ದಕ್ಷಿಣ ಕನ್ನಡ ಜಿಲ್ಲಾ ಕುಪ್ಮಾ ಸಮಿತಿ ಚಿಂತನಾ ಸಭೆ: ಕುಪ್ಮಾ ರಾಜ್ಯಾಧ್ಯಕ್ಷ ಡಾ. ಮೋಹನ್ ಆಳ್ವ

ಮಂಗಳೂರು: ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಸ್ಪಂದಿಸಬೇಕು ಎಂದು ಕರ್ನಾಟಕ ಅನುದಾನರಹಿತ ಖಾಸಗಿ ಕಾಲೇಜು ಆಡಳಿತ ಮಂಡಳಿಗಳ ಸಂಘದ (ಕುಪ್ಮಾ) ರಾಜ್ಯಾಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಒತ್ತಾಯಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕುಪ್ಮಾ ಸಮಿತಿಯ ವತಿಯಿಂದ ನಗರದಲ್ಲಿ ಆಯೋಜಿಸಿದ್ದ ‘ಚಿಂತನಾ ಸಭೆ’ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಖಾಸಗಿ ಶಿಕ್ಷಣ ಸಂಸ್ಥೆಗಳು ಸರ್ಕಾರದೊಂದಿಗೆ ಸಂಘರ್ಷದ ಮಾರ್ಗವನ್ನು ಬಯಸುವುದಿಲ್ಲ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಹಕಾರದ ಮನೋಭಾವದಿಂದ ಸಮಸ್ಯೆಗಳನ್ನು ಪರಿಹರಿಸಬೇಕು. ಸಾರಿಗೆ, ಅರಣ್ಯ, […]

Continue Reading

ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ವ್ಯಾಪಕ ಭ್ರಷ್ಟಾಚಾರ, ಪಕ್ಷ ಸಂಘಟನೆಗೆ ರಾಜ್ಯದಾದ್ಯಂತ ಪ್ರವಾಸ: ವಿಜಯೇಂದ್ರ

ಬೆಳ್ತಂಗಡಿ: ವಿಧಾನ ಪರಿಷತ್ ಚುನಾವಣೆಯ ಅಡ್ಡಮತದಾನ ಪ್ರಕರಣದ ಕುರಿತು ತಮ್ಮ ವಿರುದ್ಧ ಕೇಳಿಬರುತ್ತಿರುವ ಆರೋಪಗಳನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಳ್ಳಿಹಾಕಿದ್ದು, ಈ ಬೆಳವಣಿಗೆಯೊಂದಿಗೆ ತಮ್ಮ ಯಾವುದೇ ಸಂಬಂಧ ಇಲ್ಲ. ಪಕ್ಷದ ವಿರುದ್ಧ ನಡೆದುಕೊಳ್ಳುವ ಅಥವಾ ದ್ರೋಹ ಮಾಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಶುಕ್ರವಾರ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ದರ್ಶನದ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಧರ್ಮಸ್ಥಳಕ್ಕೆ ಆಗಮಿಸುವ ಮೊದಲು ನಾಲ್ಕು ದಿನಗಳ ಕಾಲ ನವದೆಹಲಿಯಲ್ಲಿ ಬಿಜೆಪಿ […]

Continue Reading

ಲೇಡಿಗೋಷನ್ ಆಸ್ಪತ್ರೆಗೆ ಆಧುನಿಕ ಸ್ಪರ್ಶ: ಸುಸಜ್ಜಿತ ವಿಡಿಯೊ ಕಾನ್ಫರೆನ್ಸ್ ಹಾಲ್, ನೂತನ ಸಭಾಗೃಹ

ಮಂಗಳೂರು: ನಗರದ ಸರಕಾರಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ಆರೋಗ್ಯ ಸೇವೆಗಳ ಜತೆಗೆ ಆಡಳಿತಾತ್ಮಕ ಮತ್ತು ಶೈಕ್ಷಣಿಕ ಚಟುವಟಿಕೆಗಳಿಗೆ ಮತ್ತಷ್ಟು ಉತ್ತೇಜನ ನೀಡುವ ನಿಟ್ಟಿನಲ್ಲಿ ಸುಸಜ್ಜಿತ ಮಾರ್ಪಡಿತ ವಿಡಿಯೋ ಕಾನ್ಫರೆನ್ಸ್ ಹಾಲ್ ಹಾಗೂ ಆಧುನೀಕೃತ ಸಭಾಗೃಹ ಸೌಲಭ್ಯವನ್ನು ಅಭಿವೃದ್ಧಿಪಡಿಸಲಾಗಿದೆ. ಈ ವಿಡಿಯೋ ಕಾನ್ಫರೆನ್ಸ್ ಹಾಲ್‌ನ್ನು ಈ ಹಿಂದೆ ಲಯನ್ಸ್ ಕ್ಲಬ್ ಇಂಟರ್ನೇಶನಲ್ ಸಂಸ್ಥೆಯ ಸಹಕಾರದೊಂದಿಗೆ, ಅಂದಿನ ಲಯನ್ಸ್ ಗವರ್ನರ್ ವಸಂತ್ ಶೆಟ್ಟಿ ಅವರ ಅನುದಾನದ ಮೂಲಕ ಆಸ್ಪತ್ರೆಗೆ ಕೊಡುಗೆಯಾಗಿ ನೀಡಲಾಗಿತ್ತು. ಇದೀಗ ಹೆಚ್ಚುವರಿ ತಾಂತ್ರಿಕ ಸೌಲಭ್ಯಗಳ ಅಳವಡಿಕೆಯಿಂದ ಸಭಾಂಗಣವು ಇನ್ನಷ್ಟು […]

Continue Reading

ಮಂಗಳೂರಿನಲ್ಲಿ ಕಿಂಗ್ ಖಾನ್‌ ಹವಾ: ರೋಹನ್‌ ಕಾರ್ಪೊರೇಶನ್‌ ಅನ್‌ ಈವ್ನಿಂಗ್‌ ವಿತ್‌ ಶಾರುಖ್‌ ಖಾನ್‌ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ

ಮಂಗಳೂರು: ಬಾಲಿವುಡ್‌ ನಟ ಶಾರುಖ್‌ ಖಾನ್‌ ಅವರ ಉಪಸ್ಥಿತಿಯಿಂದ ರೋಹನ್‌ ಕಾರ್ಪೊರೇಶನ್‌ ಆಯೋಜಿಸಿದ್ದ ‘ಅನ್‌ ಈವ್ನಿಂಗ್‌ ವಿತ್‌ ಶಾರುಖ್‌ ಖಾನ್‌’ ಕಾರ್ಯಕ್ರಮ ಗುರುವಾರ ನಗರದ ಅಡ್ಯಾರ್‌ ಗಾರ್ಡನ್‌ನಲ್ಲಿ ಗಮನ ಸೆಳೆಯಿತು. ಉದ್ಯಮ ವಲಯದ ಗಣ್ಯರು, ವಿವಿಧ ಕ್ಷೇತ್ರಗಳ ಪ್ರಮುಖರು, ಸಮಾಜದ ಪ್ರತಿನಿಧಿಗಳು ಮತ್ತು ಸಂಸ್ಥೆಯ ಹಿತೈಷಿಗಳು ಕಾರ್ಯಕ್ರಮದಲ್ಲಿ ಇದ್ದರು. ಸಂಜೆ ಆರಂಭವಾದ ಕಾರ್ಯಕ್ರಮ ರಾತ್ರಿ ತನಕ ಉತ್ಸಾಹಭರಿತ ವಾತಾವರಣದಲ್ಲಿ ನಡೆಯಿತು. ಕರಾವಳಿಯ ಕಲಾತಂಡಗಳ ಸಾಂಸ್ಕೃತಿಕ ಪ್ರದರ್ಶನಗಳು ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿದವು. ಇಂಡಿಯನ್‌ ಐಡಲ್‌ ಖ್ಯಾತಿಯ ಗಾಯಕ […]

Continue Reading

ಮುಂಗಾರು ಎಚ್ಚರಿಕೆ: ಉತ್ತರ ಕನ್ನಡ ಸೇರಿ 4 ಸೂಕ್ಷ್ಮ ಜಿಲ್ಲೆಗಳ ಉಸ್ತುವಾರಿ ಯು.ಟಿ. ಖಾದರ್‌ಗೆ, 13 ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ

ಬೆಂಗಳೂರು: ಮುಂಗಾರು ಮಳೆ ಹಾಗೂ ಸಂಭವನೀಯ ನೈಸರ್ಗಿಕ ವಿಕೋಪಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ವಿವಿಧ ಜಿಲ್ಲೆಗಳಿಗೆ ಸಚಿವರನ್ನು ಪ್ರಕೃತಿ ವಿಕೋಪ ಉಸ್ತುವಾರಿಗಳಾಗಿ ನೇಮಿಸಿ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಅತಿ ಹೆಚ್ಚು ಮಳೆ ಹಾಗೂ ಪ್ರಕೃತಿ ವಿಕೋಪಗಳಿಗೆ ತುತ್ತಾಗುವ ಸೂಕ್ಷ್ಮ ಪ್ರದೇಶಗಳ ಪೈಕಿ ಒಂದಾದ ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿಯನ್ನು ಸಚಿವ ಯು.ಟಿ. ಖಾದರ್ ಫರೀದ್ ಅವರಿಗೆ ವಹಿಸಲಾಗಿದೆ. ಇದರ ಜೊತೆಗೆ ಕರಾವಳಿ ಮತ್ತು ಮಲೆನಾಡಿನ ಪ್ರಮುಖ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ […]

Continue Reading

ಎಂಸಿಸಿ ಬ್ಯಾಂಕ್ ನ ದೇರಳಕಟ್ಟೆ, ಕಟಪಾಡಿ ಮತ್ತೇರಡು ಹೊಸ ಶಾಖೆ ಗ್ರಾಹಕರಿಗೆ ಲೋಕಾರ್ಪಣೆ: ಅನಿಲ್ ಲೋಬೊ

ಮಂಗಳೂರು: 114 ವರ್ಷಗಳ ಇತಿಹಾಸ ಹೊಂದಿರುವ ಎಂಸಿಸಿ ಬ್ಯಾಂಕ್ ಲಿಮಿಟೆಡ್ 2025-26ನೇ ಹಣಕಾಸು ವರ್ಷದಲ್ಲಿ 1,535 ಕೋಟಿ ರೂ.ಗಳ ಒಟ್ಟು ವ್ಯವಹಾರ ವಹಿವಾಟು ದಾಖಲಿಸಿ ಹೊಸ ಮೈಲುಗಲ್ಲು ಸಾಧಿಸಿದೆ. ಬ್ಯಾಂಕಿನ 22 ನೇ ಶಾಖೆ ದೇರಳಕಟ್ಟೆಯಲ್ಲಿ ಜೂನ್ 28 ರಂದು ಹಾಗೂ 23 ನೇ ಶಾಖೆ ಉಡುಪಿಯ ಕಟಪಾಡಿಯಲ್ಲಿ ಅಗಸ್ಟ್ 2 ರಂದು ಉದ್ಘಾಟನೆಯಾಗಲಿದೆ ಎಂದು ಬುಧವಾರ ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಅವರು ತಿಳಿಸಿದರು. ಬ್ಯಾಂಕ್ ಒಟ್ಟು ವ್ಯವಹಾರ ವಹಿವಾಟು ಶೇ.22.89ರಷ್ಟು ಏರಿಕೆಯಾಗಿದೆ ಎಂದು […]

Continue Reading

ಮಂಜನಾಡಿ ಗುಡ್ಡ ಕುಸಿತ, ಸಂತ್ರಸ್ತೆಯ ಮನೆಗೆ ಎಂಎಲ್ಸಿ ಕಿಶೋರ್ ಕುಮಾರ್ ಭೇಟಿ, ಸಾಂತ್ವನ

ಮಂಗಳೂರು: ಕಳೆದ ವರ್ಷ ಮಂಗಳೂರು ಸಮೀಪದ ಮಂಜನಾಡಿಯಲ್ಲಿ ಸಂಭವಿಸಿದ ಭೀಕರ ಗುಡ್ಡ ಕುಸಿತದಲ್ಲಿ ಕುಟುಂಬವನ್ನೇ ಕಳೆದುಕೊಂಡು, ಗಂಭೀರ ಸಂಕಷ್ಟದಲ್ಲಿ ಜೀವನ ಸಾಗಿಸುತ್ತಿರುವ ಅಶ್ವಿನಿ ಅವರ ಮನೆಗೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಭೇಟಿ ನೀಡಿ ಸಾಂತ್ವನ ಹೇಳಿದರು. ದುರಂತದಲ್ಲಿ ತಮ್ಮ ಇಬ್ಬರು ಮಕ್ಕಳು ಮತ್ತು ಅತ್ತೆಯನ್ನು ಕಳೆದುಕೊಂಡಿದ್ದ ಅಶ್ವಿನಿ, ಸ್ವತಃ ಎರಡು ಕಾಲುಗಳನ್ನು ಕಳೆದುಕೊಂಡು, ಅವರ ಮಾವ ಒಂದು ಕಾಲನ್ನು ಕಳೆದುಕೊಂಡು ಅಂಗವೈಕಲ್ಯಕ್ಕೆ ಒಳಗಾಗಿದ್ದಾರೆ. ಈ ದುರಂತದ ಬಳಿಕ ಮನೆ ಮತ್ತು ಬದುಕು […]

Continue Reading

ಡಿಜಿ-ಐಜಿಪಿ ಶ್ಲಾಘನಾ ಪದಕಕ್ಕೆ ಪಿಎಸ್ಐ ನಾಗಪ್ಪ ಭಾಜನ

ಸಿರಸಿ: ಉತ್ತರ ಕನ್ನಡ ಜಿಲ್ಲೆಯ ಸಿರಸಿ, ಕಾರವಾರ ಸೇರಿದಂತೆ ವಿವಿಧ ಕಡೆಗಳಲ್ಲಿ ತಮ್ಮದೇ ಕಾರ್ಯ ವೈಶಿಷ್ಟ್ಯದ ಮೂಲಕ ಜನಸ್ನೇಹಿ ಪೊಲೀಸ್ ಅಧಿಕಾರಿ ಆಗಿ ಗುರುತಿಸಿಕೊಂಡಿರುವ ಪಿಎಸ್ ಐ ನಾಗಪ್ಪ ಬಿ ಅವರಿಗೆ 2025-26ನೇ ಸಾಲಿನ ಪ್ರತಿಷ್ಠಿತ ಡಿಜಿ ಮತ್ತು ಐಜಿಪಿ ಶ್ಲಾಘನಾ ಪದಕಕ್ಕೆ ಭಾಜನ ಆಗಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿಷ್ಠೆಯಿಂದ ಸೇವೆ ಸಲ್ಲಿಸುತ್ತಿರುವ ನಾಗಪ್ಪ ಬಿ ಅವರು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಹಾಗೂ ಸಾರ್ವಜನಿಕರ ಜತೆಗೆ ತಮ್ಮದೇ ವಿಶಿಷ್ಟ ಕಾರ್ಯ ಶೈಲಿಯ ಮೂಲಕ ಉತ್ತಮ ಬಾಂಧವ್ಯ […]

Continue Reading

ಅತ್ತಾವರ ಕೆಎಂಸಿ ಆಸ್ಪತ್ರೆಗೆ ಎನ್‌ಎಬಿಎಚ್ 6 ನೇ ಆವೃತ್ತಿಯ ಪ್ರತಿಷ್ಠಿತ ಮಾನ್ಯತೆ

ಮಂಗಳೂರು: ಇಲ್ಲಿನ ಅತ್ತಾವರ ಕೆಎಂಸಿ ಆಸ್ಪತ್ರೆ ಗುಣಮಟ್ಟ ಮತ್ತು ರೋಗಿಗಳ ಸುರಕ್ಷತೆಗೆ ಸಂಬಂಧಿಸಿದ ಎನ್‌ಎಬಿಎಚ್ (ನ್ಯಾಷನಲ್ ಅಕ್ರೆಡಿಟೇಶನ್ ಬೋರ್ಡ್ ಫಾರ್ ಹಾಸ್ಪಿಟಲ್ಸ್ ಅಂಡ್ ಹೆಲ್ತ್‌ಕೇರ್ ಪ್ರೊವೈಡರ್ಸ್) 6 ನೇ ಆವೃತ್ತಿಯ ಮಾನದಂಡಗಳ ಅಡಿಯಲ್ಲಿ ಪ್ರತಿಷ್ಠಿತ ಮಾನ್ಯತೆ ಪಡೆದುಕೊಂಡಿದೆ. ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾದ ಅಂಗ ಸಂಸ್ಥೆ ಆಗಿರುವ ಎನ್‌ಎಬಿಎಚ್ ಈ ಮಾನ್ಯತೆಯನ್ನು ನೀಡಿದ್ದು, ಆಸ್ಪತ್ರೆ 610 ಮಂಜೂರಾದ ಹಾಸಿಗೆಗಳ ವ್ಯಾಪ್ತಿಯಲ್ಲಿ ರೋಗಿಗಳ ಸುರಕ್ಷತೆ ಹಾಗೂ ಗುಣಮಟ್ಟದ ಆರೋಗ್ಯ ಸೇವೆಗಳನ್ನು ನಿರಂತರವಾಗಿ ಒದಗಿಸುತ್ತಿರುವುದನ್ನು ಗುರುತಿಸಿ ಗೌರವಿಸಿದೆ. ಕೆಎಂಸಿ ಆಸ್ಪತ್ರೆ […]

Continue Reading

ಕರಾವಳಿಯಲ್ಲಿ ಕಿಂಗ್ ಖಾನ್ ಹವಾ: ಜೂನ್ 25 ಕ್ಕೆ ಮಂಗಳೂರಿನಲ್ಲಿ ಶಾರುಖ್ ಖಾನ್ ವಿಶೇಷ ಕಾರ್ಯಕ್ರಮ, ಪೂರ್ವ ನೋಂದಣಿ ಮಾಡಿದವರಿಗೆ ಮಾತ್ರ ಪ್ರವೇಶ

ಮಂಗಳೂರು: ಬಾಲಿವುಡ್‌ನ ಖ್ಯಾತ ನಟ ಶಾರುಖ್ ಖಾನ್ ಅವರು ಜೂನ್ 25 ರಂದು ಮಂಗಳೂರಿಗೆ ಆಗಮಿಸಲಿದ್ದು, ಕರಾವಳಿಯ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾದ ರೋಹನ್ ಕಾರ್ಪೊರೇಶನ್ ಆಯೋಜಿಸಿರುವ ‘ಶಾರುಖ್ ಖಾನ್ ಅವರೊಂದಿಗೆ ವಿಶೇಷ ಸಂಜೆಯ ಕಾರ್ಯಕ್ರಮ’ದಲ್ಲಿ ಭಾಗವಹಿಸಲಿದ್ದಾರೆ. ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಸಂಜೆ 4 ಗಂಟೆಯಿಂದ ಪ್ರವೇಶ ಆರಂಭವಾಗಲಿದೆ. ವಿವಿಧ ಕ್ಷೇತ್ರಗಳ ಗಣ್ಯರು, ಉದ್ಯಮಿಗಳು, ಜನಪ್ರತಿನಿಧಿಗಳು ಹಾಗೂ ಪೂರ್ವ ನೋಂದಣಿ ಮಾಡಿಕೊಂಡಿರುವ ಆಹ್ವಾನಿತರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಕುರಿತು ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕ […]

Continue Reading