ರಾಷ್ಟ್ರ ಮಟ್ಟಕ್ಕೆ ವೀ ವನ್ ಅಕ್ವಾ ಕೇಂದ್ರದ ಈಜುಪಟುಗಳ ಆಯ್ಕೆ

ಮಂಗಳೂರು: ಬೆಂಗಳೂರಿನ ಬಸವನಗುಡಿ ಈಜು ಕೇಂದ್ರದಲ್ಲಿ ಜುಲೈ 13ರಿಂದ 16ರವರೆಗೆ ಕರ್ನಾಟಕ ರಾಜ್ಯ ಈಜು ಸಂಸ್ಥೆ ಹಾಗೂ ಬಸವನಗುಡಿ ಈಜು ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ನಡೆದ ಎನ್‌ಆರ್‌ಜೆ ರಾಜ್ಯ ಜೂನಿಯರ್ ಈಜು ಸ್ಪರ್ಧೆಯಲ್ಲಿ ಮಂಗಳೂರಿನ ವೀ ವನ್ ಅಕ್ವಾ ಕೇಂದ್ರದ ಈಜುಪಟುಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ಹಲವು ಪದಕಗಳನ್ನು ಗೆದ್ದಿರುವ ಈಜುಪಟುಗಳು ಆಗಸ್ಟ್‌ನಲ್ಲಿ ಭುವನೇಶ್ವರದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಈಜು ಸ್ಪರ್ಧೆಗೆ ಅರ್ಹತೆ ಪಡೆದಿದ್ದಾರೆ. ಸ್ಪರ್ಧೆಯಲ್ಲಿ ಅಲಿಸಾ ಸ್ವೀಡೆಲ್ ರೇಗೊ ಆರು ಚಿನ್ನ ಹಾಗೂ ಕಂಚಿನ ಪದಕ ಗೆದ್ದು […]

Continue Reading

ನೀಟ್‌ನಲ್ಲಿ ಎಕ್ಸಪರ್ಟ್‌ಗೆ ಭರ್ಜರಿ ಫಲಿತಾಂಶ; ಶೇ 98 ವಿದ್ಯಾರ್ಥಿಗಳು ವೈದ್ಯಕೀಯ ಪ್ರವೇಶಕ್ಕೆ ಅರ್ಹ

ಮಂಗಳೂರು: ಮಂಗಳೂರಿನ ಎಕ್ಸ್ಪರ್ಟ್ ಕೋಚಿಂಗ್ ಕ್ಲಾಸ್ ನ ನೀಟ್ ದೀರ್ಘಾವಧಿ ತರಬೇತಿ (ಲಾಂಗ್ ಟರ್ಮ್ ಕೋಚಿಂಗ್) ಪಡೆದ ವಿದ್ಯಾರ್ಥಿಗಳು ಈ ಬಾರಿಯ ನೀಟ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದು, ಶೇ 98ರಷ್ಟು ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣ ಪ್ರವೇಶಕ್ಕೆ ಅರ್ಹತೆ ಪಡೆದಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಪ್ರೊ. ನರೇಂದ್ರ ನಾಯಕ್ ತಿಳಿಸಿದ್ದಾರೆ. ಮೂರು ಮಂದಿ ವಿದ್ಯಾರ್ಥಿಗಳು 575 ಕ್ಕೂ ಅಧಿಕ ಅಂಕ ಗಳಿಸಿದ್ದು, 16 ವಿದ್ಯಾರ್ಥಿಗಳು 550 ಕ್ಕೂ ಹೆಚ್ಚು, 31 ವಿದ್ಯಾರ್ಥಿಗಳು 525ಕ್ಕೂ ಹೆಚ್ಚು, 55 ವಿದ್ಯಾರ್ಥಿಗಳು […]

Continue Reading

ಸುರತ್ಕಲ್: ಅಣ್ಣನಿಂದಲೇ ತಮ್ಮನ ಕೊಲೆ, ಪೊಲೀಸ್ ವಶಕ್ಕೆ, ಹಿರಿಯ ಅಧಿಕಾರಿಗಳ ದೌಡು

ಸುರತ್ಕಲ್: ಮಲಗಿದ್ದ ತಮ್ಮನ ತಲೆಗೆ ಕಲ್ಲು ಎತ್ತಿಹಾಕಿ ಅಣ್ಣನೇ ಕೊಲೆ ಮಾಡಿರುವ ಘಟನೆ ಚೊಕ್ಕಬೆಟ್ಟು ಮಠದ ಭಾನುವಾರ ತಡರಾತ್ರಿ ನಡೆದಿರುವ ಬಗ್ಗೆ ವರದಿ ಆಗಿದೆ. ಕೊಲೆಯಾದ ವ್ಯಕ್ತಿಯನ್ನು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತೆಗ್ಯಾಳು ಗ್ರಾಮದ ನಿವಾಸಿ ಹಾಗೂ ಚೊಕ್ಕಬೆಟ್ಟು ಮಠದ ಬಳಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಮಲ್ಲಿಕಾರ್ಜುನ (20) ಎಂದು ಗುರುತಿಸಲಾಗಿದೆ. ಈತನ ಅಣ್ಣ ಸೋಮನಾಥ್ (21) ಕೊಲೆ ಮಾಡಿರುವ ಆರೋಪಿ ಎನ್ನಲಾಗಿದ್ದು, ಆತನನ್ನು ಸುರತ್ಕಲ್ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. […]

Continue Reading

ಪ್ರೊ. ರಮೇಶ್ ಮಾಂಗಳೇಕರ್ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭಕ್ಕೆ ಹರಿದು ಬಂದ ಶಿಷ್ಯ ಪಡೆ, ಭಾವುಕ ಕ್ಷಣಕ್ಕೆ ಸಾಕ್ಷಿ

ಬೆಳಗಾವಿ: ಶಿಕ್ಷಕ ವೃತ್ತಿಗೆ ತನ್ನದೇ ಆದ ವಿಶಿಷ್ಟ ಗೌರವ ಇದೆ. ಒಬ್ಬ ಉತ್ತಮ ಶಿಕ್ಷಕ ತನ್ನ ಸುತ್ತಲಿನ ಸಮಾಜ, ತನ್ನ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗೆ ತುಡಿತ ಹೊಂದಿರುತ್ತಾನೆ. ಇಂತಹ ಅಮೂಲ್ಯ ಗುಣಗಳ ಮೂಲಕ ಪ್ರೊ. ರಮೇಶ್ ಎಸ್ . ಮಾಂಗಳೇಕರ್ ಅವರು ತಮ್ಮ ಶಿಷ್ಟರ ಹೃದಯದಲ್ಲಿ ಗಟ್ಟಿ ಸ್ಥಾನ ಅಲಂಕರಿಸಿದ್ದಾರೆ. ಇದಕ್ಕೆ ಈ ಕಾರ್ಯಕ್ರಮವೇ ಸಾಕ್ಷಿಯಾಗಿದೆ ಎಂದು ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕಿ ಶೋಭಾ ಅವರು ಹೇಳಿದರು. ಬೆಳಗಾವಿಯಲ್ಲಿ ಆಯೋಜಿಸಿದ್ದ ಸಮಾಜಶಾಸ್ತ್ರ ಪ್ರಾಧ್ಯಾಪಕ ಹಾಗೂ ಶಿಕ್ಷಣತಜ್ಞ ಪ್ರೊ. ರಮೇಶ […]

Continue Reading

ಅಥ್ಲೀಟ್ ಶಿವಾಜಿ ಸಾಧನೆ ಕ್ರೀಡಾಪಟುಗಳಿಗೆ ಸ್ಫೂರ್ತಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ

ಕಾರವಾರ: ಚೀನಾದಲ್ಲಿ ಇತ್ತೀಚೆಗೆ ನಡೆದ 23 ವರ್ಷದೊಳಗಿನ ಏಷ್ಯನ್ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ನಲ್ಲಿ 5,000 ಹಾಗೂ 10,000 ಮೀಟರ್ ಓಟದಲ್ಲಿ ಬೆಳ್ಳಿ ಪದಕ ಗೆದ್ದು ದೇಶ, ರಾಜ್ಯ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕೀರ್ತಿ ಹೆಚ್ಚಿಸಿರುವ ಹಳಿಯಾಳ ತಾಲೂಕಿನ ಬೆಳವಟಗಿ ಗ್ರಾಮದ ಅಥ್ಲೀಟ್ ಶಿವಾಜಿ ಪರಶುರಾಮ ಮಾದಪ್ಪನ ಗೌಡ್ರು ಅವರ ಸಾಧನೆ ಜಿಲ್ಲೆಯ ಯುವ ಕ್ರೀಡಾಪಟುಗಳಿಗೆ ಸ್ಫೂರ್ತಿಯಾಗಲಿ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಶಿವಾಜಿ ಅವರನ್ನು ಸನ್ಮಾನಿಸಿ […]

Continue Reading

ಚೆನ್ನಮ್ಮ ಅಂತ್ಯಕ್ರಿಯೆ ಇಂದು ಸರ್ಕಾರಿ ಗೌರವದೊಂದಿಗೆ; ಮಾವಿನಕೆರೆಯಲ್ಲಿ ಸಕಲ ಸಿದ್ಧತೆ

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ಸೋಮವಾರ ಮಧ್ಯಾಹ್ನ ಹಾಸನ ಜಿಲ್ಲೆಯ ಮಾವಿನಕೆರೆ ಬೆಟ್ಟದ ತಪ್ಪಲಿನಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ನಡೆಯಲಿದ್ದು, ಸಾವಿರಾರು ಜನರು ಭಾಗವಹಿಸುವ ನಿರೀಕ್ಷೆಯ ಹಿನ್ನೆಲೆಯಲ್ಲಿ ಸ್ಥಳದಲ್ಲಿ ವ್ಯಾಪಕ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಮಾವಿನಕೆರೆ ಪ್ರದೇಶದಲ್ಲಿ ಸಾರ್ವಜನಿಕರು ಮತ್ತು ಗಣ್ಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಸಾಧ್ಯತೆ ಇರುವುದರಿಂದ ನಾಲ್ಕು ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಮೈಸೂರಿನಿಂದ ಕುರ್ಚಿಗಳು ಹಾಗೂ ಶಾಮಿಯಾನಗಳನ್ನು ತರಿಸಲಾಗಿದ್ದು, ವಿದ್ಯುತ್ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗಿದೆ. […]

Continue Reading

ನ್ಯೂಜೆರ್ಸಿ: ಎಕ್ಸ್‌ಟ್ರಾ ಟೈಮ್‌ನಲ್ಲಿ ಸ್ಪೇನ್‌ಗೆ ವಿಶ್ವಕಪ್ ಕಿರೀಟ; ಅರ್ಜೆಂಟೀನಾ ವಿರುದ್ಧ 1–0 ಗೋಲುಗಳ ರೋಚಕ ಜಯ

ನ್ಯೂಜೆರ್ಸಿ: ಕೊನೆಯ ಕ್ಷಣದವರೆಗೂ ಗೋಲುರಹಿತವಾಗಿದ್ದ ಫಿಫಾ ವಿಶ್ವಕಪ್–2026ರ ಫೈನಲ್ ಪಂದ್ಯದಲ್ಲಿ ಎಕ್ಸ್‌ಟ್ರಾ ಟೈಮ್‌ನಲ್ಲಿ ಫೆರಾನ್ ಟೊರೆಸ್ ಗಳಿಸಿದ ಏಕೈಕ ಗೋಲಿನ ನೆರವಿನಿಂದ ಸ್ಪೇನ್, ಅರ್ಜೆಂಟೀನಾವನ್ನು 1–0 ಅಂತರದಿಂದ ಮಣಿಸಿ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿದೆ. ರೋಚಕ ಪೈಪೋಟಿಯಲ್ಲಿ ಅರ್ಜೆಂಟೀನಾ ಗೋಲ್‌ಕೀಪರ್ ಎಮಿಲಿಯಾನೊ ಮಾರ್ಟಿನೆಜ್ ಅವರ ಅದ್ಭುತ ಪ್ರದರ್ಶನವೂ ತಂಡವನ್ನು ಸೋಲಿನಿಂದ ಪಾರು ಮಾಡಲು ಸಾಧ್ಯವೇ ಆಗಲಿಲ್ಲ. ನಿಗದಿತ 90 ನಿಮಿಷಗಳ ಆಟದಲ್ಲಿ ಎರಡೂ ತಂಡಗಳು ಗೋಲು ಗಳಿಸಲು ವಿಫಲವಾದ ಕಾರಣ ಪಂದ್ಯ ಎಕ್ಸ್‌ಟ್ರಾ ಟೈಮ್‌ಗೆ ಸಾಗಿತು. 106 […]

Continue Reading

ಎನ್ಸಿಸಿ ಗೌರವ ಕರ್ನಲ್ ಹುದ್ದೆಗೆ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಕುಲಪತಿ ರೆ. ಡಾ. ಪ್ರವೀಣ್ ಮಾರ್ಟಿಸ್ ನೇಮಕ

ಮಂಗಳೂರು: ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಕುಲಪತಿ ರೆ. ಡಾ. ಪ್ರವೀಣ್ ಮಾರ್ಟಿಸ್, ಎಸ್‌.ಜೆ. ಅವರಿಗೆ ಭಾರತ ಸರ್ಕಾರವು ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್‌ (ಎನ್ಸಿಸಿ)ಯ ಗೌರವ ಕರ್ನಲ್ ಹುದ್ದೆ ಹಾಗೂ ‘ಕರ್ನಲ್ ಕಮಾಂಡೆಂಟ್’ ಗೌರವವನ್ನು ನೀಡಿದೆ. ಈ ಸಂಬಂಧದ ಅಧಿಕೃತ ನೇಮಕಾತಿ ಆದೇಶವನ್ನು ಜೂನ್‌ 25 ರಂದು ಹೊರಡಿಸಲಾಗಿದ್ದು, ಗುರುವಾರ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಎನ್ಸಿಸಿ ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯದ ಉಪ ಮಹಾನಿರ್ದೇಶಕ ಏರ್‌ ಕಮಾಂಡರ್ ಕಮಲ್ ಚಾಧಾ ಅವರು ಪ್ರಶಸ್ತಿಯನ್ನು ಪ್ರದಾನ ಮಾಡಿದರು. […]

Continue Reading

4 ಜಿಲ್ಲೆಗೆ ಒಬ್ಬರಿಗೆ ಉಸ್ತುವಾರಿ, ಮೊದಲು ಬರ ಅಧ್ಯಯನಕ್ಕೆ ತಂಡ ಕಳಿಸಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಹೊಣೆ ವಹಿಸಿ: ಭೋಜೇಗೌಡ

ಮಂಗಳೂರು: ರಾಜ್ಯದಲ್ಲಿ ಒಂದೆಡೆ ಬರ ಹಾಗೂ ಮತ್ತೊಂದೆಡೆ ಅತಿವೃಷ್ಟಿಯಿಂದ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದರೂ ರಾಜ್ಯ ಸರ್ಕಾರ ಪರಿಣಾಮಕಾರಿ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿವೆ. ರೈತರ ಸಮಸ್ಯೆಗಳಿಗೆ ತ್ವರಿತ ಪರಿಹಾರ ನೀಡಲು ಆಗಿಲ್ಲ, ನಾಲ್ಕು ಜಿಲ್ಲೆಗಳಿಗೆ ಒಬ್ಬರೇ ಉಸ್ತುವಾರಿ ಸಚಿವರ ನೇಮಕ ಮಾಡಿದ್ದು ಸರಿಯಲ್ಲ. ಉಳ್ಳಾಲ ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ವರು ಗುರುವಾರ ಸುದ್ದಿಗೋಷ್ಟಿಯಲ್ಲಿ ಒತ್ತಾಯಿಸಿದರು. ರಾಜ್ಯ ಸರ್ಕಾರ ತಕ್ಷಣವೇ ಬರ ಅಧ್ಯಯನ ಸಮಿತಿ ರಚಿಸಿ ಜಿಲ್ಲಾವಾರು ಸ್ಥಳ […]

Continue Reading

ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ, 5.20 ಕೋಟಿ ಮೌಲ್ಯದ ಎಂಡಿಎಂಎ ವಶ, ಬಾಗಲಕೋಟೆಯಲ್ಲಿ ಇಬ್ಬರ ಬಂಧನ

ಮಂಗಳೂರು: ಮಂಗಳೂರು, ಬೆಂಗಳೂರು ಹಾಗೂ ನೆರೆಯ ಕೇರಳ ರಾಜ್ಯಕ್ಕೆ ಪೂರೈಕೆಯಾಗಬೇಕಿದ್ದ 5.20 ಕೋಟಿ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ಮಾದಕ ದ್ರವ್ಯವನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದು, ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದದಲ್ಲಿ ಬಂಧನ ಮಾಡಲಾಗಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ತಿಳಿಸಿದರು. ಡ್ರಗ್ಸ್ ಮುಕ್ತ ಮಂಗಳೂರು ಅಭಿಯಾನದ ಭಾಗವಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಬಂಧನ […]

Continue Reading