ರಾಹುಲ್ ಗಾಂಧಿ ವಿರುದ್ಧ ಯಶ್ ಪಾಲ ಸುವರ್ಣ ಹೇಳಿಕೆ, ವಿಕೃತ ಮನಸ್ಸಿನದ್ದು: ಸಚಿವ ಖಾದರ್

ಮಂಗಳೂರು: ಶಾಸಕ ಯಶ್ ಪಾಲ್ ಸುವರ್ಣರದ್ದು ನಾಲಾಯಕ್ ಹೇಳಿಕೆ. ಇದಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಿಲ್ಲ, ಯಾಕೆಂದರೆ ಅವರು ರಾಹುಲ್ ಗಾಂಧಿ ಕಾಲಿನ ಕಿರು ಬೆರಳಿಗೂ ಸಮವಲ್ಲ. ಅವರೆಲ್ಲಿ, ಇವರೆಲ್ಲಿ? ಇಂತಹ ಹೇಳಿಕೆಯಿಂದ ಏನು ಪ್ರಯೋಜನ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಕಿಡಿಕಾರಿದರು. ಕರಾವಳಿಗೆ ಎಲ್ಲ ವಿಚಾರದಲ್ಲೂ ಘನತೆ, ಗೌರವ ಇದೆ. ಎಲ್ಲ ಪಕ್ಷದ ಶಾಸಕರು ಕರಾವಳಿ ಗೌರವವನ್ನು ಉಳಿಸಿಕೊಂಡು ಬಂದಿದ್ದಾರೆ. ಯಶ್ ಪಾಲ್ ಅವರ ಹೇಳಿಕೆ ಕಪ್ಪು ಚುಕ್ಕೆ ಆಗಿದ್ದು ಅವರದ್ದೇ […]

Continue Reading

ಸರಕಾರಿ ಆಸ್ಪತ್ರೆಗಳಲ್ಲಿ ಡಿಜಿಟಲ್ ಸ್ಪರ್ಶ, ಬ್ರಾಡ್‌ಬ್ಯಾಂಡ್ ಸಂಪರ್ಕ, ಕಾಗದ ರಹಿತ ವ್ಯವಸ್ಥೆ: ಸಚಿವ ಯು.ಟಿ. ಖಾದರ್

ಮಂಗಳೂರು: ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆ 183 ಸರಕಾರಿ ಆಸ್ಪತ್ರೆಗಳಿಗೆ ಬ್ರಾಡ್‌ಬ್ಯಾಂಡ್ ಸಂಪರ್ಕ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಕಾಗದ ರಹಿತ ವ್ಯವಸ್ಥೆ ಜಾರಿಗೆ ತರುವ ನಿಟ್ಟಿನಲ್ಲಿ ಸಂಪೂರ್ಣ ಡಿಜಿಟಲ್ ಸ್ಪರ್ಶ ನೀಡಲಾಗುತ್ತದೆ. ಈಗಾಗಲೇ ನಾಲ್ಕು ಜಿಲ್ಲೆಯ 40 ಆಸ್ಪತ್ರೆಗಳಲ್ಲಿ ಪೈಲೆಟ್ ಯೋಜನೆ ಅಡಿಯಲ್ಲಿ ಇ ಹೆಲ್ತ್ ಸಾಫ್ಟವೇರ್ ಜೋಡಿಸುವ ಕೆಲಸ ನಡೆಯುತ್ತಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಗುರುವಾರ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ಸರ್ಕಾರಿ ಆರೋಗ್ಯ ಸೇವೆ ಹೆಚ್ಚು ಪಾರದರ್ಶಕ, ತಂತ್ರಜ್ಞಾನ ಆಧಾರಿತ ಹಾಗೂ […]

Continue Reading

ಯಶ್‌ಪಾಲ್ ಸುವರ್ಣ ವಿರುದ್ಧ ಕಠಿಣ ಕಾನೂನು ಕ್ರಮ: ಡಾ. ಮಂಜುನಾಥ ಭಂಡಾರಿ

ಮಂಗಳೂರು: ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ನೀಡಿರುವ ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಹೇಳಿಕೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಕಾನೂನಿನ ಅನ್ವಯ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿದ್ಯಾರ್ಥಿಗಳ ಹಿತದ ಪರವಾಗಿ ನಡೆದ ಹೋರಾಟಕ್ಕೆ ಬೆಂಬಲ ನೀಡಿದ್ದ ರಾಹುಲ್ ಗಾಂಧಿ ವಿರುದ್ಧ ನಿರಾಧಾರ ಆರೋಪ ಹಾಗೂ ಬೆದರಿಕೆ ಹಾಕಿರುವುದು […]

Continue Reading

ರಾಹುಲ್ ಗಾಂಧಿ ವಿರುದ್ಧ ಹೇಳಿಕೆ: ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಪ್ರಕರಣ ದಾಖಲು

ಉಡುಪಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹಾಗೂ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿದ ಆರೋಪದಡಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಮಂಗಳವಾರ ನಗರದಲ್ಲಿ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಶಾಸಕ ಯಶ್‌ಪಾಲ್ ಸುವರ್ಣ ಅವರು ರಾಹುಲ್ ಗಾಂಧಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಬಳಿಕ ಕಾಂಗ್ರೆಸ್ ಮುಖಂಡರು ಕಾನೂನು […]

Continue Reading

ಅಕ್ರಮ ಪಡಿತರ ಅಕ್ಕಿ ಸಾಗಣೆ ಪತ್ತೆ, 17 ಕ್ವಿಂಟಲ್ ಅಕ್ಕಿ, ವಾಹನ ಜಪ್ತಿ: ಬನವಾಸಿ ಪೊಲೀಸರ ಕಾರ್ಯಾಚರಣೆ

ಸಿರಸಿ: ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಿಸುತ್ತಿದ್ದ ಜಾಲವನ್ನು ಬನವಾಸಿ ಪೊಲೀಸರು ಭೇದಿಸಿದ್ದು, ವಾಹನ ಸಮೇತ 17 ಕ್ವಿಂಟಲ್ ಪಡಿತರ ಅಕ್ಕಿಯನ್ನು ಜಪ್ತಿ ಮಾಡಿ ವಶಕ್ಕೆ ಪಡೆದುಕೊಂಡಿದ್ದಾರೆ. ಬನವಾಸಿ ದಾಸನಕೊಪ್ಪ ಕ್ರಾಸ್ ಬಳಿ ಬನವಾಸಿ ಪೊಲೀಸ್ ಠಾಣೆ ಪಿಎಸ್ಐ ಮಹಾಂತಪ್ಪ ಕುಂಬಾರ್ ಅವರ ನೇತೃತ್ವದಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಅಕ್ರಮ ಸಾಗಾಟ ಬೆಳಕಿಗೆ ಬಂದಿದೆ. ತಪಾಸಣೆ ವೇಳೆ ವಾಹನದಲ್ಲಿ ಯಾವುದೇ ಪರವಾನಗಿ ಅಥವಾ ದಾಖಲೆಗಳಿಲ್ಲದೆ ಪಡಿತರ ಅಕ್ಕಿ ಸಾಗಿಸಲಾಗುತ್ತಿತ್ತು ಎಂಬುದು ಪತ್ತೆ […]

Continue Reading

ಉ. ಕದಲ್ಲಿ 11.05 ಲಕ್ಷ ಎನ್ಯುಮರೇಷನ್ ಫಾರ್ಮ್‌ಗಳ ಗಣಕೀಕರಣ ಪೂರ್ಣ: ಡಿಸಿ ಲಕ್ಷ್ಮಿಪ್ರಿಯಾ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026 ಕಾರ್ಯ ಚುರುಕಿನಿಂದ ಸಾಗುತ್ತಿದ್ದು, ಜಿಲ್ಲೆಯಲ್ಲಿ ಇದುವರೆಗೆ 11,05,024 ಎನ್ಯುಮರೇಷನ್ ಫಾರ್ಮ್‌ಗಳನ್ನು ಗಣಕೀಕರಣಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 12,30,037 ಮತದಾರರು ಇದ್ದು, ಪ್ರತಿಯೊಬ್ಬ ಮತದಾರರಿಗೂ ಎನ್ಯುಮರೇಷನ್ ಫಾರ್ಮ್‌ಗಳನ್ನು ವಿತರಿಸಲಾಗಿದೆ. ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸುವ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಫಾರ್ಮ್‌ಗಳ ಡಿಜಿಟಲ್ ದಾಖಲಾತಿ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ. ಮನೆ ಮನೆ ಭೇಟಿಯ ವೇಳೆ ಸ್ಥಳಾಂತರ, ಮರಣ ಹಾಗೂ […]

Continue Reading

500 ಕ್ಕೂ ಅಧಿಕ ಅಂಕ ಪಡೆದ ನೀಟ್ ಸಾಧಕರಿಗೆ ಎಕ್ಸಲೆಂಟ್ ಕಾಲೇಜಿನಲ್ಲಿ ಸನ್ಮಾನ

ಮೂಡುಬಿದಿರೆ: ನೀಟ್ ಪರೀಕ್ಷೆಯಲ್ಲಿ 500 ಕ್ಕೂ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಮೂಡುಬಿದಿರೆಯ ಎಕ್ಸಲೆಂಟ್ ಪಿಯು ಕಾಲೇಜಿನ ರಾಜ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಅವರು ಮಾತನಾಡಿ, ವಿದ್ಯಾರ್ಥಿಯ ಸಾಮರ್ಥ್ಯವನ್ನು ಕೇವಲ ಎಸ್‌ಎಸ್‌ಎಲ್‌ಸಿ ಅಂಕಗಳ ಆಧಾರದ ಮೇಲೆ ನಿರ್ಧರಿಸಲು ಸಾಧ್ಯವಿಲ್ಲ. ಸೂಕ್ತ ಮಾರ್ಗದರ್ಶನ, ಶಿಸ್ತುಬದ್ಧ ಶಿಕ್ಷಣ ವ್ಯವಸ್ಥೆ ಹಾಗೂ ನಿರಂತರ ಪ್ರೋತ್ಸಾಹ ದೊರೆತರೆ ಸಾಮಾನ್ಯ ವಿದ್ಯಾರ್ಥಿಯೂ ರಾಷ್ಟ್ರೀಯ ಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಬಹುದು ಎಂದರು. ಸಂಸ್ಥೆಯ […]

Continue Reading

ಬ್ಯಾಂಕ್ ಆಫ್ ಬರೋಡಾ ಹಣಕಾಸು ಸಾಧನೆ: ಜಾಗತಿಕ ವ್ಯವಹಾರ 30.50 ಲಕ್ಷ ಕೋಟಿಗೆ ಏರಿಕೆ

ಮುಂಬೈ: ಬ್ಯಾಂಕ್ ಆಫ್ ಬರೋಡಾ 2026ರ ಜೂನ್ 30ಕ್ಕೆ ಅಂತ್ಯಗೊಂಡ ತ್ರೈಮಾಸಿಕದ ಹಣಕಾಸು ಫಲಿತಾಂಶ ಪ್ರಕಟಿಸಿದ್ದು, ಬ್ಯಾಂಕ್‌ನ ಜಾಗತಿಕ ವ್ಯವಹಾರವು ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ15.4ರಷ್ಟು ಏರಿಕೆಯಾಗಿ 30,50,457 ಕೋಟಿಗೆ ತಲುಪಿದೆ. ಬ್ಯಾಂಕ್‌ನ ಜಾಗತಿಕ ಸಾಲ ವಿತರಣೆ ಶೇ17.4 ಹಾಗೂ ದೇಶೀಯ ಸಾಲ ವಿತರಣೆ ಶೇ16.1ರಷ್ಟು ಹೆಚ್ಚಳ ಕಂಡಿದೆ. ವಾಹನ ಸಾಲ ಶೇ 25.3, ಅಡಮಾನ ಸಾಲ ಶೇ 27.4, ಗೃಹ ಸಾಲ ಶೇ14.7 ಮತ್ತು ಶಿಕ್ಷಣ ಸಾಲ ಶೇ10.8ರಷ್ಟು ಬೆಳವಣಿಗೆ ದಾಖಲಿಸಿದೆ. ಚಿಲ್ಲರೆ, […]

Continue Reading

ಕಳಪೆ ಕಾಮಗಾರಿ, ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ಸಿಇಒ ಡಾ. ದಿಲೀಷ್ ಶಶಿ ಎಚ್ಚರಿಕೆ

ಕಾರವಾರ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಕೈಗೊಳ್ಳಲಾಗುತ್ತಿರುವ ಕಾರ್ಯ ಪಡೆ ಸೇರಿದಂತೆ ಎಲ್ಲ ಕಾಮಗಾರಿಗಳ ಗುಣಮಟ್ಟದಲ್ಲಿ ಯಾವುದೇ ಲೋಪ ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರ ಕನ್ನಡ ಜಿಪಂ ಸಿಇಒ ಡಾ. ದಿಲೀಷ್ ಶಶಿ ಅವರು ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಗುಣಮಟ್ಟದ ಮೂಲಸೌಕರ್ಯ ಒದಗಿಸುವುದು ಇಲಾಖೆಯ […]

Continue Reading

ಕ್ರಿಮ್ಸ್‌ಗೆ 200 ಎಂಬಿಬಿಎಸ್ ಸೀಟುಗಳ ಅನುಮೋದನೆ: 2026-27 ರಿಂದ ಹೆಚ್ಚುವರಿ ಪ್ರವೇಶ, ಹೊಸ ಆರೋಗ್ಯ ವಿಜ್ಞಾನ ಕೋರ್ಸ್‌

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಕ್ರಿಮ್ಸ್)ಗೆ ಮಹತ್ವದ ಉತ್ತೇಜನ ದೊರೆತಿದ್ದು, 2026-27ನೇ ಶೈಕ್ಷಣಿಕ ವರ್ಷದಿಂದ ಒಟ್ಟು 200 ಎಂಬಿಬಿಎಸ್ ಸೀಟುಗಳಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ), ನವದೆಹಲಿಯಿಂದ ಅನುಮೋದನೆ ಲಭಿಸಿದೆ ಎಂದು ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಹಾಗೂ ನಿರ್ದೇಶಕಿ ಡಾ. ಪೂರ್ಣಿಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈವರೆಗೆ ಕ್ರಿಮ್ಸ್‌ಗೆ 150 ಎಂಬಿಬಿಎಸ್ ಸೀಟುಗಳಿಗೆ ಮಾತ್ರ ಅನುಮತಿ ಇದ್ದು, ಇದೀಗ ಹೆಚ್ಚುವರಿ 50 ಸೀಟುಗಳನ್ನು ಮಂಜೂರು ಮಾಡಲಾಗಿದೆ. ಇದರಿಂದ ಮುಂದಿನ […]

Continue Reading