ದ.ಕ ಜಿಲ್ಲೆಯ ಶಾಲೆಗಳಿಗೆ ಜುಲೈ 8 ರಂದು ರಜೆ ಘೋಷಣೆ: ಡಿಸಿ ದರ್ಶನ್ ಆದೇಶ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಗಾಳಿ ಹಾಗೂ ಮಳೆಯ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜುಲೈ 8 ರಂದು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ದರ್ಶನ್ ಅವರು ಆದೇಶ ಹೊರಡಿಸಿದ್ದಾರೆ. ಹವಾಮಾನ ಇಲಾಖೆ ವ್ಯಾಪಕ ಮಳೆ ಆಗುವ ಮುನ್ಸೂಚನೆ ನೀಡಿರುವ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜಿ ( ಪಿಯು)ಗೆ ರಜೆ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Continue Reading

ಭಾರಿ ಮಳೆ, ಗಾಳಿ ಭೀತಿ: ಉ. ಕ ಜಿಲ್ಲೆಯ 16 ಹೆದ್ದಾರಿ ಪ್ರದೇಶಗಳಲ್ಲಿ ವಾಹನ ನಿಲುಗಡೆ ನಿಷೇಧಿಸಿ ಡಿಸಿ ಲಕ್ಷ್ಮಿಪ್ರಿಯಾ ಆದೇಶ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಗಾಳಿ ಹಾಗೂ ಮುಂಗಾರು ಮಳೆಯ ಹಿನ್ನೆಲೆಯಲ್ಲಿ ಭೂ ಕುಸಿತ ಹಾಗೂ ರಸ್ತೆ ಅಪಘಾತಗಳ ಅಪಾಯ ಹೆಚ್ಚುವ ಸಾಧ್ಯತೆ ಇರುವ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳ 16 ಸೂಕ್ಷ್ಮ ಪ್ರದೇಶಗಳಲ್ಲಿ ಜುಲೈ 6 ರಿಂದ ಮಳೆಗಾಲ ಅಂತ್ಯ ಆಗುವವರಿಗೆ ಎಲ್ಲ ರೀತಿಯ ವಾಹನಗಳ ನಿಲುಗಡೆ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಅವರು ಆದೇಶ ಹೊರಡಿಸಿದ್ದಾರೆ. ಎಲ್ಲೆಲ್ಲಿ ನಿಷೇಧ: ಕಾರವಾರ ತಾಲೂಕಿನ ಲಂಡನ್ ಬ್ರಿಡ್ಜ್‌ನಿಂದ ಬಿನಾಗಾ ಸುರಂಗದವರೆಗೆ 750 ಮೀಟರ್, ಅಗಾರ್‌ನ ಸಂಕುಬಾಗ […]

Continue Reading

ಉ. ಕದಲ್ಲಿ ಭಾರೀ ಗಾಳಿ, ಮಳೆ, 5 ತಾಲೂಕಿನ ಶಾಲೆಗಳಿಗೆ ಜುಲೈ 7 ರಂದು ರಜೆ: ಡಿಸಿ ಲಕ್ಷ್ಮಿಪ್ರಿಯಾ ಆದೇಶ

ಕಾರವಾರ: ಭಾರತೀಯ ಹವಾಮಾನ ಇಲಾಖೆ ಉತ್ತರ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಸಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ ಹಾಗೂ ದಾಂಡೇಲಿ ತಾಲೂಕಿನ ಎಲ್ಲ ಸರ್ಕಾರಿ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳಿಗೆ ಜುಲೈ 7 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಅವರು ಆದೇಶ ಹೊರಡಿಸಿದ್ದಾರೆ. ಭಾರಿ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ಗಮನದಲ್ಲಿಟ್ಟುಕೊಂಡು ಆದೇಶ ಹೊರಡಿಸಲಾಗಿದೆ. ಜಿಲ್ಲೆಯ ಉಳಿದ ತಾಲೂಕುಗಳಿಗೆ ಈ ರಜೆ ಅನ್ವಯಿಸುವುದಿಲ್ಲ. […]

Continue Reading

ಕಾರವಾರ: ಭಾರೀ ಗಾಳಿಗೆ ಬೃಹತ್‌ ಮರ ಉರುಳಿ ಎಪಿಪಿ ಕಚೇರಿಗೆ ಹಾನಿ

ಕಾರವಾರ: ನಗರದಲ್ಲಿ ಭಾನುವಾರ ಬೀಸಿದ ಭಾರೀ ಗಾಳಿಗೆ ಬೃಹತ್‌ ಮರವೊಂದು ಉರುಳಿ ಬಿದ್ದ ಪರಿಣಾಮ ನಗರಸಭೆ ಪಕ್ಕದಲ್ಲಿ ಇರುವ ಸಹಾಯಕ ಸರ್ಕಾರಿ ಅಭಿಯೋಜಕರ ಕಚೇರಿಗೆ ತೀವ್ರ ಹಾನಿ ಉಂಟಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ನ್ಯಾಯಿಕ ದಂಡಾಧಿಕಾರಿ ನ್ಯಾಯಾಲಯಕ್ಕೆ ಸಂಬಂಧಿಸಿದ ಸಹಾಯಕ ಸರ್ಕಾರಿ ಅಭಿಯೋಜಕರ ಕಚೇರಿ ಮೇಲೆ ಮರ ಬಿದ್ದ ಪರಿಣಾಮ ಕಟ್ಟಡಕ್ಕೆ ಭಾರೀ ಹಾನಿ ಆಗಿದೆ. ಕಚೇರಿಯಲ್ಲಿದ್ದ ದಾಖಲೆಗಳು ಹಾಗೂ ಇತರ ಸಾಮಗ್ರಿಗಳಿಗೂ ಹಾನಿ ಆಗಿರುವ ಸಾಧ್ಯತೆ […]

Continue Reading

ಉ. ಕದಲ್ಲಿ ಜು. 9 ರವರೆಗೆ ಆರೆಂಜ್ ಅಲರ್ಟ್, ಭಾರಿ ಗಾಳಿ ಮುಂಜಾಗ್ರತೆ ವಹಿಸಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಸೂಚನೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಜುಲೈ 5 ರಂದು ಮಧ್ಯಾಹ್ನ 1 ಗಂಟೆಯಿಂದ ಜುಲೈ 9 ರ ಬೆಳಗ್ಗೆ 8.30 ರವರೆಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಈ ಅವಧಿಯಲ್ಲಿ ಗಂಟೆಗೆ 40 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷೆ ಲಕ್ಷ್ಮಿಪ್ರಿಯಾ ಅವರು ತಿಳಿಸಿದ್ದಾರೆ. […]

Continue Reading

ಸೇತುವೆ ಇಲ್ಲದ ಸಂಕಷ್ಟ: ಉಕ್ಕಿ ಹರಿಯುತ್ತಿದ್ದ ಭಾಸ್ಕೇರಿ ಹೊಳೆಯಲ್ಲಿ ಶವ ಹೊತ್ತು ಅಂತ್ಯಸಂಸ್ಕಾರ, ಮೂಲ ಸೌಕರ್ಯದಿಂದ ವಂಚಿತ ಗ್ರಾಮಸ್ಥರು

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ದೊಡ್ಡ ಹಿತ್ತಲ ಗ್ರಾಮದಲ್ಲಿ ಮೂಲ ಸೌಕರ್ಯಗಳ ಕೊರತೆಯ ಮತ್ತೊಂದು ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಗ್ರಾಮದಲ್ಲಿ ಮೃತಪಟ್ಟ ವ್ಯಕ್ತಿಯೊಬ್ಬರ ಮೃತದೇಹವನ್ನು ಅಂತ್ಯಸಂಸ್ಕಾರಕ್ಕೆ ಕೊಂಡೊಯ್ಯಲು ಉಕ್ಕಿ ಹರಿಯುತ್ತಿದ್ದ ಹೊಳೆಯನ್ನು ಗ್ರಾಮಸ್ಥರು ಜೀವದ ಹಂಗು ತೊರೆದು ದಾಟಿದ ಘಟನೆ ನಡೆದಿದೆ. ಈ ಘಟನೆ ಜಾಲತಾಣದಲ್ಲಿ ವೈರಲ್ ಅಗುತ್ತಿದ್ದು, ಬಾರಿ ಚರ್ಚೆಗೆ ಗ್ರಾಸವಾಗುತ್ತಿದೆ. ನಿರಂತರ ಮಳೆಯಿಂದ ಭಾಸ್ಕೇರಿ ಹೊಳೆ ತುಂಬಿ ಹರಿಯುತ್ತಿದ್ದು, ಗ್ರಾಮದ ಸಂಪರ್ಕ ರಸ್ತೆಯೂ ಜಲಾವೃತ ಆಗಿದೆ. ಈ ಹಿನ್ನೆಲೆಯಲ್ಲಿ ಅಂತ್ಯಸಂಸ್ಕಾರಕ್ಕೆ […]

Continue Reading

ಬಿಣಗಾ–ಅರಗಾ ರಾಷ್ಟ್ರೀಯ ಹೆದ್ದಾರಿ ಏಕಮುಖ ಸಂಚಾರ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಆದೇಶ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾ ಕರಿದೇವಸ್ಥಾನದಿಂದ ಅರಗಾ ಮಹಾದೇವಸ್ಥಾನ ಕ್ರಾಸ್‌ವರೆಗೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಜುಲೈ 4 ರಿಂದ ಮಳೆಗಾಲ ಮುಗಿಯುವವರೆಗೆ ಏಕಮುಖ ಸಂಚಾರ ವ್ಯವಸ್ಥೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಆದೇಶ ಹೊರಡಿಸಿದ್ದಾರೆ. ಮಳೆಗಾಲದಲ್ಲಿ ಗುಡ್ಡ ಪ್ರದೇಶದಿಂದ ನೀರಿನ ರಭಸಕ್ಕೆ ಕಲ್ಲು ಹಾಗೂ ಮಣ್ಣು ರಾಷ್ಟ್ರೀಯ ಹೆದ್ದಾರಿಯ ಮೇಲೆ ಕುಸಿಯುವ ಸಾಧ್ಯತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಈ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಗುಡ್ಡ ಕುಸಿತದಿಂದ ವಾಹನ ಸವಾರರು ಹಾಗೂ ಪ್ರಯಾಣಿಕರ ಸುರಕ್ಷತೆಗೆ […]

Continue Reading

ಸಾರ್ವಜನಿಕರ ಸಂಕಷ್ಟಕ್ಕೆ ತಕ್ಷಣ ಸ್ಪಂದಿಸುವುದೇ ಸರ್ಕಾರದ ಆದ್ಯತೆ: ಸಚಿವ ಖಾದರ್, ಜಿಲ್ಲಾಡಳಿತ ಸನ್ನದ್ಧ, ಡಿಸಿ ಲಕ್ಷ್ಮಿಪ್ರಿಯಾ

ಕಾರವಾರ: ಪ್ರಕೃತಿ ವಿಕೋಪಗಳು ಯಾವಾಗ, ಹೇಗೆ ಸಂಭವಿಸುತ್ತವೆ ಎಂಬುದನ್ನು ಊಹಿಸಲು ಸಾಧ್ಯವಿಲ್ಲ. ಇಂತಹ ಸಂದರ್ಭಗಳಲ್ಲಿ ಸಂತ್ರಸ್ತರು ಹಾಗೂ ಸಾರ್ವಜನಿಕರ ನೋವಿಗೆ ತಕ್ಷಣ ಸ್ಪಂದಿಸಿ, ಅವರಿಗೆ ನೆಮ್ಮದಿಯ ಜೀವನ ಕಲ್ಪಿಸುವುದು ಸರ್ಕಾರದ ಪ್ರಥಮ ಆದ್ಯತೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಕೃತಿ ವಿಕೋಪ ನಿರ್ವಹಣೆ ಪೂರ್ವತಯಾರಿ ಹಾಗೂ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಕೃತಿ ವಿಕೋಪದಂತಹ ತುರ್ತು […]

Continue Reading

ಮಳೆ ಹಾನಿ ಪರಿಶೀಲನೆಗೆ ಕಾರವಾರಕ್ಕೆ ಸಚಿವ ಯು.ಟಿ. ಖಾದರ್, ಅಧಿಕಾರಿಗಳ ಜತೆಗೆ ಪ್ರಗತಿ ಪರಿಶೀಲನೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಉಂಟಾಗಿರುವ ಹಾನಿ ಹಾಗೂ ಪರಿಹಾರ ಕಾರ್ಯಗಳ ಪ್ರಗತಿ ಪರಿಶೀಲನೆ ನಡೆಸಲು ಆರೋಗ್ಯ ಸಚಿವ ಹಾಗೂ ಉತ್ತರ ಕನ್ನಡ ಪ್ರಕೃತಿ ವಿಕೋಪ ಮೇಲುಸ್ತುವಾರಿ ಯು.ಟಿ. ಖಾದರ್ ಅವರು ಶನಿವಾರ ಕಾರವಾರಕ್ಕೆ ಭೇಟಿ ನೀಡಲಿದ್ದಾರೆ. ಮಂಗಳೂರಿನಿಂದ ಕಾರವಾರಕ್ಕೆ ಬರಲಿರುವ ಅವರು ‌ಬೆಳಿಗ್ಗೆ 10.30 ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಮಳೆಯಿಂದ ಉಂಟಾದ ಹಾನಿಯ ಸಂಪೂರ್ಣ ವಿವರ, […]

Continue Reading

ದ. ಕ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್: ಶಾಲೆ- ಪಿಯು ಕಾಲೇಜುಗಳಿಗೆ 3 ರಂದು ರಜೆ: ಡಿಸಿ ದರ್ಶನ್ 

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರೆಯುವ ಸಾಧ್ಯತೆಯಿದ್ದು, ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜುಲೈ 3 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ […]

Continue Reading