ಕೇರಳಕ್ಕೆ ಮುಂಗಾರು ಪ್ರವೇಶ: ಇನ್ನೆರಡು ದಿನದಲ್ಲಿ ಕರ್ನಾಟಕಕ್ಕೂ ಮಳೆ ಅಬ್ಬರ!ವಾಡಿಕೆಗಿಂತ 3 ದಿನ ತಡ

ಬೆಂಗಳೂರು: ನೈಋತ್ಯ ಮುಂಗಾರು ಗುರುವಾರ ಕೇರಳ ಕರಾವಳಿಯನ್ನು ಪ್ರವೇಶಿಸಿದ್ದು, ವಾಡಿಕೆಗಿಂತ ಮೂರು ದಿನ ತಡವಾಗಿ ಮುಂಗಾರು ಆರಂಭವಾಗಿದೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲೂ ಇನ್ನೆರಡು ದಿನಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಮುಂಗಾರು ಅಧಿಕೃತವಾಗಿ ಯಾವ ದಿನ ಪ್ರವೇಶಿಸಲಿದೆ ಎಂಬುದನ್ನು ಮುಂಗಾರು ಗಾಳಿಯ ಚಲನವಲನ ಮತ್ತು ವಾತಾವರಣದ ಸ್ಥಿತಿಗತಿಗಳನ್ನು ಪರಿಶೀಲಿಸಿದ ಬಳಿಕ ಘೋಷಿಸಲಾಗುವುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ರಾಜ್ಯದ ಹಲವೆಡೆ ಮಳೆಯ ಚಟುವಟಿಕೆ ಚುರುಕುಗೊಂಡಿದ್ದು, […]

Continue Reading

ಮಂಗಳೂರಿನಲ್ಲಿ ಪೆಪ್ಸಿಕೋ ಅಡ್ರಿನಾಲಿನ್ ರಶ್ ಎನರ್ಜಿ ಡ್ರಿಂಕ್ ಬಿಡುಗಡೆ,  ಪ್ಯಾಶನ್ ರಶ್ , ಕ್ಲಾಸಿಕ್ ರಶ್ ಫ್ಲೇವರ್‌

ಮಂಗಳೂರು:ಜಾಗತಿಕವಾಗಿ ಜನಪ್ರಿಯವಾಗಿರುವ ತನ್ನ ಪ್ರೀಮಿಯಂ ಎನರ್ಜಿ ಡ್ರಿಂಕ್ ಬ್ರ್ಯಾಂಡ್ ‘ಅಡ್ರಿನಾಲಿನ್ ರಶ್’ ಅನ್ನು ಪೆಪ್ಸಿಕೋ ಇಂಡಿಯಾ ಮಂಗಳೂರಿನಲ್ಲಿ ಬಿಡುಗಡೆ ಮಾಡಿದೆ. ಪ್ಯಾಶನ್ ರಶ್ ಮತ್ತು ಕ್ಲಾಸಿಕ್ ರಶ್ ಎಂಬ ಎರಡು ಫ್ಲೇವರ್‌ಗಳಲ್ಲಿ ಲಭ್ಯವಿರುವ ಈ ಎನರ್ಜಿ ಡ್ರಿಂಕ್‌ಗೆ ರೂ.60 ದರ ನಿಗದಿಪಡಿಸಲಾಗಿದೆ. ಯುವಜನರ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಈ ಉತ್ಪನ್ನವನ್ನು ಮಾರುಕಟ್ಟೆಗೆ ಪರಿಚಯಿಸಲಾಗಿದೆ ಎಂದು ಕಂಪನಿ ತಿಳಿಸಿದೆ. ಭಾರತದಲ್ಲಿ ಎನರ್ಜಿ ಡ್ರಿಂಕ್ ವಿಭಾಗ ವೇಗವಾಗಿ ಬೆಳೆಯುತ್ತಿದ್ದು, ಗ್ರಾಹಕರ ಆಕಾಂಕ್ಷೆಗಳಿಗೆ ತಕ್ಕ ಉತ್ಪನ್ನಗಳನ್ನು ಒದಗಿಸುವ ಉದ್ದೇಶದಿಂದ ಅಡ್ರಿನಾಲಿನ್ ರಶ್ ಪರಿಚಯಿಸಲಾಗಿದೆ […]

Continue Reading

ಆಳ್ವಾಸ್ ಹೆಲ್ತ್ ಸೆಂಟರ್‌ನಲ್ಲಿ ಹೃದಯ ರೋಗಿಗಳಿಗೆ ಆಯುಷ್ಮಾನ್ ಯೋಜನೆಯಡಿ ಉಚಿತ ಅಂಜಿಯೋಪ್ಲಾಸ್ಟಿ ಚಿಕಿತ್ಸೆ: ಡಾ. ಮೋಹನ್ ಆಳ್ವ

ಮೂಡುಬಿದಿರೆ: ಹೃದಯ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ಅರ್ಹ ರೋಗಿಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆ ಅಡಿ ಉಚಿತ ಅಂಜಿಯೋಪ್ಲಾಸ್ಟಿ ಚಿಕಿತ್ಸೆ ಲಭ್ಯವಿದ್ದು, ಬಿಪಿಎಲ್ ಕಾರ್ಡ್ ಹಾಗೂ ಆಯುಷ್ಮಾನ್ ಕಾರ್ಡ್ ಹೊಂದಿರುವವರು ಇದರ ಪ್ರಯೋಜನ ಪಡೆಯಬಹುದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಎದೆನೋವು, ಉಸಿರಾಟದ ತೊಂದರೆ, ಅತಿಯಾದ ದಣಿವು, ಹೃದಯ ಬಡಿತದ ಅಸಮಾನತೆ ಸೇರಿದಂತೆ ಹೃದಯ ಸಂಬಂಧಿತ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ […]

Continue Reading

ಕೊಳವೆ ಕಾಮಗಾರಿ, ವಿವಿಧೆಡೆ ಮೂರು ದಿನ ನೀರು ಪೂರೈಕೆ ಸ್ಥಗಿತ; ಕಮಿಷನರ್ ಜಗದೀಶ್

ಕಾರವಾರ: ಇಲ್ಲಿನ ನಗರಸಭೆಯ ವ್ಯಾಪ್ತಿಯ ನೀರು ಸರಬರಾಜು ಮಾಡುವ ಜೋನ್ 2 ರ ಪ್ರದೇಶದ 300 ಎಂಎಂ ನೀರಿನ ಮುಖ್ಯ ಕೊಳವೆ ಒಡೆದ ಪರಿಣಾಮ ಜೂನ್ 4 ರಿಂದ 7ರವರೆಗೆ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ನಗರಸಭೆಯ ಕಮಿಷನರ್ ಜಗದೀಶ್ ಬಿ. ಹುಲಗೆಜ್ಜಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾರವಾರ ನಗರದ ಕಾಜುಭಾಗ್, ಕೋಡಿಬಾಗ ಮುಖ್ಯ ರಸ್ತೆ, ಮಧ್ಯವಾಡ್, ಶಿವಾಜಿವಾಡ್ , ಟೋಲನಾಕಾ, ತಾಮಸೆವಾಡ್, ನದಿವಾಡ್, ಅಂಬೇಡ್ಕರ್ ಕಾಲೋನಿ, ತೆಲಂಗರೋಡ್, ಚಂದ್ರಾದೇವಿ, ಗಿಂಡಿವಾಡ್, ಸುಂಕೇರಿವರಿಗೆ ದುರಸ್ತೆ ಕಾರ್ಯ ನಡೆಯಲಿದೆ. […]

Continue Reading

ಕಾಂಗ್ರೆಸ್ ಹಿರಿಯ ಮುಖಂಡ ಬಿ.ಕೆ. ಹರಿಪ್ರಸಾದ್ ಗೆ ಕೆಪಿಸಿಸಿ ಪಟ್ಟ, ಹೈಕಮಾಂಡ್ ಅಧಿಕೃತ ಆದೇಶ

ನವದೆಹಲಿ: ಕಾಂಗ್ರೆಸ್ ಹೈಕಮಾಂಡ್ ಕೆಪಿಸಿಸಿ ಅಧ್ಯಕ್ಷರನ್ನಾಗಿ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ನೇಮಕ ಮಾಡಿ ಅಧಿಕೃತ ಆದೇಶ ಹೊರಡಿಸಿದೆ ಎಂದು ಪ್ರಕಟಣೆ ತಿಳಿಸಿದೆ. https://www.karavalidailynews.com/wp-content/uploads/2026/06/PR_PCC_Karnataka-1.pdf ಮೂಲ ಕಾಂಗ್ರೆಸಿಗ ಹಾಗೂ ಹೈಕಮಾಂಡ್ ಗೆ ತೀರಾ ಆಪ್ತರಾಗಿರುವ ಹಿಂದುಳಿದ ವರ್ಗದ ಕಾಂಗ್ರೆಸ್ ಪ್ರಮುಖ ಮುಖಂಡ ಬಿ.ಕೆ.ಹರಿಪ್ರಸಾದ್ ಅವರಿಗೆ ಮಣೆ ಹಾಕಿದೆ. ಬಿ.ಕೆ.ಹರಿಪ್ರಸಾದ್ ಈಡಿಗ ಸಮುದಾಯದವರಾಗಿದ್ದು, ಕಾಂಗ್ರೆಸ್ ​ನ ಪ್ರಬಲ ನಾಯಕರಾಗಿದ್ದಾರೆ‌. ಅಹಿಂದ ಸಮುದಾಯದವರನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಬಿ.ಕೆ.ಹರಿಪ್ರಸಾದ್ ಅವರಿಗೆ ಮಣೆ ಹಾಕಿದ್ದು, ಮಂತ್ರಿ ಮಂಡಳ ರಚನೆ ಆಗುತ್ತಿದ್ದಂತೆ […]

Continue Reading

ಮುಖ್ಯಮಂತ್ರಿ ಡಿಕೆಶಿ ಆರ್ಥಿಕ ಸಲಹೆಗಾರರಾಗಿ ಎಲ್.ಕೆ. ಅತೀಕ್ ನೇಮಕ

ಬೆಂಗಳೂರು: ನಿವೃತ್ತ ಐಎಎಸ್ ಅಧಿಕಾರಿ ಎಲ್.ಕೆ. ಅತೀಕ್ ಅವರನ್ನು ಮುಖ್ಯಮಂತ್ರಿ ಅವರ ಆರ್ಥಿಕ ಸಲಹೆಗಾರರನ್ನಾಗಿ ರಾಜ್ಯ ಸರ್ಕಾರ ನೇಮಕ ಮಾಡಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಬುಧವಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ. ನೇಮಕಾತಿಯು ತಕ್ಷಣದಿಂದಲೇ ಜಾರಿಗೆ ಬರಲಿದ್ದು, ಮುಂದಿನ ಆದೇಶದವರೆಗೆ ಅತೀಕ್ ಅವರು ಈ ಹುದ್ದೆಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಮುಖ್ಯಮಂತ್ರಿ ಅವರ ಆರ್ಥಿಕ ಸಲಹೆಗಾರರ ಹುದ್ದೆಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಸಮನಾದ ವೇತನ ಹಾಗೂ ಇತರ ಭತ್ತೆಗಳನ್ನು […]

Continue Reading

ಯು.ಟಿ. ಖಾದರ್ ಸ್ಪೀಕರ್ ಟು ಮಿನಿಸ್ಟರ್ ಜರ್ನಿ, ಕಾರ್ಯಕರ್ತರಲ್ಲಿ ಸಂಭ್ರಮ

ಮಂಗಳೂರು: ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯ ನಡುವೆ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿರುವ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ನೂತನ ಸಚಿವ ಸಂಪುಟಕ್ಕೆ ಕರಾವಳಿಯ ಹಿರಿಯ ಕಾಂಗ್ರೆಸ್ ನಾಯಕ ಯು.ಟಿ. ಖಾದರ್ ಅವರು ಸ್ಪೀಕರ್ ಟು ಮಿನಿಸ್ಟರ್ ಆಗಿ ಪ್ರಮಾಣ ವಚನ ಸ್ವೀಕರಿಸಿದರು. ಉಳ್ಳಾಲ ಕ್ಷೇತ್ರದ ಶಾಸಕ ಯು.ಟಿ. ಖಾದರ್ ಅವರು ದೇವರ ಹೆಸರಿನಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಕರಾವಳಿ ಭಾಗದ ಪ್ರಬಲ ನಾಯಕನಾಗಿರುವ ಖಾದರ್ ಅವರಿಗೆ ಸಚಿವ ಸ್ಥಾನ ದೊರೆತಿರುವುದು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂಭ್ರಮಕ್ಕೆ ಕಾರಣವಾಗಿದೆ. ಮಂಗಳೂರು […]

Continue Reading

ಸಿಎಂ ಡಿಕೆಶಿ ಸಂಪುಟಕ್ಕೆ ಪರಮೇಶ್ವರ್ ಡಿಸಿಎಂ ಆಗಿ ಎಂಟ್ರಿ

ಬೆಂಗಳೂರು:ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಸಿಎಂ ಡಿಕೆಶಿ ಅವರ ಸಂಪುಟಕ್ಕೆ ಡಿಸಿಎಂ ಆಗಿ ಸೇರ್ಪಡೆಯಾಗಿದ್ದಾರೆ. ರಾಜ್ಯದ ರಾಜಕೀಯ ಬೆಳವಣಿಗೆಗಳ ನಡುವೆ ಅಧಿಕಾರ ಹಸ್ತಾಂತರ ಪ್ರಕ್ರಿಯೆ ಸುಗಮವಾಗಿ ಪೂರ್ಣಗೊಂಡಿದ್ದು, ಹೊಸ ಸರ್ಕಾರದ ಕಾರ್ಯವೈಖರಿ ಕುರಿತು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿದೆ. ಅನುಭವ ಮತ್ತು ಸಂಘಟನಾ ಸಾಮರ್ಥ್ಯದ ಸಮನ್ವಯದೊಂದಿಗೆ ಹೊಸ ತಂಡ ರಾಜ್ಯದ ಆಡಳಿತವನ್ನು ಮುನ್ನಡೆಸಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

Continue Reading

ಡಿಕೆಶಿ ಸಂಪುಟ ಸೇರಿದ ಹಿರಿ ತಲೆಗಳು, ಖಾದರ್, ಯತೀಂದ್ರ ನ್ಯೂ ಎಂಟ್ರಿ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಅಗಿ ಡಿಕೆಶಿ ಅವರು ಅಧಿಕಾರದ ಗದ್ದುಗೆ ಹಿಡಿದಿದ್ದು, ಅವರ ಸಂಪುಟದಲ್ಲಿ ಡಾ. ಜಿ .ಪರಮೇಶ್ವರ್, ಎಂ.ಬಿ. ಪಾಟೀಲ್, ಕೆ.ಜೆ. ಜಾರ್ಜ್, ಯು.ಟಿ. ಖಾದರ್, ರಾಮಲಿಂಗಾರೆಡ್ಡಿ, ಪ್ರಿಯಾಂಕ್ ಖರ್ಗೆ, ಕೆ.ಎಚ್.ಮುನಿಯಪ್ಪ, ಈಶ್ವರ್ ಖಂಡ್ರೆ, ಡಾ. ಶರಣ ಪ್ರಕಾಶ ಪಾಟೀಲ್, ಯತೀಂದ್ರ ಸಿದ್ದರಾಮಯ್ಯ, ಸತೀಶ್ ಜಾರಕಿಹೊಳಿ, ಬೈರತಿ ಸುರೇಶ್, ಕೃಷ್ಣ ಬೈರೇಗೌಡ್ ಅವರು ಸಂಪುಟ ದರ್ಜೆಯ ಸ್ಥಾನ ಮಾನ ಪಡೆದುಕೊಂಡಿದ್ದು, ನೂತನ ಸಂಪುಟ ಸೇರ್ಪಡೆ ಆಗಿದ್ದಾರೆ.  

Continue Reading

ಸಂವಿಧಾನ ಪುಸ್ತಕ ಹಿಡಿದು ಡಿಕೆಶಿ ಸಿಎಂ ಪ್ರಮಾಣ: ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರತಿಜ್ಞೆ

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಬಹುನಿರೀಕ್ಷಿತ ಅಧಿಕಾರ ಹಸ್ತಾಂತರ ಪ್ರಕ್ರಿಯೆಗೆ ಬುಧವಾರ ಅಧಿಕೃತ ತೆರೆ ಬಿದ್ದಿದ್ದು, ಕೆಪಿಸಿಸಿ ಅಧ್ಯಕ್ಷ ಹಾಗೂ ‘ಟ್ರಬಲ್ ಶೂಟರ್’ ಖ್ಯಾತಿಯ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಬೆಂಗಳೂರಿನ ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಡಿ.ಕೆ. ಶಿವಕುಮಾರ್ ಅವರಿಗೆ ಪ್ರಮಾಣವಚನ ಬೋಧಿಸಿದರು. ವಿಶೇಷವೆಂದರೆ, ಡಿ.ಕೆ. ಶಿವಕುಮಾರ್ ಅವರು ಸಂವಿಧಾನದ ಪುಸ್ತಕವನ್ನು ಕೈಯಲ್ಲಿ ಹಿಡಿದು ಪ್ರತಿಜ್ಞಾವಿಧಿ ಸ್ವೀಕರಿಸಿದರು. ಪ್ರಮಾಣವಚನ ಸ್ವೀಕರಿಸುವ ವೇಳೆ ಅವರು […]

Continue Reading