ರೋಹನ್ ಕಾರ್ಪೊರೇಷನ್‌ನಿಂದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರಿಗೆ ಸನ್ಮಾನ

ಮಂಗಳೂರು: ರೋಹನ್ ಕಾರ್ಪೊರೇಷನ್ ವತಿಯಿಂದ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರನ್ನು ನಗರದ ಬಿಜೈಯಲ್ಲಿರುವ ರೋಹನ್ ಸಿಟಿಯಲ್ಲಿ ವಿಶೇಷ ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಪ್ರಶಸ್ತಿ ವಿಜೇತರು ಸಂಸ್ಥೆಯ ಸಿಬ್ಬಂದಿ ಭಾಗವಹಿಸಿದ್ದರು. ರೋಹನ್ ಕಾರ್ಪೊರೇಷನ್‌ನ ನಿರ್ದೇಶಕ ಡಿಯೋನ್ ಮೊಂಟೇರೊ ಹಾಗೂ ಮಹಾಪ್ರಬಂಧಕಿ ಸುಮನಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ, ಕರಾವಳಿ ಭಾಗಕ್ಕೆ ರಾಷ್ಟ್ರೀಯ ಮಟ್ಟದಲ್ಲಿ ಕೀರ್ತಿ ತಂದ ಸಾಧಕರನ್ನು ಅಭಿನಂದಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ‘ಮಿಥ್ಯ’ ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಪಡೆದ ರೂಪಶ್ರೀ […]

Continue Reading

ಅಮೆರಿಕದಲ್ಲಿ ಪ್ರತಿಷ್ಠಿತ ಪ್ರಶಸ್ತಿ ಮುಡಿಗೇರಿಸಿಕೊಂಡ ಆರೋಗ್ಯ ಸಚಿವ ಖಾದರ್

ಮಂಗಳೂರು: ಸಚಿವ ಯು.ಟಿ. ಖಾದರ್ ಅವರಿಗೆ ಅಮೆರಿಕದ ಇಲಿನಾಯ್ಸ್ ರಾಜ್ಯದ ನೇಪರ್ವಿಲ್ಲೆಯ ಯೆಲ್ಲೋ ಬಾಕ್ಸ್ ಸಭಾಂಗಣದಲ್ಲಿ ನಡೆದ ಅಮೆರಿಕನ್ ಬಹುಜನಾಂಗೀಯ ಆಯೋಗದ 15ನೇ ವಾರ್ಷಿಕ ಜಾಗತಿಕ ಸಾಧಕರ ಸನ್ಮಾನ ಸಮಾರಂಭದಲ್ಲಿ ಪ್ರತಿಷ್ಠಿತ ಜಾಗತಿಕ ನಾಗರಿಕ ನಾಯಕತ್ವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿ ಸ್ವೀಕರಿಸಿದ ಬಳಿಕ ಅವರು ಮಾತನಾಡಿ, ಈ ಗೌರವ ತಮ್ಮ ಸಾರ್ವಜನಿಕ ಸೇವೆಗೆ ದೊರೆತ ಮಹತ್ವದ ಮಾನ್ಯತೆ ಆಗಿದ್ದು, ಜನಸೇವೆಯ ಹಾದಿಯಲ್ಲಿ ಇನ್ನಷ್ಟು ಜವಾಬ್ದಾರಿಯಿಂದ ಕೆಲಸ ಮಾಡಲು ಇದು ಪ್ರೇರಣೆ ನೀಡುತ್ತದೆ. ಈ ಪ್ರಶಸ್ತಿಯನ್ನು ಕರ್ನಾಟಕದ […]

Continue Reading

ಜನವರಿಯಲ್ಲಿ ಆಳ್ವಾಸ್ ನುಡಿಸಿರಿ–ವಿರಾಸತ್: ಡಾ. ಮೋಹನ್ ಆಳ್ವ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸುವ ರಾಷ್ಟ್ರಮಟ್ಟದ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವ ಆಳ್ವಾಸ್ ನುಡಿಸಿರಿ–ವಿರಾಸತ್ ಅನ್ನು ಮುಂಬರುವ ವರ್ಷದ ಜನವರಿಯಲ್ಲಿ ಅದ್ದೂರಿಯಾಗಿ ಆಯೋಜಿಸಲು ತೀರ್ಮಾನಿಸಲಾಗಿದೆ. ಈ ಬಾರಿ ನುಡಿಸಿರಿ ಮತ್ತು ವಿರಾಸತ್ ಉತ್ಸವಗಳನ್ನು ಒಂದೇ ವೇದಿಕೆಯಲ್ಲಿ ನಡೆಸುವ ಮೂಲಕ ಸಾಹಿತ್ಯ, ಕಲೆ ಮತ್ತು ಸಂಸ್ಕೃತಿಯ ವಿಶಿಷ್ಟ ಸಂಗಮಕ್ಕೆ ವೇದಿಕೆ ಕಲ್ಪಿಸಲಾಗುತ್ತಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರ ಸ್ವಗೃಹದಲ್ಲಿ ನಡೆದ ಪ್ರಾಥಮಿಕ ಸಮಾಲೋಚನಾ ಸಭೆಯಲ್ಲಿ ಉತ್ಸವದ ರೂಪುರೇಷೆಗಳ ಕುರಿತು ಸುದೀರ್ಘ […]

Continue Reading

ಉ.ಕ ಜಿಲ್ಲೆಯಲ್ಲಿ 10,88,604 ಎನ್ಯುಮರೇಷನ್ ಫಾರ್ಮ್ ಗಣಕೀಕರಣ: ಡಿಸಿ ಲಕ್ಷ್ಮಿಪ್ರಿಯಾ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕ್ಕರಣೆ-2026 ಪ್ರಕ್ರಿಯೆ ಚುರುಕಿನಿಂದ ಸಾಗಿದ್ದು, ಜಿಲ್ಲೆಯಲ್ಲಿ ಒಟ್ಟು 12,30,037 ಮತದಾರರಿದ್ದು, ಪ್ರತಿಯೊಬ್ಬರಿಗೂ ಎನ್ಯುಮರೇಷನ್ ಅರ್ಜಿಗಳನ್ನು ತರಿಸಲಾಗಿದೆ. ಇದುವರೆಗೂ ಜಿಲ್ಲೆಯಾದ್ಯಂತ 10,88,604 ಅರ್ಜಿಗಳನ್ನು ಗಣಕೀಕರಣ ಗೊಳಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈವರೆಗಿನ ಮನೆ ಮನೆ ಭೇಟಿಯ ಸಂದರ್ಭದಲ್ಲಿ ಸ್ಥಳಾಂತರ, ಮರಣ ಹಾಗೂ ದ್ವಿಪ್ರತಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 70052 ಮತದಾರರನ್ನು ಗುರುತಿಸಲಾಗಿದೆ. ಇದರಲ್ಲಿ 24043 ಶಾಶ್ವತ ವಲಸೆ ಹಾಗೂ […]

Continue Reading

ರಾಜ್ಯದ ಸುದೀರ್ಘ ಸಿಎಂ ಆಗಿದ್ದ ಸಿದ್ದರಾಮಯ್ಯ ಮಹತ್ವದ ಘೋಷಣೆ, ಚುನಾವಣಾ ರಾಜಕೀಯಕ್ಕೆ ಗುಡ್ ಬೈ

ಮಂಡ್ಯ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಘೋಷಣೆ ಮಾಡಿದ್ದು, ಚುನಾವಣಾ ರಾಜಕೀಯದಿಂದ ಹಿಂದೆ ಸರಿದರೂ ಸಾರ್ವಜನಿಕ ಬದುಕಿನಲ್ಲಿ ಸಕ್ರಿಯ ಆಗಿಯೇ ಉಳಿದು ಜನರ ಪರವಾಗಿ ಧ್ವನಿ ಆಗುವುದಾಗಿ ಅವರು ತಿಳಿಸಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಳಿಕ ತಮ್ಮ ನಿರ್ಧಾರವನ್ನು ಸಾಮಾಜಿಕ ಜಾಲತಾಣದಲ್ಲೂ ಹಂಚಿಕೊಂಡಿದ್ದಾರೆ. ಇನ್ನು ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸದಿರಲು ತೀರ್ಮಾನಿಸಿದ್ದೇನೆ. ಹಿಂದೆ ಚುನಾವಣೆಗೆ ಸ್ಪರ್ಧಿಸಿದಾಗ ಕ್ಷೇತ್ರದ ಜನರೇ ಅಭ್ಯರ್ಥಿಯನ್ನು ಬೆಂಬಲಿಸಿ ಗೆಲ್ಲಿಸುತ್ತಿದ್ದರು. […]

Continue Reading

ನೀಟ್ ಪರೀಕ್ಷೆಯಲ್ಲಿ ಮೂಡುಬಿದಿರೆಯ ಎಕ್ಸಲೆಂಟ್ ಪಿಯು ಕಾಲೇಜಿಗೆ ಉತ್ತಮ ಸಾಧನೆ

ಮೂಡುಬಿದಿರೆ: ಇಲ್ಲಿನ ಎಕ್ಸಲೆಂಟ್ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಲ್ಲಿ ಫಲಿತಾಂಶದಲ್ಲಿ ಮೂಡುಬಿದಿರೆ ಗಮನಾರ್ಹ ಸಾಧನೆ ಮೆರೆದಿದ್ದಾರೆ. ಕಾಲೇಜಿನ ನಿಖಿಲ್ ಎಸ್.ಎಸ್. 720 ಕ್ಕೆ 650 ಅಂಕ ಗಳಿಸಿ ಅಗ್ರಸ್ಥಾನ ಪಡೆದುಕೊಂಡಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ತಿಳಿಸಿದ್ದಾರೆ. ನಿಖಿಲ್ ಅವರ ಬಳಿಕ ತನ್ಮಯಿ ಎ. ಕೋಟಿ 647, ಚಿನ್ಮಯಿ ಬೆಳ್ಳೂರು 629, ಹೇಮಾ ಯು. 624, ಶ್ಲೋಕ್ ರಾಘವೇಂದ್ರ ರಾವ್ 615, ಈಶ್ವರ ಪುಂಡಲೀಕಪ್ಪ ಕೊಪ್ಪಲ್ 612 ಹಾಗೂ ಮೋಹಿತ್ ವೈ.ಪಿ. 611 ಅಂಕಗಳನ್ನು […]

Continue Reading

ಜಿಎಂಯು ದಂತ ವೈದ್ಯಕೀಯ ಕಾಲೇಜಿಗೆ ವಿಶ್ವಮಟ್ಟದ ಮಾನ್ಯತೆ, 120 ದಂತ ಚಿಕಿತ್ಸಾ ಘಟಕಗಳ ಮೂಲಕ ಪ್ರಾಯೋಗಿಕ ತರಬೇತಿಗೆ ಆದ್ಯತೆ

ಮಂಗಳೂರು: ಗಲ್ಫ್ ಮೆಡಿಕಲ್ ಯೂನಿವರ್ಸಿಟಿ (ಜಿಎಂಯು)ಯ ದಂತ ವೈದ್ಯಕೀಯ ಕಾಲೇಜು ವಿಶ್ವಮಟ್ಟದ ಕ್ಲಿನಿಕಲ್ ಶಿಕ್ಷಣ ವ್ಯವಸ್ಥೆ ಹಾಗೂ ಅತ್ಯಾಧುನಿಕ ಮೂಲಸೌಕರ್ಯದಿಂದ ಗಮನ ಸೆಳೆದಿದೆ. ವಿಶ್ವವಿದ್ಯಾಲಯದ ಅಧೀನದಲ್ಲಿರುವ ಥಂಬೇ ಡೆಂಟಲ್ ಆಸ್ಪತ್ರೆಯಲ್ಲಿ 120 ದಂತ ಚಿಕಿತ್ಸಾ ಕುರ್ಚಿಗಳ ವ್ಯವಸ್ಥೆ ಕಲ್ಪಿಸಲಾಗಿದ್ದು, ವಿದ್ಯಾರ್ಥಿಗಳಿಗೆ ನೈಜ ರೋಗಿಗಳ ಚಿಕಿತ್ಸೆಯ ಮೂಲಕ ಪ್ರಾಯೋಗಿಕ ತರಬೇತಿ ನೀಡಲಾಗುತ್ತಿದೆ. ದಂತ ಶಿಕ್ಷಣದಲ್ಲಿ ಪ್ರಾಯೋಗಿಕ ಅನುಭವಕ್ಕೆ ಹೆಚ್ಚಿನ ಮಹತ್ವ ನೀಡಿರುವ ಕಾಲೇಜು, ಆರಂಭಿಕ ಹಂತದಿಂದಲೇ ತಜ್ಞ ವೈದ್ಯರ ಮೇಲ್ವಿಚಾರಣೆಯಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸಾ ಕೌಶಲ್ಯ ಬೆಳೆಸುವ ಅವಕಾಶ ಒದಗಿಸಿದೆ. […]

Continue Reading

ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಅಮಾನವೀಯ ಕೃತ್ಯ, ಸಚಿವರ ರಾಜೀನಾಮೆಗೆ ಪದ್ಮರಾಜ್ ಪೂಜಾರಿ ಆಗ್ರಹ

ಮಂಗಳೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ತಡೆಯುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ಅದರ ಪರಿಣಾಮವಾಗಿ ದೇಶದಾದ್ಯಂತ ವಿದ್ಯಾರ್ಥಿಗಳು ಪ್ರತಿಭಟನೆಗೆ ಇಳಿಯುವಂತಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಅವರು ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಆರೋಪಿಸಿದರು. ನವದೆಹಲಿಯಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಪೊಲೀಸರು ನಡೆಸಿಕೊಂಡಿರುವ ರೀತಿಯು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ ತರುವಂತಿದ್ದು, ಕೇಂದ್ರ ಸರ್ಕಾರ ಇದಕ್ಕೆ ಉತ್ತರಿಸಬೇಕಿದೆ. ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ […]

Continue Reading

ಕಾಸರಗೋಡಿನಲ್ಲಿ ಜು.27 ಕ್ಕೆ ಆರ್‌ವಿಆರ್‌ ಹೆಲ್ತ್‌ ಕೇರ್‌ ನ್ಯೂರೋ ಅಂಕಾಲಜಿ ಸೆಂಟರ್‌ ಉದ್ಘಾಟನೆ: ಡಾ. ರಾಘವೇಂದ್ರ

ಮಂಗಳೂರು: ಆರ್‌ವಿಆರ್‌ ಹೆಲ್ತ್‌ ಕೇರ್‌ನ ಉಪ ಶಾಖೆ ಆರ್‌ವಿಆರ್‌ ಹೆಲ್ತ್‌ ಕೇರ್‌ ನ್ಯೂರೋ ಆಂಕಾಲಜಿ ಸೆಂಟರ್‌ ಇದೇ 26 ರಂದು ಕಾಸರಗೋಡಿನಲ್ಲಿ ಕಾರ್ಯಾರಂಭ ಮಾಡಲಿದ್ದು, ಒಂದೂವರೆ ತಿಂಗಳಿನಿಂದ ಮಂಗಳೂರಿನ ಫಳ್ನೀರ್‌ನಲ್ಲಿ ಇರುವ ಕೇಂದ್ರದಲ್ಲಿ ರೋಗಿಗಳಿಗೆ ಅತ್ಯಾಧುನಿಕ ವೈದ್ಯಕೀಯ ಸೇವೆಗಳನ್ನು ಒದಗಿಸಲಾಗುತ್ತಿದೆ ಎಂದು ಆರ್‌ವಿಆರ್‌ ಸೂಪರ್‌ ಸ್ಪೆಷಾಲಿಟಿ ಸೆಂಟರ್‌ ನಿರ್ದೇಶಕ ಡಾ. ರಾಘವೇಂದ್ರ ಬಿ.ಎಸ್‌ ಅವರು ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ನ್ಯೂರೋ ಹಾಗೂ ಕ್ಯಾನ್ಸರ್‌ ರೋಗಗಳ ಚಿಕಿತ್ಸೆಗೆ ವಿಶೇಷ ಒತ್ತು ನೀಡಲಾಗುತ್ತಿದ್ದು, ವಿವಿಧ ತಜ್ಞ ವೈದ್ಯರ ಸೇವೆಯೊಂದಿಗೆ ಒಂದೇ […]

Continue Reading

ಸ್ಕ್ಯಾನಿಂಗ್ ಸೆಂಟರ್‌ಗಳ ಸಮಗ್ರ ಪರಿಶೀಲನೆ ಕಡ್ಡಾಯ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಗರ್ಭಧಾರಣಾ ಪೂರ್ವ ಮತ್ತು ಪ್ರಸವ ಪೂರ್ವ ಲಿಂಗ ಪತ್ತೆ (ಪಿಸಿಪಿಎನ್‌ಡಿಟಿ) ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ನೋಂದಾಯಿತ ಎಲ್ಲಾ ಸ್ಕ್ಯಾನಿಂಗ್ ಸೆಂಟರ್‌ಗಳನ್ನು ನಿಯಮಿತವಾಗಿ ಹಾಗೂ ಸಮಗ್ರವಾಗಿ ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಗರ್ಭಧಾರಣಾ ಪೂರ್ವ ಮತ್ತು ಪ್ರಸವ ಪೂರ್ವ ಪತ್ತೆ ತಂತ್ರ ವಿಧಾನಗಳ (ಪಿಸಿಪಿಎನ್‌ಡಿಟಿ) ಸಕ್ಷಮ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಪ್ರಸ್ತುತ 82 ಸ್ಕ್ಯಾನಿಂಗ್ ಸೆಂಟರ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತಿಯೊಂದು ಕೇಂದ್ರಕ್ಕೂ […]

Continue Reading