗೆ 11ಗಂಟೆಗೆ ಸ್ಪೀಕರ್ ಯು. ಟಿ. ಖಾದರ್ ಫರೀದ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ಸಚಿವ ಈಶ್ವರ್ ಬಿ. ಖಂಡ್ರೆ ಉದ್ಘಾಟಿಸಲಿದ್ದಾರೆ ಎಂದು ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಅವರು ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಸಮಾರಂಭದ ಅಧ್ಯಕ್ಷತೆಯನ್ನು […]

Continue Reading