ರಾಜ್ಯದ ನಿವೃತ್ತ ಸರ್ಕಾರಿ ನೌಕರರಿಗೆ ‘ಸಂಧ್ಯಾ ಕಿರಣ’ ಆರೋಗ್ಯ ಯೋಜನೆ: ಸಚಿವ ಯು.ಟಿ. ಖಾದರ್

ಮಂಗಳೂರು: ರಾಜ್ಯದ 60 ರಿಂದ 70 ವರ್ಷದ ನಿವೃತ್ತ ಸರ್ಕಾರಿ ನೌಕರರಿಗೆ ಆರೋಗ್ಯ ರಕ್ಷಣೆ ಒದಗಿಸುವ ಉದ್ದೇಶದಿಂದ ‘ಸಂಧ್ಯಾ ಕಿರಣ’ ಯೋಜನೆಯನ್ನು ಶೀಘ್ರದಲ್ಲೇ ಜಾರಿಗೆ ತರಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಗುರುವಾರ ಸುದ್ದೊಗೋಷ್ಠಿಯಲ್ಲಿ ತಿಳಿಸಿದರು. ರಾಜ್ಯದಲ್ಲಿ ತುರ್ತು ವೈದ್ಯಕೀಯ ಸೇವೆ ಬಲಪಡಿಸುವ ನಿಟ್ಟಿನಲ್ಲಿ ಹೊಸ ಅಂಬುಲೆನ್ಸ್‌ಗಳ ಸೇರ್ಪಡೆಗೂ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ 450 ಹೊಸ ಅಂಬುಲೆನ್ಸ್‌ಗಳನ್ನು ಒದಗಿಸಲಾಗಿದ್ದು, ಶೀಘ್ರದಲ್ಲೇ ಹೊಸ ವಾಹನಗಳು ಸೇವೆಗೆ ಬರಲಿವೆ. ಇದರಿಂದ ರಾಜ್ಯದಲ್ಲಿ 750ಕ್ಕೂ ಹೆಚ್ಚು ಅಂಬುಲೆನ್ಸ್‌ಗಳು ಕಾರ್ಯನಿರ್ವಹಿಸಲಿವೆ […]

Continue Reading

ಕರಾವಳಿಯಲ್ಲಿ ಫಿಶಿಂಗ್ ಗೆ ದೋಣಿಗಳು, ಮೀನುಗಾರರಲಿ ಹೆಚ್ಚಿದ ಉತ್ಸಾಹ! ದಕ್ಕೆಯಲ್ಲಿ ಬಿರುಸಿನ ಚಟುವಟಿಕೆ

ಮಂಗಳೂರು: ಎರಡು ತಿಂಗಳ ಕಾಲ ಕರಾವಳಿಯ ಮೀನುಗಾರಿಕಾ ದಕ್ಕೆಗಳಲ್ಲಿ ನಿಶ್ಚಲವಾಗಿ ನಿಂತಿದ್ದ ಯಾಂತ್ರೀಕೃತ ಬೋಟ್‌ಗಳು ಮತ್ತೆ ಸಮುದ್ರದತ್ತ ಮುಖ ಮಾಡುವ ಕ್ಷಣ ಬಂದಿದ್ದರೂ, ಹವಾಮಾನ ಇಲಾಖೆಯ ಎಚ್ಚರಿಕೆ ಮೀನುಗಾರರ ಉತ್ಸಾಹಕ್ಕೆ ತಣ್ಣೀರೆರಚಿದೆ. 61 ದಿನಗಳ ಟ್ರಾಲಿಂಗ್ ನಿಷೇಧ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಆಗಸ್ಟ್‌ ನಿಂದ ಆಳ ಸಮುದ್ರ ಮೀನುಗಾರಿಕೆ ಪುನರಾರಂಭಗೊಳ್ಳಬೇಕಿದ್ದರೂ, ಪ್ರತಿಕೂಲ ಹವಾಮಾನದಿಂದಾಗಿ ಬೋಟ್‌ಗಳು ಸಮುದ್ರಕ್ಕಿಳಿಯದ ಸಾಧ್ಯತೆ ಎದುರಾಗಿದೆ. ಮಂಗಳೂರು ಬಂದರಿನಲ್ಲಿ ಕಳೆದ ನಾಲ್ಕು ದಿನಗಳಿಂದಲೇ ಬಿರುಸಿನ ಸಿದ್ಧತೆಗಳು ನಡೆದಿವೆ. ಎರಡು ತಿಂಗಳ ವಿರಾಮದ ಬಳಿಕ ಮೀನುಗಾರರು, […]

Continue Reading

ಶಾಲೆ–ಕಾಲೇಜುಗಳ ಬಳಿ ಜಂಕ್ ಫುಡ್‌ಗೆ ಬ್ರೇಕ್: ಇಲಾಖೆಯ ಅಧಿಕೃತ ಆದೇಶ

ಬೆಂಗಳೂರು: ವಿದ್ಯಾರ್ಥಿಗಳಿಗೆ ಸುರಕ್ಷಿತ, ಗುಣಮಟ್ಟಯುತ ಹಾಗೂ ಆರೋಗ್ಯಕರ ಆಹಾರ ಲಭ್ಯ ಆಗುವಂತೆ ಮಾಡಲು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯೂ ಶಾಲೆ–ಕಾಲೇಜುಗಳ ಆವರಣ ಹಾಗೂ 50 ಮೀಟರ್ ವ್ಯಾಪ್ತಿಯಲ್ಲಿ ಜಂಕ್ ಫುಡ್‌ ಮತ್ತು ಅನಾರೋಗ್ಯಕರ ಆಹಾರ ಮಾರಾಟ ಮಾಡದಂತೆ ಅಧಿಕೃತ ಆದೇಶ ಹೊರಡಿಸಿದೆ. ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಮಾರ್ಗಸೂಚಿಯಂತೆ ಈ ಕ್ರಮ ಜುಲೈ 21 ರಿಂದ ಜಾರಿಗೆ ಬಂದಿದೆ ಎಂದು ಆರೋಗ್ಯ ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಜುಲೈ ತಿಂಗಳಲ್ಲಿ ರಾಜ್ಯದ […]

Continue Reading

ಭೂಕುಸಿತ ತೆರವು ಬಳಿಕ ಶಿರಾಡಿ ಘಾಟ್ ರೈಲು ಮಾರ್ಗ ಪುನರಾರಂಭ, ಪ್ರಯಾಣಿಕರಿಗೆ ನೆಮ್ಮದಿ

ಸುಬ್ರಮಣ್ಯ: ಭಾರೀ ಮಳೆಯಿಂದ ಭೂಕುಸಿತ ಸಂಭವಿಸಿ ಸ್ಥಗಿತಗೊಂಡಿದ್ದ ಮೈಸೂರು ವಿಭಾಗದ ಶಿರಿಬಾಗಿಲು–ಎಡಕುಮಾರಿ ನಡುವಿನ ಶಿರಾಡಿ ಘಾಟ್ ರೈಲು ಮಾರ್ಗದಲ್ಲಿ ರೈಲು ಸಂಚಾರವನ್ನು ದಕ್ಷಿಣ ಪಶ್ಚಿಮ ರೈಲ್ವೆ ಮರು ಆರಂಭಿಸಿದೆ. ಹಳಿ ಮೇಲಿನ ಮಣ್ಣು, ಕಲ್ಲು ಹಾಗೂ ಮರಗಳ ಅವಶೇಷಗಳನ್ನು ತೆರವುಗೊಳಿಸಿ ಸುರಕ್ಷತಾ ಪರಿಶೀಲನೆ ಪೂರ್ಣಗೊಳಿಸಿದ ಬಳಿಕ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ರೈಲ್ವೆ ಇಲಾಖೆ ಪ್ರಕಟಣೆಯ ಪ್ರಕಾರ, ಆಗಸ್ಟ್ 3ರಂದು ಸಂಜೆ 7.25ಕ್ಕೆ ಹಳಿ ಸುರಕ್ಷತಾ ತಪಾಸಣೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ತಾಂತ್ರಿಕ ತಜ್ಞರು ಮಾರ್ಗವನ್ನು ಸುರಕ್ಷಿತ ಎಂದು ಪ್ರಮಾಣೀಕರಿಸಿದ […]

Continue Reading

ಬೀಳ್ಕೊಡುಗೆಯಲ್ಲಿ ಹಾರ-ತುರಾಯಿ ಬೇಡ, ಶಾಲೆಗೆ ಉಪಯುಕ್ತ ವಸ್ತು ನೀಡಿ: ಜಯಕರ ಶೆಟ್ಟಿ ಮನವಿ

ಕುಂದಾಪುರ: ಕಂಡ್ಲೂರಿನ ನೇತಾಜಿ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಎ. ಜಯಕರ ಶೆಟ್ಟಿ ಅವರ ಬೀಳ್ಕೊಡುಗೆ ಸಮಾರಂಭವು ವಿಭಿನ್ನ ಸಂದೇಶದೊಂದಿಗೆ ನಡೆಯಿತು. ತಮ್ಮನ್ನು ಹಾರ-ತುರಾಯಿಗಳಿಂದ ಸನ್ಮಾನಿಸುವ ಬದಲು ಶಾಲೆಗೆ ಉಪಯುಕ್ತವಾಗುವ ವಸ್ತುಗಳನ್ನು ನೀಡುವಂತೆ ಅವರು ಮನವಿ ಮಾಡಿದ್ದು, ಅದಕ್ಕೆ ಸ್ಪಂದಿಸಿದ ಆಡಳಿತ ಮಂಡಳಿ, ಪೋಷಕರು ಹಾಗೂ ಹಳೆ ವಿದ್ಯಾರ್ಥಿಗಳು ಶಾಲೆಗೆ ಅಗತ್ಯ ಸಾಮಗ್ರಿಗಳನ್ನು ಕೊಡುಗೆಯಾಗಿ ನೀಡಿದರು. ಸುದೀರ್ಘ ಅವಧಿಯವರೆಗೆ ಕ್ರೀಡಾ ಶಿಕ್ಷಕರಾಗಿ ಹಾಗೂ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಜಯಕರ ಶೆಟ್ಟಿ ಅವರನ್ನು […]

Continue Reading

ಕಲಿಕಾ ತೊಂದರೆ ಇರುವ ಮಕ್ಕಳಿಗೆ ಒಂದೇಸೂರಿನಡಿ ವ್ಯವಸ್ಥೆ, ಅ. 8ಕ್ಕೆ ಉದ್ಘಾಟನೆ: ಅರ್ಜುನ್ ಶೆಟ್ಟಿ ಪ್ರತಿಷ್ಠಾನದ ಸ್ಥಾಪಕ ಸುಧೀರ್ ಶೆಟ್ಟಿ

ಮಂಗಳೂರು: ಸ್ವಲೀನತೆ ಹಾಗೂ ನಿರ್ದಿಷ್ಟ ಕಲಿಕಾ ತೊಂದರೆ ಹೊಂದಿರುವ ಮಕ್ಕಳಿಗೆ ಶಿಕ್ಷಣ, ಚಿಕಿತ್ಸೆ ಮತ್ತು ಕೌಶಲಾಭಿವೃದ್ಧಿಯನ್ನು ಒಂದೇ ಸೂರಿನಡಿ ಒದಗಿಸುವ ಉದ್ದೇಶದಿಂದ ಮಂಗಳೂರಿನ ಶಕ್ತಿನಗರದ ಸಾನಿಧ್ಯ ಸಂಸ್ಥೆಯಲ್ಲಿ ಅರ್ಜುನ್ ಶೆಟ್ಟಿ ಸ್ಮರಣಾರ್ಥ ವಿಶೇಷ ಶಾಲೆ ಆರಂಭಿಸಲಾಗುತ್ತಿದ್ದು, ಶಾಲೆಯ ಉದ್ಘಾಟನಾ ಸಮಾರಂಭ ಇದೇ 8 ರಂದು ನಡೆಯಲಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅರ್ಜುನ್ ಶೆಟ್ಟಿ ಪ್ರತಿಷ್ಠಾನದ ಸ್ಥಾಪಕ ಸುಧೀರ್ ಶೆಟ್ಟಿ ಅವರು ತಿಳಿಸಿದರು. ತಮ್ಮ ಪುತ್ರ ಅರ್ಜುನ್ ಶೆಟ್ಟಿ ಅವರ ಸ್ಮರಣಾರ್ಥ ಈ ಶಾಲೆ ಆರಂಭಿಸಲಾಗುತ್ತಿದೆ. ಸ್ವಲೀನತೆ ಹಾಗೂ […]

Continue Reading

ಮಂಗಳೂರಿನಲ್ಲಿ ಇದೇ 7 ರಿಂದ ಯುರಾಲಜಿ ಸಮ್ಮೇಳನ, ಎಜೆ, ಯುರಾಲಜಿ ಫೋರಂ ಸಾರಥ್ಯ: ಡಾ. ಪ್ರಶಾಂತ್ ಮಾರ್ಲ

ಮಂಗಳೂರು: ಮೂತ್ರಶಾಸ್ತ್ರ ಕ್ಷೇತ್ರದ ಇತ್ತೀಚಿನ ಸಂಶೋಧನೆ, ಹೊಸ ತಂತ್ರಜ್ಞಾನ ಹಾಗೂ ವೈದ್ಯಕೀಯ ಬೆಳವಣಿಗೆಗಳ ಕುರಿತು ಚರ್ಚಿಸಲು ದಕ್ಷಿಣ ಭಾರತದ ಪ್ರತಿಷ್ಠಿತ ‘ಅಸೋಸಿಯೇಷನ್ ಆಫ್ ಸದರ್ನ್ ಯುರಾಲಜಿಸ್ಟ್ಸ್ 37ನೇ ವಾರ್ಷಿಕ ಸಮ್ಮೇಳನ ಇದೇ ಅ. 7 ರಿಂದ 9 ರವರೆಗೆ ಮಂಗಳೂರಿನ ಮೇರಿ ಹಿಲ್‌ನಲ್ಲಿ ಇರುವ ಪಾಲೇಮಾರ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಲಿದೆ ಎಂದು ಸಮ್ಮೇಳನಾ ಸಂಘಟನಾ ಸಮಿತಿ ಅಧ್ಯಕ್ಷ ಡಾ. ಪ್ರಶಾಂತ್ ಮಾರ್ಲ ಅವರು ಬುಧವಾರ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ಮಂಗಳೂರಿನ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸಾಯಿನ್ಸ್ ಹಾಗೂ […]

Continue Reading

ಪ್ರಶ್ನೆ ಪತ್ರಿಕೆ ಸೋರಿಕೆ, ಕೆಇಎ, ಕೆಪಿಎಸ್‌ಸಿ ನೇಮಕಾರಿ ಪರೀಕ್ಷಾ ಅಕ್ರಮ ಸಿಬಿಐ ತನಿಖೆಗೆ ನೀಡಿ: ಶಾಸಕ ಭರತ್ ಶೆಟ್ಟಿ

ಮಂಗಳೂರು: ರಾಜ್ಯದಲ್ಲಿ ನಡೆದಿರುವ ಪರೀಕ್ಷಾ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ನೇಮಕಾತಿ ಪರೀಕ್ಷೆಗಳಲ್ಲಿನ ಗೊಂದಲಗಳ ಕುರಿತು ಸಮಗ್ರ ತನಿಖೆ ನಡೆಸಲು ಕೆಇಎ, ಕೆಪಿಎಸ್‌ಸಿ ಸೇರಿದಂತೆ ಎಲ್ಲ ಇಲಾಖೆಗಳ ಪರೀಕ್ಷಾ ಪ್ರಕರಣಗಳನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು. ರಾಜ್ಯ ಸರ್ಕಾರ ಪರೀಕ್ಷಾ ಅಕ್ರಮಗಳ ವಿಚಾರದಲ್ಲಿ ದ್ವಂದ್ವ ನೀತಿ ಅನುಸರಿಸುತ್ತಿದೆ. ಕೇಂದ್ರದಲ್ಲಿ ನೀಟ್ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ಲೋಪ ಕಂಡು ಬಂದರೆ ಪ್ರಧಾನಿ ನರೇಂದ್ರ […]

Continue Reading

ಮತದಾರರ ಪಟ್ಟಿ ಪರಿಷ್ಕರಣೆ, ಶೇ 99.97 ಎನ್ಯುಮರೇಷನ್ ನಮೂನೆಗಳ ಡಿಜಿಟಲೀಕರಣ ಪೂರ್ಣ: ಅನ್ಬುಕುಮಾರ್

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)-2026ರ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಮನೆಮನೆ ಸಮೀಕ್ಷೆಯಲ್ಲಿ ಸಂಗ್ರಹಿಸಲಾದ ಎನ್ಯುಮರೇಷನ್ ನಮೂನೆಗಳಲ್ಲಿ ಶೇ.99.97ರಷ್ಟು ಡಿಜಿಟಲೀಕರಣ ಪೂರ್ಣಗೊಂಡಿದೆ. ಇದೇ ವೇಳೆ, ಒಟ್ಟು ಮತದಾರರಲ್ಲಿ ಶೇ.20.02ರಷ್ಟು ಮಂದಿ ಗೈರು, ಸ್ಥಳಾಂತರ, ಮೃತರು, ನಕಲಿ ಹಾಗೂ ಇತರೆ (ಎಎಸ್‌ಡಿಡಿಒ) ವಿಭಾಗದಲ್ಲಿ ಗುರುತಿಸಲ್ಪಟ್ಟಿದ್ದಾರೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಜೂನ್ 16ರ ಅಂಕಿ-ಅಂಶದ ಪ್ರಕಾರ ರಾಜ್ಯದಲ್ಲಿ ಒಟ್ಟು 5,54,32,314 ಮತದಾರರಿದ್ದು, ಈ ಪೈಕಿ 1,10,97,426 ಮಂದಿ […]

Continue Reading

ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನಲ್ಲಿ ಮಾದಕ ವಸ್ತು ಜಾಗೃತಿ ಕಾರ್ಯಕ್ರಮ, ವಿದ್ಯಾರ್ಥಿಗಳಿಗೆ ಇನ್ ಸ್ಪೆಕ್ಟರ್ ರಾಜೇಂದ್ರ ಕಿವಿಮಾತು

ಮೂಡುಬಿದಿರೆ: ವಿದ್ಯಾರ್ಥಿಗಳು ಮಾದಕ ವ್ಯಸನದಂತಹ ದುಶ್ಚಟಗಳಿಂದ ದೂರವಿದ್ದು, ಉತ್ತಮ ಮೌಲ್ಯಗಳೊಂದಿಗೆ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಮೂಡುಬಿದಿರೆ ಇನ್ ಸ್ಪೆಕ್ಟರ್ ರಾಜೇಂದ್ರ ಬಿ. ಅವರು ಹೇಳಿದರು. ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳನ್ನು ಮಾದಕ ವಸ್ತುಗಳ ದುಷ್ಪರಿಣಾಮದಿಂದ ದೂರವಿರಿಸಿ ಆರೋಗ್ಯವಂತ ಹಾಗೂ ಮೌಲ್ಯಾಧಾರಿತ ಬದುಕಿನತ್ತ ಪ್ರೇರೇಪಿಸುವ ಉದ್ದೇಶದಿಂದ ಆಯೋಜಿಸಿದ್ದ ಮಾದಕ ವಸ್ತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಾದಕ ವಸ್ತುಗಳ ಸೇವನೆಯು ವ್ಯಕ್ತಿಯ ಬದುಕು ಮಾತ್ರವಲ್ಲದೆ ಕುಟುಂಬದ ನೆಮ್ಮದಿ ಮತ್ತು ಸಮಾಜದ ಶಾಂತಿಯನ್ನೂ ಹಾಳುಮಾಡುವ ಗಂಭೀರ ಪಿಡುಗಾಗಿದೆ. […]

Continue Reading