ಬಂಟ್ವಾಳ ಬಸ್ ದುರಂತ: ಮೃತ ಬಾಲಕಿಯ ಕುಟುಂಬಕ್ಕೆ ತಕ್ಷಣ ಪರಿಹಾರ ನೀಡಿ, ಗಾಯಾಳುಗಳಿಗೆ ಸಂಪೂರ್ಣ ಚಿಕಿತ್ಸೆ: ಸಚಿವ ಖಾದರ್ ಸೂಚನೆ

ಬಂಟ್ವಾಳ: ತಾಲೂಕಿನ ಬರಿಮಾರು ಸಮೀಪದ ಕಲೆಟ್ಟಿ ಪ್ರದೇಶದಲ್ಲಿ ಖಾಸಗಿ ಶಾಲಾ ಬಸ್ ಮೇಲೆ ಮರವೊಂದು ಬಿದ್ದು ಬಾಲಕಿ ಮೃತಪಟ್ಟಿದ್ದು, ಹಲವು ವಿದ್ಯಾರ್ಥಿಗಳು ಗಾಯಗೊಂಡಿರುವ ದುರ್ಘಟನೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಮೆರಿಕದ ಚಿಕಾಗೋ ಪ್ರವಾಸದಲ್ಲಿರುವ ಸಚಿವರು ಘಟನೆ ಕುರಿತು ಮಾಹಿತಿ ದೊರಕುತ್ತಿದ್ದಂತೆಯೇ ಜಿಲ್ಲಾಧಿಕಾರಿಯೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿ, ಮೃತ ಬಾಲಕಿಯ ಕುಟುಂಬಕ್ಕೆ ಸರ್ಕಾರದ ವತಿಯಿಂದ ತಕ್ಷಣ ಪರಿಹಾರ ಒದಗಿಸುವಂತೆ […]

Continue Reading

ಸಮಗ್ರ ಮತ್ತು ಸುಸ್ಥಿರ ಅಭಿವೃದ್ಧಿಗೆ ದೂರದೃಷ್ಟಿ ಯೋಜನೆ ರೂಪಿಸಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರೀಯಾ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸಮಗ್ರ ಮತ್ತು ಸುಸ್ಥಿರ ಅಭಿವೃದ್ಧಿಯನ್ನು ಗುರಿಯಾಗಿಟ್ಟುಕೊಂಡು, ಎಲ್ಲ ಇಲಾಖೆಗಳು ದೂರದೃಷ್ಟಿಯ ಯೋಜನೆಗಳನ್ನು ರೂಪಿಸಿ ಸಮಗ್ರ ವರದಿ ಸಿದ್ಧಪಡಿಸಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಮಾನವ ಅಭಿವೃದ್ಧಿ ವರದಿ–2025 ಹಾಗೂ ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ ದೂರದೃಷ್ಟಿ ಯೋಜನೆ–2031 ವರದಿಗಳ ಅಂತಿಮಗೊಳಿಸುವ ಜಿಲ್ಲಾ ಮಟ್ಟದ ವಲಯವಾರು ಉಪಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದ […]

Continue Reading

ಅಪಘಾತ ಸಂತ್ರಸ್ತರಿಗೆ ಮೊದಲ 7 ದಿನ ರೂ 2.5 ಲಕ್ಷವರೆಗೆ ಉಚಿತ ಚಿಕಿತ್ಸೆಗೆ ಸರಕಾರದ ಚಿಂತನೆ: ಆರೋಗ್ಯ ಸಚಿವ ಖಾದರ್

ಕುಮಟಾ: ರಾಜ್ಯದಲ್ಲಿ ಅಪಘಾತಕ್ಕೊಳಗಾಗುವ ಯಾವುದೇ ವ್ಯಕ್ತಿಗೆ, ಅವರು ರಾಜ್ಯದವರಾಗಲಿ, ದೇಶದ ಇತರ ಭಾಗದವರಾಗಲಿ ಅಥವಾ ವಿದೇಶಿಯರಾಗಲಿ ಆಸ್ಪತ್ರೆಗೆ ದಾಖಲಾದ ಮೊದಲ ಏಳು ದಿನಗಳವರೆಗೆ 2.5 ಲಕ್ಷದವರೆಗೆ ಉಚಿತ ಚಿಕಿತ್ಸೆ ನೀಡುವ ಮಹತ್ವಾಕಾಂಕ್ಷಿ ಯೋಜನೆಯನ್ನು ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಕುಮಟಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ಸಂಸ್ಥೆಯ ಸಿಎಸ್‌ಆರ್ ನಿಧಿಯಿಂದ ನಿರ್ಮಿಸಲಾದ ಟ್ರಾಮಾ ಕೇರ್ ಸೆಂಟರ್ ಮತ್ತು ತುರ್ತು ಚಿಕಿತ್ಸಾ […]

Continue Reading

ಎಲೆ ಚುಕ್ಕೆ, ಹಳದಿ, ಕೊಳೆ ರೋಗ ನಿಯಂತ್ರಣಕ್ಕೆ ವೈಜ್ಞಾನಿಕ ಅಧ್ಯಯನಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ನವದೆಹಲಿ: ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಹಾಗೂ ಮಲೆನಾಡು ಭಾಗದ ಅಡಿಕೆ ಬೆಳೆಗಾರರನ್ನು ಕಾಡುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಹಾಗೂ ಕೊಳೆ ರೋಗಗಳಿಗೆ ಶಾಶ್ವತ ವೈಜ್ಞಾನಿಕ ಪರಿಹಾರ ಕಲ್ಪಿಸುವಂತೆ ಹಾಗೂ ತೋಟಗಾರಿಕೆ ಅಭಿವೃದ್ಧಿ ರಾಷ್ಟ್ರೀಯ ಮಿಷನ್ (ಎಂಐಡಿಎಚ್) ನಿಯಮಾವಳಿಗೆ ತಿದ್ದುಪಡಿ ತರುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಲೋಕಸಭೆಯಲ್ಲಿ ಒತ್ತಾಯಿಸಿದರು. ಸದನದಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಅಡಿಕೆ ತೋಟಗಳಲ್ಲಿ ಪುನರಾವರ್ತಿತವಾಗಿ ಕಾಣಿಸಿಕೊಳ್ಳುತ್ತಿರುವ ವಿವಿಧ ರೋಗಗಳಿಂದ ರೈತರು ಭಾರೀ ನಷ್ಟ ಅನುಭವಿಸುತ್ತಿದ್ದಾರೆ. ರೋಗ ನಿರ್ಣಯ, […]

Continue Reading

ರಾಷ್ಟ್ರ ಮಟ್ಟಕ್ಕೆ ವೀ ವನ್ ಅಕ್ವಾ ಕೇಂದ್ರದ ಈಜುಪಟುಗಳ ಆಯ್ಕೆ

ಮಂಗಳೂರು: ಬೆಂಗಳೂರಿನ ಬಸವನಗುಡಿ ಈಜು ಕೇಂದ್ರದಲ್ಲಿ ಜುಲೈ 13ರಿಂದ 16ರವರೆಗೆ ಕರ್ನಾಟಕ ರಾಜ್ಯ ಈಜು ಸಂಸ್ಥೆ ಹಾಗೂ ಬಸವನಗುಡಿ ಈಜು ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ನಡೆದ ಎನ್‌ಆರ್‌ಜೆ ರಾಜ್ಯ ಜೂನಿಯರ್ ಈಜು ಸ್ಪರ್ಧೆಯಲ್ಲಿ ಮಂಗಳೂರಿನ ವೀ ವನ್ ಅಕ್ವಾ ಕೇಂದ್ರದ ಈಜುಪಟುಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ಹಲವು ಪದಕಗಳನ್ನು ಗೆದ್ದಿರುವ ಈಜುಪಟುಗಳು ಆಗಸ್ಟ್‌ನಲ್ಲಿ ಭುವನೇಶ್ವರದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಈಜು ಸ್ಪರ್ಧೆಗೆ ಅರ್ಹತೆ ಪಡೆದಿದ್ದಾರೆ. ಸ್ಪರ್ಧೆಯಲ್ಲಿ ಅಲಿಸಾ ಸ್ವೀಡೆಲ್ ರೇಗೊ ಆರು ಚಿನ್ನ ಹಾಗೂ ಕಂಚಿನ ಪದಕ ಗೆದ್ದು […]

Continue Reading

ನೀಟ್‌ನಲ್ಲಿ ಎಕ್ಸಪರ್ಟ್‌ಗೆ ಭರ್ಜರಿ ಫಲಿತಾಂಶ; ಶೇ 98 ವಿದ್ಯಾರ್ಥಿಗಳು ವೈದ್ಯಕೀಯ ಪ್ರವೇಶಕ್ಕೆ ಅರ್ಹ

ಮಂಗಳೂರು: ಮಂಗಳೂರಿನ ಎಕ್ಸ್ಪರ್ಟ್ ಕೋಚಿಂಗ್ ಕ್ಲಾಸ್ ನ ನೀಟ್ ದೀರ್ಘಾವಧಿ ತರಬೇತಿ (ಲಾಂಗ್ ಟರ್ಮ್ ಕೋಚಿಂಗ್) ಪಡೆದ ವಿದ್ಯಾರ್ಥಿಗಳು ಈ ಬಾರಿಯ ನೀಟ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದು, ಶೇ 98ರಷ್ಟು ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣ ಪ್ರವೇಶಕ್ಕೆ ಅರ್ಹತೆ ಪಡೆದಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಪ್ರೊ. ನರೇಂದ್ರ ನಾಯಕ್ ತಿಳಿಸಿದ್ದಾರೆ. ಮೂರು ಮಂದಿ ವಿದ್ಯಾರ್ಥಿಗಳು 575 ಕ್ಕೂ ಅಧಿಕ ಅಂಕ ಗಳಿಸಿದ್ದು, 16 ವಿದ್ಯಾರ್ಥಿಗಳು 550 ಕ್ಕೂ ಹೆಚ್ಚು, 31 ವಿದ್ಯಾರ್ಥಿಗಳು 525ಕ್ಕೂ ಹೆಚ್ಚು, 55 ವಿದ್ಯಾರ್ಥಿಗಳು […]

Continue Reading

ಸುರತ್ಕಲ್: ಅಣ್ಣನಿಂದಲೇ ತಮ್ಮನ ಕೊಲೆ, ಪೊಲೀಸ್ ವಶಕ್ಕೆ, ಹಿರಿಯ ಅಧಿಕಾರಿಗಳ ದೌಡು

ಸುರತ್ಕಲ್: ಮಲಗಿದ್ದ ತಮ್ಮನ ತಲೆಗೆ ಕಲ್ಲು ಎತ್ತಿಹಾಕಿ ಅಣ್ಣನೇ ಕೊಲೆ ಮಾಡಿರುವ ಘಟನೆ ಚೊಕ್ಕಬೆಟ್ಟು ಮಠದ ಭಾನುವಾರ ತಡರಾತ್ರಿ ನಡೆದಿರುವ ಬಗ್ಗೆ ವರದಿ ಆಗಿದೆ. ಕೊಲೆಯಾದ ವ್ಯಕ್ತಿಯನ್ನು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತೆಗ್ಯಾಳು ಗ್ರಾಮದ ನಿವಾಸಿ ಹಾಗೂ ಚೊಕ್ಕಬೆಟ್ಟು ಮಠದ ಬಳಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಮಲ್ಲಿಕಾರ್ಜುನ (20) ಎಂದು ಗುರುತಿಸಲಾಗಿದೆ. ಈತನ ಅಣ್ಣ ಸೋಮನಾಥ್ (21) ಕೊಲೆ ಮಾಡಿರುವ ಆರೋಪಿ ಎನ್ನಲಾಗಿದ್ದು, ಆತನನ್ನು ಸುರತ್ಕಲ್ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. […]

Continue Reading

ಪ್ರೊ. ರಮೇಶ್ ಮಾಂಗಳೇಕರ್ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭಕ್ಕೆ ಹರಿದು ಬಂದ ಶಿಷ್ಯ ಪಡೆ, ಭಾವುಕ ಕ್ಷಣಕ್ಕೆ ಸಾಕ್ಷಿ

ಬೆಳಗಾವಿ: ಶಿಕ್ಷಕ ವೃತ್ತಿಗೆ ತನ್ನದೇ ಆದ ವಿಶಿಷ್ಟ ಗೌರವ ಇದೆ. ಒಬ್ಬ ಉತ್ತಮ ಶಿಕ್ಷಕ ತನ್ನ ಸುತ್ತಲಿನ ಸಮಾಜ, ತನ್ನ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗೆ ತುಡಿತ ಹೊಂದಿರುತ್ತಾನೆ. ಇಂತಹ ಅಮೂಲ್ಯ ಗುಣಗಳ ಮೂಲಕ ಪ್ರೊ. ರಮೇಶ್ ಎಸ್ . ಮಾಂಗಳೇಕರ್ ಅವರು ತಮ್ಮ ಶಿಷ್ಟರ ಹೃದಯದಲ್ಲಿ ಗಟ್ಟಿ ಸ್ಥಾನ ಅಲಂಕರಿಸಿದ್ದಾರೆ. ಇದಕ್ಕೆ ಈ ಕಾರ್ಯಕ್ರಮವೇ ಸಾಕ್ಷಿಯಾಗಿದೆ ಎಂದು ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕಿ ಶೋಭಾ ಅವರು ಹೇಳಿದರು. ಬೆಳಗಾವಿಯಲ್ಲಿ ಆಯೋಜಿಸಿದ್ದ ಸಮಾಜಶಾಸ್ತ್ರ ಪ್ರಾಧ್ಯಾಪಕ ಹಾಗೂ ಶಿಕ್ಷಣತಜ್ಞ ಪ್ರೊ. ರಮೇಶ […]

Continue Reading

ಅಥ್ಲೀಟ್ ಶಿವಾಜಿ ಸಾಧನೆ ಕ್ರೀಡಾಪಟುಗಳಿಗೆ ಸ್ಫೂರ್ತಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ

ಕಾರವಾರ: ಚೀನಾದಲ್ಲಿ ಇತ್ತೀಚೆಗೆ ನಡೆದ 23 ವರ್ಷದೊಳಗಿನ ಏಷ್ಯನ್ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ನಲ್ಲಿ 5,000 ಹಾಗೂ 10,000 ಮೀಟರ್ ಓಟದಲ್ಲಿ ಬೆಳ್ಳಿ ಪದಕ ಗೆದ್ದು ದೇಶ, ರಾಜ್ಯ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕೀರ್ತಿ ಹೆಚ್ಚಿಸಿರುವ ಹಳಿಯಾಳ ತಾಲೂಕಿನ ಬೆಳವಟಗಿ ಗ್ರಾಮದ ಅಥ್ಲೀಟ್ ಶಿವಾಜಿ ಪರಶುರಾಮ ಮಾದಪ್ಪನ ಗೌಡ್ರು ಅವರ ಸಾಧನೆ ಜಿಲ್ಲೆಯ ಯುವ ಕ್ರೀಡಾಪಟುಗಳಿಗೆ ಸ್ಫೂರ್ತಿಯಾಗಲಿ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಶಿವಾಜಿ ಅವರನ್ನು ಸನ್ಮಾನಿಸಿ […]

Continue Reading

ಚೆನ್ನಮ್ಮ ಅಂತ್ಯಕ್ರಿಯೆ ಇಂದು ಸರ್ಕಾರಿ ಗೌರವದೊಂದಿಗೆ; ಮಾವಿನಕೆರೆಯಲ್ಲಿ ಸಕಲ ಸಿದ್ಧತೆ

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ಸೋಮವಾರ ಮಧ್ಯಾಹ್ನ ಹಾಸನ ಜಿಲ್ಲೆಯ ಮಾವಿನಕೆರೆ ಬೆಟ್ಟದ ತಪ್ಪಲಿನಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ನಡೆಯಲಿದ್ದು, ಸಾವಿರಾರು ಜನರು ಭಾಗವಹಿಸುವ ನಿರೀಕ್ಷೆಯ ಹಿನ್ನೆಲೆಯಲ್ಲಿ ಸ್ಥಳದಲ್ಲಿ ವ್ಯಾಪಕ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಮಾವಿನಕೆರೆ ಪ್ರದೇಶದಲ್ಲಿ ಸಾರ್ವಜನಿಕರು ಮತ್ತು ಗಣ್ಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಸಾಧ್ಯತೆ ಇರುವುದರಿಂದ ನಾಲ್ಕು ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಮೈಸೂರಿನಿಂದ ಕುರ್ಚಿಗಳು ಹಾಗೂ ಶಾಮಿಯಾನಗಳನ್ನು ತರಿಸಲಾಗಿದ್ದು, ವಿದ್ಯುತ್ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗಿದೆ. […]

Continue Reading