ವಿಧಾನ ಪರಿಷತ್ ಫೈಟ್: ಕಾಂಗ್ರೆಸ್‌ಗೆ 5 ಸ್ಥಾನಗಳ ಭರ್ಜರಿ ಗೆಲುವು, ಅಡ್ಡ ಮತದಾನ ಓಟಿಂಗ್ ಏಟು, ಮೈತ್ರಿ ಸದಸ್ಯರಿಂದಲೇ ಕೈಗೆ ಮತ, ಜೆಡಿಎಸ್ ಗೆ ಹೀನಾಯ ಸೋಲು

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ನಿರೀಕ್ಷೆಗೂ ಮೀರಿ ಅಭೂತಪೂರ್ವ ಗೆಲುವು ಸಾಧಿಸಿದ್ದು, ಪಕ್ಷದ ಐವರು ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಚುನಾವಣಾ ಫಲಿತಾಂಶವು ಬಿಜೆಪಿ–ಜೆಡಿಎಸ್ ಮೈತ್ರಿಯಲ್ಲಿ ಅಸಮಾಧಾನಕ್ಕೆ ಕಾರಣ ಆಗಿದೆ. ಚುನಾವಣೆಯಲ್ಲಿ ಮೈತ್ರಿ ಪಕ್ಷದ ಕೆಲವು ಶಾಸಕರು ಅಡ್ಡಮತದಾನ ಮಾಡಿರುವುದು ಫಲಿತಾಂಶದ ಮೇಲೆ ಮಹತ್ವದ ಪರಿಣಾಮ ಬೀರಿದೆ ಎನ್ನಲಾಗುತ್ತಿದೆ. ಬಿಜೆಪಿ 3 ರಿಂದ 4 ಮಂದಿ ಹಾಗೂ ಜೆಡಿಎಸ್‌ 6 ರಿಂದ 7 ಮಂದಿ ಶಾಸಕರು ಕಾಂಗ್ರೆಸ್ ಪರವಾಗಿ ಮತ ಚಲಾಯಿಸಿದ್ದಾರೆ ಎಂಬ ಮಾಹಿತಿ ಲಭ್ಯ […]

Continue Reading

ಅಲ್ಪಸಂಖ್ಯಾತರ ಸಮಗ್ರ ಅಭಿವೃದ್ಧಿಗೆ ಆಯೋಗ ಬದ್ದ: ಯು. ನಿಸಾರ್ ಅಹಮದ್

ಕಾರವಾರ: ರಾಜ್ಯದಲ್ಲಿನ ಅಲ್ಪಸಂಖ್ಯಾತರ ಕುಂದುಕೊರತೆಗಳನ್ನು ಆಲಿಸಿ, ಸಮಸ್ಯೆಗಳಿಗೆ ಅಧಿಕಾರಿಗಳು ಸೂಕ್ತವಾಗಿ ಸ್ಪಂದಿಸದಿದ್ದರೆ ಅವರನ್ನು ಆಯೋಗಕ್ಕೆ ಕರೆಸಿ ನಿರ್ದೇಶನ ನೀಡುವ ಹಾಗೂ ಅಗತ್ಯವಿದ್ದರೆ ಸರ್ಕಾರಕ್ಕೆ ಶಿಫಾರಸು ಮಾಡುವ ಮೂಲಕ ಅಲ್ಪಸಂಖ್ಯಾತರ ಸಮಗ್ರ ಅಭಿವೃದ್ಧಿಗೆ ರಾಜ್ಯ ಅಲ್ಪಸಂಖ್ಯಾತರ ಆಯೋಗ ಬದ್ದವಾಗಿದೆ ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು. ನಿಸಾರ್ ಅಹಮದ್ ಹೇಳಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಅಲ್ಪಸಂಖ್ಯಾತರ ಕುಂದುಕೊರತೆಗಳ ಅಹವಾಲು ಸ್ವೀಕಾರ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿನ ಮುಸ್ಲಿಂ, ಕ್ರಿಶ್ಚಿಯನ್, ಬೌದ್ಧ, ಜೈನ, ಸಿಖ್ […]

Continue Reading

ವಿದ್ಯಾರ್ಥಿನಿಗೆ ಕಿರುಕುಳ ಆರೋಪ, ಕವಿವಿ ಪ್ರಾಧ್ಯಾಪಕ ಅಮಾನತು: ಕುಲಪತಿ ಪ್ರೊ. ಖಾನ್ ಆದೇಶ

ಧಾರವಾಡ: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ದೇವರಾಜನ್ ತಂಗುದೊರೈ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಕುಲಪತಿ ಪ್ರೊ. ಖಾನ್ ಆದೇಶ ಹೊರಡಿಸಿದ್ದಾರೆ. ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ ತೀವ್ರಗೊಂಡ ಬೆನ್ನಲ್ಲೇ ವಿಶ್ವವಿದ್ಯಾಲಯ ಈ ಕ್ರಮ ಕೈಗೊಂಡಿದೆ. ಪಿಎಚ್‌ಡಿ ವಿದ್ಯಾರ್ಥಿನಿಯೊಂದಿಗೆ ಅನೈತಿಕ ವರ್ತನೆ ನಡೆಸಿರುವ ಆರೋಪದ ಜೊತೆಗೆ, ಆಕೆ ಅಧ್ಯಯನವನ್ನು ಮಧ್ಯದಲ್ಲೇ ತೊರೆದ ಬಳಿಕ ಮರಳಿ ಬರಲು ಇತರ ವಿದ್ಯಾರ್ಥಿಗಳ ಮೂಲಕ ಒತ್ತಡ ಹೇರಲಾಗುತ್ತಿತ್ತು ಎಂಬ ಆರೋಪವೂ ಕೇಳಿಬಂದಿದೆ. […]

Continue Reading

ಚಿನ್ನಯ್ಯ ಜಾಮೀನು ರದ್ದತಿಗೆ ಮಟ್ಟಣ್ಣವರ್ ತಂಡದಿಂದ ಎಸ್ ಐಟಿಗೆ ಮನವಿ

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನಯ್ಯ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿರುವ ಬೆನ್ನಲ್ಲೆ, ಜಾಮೀನು ಷರತ್ತು ಉಲ್ಲಂಘನೆ ಆಗಿದೆ ಎಂದು ಆರೋಪಿಸಿ ಗಿರೀಶ್ ಮಟ್ಟಣ್ಣವರ್ ಹಾಗೂ ಜಯಂತ್ ಟಿ ನೇತೃತ್ವದ ತಂಡವು ಬೆಳ್ತಂಗಡಿ ಎಸ್‌ಐಟಿ ದೂರು ಸಲ್ಲಿಸಿದೆ. ಎಸ್‌ಐಟಿ ಕಚೇರಿಗೆ ಭೇಟಿ ನೀಡಿದ ತಂಡ, ಪ್ರಕರಣದ ಆರೋಪಿ ಚಿನ್ನಯ್ಯನಿಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸುವಂತೆ ಆಗ್ರಹಿಸಿತು. ಅಲ್ಲದೆ, ಪ್ರಕರಣದ ಸತ್ಯಾಸತ್ಯತೆ ಹೊರಬರಲು ಚಿನ್ನಯ್ಯನನ್ನು ಬ್ರೈನ್ ಮ್ಯಾಪಿಂಗ್ ಪರೀಕ್ಷೆಗೆ ಒಳಪಡಿಸಬೇಕು ಎಂದು ಮನವಿ ಮಾಡಿತು. ಹೈಕೋರ್ಟ್‌ಗೆ ಸಲ್ಲಿಸಿರುವ ಹೇಳಿಕೆಯನ್ನು […]

Continue Reading

ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕರಿಸಿರುವ ಕ್ರಮ ಪ್ರಜಾಪ್ರಭುತ್ವದ ಮೇಲಿನ ನಂಬಿಕೆಗೆ ಧಕ್ಕೆ: ಐವನ್ ಡಿಸೋಜ

ಮಂಗಳೂರು: ಬಿಜೆಪಿಯು ವೋಟ್ ಚೋರಿ ಜತೆಗೆ ಸೀಟ್ ಚೋರಿಯನ್ನೂ ನಡೆಸುತ್ತಿದ್ದು, ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಳಂಕ ತಂದಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರು ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಆರೋಪಿಸಿದರು. ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ತಿರಸ್ಕರಿಸಿರುವ ಕ್ರಮ ಪ್ರಜಾಪ್ರಭುತ್ವದ ಮೇಲಿನ ನಂಬಿಕೆಗೆ ಧಕ್ಕೆ ತಂದಿದೆ ಎಂದರು. ಜಾರ್ಖಂಡ್‌ನಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ನಾಮಪತ್ರದ ದೋಷ ಸರಿಪಡಿಸಲು ಅವಕಾಶ ನೀಡಿದ್ದರೂ, ಮೀನಾಕ್ಷಿ ನಟರಾಜನ್ ಅವರಿಗೆ ಅದೇ ಅವಕಾಶ […]

Continue Reading

ಎಂಸಿಸಿ ಬ್ಯಾಂಕ್‌ಗೆ ಐತಿಹಾಸಿಕ ಶೇ 25 ರಷ್ಟು ಸಾಧನೆ, ಸಾಧಕರಿಗೆ ಪ್ರಶಸ್ತಿ ಪ್ರದಾನ

ಮಂಗಳೂರು: ಎಂಸಿಸಿ ಬ್ಯಾಂಕ್‌ನ 2025-26ನೇ ಹಣಕಾಸು ವರ್ಷದ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಮಂಗಳೂರು ಧರ್ಮಪ್ರಾಂತ್ಯದ ಎಸ್ಟೇಟ್ ವ್ಯವಸ್ಥಾಪಕ ವಂ. ಫಾ. ಮ್ಯಾಕ್ಸಿಂ ರೊಸಾರಿಯೊ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಎಂಸಿಸಿ ಬ್ಯಾಂಕ್ ಕ್ಯಾಥೋಲಿಕ್ ಸಮುದಾಯದ ಹೆಮ್ಮೆ ಹಾಗೂ ಅಮೂಲ್ಯ ಸಂಸ್ಥೆ ಆಗಿದೆ. ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೋ ಅವರ ನಾಯಕತ್ವ, ನಿರ್ದೇಶಕರ ಮಂಡಳಿಯ ಮಾರ್ಗದರ್ಶನ ಹಾಗೂ ಸಿಬ್ಬಂದಿ ಸಮರ್ಪಿತ ಸೇವೆ ಶ್ಲಾಘಿಸಿದರು. ಅಧ್ಯಕ್ಷ ಅನಿಲ್ ಲೋಬೊ ಅವರು ಮಾತನಾಡಿ, 2025-26ನೇ […]

Continue Reading

ಮಾಣಿಲ ಶ್ರೀಧಾಮದಲ್ಲಿ 48 ದಿನಗಳ ವರಮಹಾಲಕ್ಷ್ಮೀ ವ್ರತಾಚರಣೆಗೆ ಸಿದ್ಧತೆ: ಮೋಹನದಾಸ ಪರಮಹಂಸ ಸ್ವಾಮೀಜಿ

ಮಂಗಳೂರು: ಮಾಣಿಲ ಶ್ರೀಧಾಮ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ನಡೆಯಲಿರುವ 27ನೇ ವರ್ಷದ 48 ದಿನಗಳ ವರಮಹಾಲಕ್ಷ್ಮೀ ವ್ರತಾಚರಣೆಯ ಪೂರ್ವಭಾವಿ ಸಭೆ ಭಾನುವಾರ ನಡೆಯಿತು. ಈ ಸಂದರ್ಭದಲ್ಲಿ ಅನುಗ್ರಹ ಸಂದೇಶ ನೀಡಿದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಆರಾಧನೆ ಮತ್ತು ಆಧ್ಯಾತ್ಮಿಕ ಚಿಂತನೆಯ ಮೂಲಕ ಆತ್ಮೋನ್ನತಿ ಸಾಧಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಇಂದಿನ ಸಮಾಜದಲ್ಲಿ ಮಾದಕ ವಸ್ತುಗಳ ಸೇವನೆಯ ಹೊರತಾಗಿಯೂ ಜನರು ದಾರಿ ತಪ್ಪುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಆಧ್ಯಾತ್ಮವೇ ಇದಕ್ಕೆ ಶಾಶ್ವತ ಪರಿಹಾರವಾಗಿದ್ದು, ಭಜನೆ, ಧ್ಯಾನ, ಯಾಗ, ಯಜ್ಞ […]

Continue Reading

ಹೆದ್ದಾರಿ ವಿಸ್ತರಣೆಗೆ ಬಲಿಯಾದ ಸುಂದರರಾಮ್ ಶೆಟ್ಟಿ ಸಮಾಧಿ: ದಿನೇಶ್ ಹೆಗ್ಡೆ ಉಳೆಪಾಡಿ ಆಕ್ರೋಶ

ಮಂಗಳೂರು: ಮೂಲ್ಕಿಯ ಬಪ್ಪನಾಡು ದೇವಸ್ಥಾನದ ಪ್ರವೇಶದ್ವಾರದ ಸಮೀಪವಿದ್ದ ಸಮಾಜ ಸೇವಕ ಹಾಗೂ ಬ್ಯಾಂಕಿಂಗ್ ಕ್ಷೇತ್ರದ ಹಿರಿಯ ವ್ಯಕ್ತಿತ್ವ ಸುಂದರರಾಮ್ ಶೆಟ್ಟಿ ಅವರ ಸಮಾಧಿಯನ್ನು ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿಯ ವೇಳೆ ಯಾವುದೇ ಪರ್ಯಾಯ ವ್ಯವಸ್ಥೆ ಮಾಡದೆ ತೆರವುಗೊಳಿಸಿರುವುದನ್ನು ಖಂಡಿಸಲಾಗುತ್ತದೆ ಎಂದು ಅಭಿಮಾನಿ ಬಳಗದ ಪರ ವಕೀಲರಾದ ದಿನೇಶ್ ಹೆಗ್ಡೆ ಉಳೆಪಾಡಿ ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ಹೊರಹಾಕಿದರು. ಸಮಾಧಿ ತೆರವುಗೊಳಿಸುವ ಮುನ್ನ ಕುಟುಂಬಸ್ಥರು, ಅಭಿಮಾನಿಗಳು ಹಾಗೂ ಸ್ಥಳೀಯರೊಂದಿಗೆ ಯಾವುದೇ ಸಮಾಲೋಚನೆ ನಡೆಸದಿರುವುದು ಬೇಸರದ ಸಂಗತಿ. ಸುಂದರರಾಮ್ ಶೆಟ್ಟಿ […]

Continue Reading

ಕೊಲ್ಲೂರು ಮೂಕಾಂಬಿಕೆ ದೇವಿ ದರ್ಶನ ಪಡೆದ ತಮಿಳುನಾಡು ಸಿಎಂ ಜೋಸೆಫ್ ವಿಜಯ್, ರೇಷ್ಮೆ ಸೀರೆ, ಬೆಳ್ಳಿ ಖಡ್ಗ ಅರ್ಪಣೆ

ಕೊಲ್ಲೂರು (ಉಡುಪಿ ಜಿಲ್ಲೆ): ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಉಡುಪಿಗೆ ಆಗಮಿಸಿದ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಪ್ರಸಿದ್ಧ ಕೊಲ್ಲೂರು ಮೂಕಾಂಬಿಕೆ ದೇವಿಯ ದರ್ಶನ ಪಡೆದುಕೊಂಡಿದ್ದಾರೆ. ದೇವಾಲಯಕ್ಕೆ ಭೇಟಿ ನೀಡಿದ ವೇಳೆ ಸಿಎಂ ವಿಜಯ್ ಅವರು ದೇವಿಗೆ ವಿಶೇಷ ಕಾಣಿಕೆಗಳನ್ನು ಅರ್ಪಿಸಿ ಭಕ್ತಿಯಿಂದ ಪ್ರಾರ್ಥನೆ ಸಲ್ಲಿಸಿದರು. ಶಕ್ತಿ ದೇವತೆ ಮೂಕಾಂಬಿಕೆಗೆ ಸಿಎಂ ವಿಜಯ್ ಅವರು ರೇಷ್ಮೆ ಸೀರೆ, ಫಲ–ತಾಂಬೂಲ ಅರ್ಪಿಸಿದರು. ಸುಮಾರು ಅರ್ಧ ಗಂಟೆಗಳ ಕಾಲ ದೇವಿಯ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ […]

Continue Reading

ಮುಖ್ಯಮಂತ್ರಿ ಡಿಕೆಶಿ ನವದೆಹಲಿಯಲ್ಲಿ ಅಮಿತ್ ಶಾ ಭೇಟಿ; ಪೊಲೀಸ್ ಭದ್ರತಾ ಬಲಪಡಿಸಲು ಕೇಂದ್ರದ ನೆರವು ಕೋರಿಕೆ

ನವದೆಹಲಿ: ಮುಖ್ಯಮಂತ್ರಿ ದಿ.ಕೆ. ಶಿವಕುಮಾರ್ ಅವರು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ರಾಜ್ಯದ ಕಾನೂನು ಸುವ್ಯವಸ್ಥೆ, ಭದ್ರತಾ ವ್ಯವಸ್ಥೆ ಹಾಗೂ ಪೊಲೀಸ್ ಇಲಾಖೆಯ ಆಧುನೀಕರಣಕ್ಕೆ ಸಂಬಂಧಿಸಿದ ಮಹತ್ವದ ಚರ್ಚೆ ನಡೆಸಿದರು. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ದೆಹಲಿ ಪ್ರವಾಸ ಕೈಗೊಂಡಿರುವ ಅವರು ರಾಜ್ಯದ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸಲು ಕೇಂದ್ರ ಸರ್ಕಾರದ ಸಹಕಾರವನ್ನು ಕೋರಿದರು. ರಾಜ್ಯದಲ್ಲಿ ಹೆಚ್ಚುತ್ತಿರುವ ಆನ್‌ಲೈನ್ ವಂಚನೆ ಮತ್ತು ಸೈಬರ್ ಅಪರಾಧಗಳನ್ನು ನಿಯಂತ್ರಿಸುವ ಉದ್ದೇಶದಿಂದ ಸುಮಾರು […]

Continue Reading