ಶ್ರೀನಿವಾಸ ವಿಶ್ವವಿದ್ಯಾಲಯಕ್ಕೆ ಮೂರು ಅಂತರ ರಾಷ್ಟ್ರೀಯ ಪ್ರಶಸ್ತಿ, ಶಿಕ್ಷಣ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು: ಕುಲಾಧಿಪತಿ ಡಾ. ಶ್ರೀನಿವಾಸ ರಾವ್

ಮಂಗಳೂರು: ಸ್ಥಳೀಯ ಪ್ರತಿಭೆಗಳಿಗೆ ಜಾಗತಿಕ ಅವಕಾಶಗಳನ್ನು ಕಲ್ಪಿಸುವುದು” ಎಂಬ ಧ್ಯೇಯದೊಂದಿಗೆ ಶಿಕ್ಷಣ, ಸಂಶೋಧನೆ ಹಾಗೂ ನವೀನತೆಯ ಕ್ಷೇತ್ರದಲ್ಲಿ ನಿರಂತರ ಸಾಧನೆ ಮಾಡುತ್ತಿರುವ ಶ್ರೀನಿವಾಸ ಸಂಸ್ಥೆಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ಮಹತ್ವದ ಸಾಧನೆ ಮಾಡಿವೆ ಎಂದು ಕುಲಾಧಿಪತಿ ಡಾ. ಶ್ರೀನಿವಾಸ ರಾವ್ ತಿಳಿಸಿದರು. ಶಿಕ್ಷಣ ತಜ್ಞ ಹಾಗೂ ಸಂಸ್ಥಾಪಕ ದಿವಂಗತ ಡಾ. ಸಿ. ಎ. ಎ. ರಾಘವೇಂದ್ರ ರಾವ್ ಅವರ ದೂರದೃಷ್ಟಿಯ ಫಲವಾಗಿ ಬೆಳೆದಿರುವ ಈ ಸಂಸ್ಥೆಗಳು ಇಂದು ದೇಶದ ಪ್ರಮುಖ ಉನ್ನತ ಶಿಕ್ಷಣ ಸಮೂಹಗಳಲ್ಲಿ ಒಂದಾಗಿ ಗುರುತಿಸಿಕೊಂಡಿವೆ. ಸಂಸ್ಥೆಯು […]

Continue Reading

ತಾಯಿಯ ನೆನಪು ಚಿರಸ್ಥಾಯಿಗೊಳಿಸಿದ ಪುತ್ರರು, ಬಡ ಕುಟುಂಬಕ್ಕೆ 10 ಲಕ್ಷ ವೆಚ್ಚದ ಮನೆ ನಿರ್ಮಾಣ

ಮಂಗಳೂರು: ತಾಯಿಯ ಸ್ಮರಣೆಯನ್ನು ಅರ್ಥಪೂರ್ಣ ಸಾಮಾಜಿಕ ಸೇವೆಯ ಮೂಲಕ ಆಚರಿಸುವ ಅಪರೂಪದ ಉದಾಹರಣೆಗೆ ಮೂಡುಶೆಡ್ಡೆ ಸಾಕ್ಷಿಯಾಯಿತು. ದಿವಂಗತ ದೇವಕಿ ಸಂಜೀವ ಶೆಟ್ಟಿ ಅವರ ನಾಲ್ಕನೇ ವರ್ಷದ ಪುಣ್ಯಸ್ಮರಣೆಯ ಅಂಗವಾಗಿ ಅವರ ಪುತ್ರರು ಕೊರಗ ಸಮುದಾಯದ ಬಡ ಕುಟುಂಬಕ್ಕೆ ನೂತನ ಮನೆ ನಿರ್ಮಿಸಿಕೊಟ್ಟು ಮಾನವೀಯತೆ ಮೆರೆದರು. ಮೂಡುಶೆಡ್ಡೆ ಹೊಸಲಕ್ಕೆಯಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ನೂತನ ಮನೆಯ ಕೀಲಿಯನ್ನು ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಅತಿಥಿಗಳು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ವಕೀಲ ಉಮೇಶ್ ಶೆಟ್ಟಿ ಹೊಸಲಕ್ಕೆ, ತಮ್ಮ ತಾಯಿ […]

Continue Reading

ಕಾರವಾರ: ಮೊದಲ ಮಳೆಗೆ ಕಡವಾಡ ಹಳೆಯ ಸೇತುವೆ ಕುಸಿತ; ತಪ್ಪಿದ ಭಾರಿ ಅನಾಹುತ

ಕಾರವಾರ: ಮುಂಗಾರು ಮಳೆಯ ಆರಂಭದಲ್ಲೇ ಕಾರವಾರ ತಾಲ್ಲೂಕಿನ ಕಡವಾಡದಲ್ಲಿರುವ ಹಳೆಯ ಸೇತುವೆ ಮಂಗಳವಾರ ಏಕಾಏಕಿ ಕುಸಿದು ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ. ಸುಂಕೇರಿ ಮಾರ್ಗವಾಗಿ ಸಂಪರ್ಕ ಕಲ್ಪಿಸುವ ಈ ಸೇತುವೆ ಹಲವು ವರ್ಷಗಳಷ್ಟು ಹಳೆಯದಾಗಿದ್ದು, ಮಳೆಯಿಂದಾಗಿ ದುರ್ಬಲಗೊಂಡಿದ್ದ ಸೇತುವೆ ಎರಡು-ಮೂರು ತುಂಡುಗಳಾಗಿ ಕುಸಿದಿದೆ. ಸ್ಥಳೀಯರು ಹಾಗೂ ಮೀನುಗಾರರು ಈ ಪ್ರದೇಶದಲ್ಲಿ ಹೆಚ್ಚಾಗಿ ಓಡಾಡುತ್ತಿದ್ದು, ಘಟನೆ ವೇಳೆ ಯಾರೂ ಸೇತುವೆ ಮೇಲೆ ಇಲ್ಲದ ಕಾರಣ ಸಂಭವನೀಯ ದುರಂತ ತಪ್ಪಿದಂತಾಗಿದೆ. ಕಡವಾಡ ಸೇತುವೆಯ ಪಕ್ಕದಲ್ಲೇ ಈಗಾಗಲೇ ಹೊಸ ಸೇತುವೆ […]

Continue Reading

ಯೋಗ ಅಧಿವೇಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಅಗತ್ಯ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀ ಪ್ರಿಯಾ

ಕಾರವಾರ: ಅಂತರ ರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ, ಆಯುಷ್ ಸಚಿವಾಲಯವು ಇದೇ 14 ರಂದು ಗಿನ್ನೆಸ್ ವಿಶ್ವ ದಾಖಲೆಯ ಅತಿದೊಡ್ಡ ಆನ್‌ಲೈನ್ ಯೋಗ ಅಧಿವೇಶನವನ್ನು ಆಯೋಜಿಸುತ್ತಿದ್ದು, ಈ ಸಾಮೂಹಿಕ ಆಚರಣೆಗೆ ಜಿಲ್ಲೆಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆ ಯಲ್ಲಿ ನೋಂದಣಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀ ಪ್ರಿಯಾ ಅವರು ತಿಳಿಸಿದರು. ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ, ಅಂತಾರಾಷ್ಟ್ರೀಯ ಯೋಗ ದಿಚಾರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಯೋಗ ಅಧಿವೇಶನವು ದೇಶಾದ್ಯಂತ ಯೋಗ ಸಾಧಕರು ಮತ್ತು ನಾಗರಿಕರನ್ನು ಒಟ್ಟುಗೂಡಿಸುವ […]

Continue Reading

ಉ.ಕ ಜಿಲ್ಲೆಯಲ್ಲಿ ರೆಟ್ ಆಲರ್ಟ್, ಮುಂಗಾರು ಎದುರಿಸಲು ಸಿದ್ದತೆ, ಎಚ್ಚರಿಕೆ ವಹಿಸಿಸುವಂತೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಸೂಚನೆ

ಕಾರವಾರ: ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಮುನ್ಸೂಚನೆ ನೀಡಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಜೂನ್ 8 ರಂದು ಮಧ್ಯಾಹ್ನ 1 ಗಂಟೆಯಿಂದ 10 ರಂದು ಬೆಳಿಗ್ಗೆ 8.30 ರ ವರೆಗೆ ರೆಡ್ ಅಲರ್ಟ್ ಇದ್ದು, ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಜನರು ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರು ಸೂಚನೆ ನೀಡಿದ್ದಾರೆ. ಜಿಲ್ಲಾಡಳಿತವು ಜಿಲ್ಲೆಯಲ್ಲಿ ಮುಂಗಾರು ಪೂರ್ವ ಸಿದ್ಧತೆ ಈಗಾಗಲೇ ಕೈಗೊಂಡಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ […]

Continue Reading

ಅಗಸ್ಟ್‌ನಲ್ಲಿ ಬೆಂಗಳೂರಿನಲ್ಲಿ ಅಖಿಲ ಭಾರತ ಫುಟ್‌ಬಾಲ್ ಟೂರ್ನಿ

ಬೆಂಗಳೂರು: 15 ವರ್ಷ ವಯೋಮಿತಿಯೊಳಗಿನ ಬಾಲಕರಿಗಾಗಿ 14 ನೇ ಅಖಿಲ ಭಾರತ ಫುಟ್‌ಬಾಲ್ (5–ಎ–ಸೈಡ್) ಟೂರ್ನಿಯು ಆಗಸ್ಟ್ 23 ಮತ್ತು 24ರಂದು ಇಲ್ಲಿನ ಕುಕ್‌ಟೌನ್‌ ರಶ್ ಅರೆನಾ ಫುಟ್‌ಬಾಲ್ ಮೈದಾನದಲ್ಲಿ ನಡೆಯಲಿದೆ ಎಂದು ಆಯೋಜಕರಾದ ಡೆಂಜಿಲ್ ಫರ್ನಾಂಡಿಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶಾಲೆಗಳು, ಕ್ಲಬ್‌ಗಳು, ಕ್ರೀಡಾ ಅಕಾಡೆಮಿಗಳು, ಸಂಘಗಳು ಹಾಗೂ ವಿವಿಧ ಕ್ರೀಡಾ ಗುಂಪುಗಳಿಗೆ ಟೂರ್ನಿಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. 2011ರ ಜನವರಿ 1 ಅಥವಾ ನಂತರ ಜನಿಸಿದ ಆಟಗಾರರು ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಅರ್ಹರಾಗಿರುತ್ತಾರೆ ಎಂದು ತಿಳಿಸಿದ್ದಾರೆ. […]

Continue Reading

ಕರಿಕಾಡ ಖ್ಯಾತಿಯ ಕಾಡ ನಟರಾಜ್‌ಗೆ ಡಬಲ್ ಸಂಭ್ರಮ, ಜನ್ಮದಿನದಂದೇ ಅಭಿನಯಕ್ಕೆ ಮೆಚ್ಚುಗೆಯ ಮಳೆ

ಬೆಂಗಳೂರು:‘ ಕರಿಕಾಡ’ ಚಿತ್ರದ ಮೂಲಕ ಸಿನಿಪ್ರಿಯರ ಗಮನ ಸೆಳೆದಿರುವ ನಟ ಕಾಡ ನಟರಾಜ್ ಅವರಿಗೆ ಈ ಬಾರಿಯ ಜನ್ಮದಿನ ಡಬಲ್ ಖುಷಿ ತಂದಿದೆ. ಜೂನ್ 6ರಂದು ಜನ್ಮದಿನ ಆಚರಿಸಿಕೊಂಡ ನಟರಾಜ್, ತಮ್ಮ ಅಭಿನಯಕ್ಕೆ ದೊರೆಯುತ್ತಿರುವ ಮೆಚ್ಚುಗೆಯೇ ಈ ವರ್ಷದ ದೊಡ್ಡ ಉಡುಗೊರೆ ಎಂದು ಸಂತಸ ಹಂಚಿಕೊಂಡಿದ್ದಾರೆ. ಗಿಲ್ಲಿ ವೆಂಕಟೇಶ್ ನಿರ್ದೇಶನದ ‘ಕರಿಕಾಡ’ ಚಿತ್ರದಲ್ಲಿ ಶೀರ್ಷಿಕೆ ಪಾತ್ರದಲ್ಲಿ ನಟಿಸಿದ್ದ ಕಾಡ ನಟರಾಜ್, ಹಳ್ಳಿ ಯುವಕನ ಪಾತ್ರವನ್ನು ಸಹಜವಾಗಿ ನಿರ್ವಹಿಸಿ ಪ್ರೇಕ್ಷಕರ ಮನ ಗೆದ್ದಿದ್ದರು. ಚಿತ್ರ ಬಿಡುಗಡೆಯಾದಾಗಲೇ ಅವರ ಅಭಿನಯಕ್ಕೆ […]

Continue Reading

ಸಿಇಟಿ ಫಲಿತಾಂಶದಲ್ಲಿ ಮಂಗಳೂರಿನ ಎಕ್ಸ್ಪರ್ಟ್ ಕಾಲೇಜು ಮೇಲುಗೈ, 15 ರ‍್ಯಾಂಕ್‌; ಹೊಸ ದಾಖಲೆ

ಮಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶದಲ್ಲಿ ಮಂಗಳೂರಿನ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮೆರೆದಿದ್ದಾರೆ. ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆದ ಪರೀಕ್ಷೆಯ ಆರು ವಿಭಾಗಗಳಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಟಾಪ್-10 ಪಟ್ಟಿಯಲ್ಲಿ ಒಟ್ಟು 15 ರ‍್ಯಾಂಕ್‌ಗಳನ್ನು ಪಡೆದು ಹೊಸ ಇತಿಹಾಸ ನಿರ್ಮಿಸಿದ್ದಾರೆ. ಟಾಪ್-10 ರ‍್ಯಾಂಕ್‌ಗಳಲ್ಲಿ ಮೂವರು ವಿದ್ಯಾರ್ಥಿಗಳು 3ನೇ ರ‍್ಯಾಂಕ್, ಮೂವರು 4ನೇ ರ‍್ಯಾಂಕ್, ಒಬ್ಬ ವಿದ್ಯಾರ್ಥಿ 6ನೇ ರ‍್ಯಾಂಕ್ , ಮೂವರು 7ನೇ […]

Continue Reading

ಕೆಸಿಇಟಿ ಫಲಿತಾಂಶ, ಶಕ್ತಿ ಕಾಲೇಜಿನ ಬಿಪಿಒ ವಿಭಾಗದಲ್ಲಿ ಲಿಖಿತ್ ಗೌಡಗೆ 221ನೇ ರ‍್ಯಾಂಕ್

ಮಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಕೆಸಿಇಟಿ-2026 ಪರೀಕ್ಷೆಯಲ್ಲಿ ಶಕ್ತಿನಗರದ ಶಕ್ತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮೆರೆದಿದ್ದಾರೆ. ವಿಜ್ಞಾನ ವಿಭಾಗದ ವಿದ್ಯಾರ್ಥಿ ಲಿಖಿತ್ ಗೌಡ ಎಸ್.ಡಿ. ಅವರು ಬಿಪಿಒ ವಿಭಾಗದಲ್ಲಿ 221ನೇ ರ‍್ಯಾಂಕ್ ಗಳಿಸಿದ್ದು, ಎಂಜಿನಿಯರಿಂಗ್ ವಿಭಾಗದಲ್ಲಿ 2367ನೇ ರ‍್ಯಾಂಕ್ ಪಡೆದಿದ್ದಾರೆ. ಪವನ್ ಮಲಗಿ ನರ್ಸಿಂಗ್ ವಿಭಾಗದಲ್ಲಿ 1428ನೇ ಹಾಗೂ ವೆಟರಿನರಿ ಸೈನ್ಸ್ ವಿಭಾಗದಲ್ಲಿ 1424ನೇ ರ‍್ಯಾಂಕ್ ಗಳಿಸಿದ್ದಾರೆ. ಸುಹಾಸ್ ಅವರು ನರ್ಸಿಂಗ್‌ನಲ್ಲಿ 1661ನೇ, ನ್ಯಾಚುರೋಪತಿ ಮತ್ತು ಯೋಗ ವಿಭಾಗದಲ್ಲಿ 1153ನೇ ಹಾಗೂ […]

Continue Reading

ಅಮೃತ 2.0 ಕಾಮಗಾರಿ ಅವೈಜ್ಞಾನಿಕ ಎಂಬ ಪತ್ರಿಕಾ ವರದಿಗೆ ನಗರಸಭೆ ಕಮಿಷನರ್ ಜಗದೀಶ್ ಸ್ಪಷ್ಟನೆ

ಕಾರವಾರ: ಅಮೃತ 2.0 ಯೋಜನೆಯ ಕಾಮಗಾರಿ ಅವೈಜ್ಞಾನಿಕವಾಗಿ ನಡೆಯುತ್ತಿದೆ ಎಂಬ ಕುರಿತು ಕೆಲ ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳಿಗೆ ನಗರಸಭೆ ಕಮಿಷನರ್ ಜಗದೀಶ್ ಬಿ.ಹುಲಗೆಜ್ಜಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ. ಕಾರವಾರ ನಗರ ವ್ಯಾಪ್ತಿಯಲ್ಲಿ ಅಮೃತ 2.0 ಯೋಜನೆಯಡಿ ₹35 ಕೋಟಿ ವೆಚ್ಚದ ಕಾಮಗಾರಿ ಮಂಜೂರಾಗಿದ್ದು, ಯೋಜನೆಯಡಿ ಅಗತ್ಯವಿರುವ ಪ್ರದೇಶಗಳಲ್ಲಿ ನೀರಿನ ಪೈಪ್‌ಲೈನ್ ಅಳವಡಿಕೆ ಕಾರ್ಯ ನಡೆಯುತ್ತಿದೆ. ಯೋಜನೆಯ ಕಾಮಗಾರಿಯನ್ನು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅನುಷ್ಠಾನಗೊಳಿಸುತ್ತಿದ್ದು, ನಗರದಲ್ಲಿ ಕುಡಿಯುವ ನೀರಿನ ವ್ಯವಸ್ಥೆ […]

Continue Reading