ರಾಜಧಾನಿಯಲ್ಲಿ ಸಿಎನ್‌ಜಿ ಬೆಲೆ ಏರಿಕೆ, ಕೆ.ಜಿಗೆ 2 ರೂಪಾಯಿಗೆ ಏರಿಕೆ, 4ನೇ ಬಾರಿ ಹೆಚ್ಚಳ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಸಿಎನ್‌ಜಿ ಬೆಲೆಯನ್ನು ಕೆ.ಜಿಗೆ 2 ರೂಪಾಯಿ ಏರಿಸಿದ್ದು, ಎರಡು ವಾರಗಳಿಗಿಂತ ಕಡಿಮೆ ಅವಧಿಯಲ್ಲಿ ನಾಲ್ಕನೇ ಬಾರಿ ಹೆಚ್ಚಳ ಆಗಿದೆ. ಸಿಎನ್‌ಜಿಗೆ ಈಗ ಪ್ರತಿ ಕೆ.ಜಿಗೆ 83.09 ರೂ. ಇದೆ. ಮೇ 15 ರ ನಂತರ ಒಟ್ಟಾರೆ ಪ್ರತಿ ಕೆಜಿಗೆ 4 ರೂಪಾಯಿ ಬೆಲೆ ಏರಿಕೆ ಆಗಿದೆ. ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ದೇಶದಲ್ಲಿ ಇಂಧನ ಬೆಲೆಗಳು ಮತ್ತೆ ಏರುಗತಿಯಲ್ಲಿ ಸಾಗುತ್ತಿವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಕ್ರಮವಾಗಿ 2.61 ರೂ ಮತ್ತು 2.71 ರೂಪಾಯಿಗಳಷ್ಟು […]

Continue Reading

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಶೂನ್ಯವಾಗಲಿ : ಡಾ. ನಾಗಲಕ್ಷ್ಮಿ ಚೌಧರಿ

ಉಡುಪಿ: ಜಿಲ್ಲೆಯಲ್ಲಿ ಸರ್ಕಾರಿ, ಖಾಸಗಿ ಸೇರಿದಂತೆ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯರಿಗೆ ಕೆಲಸದ ಸ್ಥಳಗಳಲ್ಲಿ ಸುರಕ್ಷಿತ ವಾತಾವರಣ ಕಲ್ಪಿಸುವುದರೊಂದಿಗೆ, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಶೂನ್ಯವಾಗಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಹೇಳಿದರು. ನಗರದ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ರಾಜ್ಯ ಮಹಿಳಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರಕ್ಷಕ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ […]

Continue Reading

ಉಡುಪಿ ಸರಕಾರಿ ತಾಯಿ, ಮಕ್ಕಳ ಆಸ್ಪತ್ರೆಗೆ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ, ರೋಗಿಗಳ ಆರೋಗ್ಯ ವಿಚಾರಣೆ

ಉಡುಪಿ: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ನಗರದ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ, ಗರ್ಭೀಣಿ, ಬಾಣಂತಿ ರೋಗಿಗಳ ಕುಶಲೋಪರಿ ವಿಚಾರಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಅನುರಾಧ ಬಿ ಹಾದಿಮನೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಬಸವರಾಜ ಹುಬ್ಬಳ್ಳಿ, ಜಿಲ್ಲಾ ಸರ್ಜನ್ ಡಾ. ಅಶೋಕ್ ಹೆಚ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ […]

Continue Reading

ಸುಳ್ಯ: 3 ವರ್ಷದ ಮರಿ ಆನೆ ತಿವಿದು ಕೊಂದ ಗಂಡಾನೆ, ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ ಪರಿಶೀಲನೆ

ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಅರಂತೋಡು ಗ್ರಾಮದ ಬೆದ್ರುಪಣೆ ಎಂಬಲ್ಲಿ 3 ವರ್ಷದ ಮರಿ ಆನೆ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಗಂಡಾನೆಗಳ ದಾಳಿ ಈ ಘಟನೆಗೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ಘಟನೆ ಸೋಮವಾರ ಸಂಭವಿಸಿದ್ದು, ಅರಂತೋಡು ಗ್ರಾಮದ ಬೆದ್ರುಪಣೆ ಅಶೋಕ್ ಎಂಬುವವರ ಖಾಸಗಿ ತೋಟದಲ್ಲಿ ಈ ಅವಘಡ ನಡೆದಿರುವುದು ತಿಳಿದು ಬಂದಿದೆ. ರಾತ್ರಿ ತೋಟಕ್ಕೆ ಆನೆಗಳು ದಾಳಿಯಿಟ್ಟ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಬಂದು ಅವುಗಳನ್ನು ಅರಣ್ಯಕ್ಕೆ […]

Continue Reading

ಮೇ 28, 29 ರಂದು ಅಮೃತಸಂಗಮ, ತುಳುನಾಡಿಗೆ ಮಾತಾ ಅಮೃತಾನಂದಮಯಿ: ಸುರೇಶ್ ಅಮೀನ್

ಮಂಗಳೂರು: ಇದೇ 28 ಮತ್ತು 29 ರಂದು ಬೋಳೂರಿನ ಅಮೃತ ವಿದ್ಯಾಲಯಂ ಶಾಲಾ ಮೈದಾನದಲ್ಲಿ ಅಮೃತಸಂಗಮ 2026 ಮತ್ತು 25 ನೇ ವರ್ಷದ ಬೆಳ್ಳಿ ಹಬ್ಬದ ಸಂಭ್ರಮಾಚರಣೆ ಸಕಲ ಪೂರ್ವ ಸಿದ್ಧತೆಗಳು ನಡೆಯುತ್ತಿದ್ದು, ಮಾತಾ ಅಮೃತಾನಂದಮಯಿ ದೇವಿ (ಅಮ್ಮ) 7 ವರ್ಷಗಳ ನಂತರ ಕರಾವಳಿ ನಗರಿ ಮಂಗಳೂರಿಗೆ ಭಕ್ತರಿಗೆ ದರ್ಶನ ನೀಡುವುದಕ್ಕೆ ಬರುತ್ತಿರುವುದು ಭಕ್ತರ ಸಂಭ್ರಮಕ್ಕೆ ಕಾರಣವಾಗಿದೆ. ಸುಮಾರು 50 ರಿಂದ 75 ಸಾವಿರ ಮಂದಿ ಭಕ್ತರು ಸೇರುವ ನಿರೀಕ್ಷೆ ಇದೆ ಎಂದು ಮಾತಾ ಅಮೃತಾನಂದಮಯಿ ಸೇವಾ […]

Continue Reading

ಏರ್‌ಬಿಎನ್‌ಬಿಯಿಂದ ಎಐ ಆ್ಯಪ್ ಅಪ್‌ ಡೇಟ್,ವಿಶೇಷ ಸೇವೆಗಳ ಅನಾವರಣ: ಸಹ-ಸಂಸ್ಥಾಪಕ ಮತ್ತು ಸಿಇಒ ಬ್ರಿಯಾನ್ ಚೆಸ್ಕಿ

ಮಂಗಳೂರು: ಜಾಗತಿಕ ಮಟ್ಟದಲ್ಲಿ ವಸತಿ ಹಾಗೂ ಪ್ರವಾಸೋದ್ಯಮ ಸೇವೆಗಳನ್ನು ಒದಗಿಸುವ ಪ್ರಮುಖ ಜಾಲತಾಣವಾದ ಏರ್‌ಬಿಎನ್‌ಬಿ, ಪ್ರವಾಸಿಗರ ಪ್ರಯಾಣವನ್ನು ಅತ್ಯಂತ ಸುಗಮ ಹಾಗೂ ಆರಾಮದಾಯಕವಾಗಿಸಲು ಹಲವಾರು ವಿಶೇಷ ವಿನೂತನ ಸೇವೆಗಳನ್ನು ಘೋಷಿಸಿದೆ. ಇನ್ಮುಂದೆ ಗ್ರಾಹಕರು ಕೇವಲ ಉಳಿದುಕೊಳ್ಳುವ ರೂಮ್‌ ಗಳನ್ನು ಮಾತ್ರವಲ್ಲದೆ ಕಾರ್ ಬಾಡಿಗೆ, ದಿನಸಿ ವಿತರಣೆ, ಏರ್‌ ಪೋರ್ಟ್ ಪಿಕ್‌ ಅಪ್ ಮತ್ತು ಪ್ರತಿಷ್ಠಿತ ಬೊಟಿಕ್ ಹೋಟೆಲ್‌ ಗಳ ಬುಕ್ಕಿಂಗ್ ಸೌಲಭ್ಯವನ್ನೂ ಒಂದೇ ಸೂರಿನಡಿ ಪಡೆಯಬಹುದು ಏರ್‌ಬಿಎನ್‌ಬಿಯ ಸಹ-ಸಂಸ್ಥಾಪಕ ಮತ್ತು ಸಿಇಒ ಬ್ರಿಯಾನ್ ಚೆಸ್ಕಿ ಹೇಳಿದರು. ಕ್ರೀಡಾಭಿಮಾನಿಗಳಿಗಾಗಿ […]

Continue Reading

ಭಟ್ಕಳ ದುರಂತ, ಮೃತರ ಕುಟುಂಬಕ್ಕೆ ರಾಜ್ಯ ಸರಕಾರದಿಂದ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದಾರಾಮಯ್ಯ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪದ ತಟ್ಟೆಹಕ್ಕಲು ಎಂಬ ಕಡಲ ತೀರದಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋದವರ ಪೈಕಿ ಒಂದೇ ಕುಟುಂಬದ ಎಂಟು ಮಂದಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ ಸುದ್ದಿ ತಿಳಿದು ಆಘಾತ ಉಂಟು ಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ. ಇದೊಂದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಘಟನೆ. ದುರಂತದಲ್ಲಿ ಮಡಿದವರ ಕುಟುಂಬಕ್ಕೆ ಮಾನವೀಯ ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ […]

Continue Reading

ಉ.ಕ ಜಿಲ್ಲೆಯಲ್ಲಿ ನಡೆದ ದುರಂತ: ಸಚಿವ ಮಂಕಾಳ ವೈದ್ಯ, ದೇಶಪಾಂಡೆ, ಸಂಸದ ಕಾಗೇರಿ, ಹೆಬ್ಬಾರ ಕಂಬನಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ಶಿರಾಲಿಯಲ್ಲಿಕಪ್ಪೆಚಿಪ್ಪು ಮೀನುಗಾರಿಕೆಗೆ ತೆರಳಿದಾಗ ಎಂಟು ಮಂದಿ ನೀರಿನ ಸೆಳತಕ್ಕೆ ಸಿಕ್ಕು ಪ್ರಾಣ ಕಳೆದುಕೊಂಡ ಹೃದಯ ವಿದ್ರಾವಕ ಘಟನೆ ನಡೆದಿದ್ದು, ದೇವರು ಮೃತರ ಕುಟುಂಬಕ್ಕೆ ದುಃಖವನ್ನು ಎದುರಿಸುವ ಶಕ್ತಿಯನ್ನು ನೀಡಲಿ ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ತಿಳಿಸಿದ್ದಾರೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಅವರಿಗೆ ಈ ವಿಷಯ ತಿಳಿಸಿದ್ದು , ಉಳಿದ ಮೂರು ಮಂದಿ ಮೃತದೇಹ ನುರಿತ ತಂತ್ರಜ್ಞರಿಂದ ಹುಡುಕಿಸಿ ಹಾಗೂ ಮಾನವೀಯ ನೆಲೆಯಲ್ಲಿ ರಾಜ್ಯ […]

Continue Reading

ಉ. ಕ. ಜಿಲ್ಲೆಯಲ್ಲಿ ಭೀಕರ ದುರಂತ; ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ 8 ಮಂದಿ ಸಾವು, ಮೂರು ಮಂದಿ ನಾಪತ್ತೆ, 3 ಮಂದಿ ರಕ್ಷಣೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ಶಿರಾಲಿ ಸಮೀಪದ ತಟ್ಟೆಹಕ್ಕಲು ಎಂಬಲ್ಲಿ ಕಡಲ ತೀರದಲ್ಲಿ ಕಪ್ಪೆಚಿಪ್ಪು ತೆಗೆದಯಲು ಹೋಗಿದ್ದ ಒಂದೇ ಕುಟುಂಬದ 8 ಮಂದಿ ದುರಂತ ಸಾವು ಕಂಡಿದ್ದಾರೆ. ಮಾಲತಿ ಜಟ್ಟಪ್ಪ ನಾಯ್ಕ, ಲಕ್ಷ್ಮೀ ಶಿವರಾಮ ನಾಯ್ಕ, ಲಕ್ಷ್ಮೀ ಅಣ್ಣಪ್ಪ ನಾಯ್ಕ, ಉಮೇಶ ಮಂಜುನಾಥ ನಾಯ್ಕ, ಲಕ್ಮೀ ಮಾಧೆವ ನಾಯ್ಕ, ಜ್ಯೋತಿ ನಾಗಪ್ಪ ನಾಯ್ಕ, ಮಾಸ್ತಮ್ಮ ಮಂಜುನಾಥ ನಾಯ್ಕ , ಲಕ್ಮೀ ಮಾಧೆವ ನಾಯ್ಕ ಎಂಬಬುವವರು ನೀರಿನ ಸೆಳೆತಕ್ಕೆ ಸಿಕ್ಕು ಹಾಕಿಕೊಂಡು ಸಾವನ್ನಪ್ಪಿದ್ದಾರೆ. ಮೃತಪಟ್ಟವರ ಶವಗಳನ್ನು […]

Continue Reading

ಹವಾಮಾನದಲ್ಲಿ ವ್ಯಾಪಕ ಏರಿಳಿತ, 19 ಜಿಲ್ಲೆಗಳಲ್ಲಿ ಗಾಳಿ, ಮಳೆ ಸಾಧ್ಯತೆ, ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ 19 ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳಲ್ಲಿ ಬಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಪ್ರಕಟಣೆ ತಿಳಿಸಿದೆ. ತಾಪಮಾನ ಕುಸಿತದ ಬೆನ್ನಲ್ಲೇ ವ್ಯಾಪಕ ಬಿರುಗಾಳಿ ಹಾಗೂ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ ತಿಳಿಸಿದೆ. ಕರಾವಳಿ ಭಾಗದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ ಎಂದು ತಿಳಿದು ಬಂದಿದೆ. ಕೊಪ್ಪಳ ಮತ್ತು ಗದಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಪ್ರತಿ ಗಂಟೆಗೆ 50 ರಿಂದ 60 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಇದರೊಂದಿಗೆ […]

Continue Reading