ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಪರಿಷತ್ ಉದ್ಘಾಟಿಸಿದ ಅನಿಲ್ ಲೋಬೊ

ಮಂಗಳೂರು: ವಿದ್ಯಾರ್ಥಿ ಜೀವನದಲ್ಲಿ ನಾಯಕತ್ವ, ಶಿಸ್ತು ಹಾಗೂ ಸಾಮಾಜಿಕ ಜವಾಬ್ದಾರಿಯ ಅರಿವು ಮೂಡಿಸುವ ಉದ್ದೇಶದಿಂದ ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನ 2026-27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನಾ ಸಮಾರಂಭವು ಮಂಗಳವಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮವನ್ನು ಮುಖ್ಯ ಅತಿಥಿಗಳು, ಶಿಕ್ಷಣ ಸಂಸ್ಥೆಯ ಸಂಚಾಲಕರು ಹಾಗೂ ಪ್ರಾಂಶುಪಾಲರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಎಂಸಿಸಿ ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ಅವರು ಮಾತನಾಡಿ, ವಿದ್ಯಾರ್ಥಿಗಳು ಪಠ್ಯ ಅಭ್ಯಾಸದ ಜತೆಗೆ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳುವುದು ಇಂದಿನ […]

Continue Reading

ವಿಶ್ವ ಯೋಗ ದಿನ, ಕಾರಿಂಜೇಶ್ವರ ಬೆಟ್ಟದಲ್ಲಿ ಯೋಗ ವಿದ್ ಯೋಧ ಕಾರ್ಯಕ್ರಮ: ಸಂಸದ ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು: ಅಂತರ ರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಈ ಬಾರಿ ದಕ್ಷಿಣ ಕನ್ನಡದ ಪ್ರಸಿದ್ಧ ಧಾರ್ಮಿಕ ಹಾಗೂ ಪ್ರವಾಸಿ ತಾಣ ಕಾರಿಂಜೇಶ್ವರ ಬೆಟ್ಟದಲ್ಲಿ ‘ಯೋಗ ವಿದ್ ಯೋಧ’ ಬೃಹತ್ ಯೋಗಾಭ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜೂನ್ 21ರಂದು 3 ಗಂಟೆಗೆ ಮಹಾತೋಭಾರ ಕಾರಿಂಜೇಶ್ವರ ದೇವಸ್ಥಾನದ ಆವರಣದಲ್ಲಿ 3ನೇ ಆವೃತ್ತಿಯ ಯೋಗ ವಿದ್ ಯೋಧ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ನಿವೃತ್ತ ಯೋಧರು, ಗಣ್ಯರು, ಯೋಗಾಸಕ್ತರು ಹಾಗೂ ಸಾರ್ವಜನಿಕರು […]

Continue Reading

ನೀಟ್ ಮರು ಪರೀಕ್ಷೆ ಜೂನ್ 21: ಪಾರದರ್ಶಕವಾಗಿ ನಡೆಸಲು ಜಿಲ್ಲಾಧಿಕಾರಿ ಸ್ವರೂಪ ಸೂಚನೆ

ಉಡುಪಿ: ಜಿಲ್ಲೆಯಲ್ಲಿ ಜೂನ್ 21ರಂದು ನಡೆವ ನೀಟ್ (ಯುಜಿ) ಮರು ಪರೀಕ್ಷೆಯನ್ನು ಯಾವುದೇ ಲೋಪದೋಷಗಳಿಲ್ಲದೆ ಪಾರದರ್ಶಕವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಗೊಂದಲವಿಲ್ಲದೆ ನಿರಾಳ ವಾತಾವರಣದಲ್ಲಿ ಪರೀಕ್ಷೆ ನಡೆಯಬೇಕು ಎಂದು ಹೇಳಿದರು. ಜಿಲ್ಲೆಯಲ್ಲಿ ಒಟ್ಟು 6 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 2,970 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಪರೀಕ್ಷೆ ಮಧ್ಯಾಹ್ನ 2 ರಿಂದ […]

Continue Reading

ಪಕ್ಷದ ಸಂಘಟನೆಯನ್ನು ಬೂತ್ ಮಟ್ಟದಲ್ಲಿ; ಮಂಗಳೂರು ದಕ್ಷಿಣ ಜೆಡಿಎಸ್ ಕಾರ್ಯಕರ್ತರ ಸಭೆ

ಮಂಗಳೂರು: ಜೆಡಿಎಸ್ ಪಕ್ಷದ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಸಂಘಟನಾ ಸಭೆಯು ಕ್ಷೇತ್ರಾಧ್ಯಕ್ಷ ಎನ್.ಪಿ. ಪುಷ್ಪರಾಜನ್ ಅವರ ಅಧ್ಯಕ್ಷತೆಯಲ್ಲಿ ನಗರದ ವುಡ್‌ಲ್ಯಾಂಡ್ಸ್ ಹೋಟೆಲ್ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಪಕ್ಷದ ಸಂಘಟನೆಯನ್ನು ಬೂತ್ ಮಟ್ಟದಲ್ಲಿ ಮತ್ತಷ್ಟು ಸದೃಢಗೊಳಿಸುವುದು, ಸದಸ್ಯತ್ವ ಅಭಿಯಾನವನ್ನು ತೀವ್ರಗೊಳಿಸುವುದು ಹಾಗೂ ಮುಂಬರುವ ರಾಜಕೀಯ ಮತ್ತು ಸಾಮಾಜಿಕ ಕಾರ್ಯಕ್ರಮಗಳ ರೂಪುರೇಷೆಗಳ ಕುರಿತು ಚರ್ಚೆ ನಡೆಸಲಾಯಿತು. ಕ್ಷೇತ್ರ ಕಾರ್ಯಾಧ್ಯಕ್ಷ ವಸಂತ ಪೂಜಾರಿ ಮಾತನಾಡಿ, ಜೆಡಿಎಸ್‌ನ ತತ್ವ-ಸಿದ್ಧಾಂತಗಳು, ರೈತಪರ ಹಾಗೂ ಜನಪರ ಕಾರ್ಯಕ್ರಮಗಳನ್ನು ಮನೆಮನೆಗೆ ತಲುಪಿಸುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ […]

Continue Reading

ಬಜ್ಪೆ ಠಾಣೆಯ ಪೊಲೀಸರ ಎಡವಟ್ಟು, ಮಾಹಿತಿ ಕಲೆ ಹಾಕದೇ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್, ಇಬ್ಬರ ಅಮಾನತು

ಮಂಗಳೂರು: ಅಸ್ಸಾಂ ಹಾಗೂ ಬಿಹಾರ ಮೂಲದ 30 ಕ್ಕೂ ಹೆಚ್ಚು ಕಾರ್ಮಿಕರಿಗೆ ಸಮರ್ಪಕವಾಗಿ ಮಾಹಿತಿ ಕಲೆ ಹಾಕದೇ, ಪರಿಶೀಲನೆ ನಡೆಸದೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್ (ಪಿಸಿಸಿ) ನೀಡಿದ ಆರೋಪದ ಹಿನ್ನೆಲೆ ಮಂಗಳೂರಿನ ಬಜ್ಪೆ ಪೊಲೀಸ್ ಠಾಣೆ ಇಬ್ಬರು ಸಿಬ್ಬಂದಿಯನ್ನು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಅವರು ಅಮಾನತು ಮಾಡಿದ್ದಾರೆ. ಈ ಘಟನೆ ಪೊಲೀಸ್ ಇಲಾಖೆಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಅಮಾನತುಗೊಂಡವರಲ್ಲಿ ಮಹಿಳಾ ಸಿಬ್ಬಂದಿ ಆಶಾ ಹಾಗೂ ಹೆಡ್ ಕಾನ್‌ಸ್ಟೇಬಲ್ ಮಂಜುನಾಥ್ ಸೇರಿದ್ದಾರೆ. ವರ್ಷದ ಅವಧಿಯಲ್ಲಿ 31 ಮಂದಿಗೆ […]

Continue Reading

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ; ಮೊದಲ ಜೆಂಡರ್ ಅಫರ್ಮಿಂಗ್ ಯಶಸ್ವಿ ಶಸ್ತ್ರಚಿಕಿತ್ಸೆ, ವೈದ್ಯರ ಸಾಧನೆ

ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಟ್ರಾನ್ಸ್ಜೆಂಡರ್ ಮಹಿಳೆಗೆ ಮೊದಲ ಬಾರಿಗೆ ಜೆಂಡರ್ ಅಫರ್ಮಿಂಗ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನೆರವೇರಿಸಲಾಗಿದೆ. ಈಚೆಗೆ ನಡೆದ ಈ ಶಸ್ತ್ರಚಿಕಿತ್ಸೆ ನಂತರ ರೋಗಿ ವೈದ್ಯಕೀಯ ತಂಡದ ಆರೈಕೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ತಿಳಿಸಿದೆ. ಆಸ್ಪತ್ರೆಯ ಪ್ಲಾಸ್ಟಿಕ್ ಸರ್ಜರಿ ಹಾಗೂ ಮೂತ್ರಶಾಸ್ತ್ರ ವಿಭಾಗಗಳ ಸಂಯುಕ್ತ ತಂಡವು ಈ ಸಂಕೀರ್ಣ ಶಸ್ತ್ರಚಿಕಿತ್ಸೆಯನ್ನು ನಡೆಸಿದ್ದು, ಎರಡೂ ವಿಭಾಗಗಳ ನಿಕಟ ಸಮನ್ವಯದಲ್ಲಿ ಹಲವು ಗಂಟೆಗಳ ಕಾಲ ಕಾರ್ಯ ನಡೆದಿದೆ. ಪ್ಲಾಸ್ಟಿಕ್ ಸರ್ಜರಿ ವಿಭಾಗವು ಇದಕ್ಕೂ ಮುನ್ನ ಮುಖದ ಸ್ತ್ರೀಕರಣ ಮತ್ತು […]

Continue Reading

ಸಾವಯವ ಕೃಷಿಕರ ಮಾವು–ಹಲಸು ಮೇಳ, ವಿವಿಧ ತಳಿಯ ಮಾವು, ಹಲಸು ಪ್ರದರ್ಶನ, ಮಾರಾಟ: ಕಲ್ಕೂರ

ಮಂಗಳೂರು: ಕಲ್ಕೂರ ಪ್ರತಿಷ್ಠಾನ ಮಂಗಳೂರು ಹಾಗೂ ಸಾವಯವ ಕೃಷಿಕ ಗ್ರಾಹಕ ಬಳಗದ ಸಹಕಾರದಲ್ಲಿ ಸಾವಯವ ಕೃಷಿಕರು ಬೆಳೆಸಿದ ವಿಶಿಷ್ಟ ತಳಿಗಳ ಮಾವು ಮತ್ತು ಹಲಸಿನ ಸಮೃದ್ಧಿಯನ್ನು ಪರಿಚಯಿಸುವ ಮಾವು–ಹಲಸು ಮೇಳವನ್ನು ಜೂನ್ 20 ಮತ್ತು 21ರಂದು ನಗರದ ಕದ್ರಿ ಕಂಬಳ ಮಲ್ಲಿಕಾ ಬಡಾವಣೆಯ ‘ಮಂಜು ಪ್ರಾಸಾದ’ದ ಆವರಣದಲ್ಲಿ ಬೆಳಿಗ್ಗೆ 7ರಿಂದ ಸಂಜೆ 7 ಗಂಟೆಯವರೆಗೆ ಆಯೋಜನೆ ಮಾಡಲಾಗಿದೆ ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಅವರು ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ನಾಡು–ನುಡಿ ಜಾಗೃತಿ ಸಮ್ಮೇಳನ ಸರಣಿ […]

Continue Reading

ಎತ್ತಿನಹೊಳೆ ಯೋಜನೆಯ ವೈಜ್ಞಾನಿಕ ಸಮೀಕ್ಷೆ ನಡೆಸಿ: ವೇಕಾನಂದ ಸಾಲಿನ್ಸ್

ಮಂಗಳೂರು: ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ ನೀರುಣಿಸುವ ಉದ್ದೇಶದಿಂದ ಆರಂಭಿಸಿರುವ ಎತ್ತಿನಹೊಳೆ ಯೋಜನೆ ಕುರಿತು ಸಮಗ್ರ ವೈಜ್ಞಾನಿಕ ಸಮೀಕ್ಷೆ ನಡೆಸಬೇಕು ಹಾಗೂ ಕರಾವಳಿಯ ಪರಿಸರ ವ್ಯವಸ್ಥೆ ರಕ್ಷಿಸಲು ಸರ್ಕಾರ ಖಚಿತ ಕ್ರಮ ಕೈಗೊಳ್ಳಬೇಕು ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಸಾಲಿನ್ಸ್ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು. ಉಡುಪಿ ವಾರಾಹಿ ನೀರಾವರಿ ಯೋಜನೆ, ಎಡದಂಡೆ ಕಾಲುವೆ ಹಾಗೂ ಅಕ್ವಿಡಕ್ಟ್ ಯೋಜನೆಗಳಿಗೆ ಸಾವಿರಾರು ಕೋಟಿ ರೂಪಾಯಿ ವೆಚ್ಚವಾಗಿದ್ದರೂ ನಾಲ್ಕು ದಶಕಗಳ ಬಳಿಕವೂ ಪೂರ್ಣಗೊಂಡಿಲ್ಲ. ಇದೇ ರೀತಿಯಾಗಿ […]

Continue Reading

ಬಾಂಬ್ ಬೆದರಿಕೆ, ಬಾಗಲಕೋಟೆ, ದಾವಣಗೆರೆ, ಧಾರವಾಡ, ಕೋಲಾರ ಕೋರ್ಟ್‌ಗಳಲ್ಲಿ ಆತಂಕ; ಶೋಧ ಕಾರ್ಯ ಬಳಿಕ ಸುರಕ್ಷತೆ ಖಚಿತ

ಬೆಂಗಳೂರು: ಬಾಗಲಕೋಟೆ, ದಾವಣಗೆರೆ, ಧಾರವಾಡ ಹಾಗೂ ಕೋಲಾರ ಜಿಲ್ಲಾ ನ್ಯಾಯಾಲಯಗಳಿಗೆ ಅನುಮಾನಾಸ್ಪದ ಇ-ಮೇಲ್‌ಗಳ ಮೂಲಕ ಬಾಂಬ್ ಬೆದರಿಕೆ ಸಂದೇಶಗಳು ಬಂದಿದ್ದು, ಕೋರ್ಟ್ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಬಾಗಲಕೋಟೆ ಜಿಲ್ಲಾ ನ್ಯಾಯಾಲಯಕ್ಕೆ karunanidhi.kundi@underworld.dog ಎಂಬ ಇ-ಮೇಲ್ ಐಡಿಯಿಂದ ಬೆದರಿಕೆ ಸಂದೇಶ ಬಂದಿದ್ದು, ಮಧ್ಯಾಹ್ನ 2 ಗಂಟೆಗೆ ಸ್ಫೋಟ ಸಂಭವಿಸುವುದಾಗಿ ಉಲ್ಲೇಖಿಸಲಾಗಿತ್ತು. ಚಿತ್ರದುರ್ಗದಿಂದ ಮೊದಲು ಈ ಸಂದೇಶ ಬಂದಿದ್ದು ಬಳಿಕ ಬಾಗಲಕೋಟೆಗೆ ರವಾನೆ ಆಗಿರುವುದು ತಿಳಿದು ಬಂದಿದೆ. ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಹಾಗೂ […]

Continue Reading

ಕರ್ನಾಟಕ ನಾಯರ್‌ ಸರ್ವೀಸ್‌ ಸೊಸೈಟಿಗೆ ಮುರಳಿ ಹೊಸಮಜಲು ಪುನರಾಯ್ಕೆ

ಮಂಗಳೂರು: ಕರ್ನಾಟಕ ನಾಯರ್‌ ಸರ್ವೀಸ್‌ ಸೊಸೈಟಿ ಮಂಗಳೂರು ಘಟಕದ ಸಾಮಾನ್ಯ ಸಭೆ ನಗರದ ಕೆಪಿಟಿ ಸಮೀಪದ ಎಸ್‌ ಕ್ಯೂಬ್‌ ಸೆಂಟರ್‌ ಸಭಾಂಗಣದಲ್ಲಿ ನಡೆಯಿತು. ಸಭೆಯ ಬಳಿಕ ನಡೆದ ಚುನಾವಣೆಯಲ್ಲಿ 2026-28ನೇ ಅವಧಿಗೆ ಅಧ್ಯಕ್ಷರಾಗಿ ಮುರಳಿ ಹೊಸಮಜಲು ಪುನರಾಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ವಿ.ಎಂ. ಸತೀಶನ್‌, ಖಜಾಂಚಿಯಾಗಿ ಅಜಯಕುಮಾರ್‌, ಉಪಾಧ್ಯಕ್ಷರಾಗಿ ವಾಸಂತಿ ನಾಯರ್‌, ಜತೆ ಕಾರ್ಯದರ್ಶಿಯಾಗಿ ಮಂಜು ಅಜಿತ್‌ ಹಾಗೂ ಜತೆ ಖಜಾಂಚಿಯಾಗಿ ರವೀಂದ್ರನಾಥ್‌ ಆಯ್ಕೆಯಾದರು. ಬೋರ್ಡ್‌ ಸದಸ್ಯರಾಗಿ ವಿಜಯಕುಮಾರ್‌, ಎಂ.ವಿ. ರಾಜನ್‌ ಮತ್ತು ಎ.ಎಸ್. ಮೋಹನ್‌ ಆಯ್ಕೆಯಾಗಿದ್ದಾರೆ. ಸಮಿತಿಯ ಸದಸ್ಯರಾಗಿ […]

Continue Reading