ಮಂಗಳೂರು ಪ್ರೆಸ್ ಕ್ಲಬ್ ದಿನ, ಪ್ರಶಸ್ತಿ ಪ್ರದಾನ ಮಾಡಿದ ಎಂಎಲ್ಸಿ ಐವನ್ ಡಿಸೋಜ

ಮಂಗಳೂರು : ಸಮಾಜದ ಸ್ವಾಸ್ಥ್ಯ ಕಾಪಾಡುವ ಮಹತ್ವದ ಜವಾಬ್ದಾರಿಯನ್ನು ಪತ್ರಕರ್ತರು ನಿಭಾಯಿಸುತ್ತಿದ್ದಾರೆ, ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸುವ ಪತ್ರಕರ್ತರನ್ನು ರಕ್ಷಣೆ ಮಾಡುವುದು ಸರ್ಕಾರದ ಕರ್ತವ್ಯ ಎಂದು ಎಂಎಲ್ಸಿ ಐವನ್ ಡಿಸೋಜ ಅವರು ಹೇಳಿದರು. ನಗರದ ರೆಡ್ ಕ್ರಾಸ್ ಶತಮಾನೋತ್ಸವ ಕಟ್ಟಡದ ಪ್ರೇರಣಾ ಸಭಾಂಗಣದಲ್ಲಿ ಭಾನುವಾರ ನಡೆದ ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿ, ಪೊಲೀಸರಷ್ಟೇ ವೇಗವಾಗಿ ಘಟನಾ ಸ್ಥಳಗಳಿಗೆ ತೆರಳಿ ಸಮಾಜಕ್ಕೆ ತಪ್ಪು ಸಂದೇಶ ಹೋಗದಂತೆ ವಿವೇಚನೆಯಿಂದ ವರದಿ ಮಾಡುವ ಪತ್ರಕರ್ತರ ಬದ್ಧತೆ ಶ್ಲಾಘನೀಯ’ಎಂದರು. ಪ್ರಶಸ್ತಿ […]

Continue Reading

ಹವಾಮಾನದಲ್ಲಿ ವ್ಯಾಪಕ ಏರಿಳಿತ, 19 ಜಿಲ್ಲೆಗಳಲ್ಲಿ ಗಾಳಿ, ಮಳೆ ಸಾಧ್ಯತೆ, ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ 19 ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳಲ್ಲಿ ಬಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಪ್ರಕಟಣೆ ತಿಳಿಸಿದೆ. ತಾಪಮಾನ ಕುಸಿತದ ಬೆನ್ನಲ್ಲೇ ವ್ಯಾಪಕ ಬಿರುಗಾಳಿ ಹಾಗೂ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ ತಿಳಿಸಿದೆ. ಕರಾವಳಿ ಭಾಗದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ ಎಂದು ತಿಳಿದು ಬಂದಿದೆ. ಕೊಪ್ಪಳ ಮತ್ತು ಗದಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಪ್ರತಿ ಗಂಟೆಗೆ 50 ರಿಂದ 60 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಇದರೊಂದಿಗೆ […]

Continue Reading

ಮಂಗಳೂರಿನಲ್ಲಿ ಶೀಘ್ರವೇ ಮೆಗಾ ಜಾಬ್ ಫೇರ್: ಕೌಶಲ್ಯಾಭಿವೃದ್ಧಿ , ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್

ಮಂಗಳೂರು: ಕರಾವಳಿ ಕರ್ನಾಟಕದ ಯುವಜನತೆಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಮಂಗಳೂರಿನಲ್ಲಿ ಶೀಘ್ರದಲ್ಲೇ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಕೌಶಲ್ಯಾಭಿವೃದ್ಧಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಹೇಳಿದರು. ನಗರದ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆಜಿಟಿಟಿಐ) ನೂತನ ಕಟ್ಟಡ ಉದ್ಘಾಟಿಸಿ ಶನಿವಾರ ಮಾತನಾಡಿದ ಅವರು, ಕರಾವಳಿ ಭಾಗದ ಮೂರು ಜಿಲ್ಲೆಗಳ ಯುವಕರನ್ನು ಕೇಂದ್ರೀಕರಿಸಿ ಉದ್ಯೋಗ ಮೇಳ ನಡೆಸಲಾಗುವುದು. ರಾಜ್ಯದ ವಿವಿಧೆಡೆ ನಡೆದ ಉದ್ಯೋಗ ಮೇಳಗಳಿಂದ ಇದುವರೆಗೆ 30 ಸಾವಿರಕ್ಕೂ ಅಧಿಕ […]

Continue Reading

ಮುಂಗಾರು ವೇಳೆ, ಎಚ್ಚರಿಕೆಯಿಂದ ವಾಹನ ಚಲಾಯಿಸಿ: ದ.ಕ. ಬಸ್‌ ಮಾಲೀಕರ ಸಂಘದ ಅಧ್ಯಕ್ಷ ಅಝೀಝ್ ಪರ್ತಿಪಾಡಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಆರಂಭವಾಗಿರುವ ಹಿನ್ನೆಲೆ ರಸ್ತೆಗಳಲ್ಲಿ ಗ್ರೀಸ್‌, ಆಯಿಲ್‌, ಡೀಸೆಲ್‌ ಸೇರಿದಂತೆ ಜಾರುವ ಪದಾರ್ಥಗಳು ಬೀಳುತ್ತಿರುವುದರಿಂದ ಅಪಘಾತಗಳ ಸಂಭವ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಬಸ್‌, ಸೇರಿದಂತೆ ಭಾರೀ ವಾಹನ ಚಾಲಕರು ಹಾಗೂ ಬೈಕ್ ಸವಾರರು ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕು ಎಂದು ದ.ಕ. ಬಸ್‌ ಮಾಲೀಕರ ಸಂಘದ ಅಧ್ಯಕ್ಷ ಅಝೀಝ್ ಪರ್ತಿಪಾಡಿ ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮಳೆಯ ಸಂದರ್ಭ ರಸ್ತೆಗಳಲ್ಲಿ ಹೊಂಡಗಳು, ಜಾರಿ ಪ್ರದೇಶಗಳು ಹಾಗೂ ಇತರೆ ಅಡೆತಡೆಗಳು ಉಂಟಾಗುವ ಸಾಧ್ಯತೆ ಇರುವುದರಿಂದ […]

Continue Reading

ಎಂಎಲ್ಸಿ ಐವನ್ ಡಿಸೋಜ, ರಾಜ್ಯಪಾಲ, ನಿವೃತ್ತ ನ್ಯಾ. ಅಬ್ದುಲ್ ನಜೀರ್ ಭೇಟಿ: ಹೈಕೋರ್ಟ್ ಸಂಚಾರ ಪೀಠ ಸ್ಥಾಪನೆ ಕುರಿತ ಚರ್ಚೆ

ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಂಬಂಧಿಸಿದಂತೆ ಹೈಕೋರ್ಟ್ ಪೀಠ ಹೋರಾಟ ಸಮಿತಿಯ ಸಂಚಾಲಕರೂ ಆಗಿರುವ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಅವರು, ಮಂಗಳೂರಿಗೆ ಭೇಟಿ ನೀಡಿದ್ದ ಮಾಜಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಹಾಗೂ ಆಂಧ್ರ ಪ್ರದೇಶ ರಾಜ್ಯಪಾಲ ಎಸ್. ಅಬ್ದುಲ್ ನಜೀರ್ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು. ಸಂಚಾರಿ ಪೀಠ ಸ್ಥಾಪನೆ ಕುರಿತಾಗಿ ಇದುವರೆಗೆ ನಡೆದ ಬೆಳವಣಿಗೆಗಳು, ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳೊಂದಿಗೆ ನಡೆದ ಚರ್ಚೆಗಳು, ಸರ್ಕಾರದ ಮಟ್ಟದಲ್ಲಿ […]

Continue Reading

ಸಹ್ಯಾದ್ರಿಯಲ್ಲಿ ಇಂಡಸ್ಟ್ರಿ ಇಂಟಿಗ್ರೇಟೆಡ್ ಸೆಂಟರ್ ಉದ್ಘಾಟನೆ, ಕೌಶಲ್ಯಾಭಿವೃದ್ಧಿಗೆ ಆದ್ಯತೆ: ಸಚಿವ ಡಾ. ಶರಣಪ್ರಕಾಶ್

ಮಂಗಳೂರು: ಪದವೀಧರರಲ್ಲಿ ಹೆಚ್ಚುತ್ತಿರುವ ಕೌಶಲ್ಯ ಅಂತರವನ್ನು ನಿವಾರಿಸಲು ಕೈಗಾರಿಕಾ–ಸಂಯೋಜಿತ ಕೇಂದ್ರಗಳು ಪರಿಣಾಮಕಾರಿಯಾಗಲಿವೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರು ಹೇಳಿದರು. ಉದ್ಯಮ ಮತ್ತು ಶಿಕ್ಷಣ ಕ್ಷೇತ್ರಗಳ ನಡುವಿನ ಅಂತರವನ್ನು ಕಡಿಮೆ ಮಾಡುವ ಉದ್ದೇಶದಿಂದ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್‌ನಲ್ಲಿ ವಿವಿಧ ಇಂಡಸ್ಟ್ರಿ ಇಂಟಿಗ್ರೇಟೆಡ್ ಸೆಂಟರ್‌ಗಳನ್ನು ಶನಿವಾರ ಅವರು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳನ್ನು ಉದ್ಯಮಕ್ಕೆ ಸಿದ್ಧಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಪಠ್ಯಕ್ರಮ ಪುನರ್‌ರಚನೆಗೆ ಕ್ರಮ ಕೈಗೊಂಡಿದೆ. ಸಹ್ಯಾದ್ರಿ ಕಾಲೇಜು ಹಲವು […]

Continue Reading

ಪಾಲೇಮಾರ್ ಕನ್ವೆನ್ಶನ್ ಸೆಂಟರ್ ಸೇರಿ ನಾಲ್ಕು ಸಭಾಭವನಗಳ ಲೋಕಾರ್ಪಣೆ ಮಾಡಿದ ರಾಜ್ಯಪಾಲ ಅಬ್ದುಲ್ ನಜೀರ್

ಮಂಗಳೂರು: ಬಡತನ ನಿರ್ಮೂಲನೆ ಹಾಗೂ ಸಮಾಜದಲ್ಲಿ ಸಮಾನತೆ ಸ್ಥಾಪನೆಗೆ ಶಿಕ್ಷಣವೇ ಪ್ರಮುಖ ಅಸ್ತ್ರ ಎಂದು ಆಂಧ್ರಪ್ರದೇಶ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್ ಹೇಳಿದರು. ನಗರದ ಮೇರಿಹಿಲ್‌ನ ಪಾಲೇಮಾರ್ ಕನ್ವೆನ್ಶನ್ ಸೆಂಟರ್‌ನಲ್ಲಿ ಶನಿವಾರ ಲ್ಯಾಂಡ್ ಲಿಂಕ್ಸ್ ಸಂಸ್ಥೆಯಿಂದ ನಿರ್ಮಿಸಲಾದ ಅತ್ಯಾಧುನಿಕ ಸೌಲಭ್ಯಗಳ ನಾಲ್ಕು ಭವ್ಯ ಸಭಾಭವನಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಾಜಿ ಸಚಿವ ಕೃಷ್ಣ ಜೆ. ಪಾಲೇಮಾರ್ ಬಹುಮುಖ ಪ್ರತಿಭೆಯ ವ್ಯಕ್ತಿ. ಕೈಗಾರಿಕೆ, ನಿರ್ಮಾಣ, ಶಿಕ್ಷಣ ಹಾಗೂ ಸಮಾಜಸೇವಾ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಅವರು ಬಡ ವಿದ್ಯಾರ್ಥಿಗಳ […]

Continue Reading

ಎಂಆರ್‌ಪಿಎಲ್‌ ಸಿಎಸ್‌ಆರ್ ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಸಚಿವ ದಿನೇಶ್ ಗುಂಡೂರಾವ್

ಸುರತ್ಕಲ್ : ಜೋಕಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆ.ಬಿ.ಎಸ್. ರೈಲ್ವೇ ಗೇಟ್‌ನಿಂದ ಎಂಎಸ್‌ಇಝೆಡ್ ಮುಖಾಂತರ ಹಳೆ ಮಸೀದಿ ತನಕ ನಿರ್ಮಾಣಗೊಳ್ಳಲಿರುವ 900 ಮೀಟರ್ ಉದ್ದದ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶುಕ್ರವಾರ ಶಿಲಾನ್ಯಾಸ ನೆರವೇರಿಸಿದರು. ₹2.25 ಕೋಟಿ ವೆಚ್ಚದಲ್ಲಿ ರಸ್ತೆ ನಿರ್ಮಾಣಗೊಳ್ಳಲಿದ್ದು, ಎಂಆರ್‌ಪಿಎಲ್‌ನ ಸಿಎಸ್‌ಆರ್ ಅನುದಾನ ಬಳಸಿಕೊಳ್ಳಲಾಗುತ್ತಿದೆ. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ‘ಎಂಆರ್‌ಪಿಎಲ್ ಸ್ಥಳೀಯ ಗ್ರಾಮಗಳ ಅಭಿವೃದ್ಧಿಗೆ ಇನ್ನಷ್ಟು ಅನುದಾನ ನೀಡಬೇಕು. ರಸ್ತೆ ಅಭಿವೃದ್ಧಿಗೆ ಅನುದಾನ ಒದಗಿಸುವಂತೆ ಸ್ಥಳೀಯರು ಮನವಿ […]

Continue Reading

ಲ್ಯಾಂಡ್ ಲಿಂಕ್ಸ್ ಸಂಸ್ಥೆಯ 45 ವರ್ಷಗಳ ಯಶಸ್ವಿನ ಪಯಣದ ಸವಿನೆನಪು, 4 ಅತ್ಯಾಧುನಿಕ ಶೈಲಿಯ ಸಭಾ ಭವನಗಳ ಲೋಕಾರ್ಪಣೆ 23 ಕ್ಕೆ: ಕೃಷ್ಣ ಜೆ. ಪಾಲೇಮಾರ್

ಮಂಗಳೂರು: ಲ್ಯಾಂಡ್ ಲಿಂಕ್ಸ್ ಸಂಸ್ಥೆಯ 45 ವರ್ಷಗಳ ಯಶಸ್ವಿ ಪಯಣದ ಸವಿನೆನಪಿಗಾಗಿ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಅದ್ದೂರಿಯಾಗಿ ನಿರ್ಮಾಣ ಮಾಡಲಾಗಿರುವ ನಾಲ್ಕು ಅತ್ಯಾಧುನಿಕ ಶೈಲಿಯ ಹಾಗೂ ಸೌಲಭ್ಯ ಹೊಂದಿರುವ ಸಭಾಭವನಗಳು ಇದೇ 23 ರಂದು ಆಂಧ್ರ ಪ್ರದೇಶದ ರಾಜ್ಯಪಾಲ ನ್ಯಾ. ಎಸ್. ಅಬ್ದುಲ್ ನಜೀರ್‌ ಅವರು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಮಾಜಿ ಸಚಿವ ಲ್ಯಾಂಡ್ ಲಿಂಕ್ಸ್ ಗ್ರೂಪ್ ಸಂಸ್ಥೆಯ ಅಧ್ಯಕ್ಷ ಕೃಷ್ಣ ಜೆ ಪಾಲೇಮಾರ್ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಅತ್ಯಾಧುನಿಕ ಸೌಲಭ್ಯಗಳು, ಐಷಾರಾಮಿ ವಿನ್ಯಾಸ ಹಾಗೂ […]

Continue Reading

ಆಳ್ವಾಸ್ ಗೆ ಥ್ರೋಬಾಲ್ ನಲ್ಲಿ 21 ನೇ ಬಾರಿಯೂ ಚಾಂಪಿಯನ್ ಪಟ್ಟ

ಮೂಡುಬಿದಿರೆ: ಮಂಗಳೂರು ವಿವಿ ಕ್ಯಾಂಪಸ್‌ನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯದ ಅಂತರ ಕಾಲೇಜು ಮಹಿಳೆಯರ ಥ್ರೋಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿಯರು ಅದ್ಭುತ ಪ್ರದರ್ಶನ ನೀಡಿ, 21ನೇ ಬಾರಿಯೂ ಚಾಂಪಿಯನ್ ಕಿರೀಟ ಮುಡಿಗೇರಿಸಿಕೊಂಡು, ಪೂರ್ಣಪ್ರಜ್ಞಾ ರೋಲಿಂಗ್ ಟ್ರೋಫಿ ಅನ್ನು ತಮ್ಮದಾಗಿಸಿಕೊಂಡಿದ್ದಾರೆ. ಕ್ವಾರ್ಟರ್ ಫೈನಲ್ ಮಡಂತ್ಯಾರ್‌ ಸೇಕ್ರೆಡ್ ಹಾರ್ಟ್ ಕಾಲೇಜಿನ ತಂಡವನ್ನು ಆಳ್ವಾಸ್ ತಂಡ 25 -10 ಹಾಗೂ 25-12 ಅಂಕಗಳ ನೇರ ಸೆಟ್‌ನಲ್ಲಿ ಮಣಿಸಿತು. ಸೆಮಿಫೈನಲ್‌ನಲ್ಲಿ ಹಂಪನಕಟ್ಟೆಯ ವಿಶ್ವವಿದ್ಯಾಲಯ ಕಾಲೇಜಿನ ವಿರುದ್ಧ 25-18 ಹಾಗೂ 25-12 ಅಂಕಗಳ ಅಂತರದಲ್ಲಿ […]

Continue Reading