ದಾಸನಕೊಪ್ಪ ಕಾಳಂಗಿ ಸೊಸೈಟಿಯಲ್ಲಿ ಭಾರಿ ಭ್ರಷ್ಟಾಚಾರ, ತನಿಖೆಗೆ ಆಗ್ರಹಿಸಿ ರೈತರ ಪ್ರತಿಭಟನೆ, ರೈತರ ಹಣ ಪಂಗನಾಮ, ಭುಗಿಲೆದ್ದ ಆಕ್ರೋಶ

ಸಿರಸಿ: ಉತ್ತರ ಕನ್ನಡ ಜಿಲ್ಲೆಯ ಸಿರಸಿ ತಾಲ್ಲೂಕಿನ ದಾಸನಕೊಪ್ಪದ ಕಾಳಂಗಿ ಸೊಸೈಟಿಯಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಭಾರಿ ಸಂಖ್ಯೆಯಲ್ಲಿ ರೈತರು ಸೊಸೈಟಿ ಎದರಿನಲ್ಲಿಯೇ ಪ್ರತಿಭಟನೆ ಮಾಡಿದ ಘಟನೆ ನಡೆದಿದೆ. ರೈತರ ಹಣವನ್ನು ಲೂಟಿ ಮಾಡಿರುವ ಆಡಳಿತ ಮಂಡಳಿಯ ವಿರುದ್ಧ ಹಣ ಕಳೆದುಕೊಂಡ ನೂರಾರು ಸಂಖ್ಯೆಯ ಠೇವಣಿದಾರರು ಹಾಗೂ ರೈತರು ಬೃಹತ್ ಪ್ರತಿಭಟನೆ ನಡೆಸಿರುವುದು ಕಾಳಂಗಿ ವ್ಯವಸಾಯ ಸೇವಾ ಸಹಕಾರಿ ಸೊಸೈಟಿಯಲ್ಲಿ ಯಾವುದು ಸರಿಯಾಗಿಲ್ಲ ಎನ್ನುವುದಕ್ಕೆ ಸಾಕ್ಷಿಯಾಗಿದೆ. ಸೊಸೈಟಿಯ ಆಡಳಿತ ಮಂಡಳಿಯು ಠೇವಣಿದಾರರ ಕೋಟ್ಯಂತರ ರೂಪಾಯಿ […]

Continue Reading

ಆಳ್ವಾಸ್ ವಿದ್ಯಾರ್ಥಿಗಳ ಮಾದರಿ ಕಾರ್ಯ: ‘ಚಿಣ್ಣರ ತಂಗುದಾಣ’ಕ್ಕೆ ನೆರವಿನ ಹಸ್ತ

ಮೂಡುಬಿದಿರೆ: ಸಮಾಜಮುಖಿ ಚಿಂತನೆ ಹಾಗೂ ಸಾಂಸ್ಕೃತಿಕ ಸೌಹಾರ್ದತೆಯ ಸಾರ್ಥಕ ಉದಾಹರಣೆಯಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ಮಂಗಳೂರಿನ ನಿರಾಶ್ರಿತ ಮಕ್ಕಳ ಆಶ್ರಯತಾಣ ‘ಚಿಣ್ಣರ ತಂಗುದಾಣ’ಕ್ಕೆ ಭೇಟಿ ನೀಡಿ 50,000ಕ್ಕೂ ಅಧಿಕ ಮೊತ್ತದ ದೈನಂದಿನ ಅಗತ್ಯ ವಸ್ತುಗಳು, ಆಹಾರ ಸಾಮಗ್ರಿಗಳು, ಕ್ರೀಡಾ ಉಪಕರಣಗಳು ಹಾಗೂ ಶೈಕ್ಷಣಿಕ ಸಾಮಗ್ರಿಗಳನ್ನು ಹಸ್ತಾಂತರಿಸಿದರು. ಇತ್ತೀಚೆಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ಸಂಪ್ರದಾಯ ದಿನಾಚರಣೆಯನ್ನು ವೈವಿಧ್ಯತೆಯಲ್ಲಿ ಏಕತೆ ಎಂಬ ಸಂದೇಶದೊಂದಿಗೆ ಅದ್ದೂರಿಯಾಗಿ ಆಚರಿಸಲಾಗಿತ್ತು. ಕಾರ್ಯಕ್ರಮದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಸ್ಪರ್ಧೆಗಳು, ಸಾಂಪ್ರದಾಯಿಕ ಆಹಾರ ಮೇಳ ಹಾಗೂ […]

Continue Reading

ಮಂಗಳೂರಿನಲ್ಲಿ ಎರಡು ದಿನ ರಾಜ್ಯ ಮಟ್ಟದ ಗೇರು ಮೇಳ, ಸಾಧಕರಿಗೆ ಸನ್ಮಾನ, ರೈತರಿಗೆ ಉಚಿತ ಕಣ್ಣಿನ ತಪಾಸಣೆ: ಮಮತಾ ಗಟ್ಟಿ

ಮಂಗಳೂರು: ಇದೇ 17, 18,ರಂದು ಮಂಗಳೂರು ಕದ್ರಿ ಉದ್ಯಾನದಲ್ಲಿ ನಡೆಯಲಿರುವ ಎರಡು ದಿನಗಳ ಗೇರು ಮೇಳದ ಉದ್ಘಾಟನೆ ಮೇ17ರಂದು ಬೆಳಿಗ್ಗೆ 11ಗಂಟೆಗೆ ಸ್ಪೀಕರ್ ಯು. ಟಿ. ಖಾದರ್ ಫರೀದ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ಸಚಿವ ಈಶ್ವರ್ ಬಿ. ಖಂಡ್ರೆ ಉದ್ಘಾಟಿಸಲಿದ್ದಾರೆ ಎಂದು ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಅವರು ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಸಮಾರಂಭದ ಅಧ್ಯಕ್ಷತೆಯನ್ನು […]

Continue Reading

ಕಾರವಾರ: ಸಮುದ್ರ ಪಾಲಾಗುತ್ತಿದ್ದ ಮಂಗಳೂರು ಮೂಲದ ಇಬ್ಬರ ರಕ್ಷಣೆ: ಭಜರಂಗಿ ಮಿತ್ರರ ಕಾರ್ಯಕ್ಕೆ ಶ್ಲಾಘನೆ

ಕಾರವಾರ: ಕಡಲ ಅಲೆಗಳ ಅಬ್ಬರಕ್ಕೆ ಸಿಕ್ಕು ಹಾಕಿಕೊಂಡು ನೀರಿನಲ್ಲಿ ಮುಳುಗುತ್ತಿದ್ದ ಪ್ರವಾಸಿಗರನ್ನು ನಗರದ ಟ್ಯಾಗೋರ ಕಡಲ ತೀರದಲ್ಲಿ ಕ್ರಿಕೆಟ್ ಆಡುತ್ತಿದ್ದ ಕೊಂಕಣಿ ಖಾರ್ವಿ ವಾಡಾದ ಭಜರಂಗಿ ಮಿತ್ರರು ರಕ್ಷಣೆ ಮಾಡಿದ ಘಟನೆ ನಡೆದಿದೆ. ಮಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ ಕುಟುಂಬದವರು ಟ್ಯಾಗೋರ ಕಡಲತೀರದಲ್ಲಿ ಈಜಲು ತೆರಳಿದ್ದ ವೇಳೆ ಕಡಲ ಅಲೆಗಳ ಅಬ್ಬರಕ್ಕೆ ಸುಳಿಗೆ ಸಿಕ್ಕು ಹಾಕಿಕೊಂಡು ಪ್ರಾಣಾಪಾಯದಲ್ಲಿ ಇದ್ದರು. ಈ ವೇಳೆ ಅಲ್ಲಿಯೇ ಇದ್ದ ಕುಟುಂಬದ ಸದಸ್ಯರು ನೆರವಿಗೆ ಕೂಗುತ್ತಿದ್ದರು, ಈ ವೇಳೆ ಅಲ್ಲಿಯೇ ಕ್ರಿಕೆಟ್ ಆಟುತ್ತಿದ್ದ ಭಜರಂಗಿ […]

Continue Reading

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಕೇಂದ್ರ ಸರಕಾರದ ವೈಫಲ್ಯ: ಮಾಜಿ ಎಂಎಲ್ಸಿ ಹರೀಶ್ ಕುಮಾರ್

ಮಂಗಳೂರು: ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆ ನೀಟ್ ಪರೀಕ್ಷೆ ರದ್ದುಗೊಂಡಿರುವ ಘಟನೆ ದೇಶದ ಶಿಕ್ಷಣ ವ್ಯವಸ್ಥೆಯ ಮೇಲಿನ ನಂಬಿಕೆಗೆ ದೊಡ್ಡ ಹೊಡೆತ ನೀಡಿದ್ದು, ಇದು ಕೇಂದ್ರ ಬಿಜೆಪಿ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ ಆಗಿದೆ ಎಂದು ಮಾಜಿ ಎಂಎಲ್ ಸಿ ಹಾಗೂ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಹರೀಶ್ ಕುಮಾರ್ ಆರೋಪಿಸಿದರು. 22.5 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಕನಸುಗಳನ್ನು ಹೊತ್ತು ಅಪಾರ ಪರಿಶ್ರಮದೊಂದಿಗೆ ಪರೀಕ್ಷೆ ಬರೆದಿದ್ದರು. ಆದರೆ, ಪ್ರಶ್ನೆಪತ್ರಿಕೆ ಸೋರಿಕೆಯಂತಹ ಗಂಭೀರ ಹಗರಣದಿಂದ ವಿದ್ಯಾರ್ಥಿಗಳ ಭವಿಷ್ಯವೇ ಅತಂತ್ರ ಸ್ಥಿತಿಗೆ ತಳ್ಳಲ್ಪಟ್ಟಿದ್ದು, […]

Continue Reading

ಜೈ ತುಳು ಸಿನಿಮಾದ ನೂರರ ಸಂಭ್ರಮ, ಬ್ರೋ ಹೊಸ ತುಳು ಸಿನಿಮಾ ಘೋಷಿಸಿದ ನಟ, ನಿರ್ದೇಶಕ ರೂಪೇಶ್ ಶೆಟ್ಟಿ

ಮಂಗಳೂರು: ತುಳು ನಮ್ಮ ಪ್ರಾದೇಶಿಕ ಭಾಷೆಯಾದರೂ ಅದರ ಅಭಿಮಾನದಿಂದ ತುಳು ಸಿನಿಮಾಗಳನ್ನು ನಿರ್ಮಿಸುವ ನಿರ್ಮಾಪಕರು ಕಲಾವಿದರಿಗೆ ಆಸರೆ ಆಗಿದ್ದಾರೆ. ಜೈ ತುಳು ಸಿನಿಮಾ ತುಳು ಚಿತ್ರರಂಗಕ್ಕೆ ಹೊಸ ಚೈತನ್ಯ ನೀಡಿದೆ. ವಿಶ್ವದ ತುಳುವರು ಈ ಸಿನಿಮಾವನ್ನು ಗೆಲ್ಲಿಸಿದ್ದಾರೆ ಎಂದು ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ಎಂ. ರೈ ಅವರು ಹೇಳಿದರು. ಇಲ್ಲಿನ ಜೈ ತುಳು ಸಿನಿಮಾದ 100 ನೇ ದಿನದ ಸಂಭ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಟ ನಿರ್ದೇಶಕ ರೂಪೇಶ್ ಶೆಟ್ಟಿ ಮಾತನಾಡಿ, “ಜೈ” ಸಹಿತ ತನ್ನ ಎಲ್ಲ […]

Continue Reading

ಎಂಸಿಸಿ ಬ್ಯಾಂಕ್ 114 ನೇ ಸಂಸ್ಥಾಪಕರ ದಿನ ಆಚರಣೆ‌, ಈ ಆರ್ಥಿಕ ವರ್ಷದಲ್ಲಿ ಬ್ಯಾಂಕ್ ಶಾಖೆ 25 ಕ್ಕೆ ಏರಿಕೆ: ಅನಿಲ್ ಲೋಬೊ

ಮಂಗಳೂರು: 2018ರಲ್ಲಿ ಹೊಸ ಆಡಳಿತ ಮಂಡಳಿ ಅಧಿಕಾರ ವಹಿಸಿಕೊಂಡ ನಂತರ ಬ್ಯಾಂಕ್ ವೃತ್ತಿಪರತೆಯೊಂದಿಗೆ ಗಮನಾರ್ಹ ಬೆಳವಣಿಗೆ ಸಾಧಿಸಿದೆ ಎಂದು ಸಹಕಾರ ರತ್ನ ಅನಿಲ್ ಲೋಬೊ ಹೇಳಿದರು. ಎಂಸಿಸಿ ಬ್ಯಾಂಕ್ 114ನೇ ಸಂಸ್ಥಾಪಕರ ದಿನಾಚರಣೆ ಕಾರ್ಯಕ್ರಮದಲ್ಲಿ ಬ್ಯಾಂಕಿನ ಸಂಸ್ಥಾಪಕ ಪಿ.ಎಫ್. ಎಕ್ಸ್. ಸಲ್ದಾನರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು. 24 ವರ್ಷಗಳ ಬಳಿಕ ಶಾಖೆಗಳ ಸಂಖ್ಯೆ 16 ರಿಂದ 21ಕ್ಕೆ ಏರಿಕೆ ಆಗಿದೆ. ಬ್ಯಾಂಕಿನ ಒಟ್ಟು ವ್ಯವಹಾರ ರೂ. 500 ಕೋಟಿಯಿಂದ ರೂ.1,525 ಕೋಟಿಗೆ ಏರಿಕೆ ಆಗಿದ್ದು, […]

Continue Reading

ಧರ್ಮಸ್ಥಳಕ್ಕೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಭೇಟಿ, ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ

ಧರ್ಮಸ್ಥಳ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಅವರು ಕುಟುಂಬ ಸದಸ್ಯರ ಜತೆಗೆ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಹಾಗೂ ಸೇವೆ ಸಲ್ಲಿಸಿದರು. ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆ ಅವರ ಆಶೀರ್ವಾದ ಪಡೆದುಕೊಂಡರು. ಭೇಟಿಯ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ಕ್ಯಾ. ಬ್ರಿಜೇಶ್ ಚೌಟ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್ ಸೇರಿದಂತೆ ಹಲವು […]

Continue Reading

ಕರ್ನಾಟಕದಲ್ಲಿ ಆಡಳಿತ ವಿರೋಧಿ ಅಲೆ, ಕಾಂಗ್ರೆಸ್ ಆಡಳಿತದಲ್ಲಿ ಖಜಾನೆ ಲೂಟಿ: ಪ್ರಧಾನಿ ಮೋದಿ

ಬೆಂಗಳೂರು: ಕಾಂಗ್ರೆಸ್ ಆಡಳಿತದಲ್ಲಿ ಖಜಾನೆ ಲೂಟಿ ಆಗುತ್ತಿದೆ. ಕರ್ನಾಟಕದಲ್ಲಿ ಆಡಳಿತ ವಿರೋಧಿ ಅಲೆ ನೋಡುತ್ತಿದ್ದೇವೆ. ಪರಸ್ಪರ ಜಗಳದಲ್ಲಿ ರಾಜ್ಯ ಕಾಂಗ್ರೆಸ್ ತೊಡಗಿಕೊಂಡಿದೆ. ಮುಖ್ಯಮಂತ್ರಿ ಸ್ಥಾನಕ್ಕಾಗಿ ಒಳಜಗಳ ನಡೆದಿದೆ. ತಮಿಳುನಾಡು, ಕೇರಳದಲ್ಲೂ ಆಡಳಿತದ ವಿಚಾರದಲ್ಲಿ ಸಮಸ್ಯೆ ಇದೆ ಎಂದು ಪ್ರಧಾನಿ ಮೋದಿ ಹೇಳಿದರು. ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿ ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ಬಳಿಕ ಕರ್ನಾಟಕಕ್ಕೆ ಆಗಮಿಸಿದ್ದ ನರೇಂದ್ರ ಮೋದಿ ಅವರಿಗೆ ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣದ ಬಳಿ ಭಾನುವಾರ ಹಮ್ಮಿಕೊಂಡಿದ್ದ ಅಭಿನಂದಿಸುವ ಸಮಾರಂಭದಲ್ಲಿ ಅವರು […]

Continue Reading

17, 18 ರಂದು ಕದ್ರಿ ಪಾರ್ಕ್ ನಲ್ಲಿ ರಾಜ್ಯ ಮಟ್ಟದ ಗೇರು ಮೇಳ, ಕಾರ್ಯಾಗಾರ, ಪೋಸ್ಟರ್ ಬಿಡುಗಡೆಗೊಳಿಸಿದ ಸ್ಪೀಕರ್ ಯು.ಟಿ. ಖಾದರ್

ಮಂಗಳೂರು: ಕರಾವಳಿಯ ವಾಣಿಜ್ಯ ಬೆಳೆ ಗೇರು ಬೆಳೆಯ ಮಹತ್ವದ ಕುರಿತು ಬೆಳೆಗಾರರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ನಿಟ್ಟಿನಲ್ಲಿ ಗೇರು ಮೇಳ ಪ್ರಮುಖ ಹೆಜ್ಜೆಯಾಗಿದೆ ಎಂದು ಸ್ಪೀಕರ್ ಯು. ಟಿ. ಖಾದರ್ ಅವರು ಹೇಳಿದರು. ಶನಿವಾರ ಕರ್ನಾಟಕ ಗೇರು ಅಭಿವೃದ್ಧಿ ನಿಗಮ ನಿಯಮಿತ ಹಾಗೂ ರಾಜ್ಯ ಅರಣ್ಯ ಇಲಾಖೆಯ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಗೇರು ಮೇಳದ ಭಿತ್ತಿ ಪತ್ರ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕರಾವಳಿಯಲ್ಲಿ ಗೇರು ಉದ್ಯಮ ಸಾಕಷ್ಟು ಕುಟುಂಬಕ್ಕೆ ಆಧಾರ ಆಗಿತ್ತು. ಬೆಳೆ ಕುಂಠಿತ ಆದ ಕಾರಣ […]

Continue Reading