ಹಿಂದುಳಿದ ವರ್ಗಗಳ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ನೈಜ ಬದ್ಧತೆ ಇಲ್ಲ: ಜಂಟಿ ಪತ್ರಿಕಾಗೋಷ್ಠಿಯಲ್ಲಿ ಕೇಶವ ಪ್ರಸಾದ್, ಕಿಶೋರ್ ಕುಮಾರ್ ಪುತ್ತೂರು ಸರಕಾರದ ವಿರುದ್ಧ ಕಿಡಿ

ಮಂಗಳೂರು: ರಾಜ್ಯ ಸರ್ಕಾರದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ವರದಿಯನ್ನು ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಿ ಕನಿಷ್ಠ ಎರಡು–ಮೂರು ದಿನಗಳ ಕಾಲ ಸಮಗ್ರ ಚರ್ಚೆಗೆ ಒಳಪಡಿಸಬೇಕು ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯರಾದ ಕೇಶವ ಪ್ರಸಾದ್ ಹಾಗೂ ಕಿಶೋರ್ ಕುಮಾರ್ ಪುತ್ತೂರು ಅವರು ಗುರುವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು. ಹಿಂದುಳಿದ ವರ್ಗಗಳ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ನೈಜ ಬದ್ಧತೆ ಇಲ್ಲದೆ, ಕೇವಲ ಮತಬ್ಯಾಂಕ್ ರಾಜಕಾರಣ ನಡೆಸುತ್ತಿದೆ. ಹಿಂದುಳಿದ ವರ್ಗಗಳ ಕಲ್ಯಾಣದ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರಗಳು […]

Continue Reading

ಕನ್ನಡ, ಸಂಸ್ಕೃತ ಇಲಾಖೆಯಿಂದ ಕಲಾವಿದರಿಗೆ ಗುರುತಿನ ಚೀಟಿ ವಿತರಣೆ

ಕಾರವಾರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಜಿಲ್ಲೆಯ ನೈಜ ಕಲಾವಿದರಿಗೆ ಗುರುತಿನ ಚೀಟಿ ಪಡೆಯುವ ಕುರಿತಂತೆ 16 ಜೂನ್ 2024 ರಿಂದ 24 ಜೂನ್ 2024 ರೊಳಗೆ ಅರ್ಜಿ ನಮೂನೆಯಲ್ಲಿ ಸಲ್ಲಿಸಿರುವ ಕಲಾವಿದರಿಗೆ ಗುರುತಿನ ಚೀಟಿಯನ್ನು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಅವರು ಗುರುವಾರ ವಿತರಿಸಿದರು. ಜಿ.ಪಂ. ಸಿಇಒ ಡಾ.ದಿಲೀಷ್ ಶಶಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಳಾ ನಾಯಕ್ ಹಾಗೂ ಕಲಾವಿದರು ಇದ್ದರು.

Continue Reading

ಸರಕಾರದ ವಿವಿಧ ಯೋಜನೆಗಳ ಅನುದಾನವನ್ನು ಸದ್ಬಳಕೆ ಮಾಡಿಕೊಳ್ಳಿ: ಡಿಸಿ ಕೆ. ಲಕ್ಷ್ಮಿಪ್ರಿಯಾ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಪ.ಜಾತಿ ಮತ್ತು ಪಂಗಡದವರಿಗೆ ಅಲೆಮಾರಿ ಮತ್ತು ಅರೆ ಅಲೆಮಾರಿ ನಿಗಮ ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳಡಿಯಲ್ಲಿ ಮಂಜೂರು ಮಾಡುವ ಅನುದಾನವನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಅವರು ತಿಳಿಸಿದರು. ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಲೆಮಾರಿ ಮತ್ತು ಅರೆ ಅಲೆಮಾರಿ ನಿಗಮಗಳಿಂದ ಸ್ವಯಂ ಉದ್ಯೋಗ ಯೋಜನೆ, ಉದ್ಯಮ ಶೀಲತಾ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ […]

Continue Reading

ಪೌರ ಕಾರ್ಮಿಕರಿಗೆ ಎಲ್ಲ ಸೌಲಭ್ಯಗಳು ಸಮಯಕ್ಕೆ ದೊರೆಯಲಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ಸರ್ಕಾರದಿಂದ ಕಲ್ಪಿಸಲಾಗುವ ಸೌಲಭ್ಯಗಳಲ್ಲಿ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಮಟ್ಟದ ಜಾಗೃತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪೌರ ಕಾರ್ಮಿಕರಿಗೆ ಪ್ರತಿ ತಿಂಗಳು ನಿಗದಿತ ದಿನಾಂಕದೊಳಗೆ ವೇತನ ಪಾವತಿಯಾಗಬೇಕು. ಜೊತೆಗೆ ಇಎಸ್‌ಐ ಹಾಗೂ ಇಪಿಎಫ್‌ ಹಣವನ್ನು ನಿಯಮಾನುಸಾರವೇ ಕಡಿತಗೊಳಿಸಲಾಗುತ್ತಿದೆ ಎಂಬುದನ್ನು ಕಾರ್ಮಿಕ ಇಲಾಖೆ ಅಧಿಕಾರಿಗಳು […]

Continue Reading

ಉ. ಕ ಜಿಲ್ಲೆಯಲ್ಲಿ 7,68,545 ಎನ್ಯುಮರೇಷನ್ ಫಾರ್ಮ್ ಗಣಕೀಕರಣ: ಡಿಸಿ ಲಕ್ಷ್ಮಿಪ್ರಿಯಾ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಚುರುಕಿನಿಂದ ಸಾಗಿದ್ದು, ಜಿಲ್ಲೆಯಲ್ಲಿ 12,30,037 ಮತದಾರರಿದ್ದು, ಪ್ರತಿಯೊಬ್ಬರಿಗೂ ಎನ್ಯುಮರೇಷನ್ ಫಾರ್ಮ್ ಗಳನ್ನು ವಿತರಿಸಲಾಗಿದೆ. ಇದುವರೆಗೂ ಜಿಲ್ಲೆಯಾದ್ಯಂತ 7,68,545 ಫಾರ್ಮ್ ಗಳನ್ನು ಗಣಕೀಕರಣ ಗೊಳಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈವರೆಗಿನ ಮನೆ ಮನೆ ಭೇಟಿಯ ಸಂದರ್ಭದಲ್ಲಿ ಸ್ಥಳಾಂತರ, ಮರಣ ಹಾಗೂ ದ್ವಿಪ್ರತಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 14575 ಮತದಾರರನ್ನು ಗುರುತಿಸಲಾಗಿದೆ. ಇದರಲ್ಲಿ 2994 ಶಾಶ್ವತ ವಲಸೆ […]

Continue Reading

ಬಂಟ್ವಾಳ ಬಸ್‌ ನಿಲ್ದಾಣದಲ್ಲಿ ಯುವತಿ ಅಟ್ಟಾಡಿಸಿ ಹತ್ಯೆ; ಚಿಕಿತ್ಸೆಗೆ ಸ್ಪಂದಿಸದೇ ಯುವತಿ ಸಾವು, ಆರೋಪಿ ಪತ್ತೆಗೆ ಶೋಧ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ.ರೋಡ್‌ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಬಳಿ ಗುರುವಾರ ಯುವತಿಯೊಬ್ಬರ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಕಕ್ಯಪದವು ನಿವಾಸಿ ಲಾವಣ್ಯ (21) ಮೃತ ಯುವತಿ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆಗೆ ಸ್ಪಂದಿಸದೇ ಯುವತಿ ಮೃತಪಟ್ಟರು. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಮಾತನಾಡಿ, ಆರೋಪಿಯನ್ನು ಚೇತನ್ ಎಂದು ಗುರುತಿಸಲಾಗಿದ್ದು, ಆತ ಮೃತ ಯುವತಿಯ ದೂರದ ಸಂಬಂಧಿಯಾಗಿದ್ದು, ಆಕೆಯನ್ನು ಪ್ರೀತಿಸುತ್ತಿದ್ದ ಎನ್ನುವ ಮಾಹಿತಿ […]

Continue Reading

64 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಾಣ, ದೇಶದ ಗಮನ ಸೆಳೆದ ಗುರುಪುರ ಸ್ಮಾರ್ಟ್ ಸೇತುವೆ

ಮಂಗಳೂರು: ಸ್ಮಾರ್ಟ್ ಸಿಟಿ ಯೋಜನೆ ಅಡಿ ಗುರುಪುರ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡಲಾಗಿರುವ ಸುಲ್ತಾನ್ ಬತ್ತೇರಿ–ತಣ್ಣೀರುಬಾವಿ ಸಂಪರ್ಕ ಸೇತುವೆ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದೆ. ಸೇತುವೆ ನಿರ್ಮಾಣದ ಬಳಿಕ ಮಂಗಳೂರಿನ ಜನರಿಗೆ ತಣ್ಣೀರುಬಾವಿ ಕಡಲತೀರಕ್ಕೆ ತ್ವರಿತ ಸಂಪರ್ಕ ಕಲ್ಪಿಸುವ ಜತೆಗೆ, ತಣ್ಣೀರುಬಾವಿ–ಬೆಂಗ್ರೆ ನಿವಾಸಿಗಳ ಮಂಗಳೂರು ನಗರಕ್ಕೆ ಸಂಚರಿಸುವ ಪ್ರಯಾಣ ಸನಿಹ ಆಗಲಿದೆ. ಬೋ ಸ್ಟ್ರಿಂಗ್ ವಿನ್ಯಾಸದ ಸೇತುವೆ ನಡುವೆ ಯಾವುದೇ ಆಧಾರ ಸ್ತಂಭಗಳಿಲ್ಲದೆ 100 ಮೀಟರ್ ಉದ್ದದ ಏಕವಿಸ್ತಾರದ ವಿನ್ಯಾಸ ನಿರ್ಮಾಣ ಮಾಡಲಾಗಿದೆ. ಇಂತಹ ವಿನ್ಯಾಸದಿಂದಲಾಗಿಯೇ ಬೋ […]

Continue Reading

ಭಾರತೀಯ ಅಂಚೆ ನೌಕರರ ಸಂಘ ಹೋರಾಟಕ್ಕೆ ಕರೆ, ಅ. 5ರಂದು ರಾಷ್ಟ್ರವ್ಯಾಪಿ ಮುಷ್ಕರ: ದಯಾನಂದ ಕತ್ತಲ್ ಸಾರ್

ಮಂಗಳೂರು: ಗುರಿ ಸಾಧನೆ (ಟಾರ್ಗೆಟ್) ಹೆಸರಿನಲ್ಲಿ ಅಂಚೆ ಸಿಬ್ಬಂದಿಗೆ ಮಾನಸಿಕ ಒತ್ತಡ ಹೇರಿ, ಸ್ವಂತ ಹಣದಲ್ಲಿ ವಿವಿಧ ಖಾತೆಗಳನ್ನು ತೆರೆಯುವಂತೆ ಒತ್ತಾಯಿಸಲಾಗುತ್ತಿದೆ. ಜೊತೆಗೆ ಅಂಚೆ ಇಲಾಖೆಯನ್ನು ಖಾಸಗೀಕರಣದತ್ತ ಕೊಂಡೊಯ್ಯುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿರುವ ಭಾರತೀಯ ಅಂಚೆ ನೌಕರರ ಸಂಘ, ವಿವಿಧ ಬೇಡಿಕೆಗಳ ಈಡೇರಿಕೆಗೆ ರಾಷ್ಟ್ರವ್ಯಾಪಿ ಹೋರಾಟ ಹಾಗೂ ಮುಷ್ಕರ ನಡೆಸುವುದಾಗಿ ಸಂಘದ ಪದಾಧಿಕಾರಿ ದಯಾನಂದ ಕತ್ತಲ್ ಸಾರ್ ಅವರು ಬುಧವಾರ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. 170 ವರ್ಷಗಳ ಇತಿಹಾಸ ಹೊಂದಿರುವ ಭಾರತೀಯ ಅಂಚೆ ಇಲಾಖೆ ಸಮಾಜದ ಕಟ್ಟಕಡೆಯ […]

Continue Reading

ಅವೈಜ್ಞಾನಿಕ ಬೆಟ್ಟ ಕೊರೆಯುವಿಕೆಗೆ ಕಾನೂನು ಜಾರಿಗೊಳಿಸಿ: ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಸಾಲಿನ್ಸ್

ಮಂಗಳೂರು: ರಾಜ್ಯದಲ್ಲಿ ಈಚೆಗೆ ಹೆಚ್ಚುತ್ತಿರುವ ಭೂ ಕುಸಿತ ಹಾಗೂ ತಡೆಗೋಡೆ ಕುಸಿತ ಪ್ರಕರಣಗಳಿಗೆ ಹವಾಮಾನ ವೈಪರೀತ್ಯದ ಜೊತೆಗೆ ಅವೈಜ್ಞಾನಿಕ ಮತ್ತು ಅನಿಯಂತ್ರಿತ ಬೆಟ್ಟ ಕೊರೆಯುವಿಕೆಯೂ ಪ್ರಮುಖ ಕಾರಣವಾಗಿದೆ ಎಂದು ಆರೋಪಿಸಿರುವ ಆಮ್ ಆದ್ಮಿ ಪಕ್ಷ, ಕರಾವಳಿ ಹಾಗೂ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಇಂತಹ ಕಾಮಗಾರಿಗಳನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಕಠಿಣ ಕಾನೂನು ಜಾರಿಗೊಳಿಸಬೇಕು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಪಕ್ಷದ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಸಾಲಿನ್ಸ್ ಒತ್ತಾಯಿಸಿದರು. ಮೂಡುಬಿದಿರೆ ಸಮೀಪದ ಕೇಮಾರು ಮಠದ ರಸ್ತೆ ಹಾಗೂ ಗುರುಪುರ ಭಾಗದಲ್ಲಿ […]

Continue Reading

ಧರ್ಮಸ್ಥಳ ಪ್ರಕರಣ: 7 ಸಾವಿರಕ್ಕೂ ಅಧಿಕ ಪುಟಗಳ ವರದಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಸಿದ ಎಸ್‌ಐಟಿ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತಿಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ತನಿಖೆ ಪೂರ್ಣಗೊಳಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ವರ್ಷದ ತನಿಖೆಯ ಬಳಿಕ ಸಿ.ಎನ್.ಚಿನ್ನಯ್ಯ, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ., ವಿಠಲ್ ಗೌಡ ಹಾಗೂ ಸುಜಾತಾ ಭಟ್ ಅವರ ವಿರುದ್ಧದ ಅಂತಿಮ ವರದಿಯನ್ನು ಬುಧವಾರ ಬೆಳ್ತಂಗಡಿ ನ್ಯಾಯಾಲಯದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಶಶಾಂಕ್ ನಾಗೇಂದ್ರ ಭಟ್ ಅವರಿಗೆ ಸಲ್ಲಿಸಿದರು. ಎಸ್‌ಐಟಿ ಅಧಿಕಾರಿಗಳು ಮಧ್ಯಾಹ್ನ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿ, 12 ಕಡತಗಳಲ್ಲಿ ಸಂಗ್ರಹಿಸಲಾದ […]

Continue Reading