16ನೇ ಆವೃತ್ತಿಯ ಆಳ್ವಾಸ್ ಪ್ರಗತಿ ಉದ್ಯೋಗ ಮೇಳ ಅಗಸ್ಟ್ 7, 8ಕ್ಕೆ, ಗ್ರಾಮೀಣ ಮಟ್ಟದ ಪ್ರತಿಭೆಗಳಿಗೆ ಉದ್ಯೋಗ ಒದಗಿಸುವ ವೇದಿಕೆ: ಡಾ. ಮೋಹನ್ ಆಳ್ವ

ಮಂಗಳೂರು: ಗ್ರಾಮೀಣ ಪ್ರತಿಭೆಗಳಿಗೆ ಗುಣಮಟ್ಟದ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸುತ್ತಿರುವ 16ನೇ ಆವೃತ್ತಿಯ ಆಳ್ವಾಸ್ ಪ್ರಗತಿ ಉದ್ಯೋಗ ಮೇಳ ಆಗಸ್ಟ್ 7 ಮತ್ತು 8ರಂದು ಮೂಡುಬಿದಿರೆಯ ವಿದ್ಯಾಗಿರಿ ಆವರಣದಲ್ಲಿ ನಡೆಯಲಿದೆ. ಈ ಬಾರಿ 300ಕ್ಕೂ ಅಧಿಕ ಕಂಪೆನಿಗಳು ಭಾಗವಹಿಸುವ ನಿರೀಕ್ಷೆಯಿದ್ದು, ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯಗಳ ಅಭ್ಯರ್ಥಿಗಳಿಗೆ ಸ್ಥಳೀಯ, ರಾಷ್ಟ್ರೀಯ ಹಾಗೂ ಅಂತರ ರಾಷ್ಟ್ರೀಯ ಮಟ್ಟದ ಉದ್ಯೋಗಾವಕಾಶಗಳು ಲಭ್ಯವಾಗಲಿವೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅವರು ಶನಿವಾರ ಸುದ್ದಿಗೋಷ್ಟಿಯಲ್ಲಿ […]

Continue Reading

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ; ಮೊದಲ ಜೆಂಡರ್ ಅಫರ್ಮಿಂಗ್ ಯಶಸ್ವಿ ಶಸ್ತ್ರಚಿಕಿತ್ಸೆ, ವೈದ್ಯರ ಸಾಧನೆ

ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಟ್ರಾನ್ಸ್ಜೆಂಡರ್ ಮಹಿಳೆಗೆ ಮೊದಲ ಬಾರಿಗೆ ಜೆಂಡರ್ ಅಫರ್ಮಿಂಗ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನೆರವೇರಿಸಲಾಗಿದೆ. ಈಚೆಗೆ ನಡೆದ ಈ ಶಸ್ತ್ರಚಿಕಿತ್ಸೆ ನಂತರ ರೋಗಿ ವೈದ್ಯಕೀಯ ತಂಡದ ಆರೈಕೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ತಿಳಿಸಿದೆ. ಆಸ್ಪತ್ರೆಯ ಪ್ಲಾಸ್ಟಿಕ್ ಸರ್ಜರಿ ಹಾಗೂ ಮೂತ್ರಶಾಸ್ತ್ರ ವಿಭಾಗಗಳ ಸಂಯುಕ್ತ ತಂಡವು ಈ ಸಂಕೀರ್ಣ ಶಸ್ತ್ರಚಿಕಿತ್ಸೆಯನ್ನು ನಡೆಸಿದ್ದು, ಎರಡೂ ವಿಭಾಗಗಳ ನಿಕಟ ಸಮನ್ವಯದಲ್ಲಿ ಹಲವು ಗಂಟೆಗಳ ಕಾಲ ಕಾರ್ಯ ನಡೆದಿದೆ. ಪ್ಲಾಸ್ಟಿಕ್ ಸರ್ಜರಿ ವಿಭಾಗವು ಇದಕ್ಕೂ ಮುನ್ನ ಮುಖದ ಸ್ತ್ರೀಕರಣ ಮತ್ತು […]

Continue Reading

ಶಾಲೆ ಅನುಮತಿ ನವೀಕರಣಕ್ಕೆ ಲಂಚ: ಶಿಕ್ಷಣ ಇಲಾಖೆಯ ಎಫ್‌ಡಿಸಿ ಲೋಕಾಯುಕ್ತ ಬಲೆಗೆ

ರಾಯಚೂರು: ಖಾಸಗಿ ಶಾಲೆಯ ಅನುಮತಿ ನವೀಕರಣಕ್ಕೆ ಲಂಚ ಬೇಡಿಕೆ ಇಟ್ಟಿದ್ದ ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಥಮ ದರ್ಜೆ ಸಹಾಯಕ (ಎಫ್‌ಡಿಸಿ)ಯನ್ನು ಲೋಕಾಯುಕ್ತ ಅಧಿಕಾರಿಗಳು ಬಲೆಗೆ ಬೀಳಿಸಿದ್ದಾರೆ. ಬಂಧಿತನನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಎಫ್‌ಡಿಸಿ ಮಹಾಬಲೇಶ್ವರ ಎಸ್ ಎಂದು ಗುರುತಿಸಲಾಗಿದೆ. ರಾಂಪುರದ ಸಿದ್ಧಪ್ಪ ಅವರಿಗೆ ಸೇರಿದ ವಿದ್ಯಾಜ್ಯೋತಿ ಶಾಲೆಯ ಅನುಮತಿ ನವೀಕರಣ ಪ್ರಕ್ರಿಯೆ ಪೂರ್ಣಗೊಳಿಸಲು ಆರೋಪಿಯು 25 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ. ಲಂಚ ನೀಡಲು ಇಚ್ಛಿಸದ ಸಿದ್ಧಪ್ಪ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಅದರಂತೆ […]

Continue Reading

ಬಾಂಬ್ ಬೆದರಿಕೆ, ಬಾಗಲಕೋಟೆ, ದಾವಣಗೆರೆ, ಧಾರವಾಡ, ಕೋಲಾರ ಕೋರ್ಟ್‌ಗಳಲ್ಲಿ ಆತಂಕ; ಶೋಧ ಕಾರ್ಯ ಬಳಿಕ ಸುರಕ್ಷತೆ ಖಚಿತ

ಬೆಂಗಳೂರು: ಬಾಗಲಕೋಟೆ, ದಾವಣಗೆರೆ, ಧಾರವಾಡ ಹಾಗೂ ಕೋಲಾರ ಜಿಲ್ಲಾ ನ್ಯಾಯಾಲಯಗಳಿಗೆ ಅನುಮಾನಾಸ್ಪದ ಇ-ಮೇಲ್‌ಗಳ ಮೂಲಕ ಬಾಂಬ್ ಬೆದರಿಕೆ ಸಂದೇಶಗಳು ಬಂದಿದ್ದು, ಕೋರ್ಟ್ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಬಾಗಲಕೋಟೆ ಜಿಲ್ಲಾ ನ್ಯಾಯಾಲಯಕ್ಕೆ karunanidhi.kundi@underworld.dog ಎಂಬ ಇ-ಮೇಲ್ ಐಡಿಯಿಂದ ಬೆದರಿಕೆ ಸಂದೇಶ ಬಂದಿದ್ದು, ಮಧ್ಯಾಹ್ನ 2 ಗಂಟೆಗೆ ಸ್ಫೋಟ ಸಂಭವಿಸುವುದಾಗಿ ಉಲ್ಲೇಖಿಸಲಾಗಿತ್ತು. ಚಿತ್ರದುರ್ಗದಿಂದ ಮೊದಲು ಈ ಸಂದೇಶ ಬಂದಿದ್ದು ಬಳಿಕ ಬಾಗಲಕೋಟೆಗೆ ರವಾನೆ ಆಗಿರುವುದು ತಿಳಿದು ಬಂದಿದೆ. ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಹಾಗೂ […]

Continue Reading

ವಿದ್ಯಾರ್ಥಿನಿಗೆ ಕಿರುಕುಳ ಆರೋಪ, ಕವಿವಿ ಪ್ರಾಧ್ಯಾಪಕ ಅಮಾನತು: ಕುಲಪತಿ ಪ್ರೊ. ಖಾನ್ ಆದೇಶ

ಧಾರವಾಡ: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ದೇವರಾಜನ್ ತಂಗುದೊರೈ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಕುಲಪತಿ ಪ್ರೊ. ಖಾನ್ ಆದೇಶ ಹೊರಡಿಸಿದ್ದಾರೆ. ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ ತೀವ್ರಗೊಂಡ ಬೆನ್ನಲ್ಲೇ ವಿಶ್ವವಿದ್ಯಾಲಯ ಈ ಕ್ರಮ ಕೈಗೊಂಡಿದೆ. ಪಿಎಚ್‌ಡಿ ವಿದ್ಯಾರ್ಥಿನಿಯೊಂದಿಗೆ ಅನೈತಿಕ ವರ್ತನೆ ನಡೆಸಿರುವ ಆರೋಪದ ಜೊತೆಗೆ, ಆಕೆ ಅಧ್ಯಯನವನ್ನು ಮಧ್ಯದಲ್ಲೇ ತೊರೆದ ಬಳಿಕ ಮರಳಿ ಬರಲು ಇತರ ವಿದ್ಯಾರ್ಥಿಗಳ ಮೂಲಕ ಒತ್ತಡ ಹೇರಲಾಗುತ್ತಿತ್ತು ಎಂಬ ಆರೋಪವೂ ಕೇಳಿಬಂದಿದೆ. […]

Continue Reading

ಸಾರಿಗೆ ಇಲಾಖೆಯ ಪರಿವಾಹನ್’ ‘ಸಾರಥಿ’ ಸರ್ವರ್‌ ಹಾವು – ಏಣಿ ಆಟ, ನೋಂದಣಿಗಾಗಿ ಜನರ ಪರದಾಟ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸೇರಿದಂತೆ ರಾಜ್ಯದಾದ್ಯಂತ ಪರಿವಾಹನ್’ ಮತ್ತು ‘ಸಾರಥಿ’ ಸರ್ವರ್‌ಗಳ ಪದೇ ಪದೇ ಡೌನ್ ಆಗುವುದರಿಂದ ಸಾರಿಗೆ ಇಲಾಖೆಗೆ ಸಂಬಂಧಿಸಿದ ಆರ್‌ಟಿಒ ಕೆಲಸಗಳು ಮತ್ತು ಚಾಲನಾ ಪರವಾನಗಿ ಕಾರ್ಯಗಳಿಗೆ ಸಾರ್ವಜನಿಕರು ಪರದಾಡುವಂತಾಗಿದೆ. ಸಾರಿಗೆ ಇಲಾಖೆಯ ಸರ್ವರ್ ಡೌನ್ ಕಣ್ಣಾಮುಚ್ಚಾಲೆ ಕಳೆದ ಗುರುವಾರದಿಂದಲೇ ಶುರುವಾಗಿದೆ ಎಂಬ ಮಾಹಿತಿ ಇದೆ. ಗಂಟೆಗೊಮ್ಮೆ ಸರ್ವರ್ ಡೌನ್‌ ಆಗುತ್ತಿರುವುದರಿಂದ ಸಾರಿಗೆ ಇಲಾಖೆಯ ಕೆಲಸ ಕಾರ್ಯಗಳಿಗೆ ಬರುವ ಜನರು ಹಿಡಿಶಾಪ ಹಾಕಿ ವಾಪಸ್ ಆಗುವಂತಹ ಸ್ಥಿತಿ ನಿರ್ಮಾಣ ಆಗಿದೆ. ರಾಷ್ಟ್ರಮಟ್ಟದ ಪರಿವಾಹನ್ […]

Continue Reading

ವಿಜಯಪುರ: ಆಸ್ತಿ ವಿವಾದ ಒಂದೇ ಕುಟುಂಬದ 5 ಮಂದಿ, ಕೆಲಸದ ಆಳು ಬರ್ಬರ ಹತ್ಯೆ, ಬೆಚ್ಚಿ ಬಿದ್ದ ಜನರು

ವಿಜಯಪುರ: ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ನಿರಾಳೆ ಮತ್ತು ಗೊಳಗಿ ಕುಟುಂಬಗಳ ನಡುವೆ ಜಮೀನು ವಿವಾದದ ಹಿನ್ನೆಲೆ ಈ ಕೊಲೆ ನಡೆದಿದೆ ಎನ್ನಲಾಗುತ್ತಿದ್ದು, ಒಂದೇ ಕುಟುಂಬದ 5 ಮಂದಿ ಹಾಗೂ ಒಬ್ಬ ಆಳು ಮನುಷ್ಯ ಸೇರಿದಂತೆ ಒಟ್ಟು 6 ಜನರ ಬರ್ಬರ ಹತ್ಯೆಗೆ ಬೆಚ್ಚಿ ಬೀಳುವಂತಾಗಿದೆ. ಹಂತಕರು ಗನ್‌ನಿಂದ ಫೈರಿಂಗ್ ಮಾಡಿ, ಭೀಕರವಾಗಿ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದು, ಭೀಮಾತೀರದಲ್ಲಿ ಮತ್ತೆ ಹಳೆಯ ರಕ್ತಚರಿತ್ರೆಯ ಕರಾಳ ನೆನಪುಗಳನ್ನು ಮರುಕಳಿಸುವಂತೆ ಮಾಡಿದೆ. ನಿರಾಳೆ ಮತ್ತು ಗೊಳಗಿ ಕುಟುಂಬಗಳ ನಡುವೆ […]

Continue Reading

ಕಲಬುರಗಿ: ಭೀಕರ ರಸ್ತೆ ಅಪಘಾತ, ಸ್ಥಳದಲ್ಲಿ ಒಂದೇ ಕುಟುಂಬದ ಐದು ಮಂದಿ ಸಾವು

ಕಲಬುರಗಿ: ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಧ್ಯರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಇಂಗಳಗಿ ಗ್ರಾಮದ ನಿವಾಸಿಗಳಾದ ತೋಲುಸಾಬ್ ಕ್ಯಾಶ್ವಾರ್ (27), ಹುಸೇನ್ ಷಾ (48), ಮೈಬೂಬ್ ಅಲಿ (45), ರಸೂಲ್ ಬೀ (42) ಹಾಗೂ ಫಾತೀಮಾ ಅಲಿ (38) ಎಂದು ಗುರುತಿಸಲಾಗಿದೆ. ಕುಟುಂಬದ ಸದಸ್ಯರು ಯಾದಗಿರಿಯಿಂದ ಮರಳಿ ಬರುವಾಗ ಈ ಘಟನೆ ನಡೆದಿದೆ. ಲಾಡ್ಲಾಪುರ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬಂದ […]

Continue Reading

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರ ಪೀಠಕ್ಕೆ ಗ್ರಿನ್ ಸಿಗ್ನಲ್ : ಎಂಎಲ್ಸಿ ಐವನ್ ಡಿಸೋಜ

ಮಂಗಳೂರು: ಕರಾವಳಿ ಭಾಗದ ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರ ಪೀಠ ಸ್ಥಾಪಿಸಬೇಕು ಎಂಬ ಎರಡು ವರ್ಷಗಳ ಬೇಡಿಕೆಗೆ ರಾಜ್ಯ ಸರಕಾರ ಗ್ರೀನ್ ಸಿಗ್ನಲ್ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಪೀಠಕ್ಕೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಲು ಸಿದ್ಧ ಇರುವುದಾಗಿ ಮುಖ್ಯ ನ್ಯಾಯಾಧೀಶರಿಗೆ ಪತ್ರದ ಮೂಲಕ ತಿಳಿಸಿದ್ದಾರೆ. ಈ ಮೂಲಕ ಪೀಠ ಸ್ಥಾಪನೆ ಶೇ 80 ರಷ್ಟು ಕಾರ್ಯ ಪೂರ್ಣಗೊಂಡಂತಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕೋರ್ಟ್ […]

Continue Reading

ಸಚಿವ ಡಿ.ಸುಧಾಕರ್ ಅಂತ್ಯಕ್ರಿಯೆ, ಸಕಲ ಸರ್ಕಾರಿ ಗೌರವ, ಸಿಎಂ, ಡಿಸಿಎಂ, ಸ್ಪೀಕರ್ ಉಪಸ್ಥಿತಿ, ಕಣ್ಣೀರ ವಿದಾಯ

ಚಿತ್ರದುರ್ಗ: ಅನಾರೋಗ್ಯದಿಂದ ನಿಧನರಾಗಿದ್ದ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ಸೋಮವಾರ ಸರಕಾರಿ ಗೌರವಗಳೊಂದಿಗೆ ನಡೆಯಿತು. ಸೋಮವಾರ ಸಂಜೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿ ಜೈನ ಮುಕ್ತಿಧಾಮದಲ್ಲಿ ಜೈನ ಸಂಪ್ರದಾಯದಂತೆ ವಿಧಿಳನ್ನು ಪೂರೈಸಲಾಯಿತು. ಸಚಿವ ಡಿ.ಸುಧಾಕರ್ ಪ್ರಾರ್ಥಿವ ಶರೀರಕ್ಕೆ ಅವರ ಪುತ್ರ ಸುಹಾಸ್ ಸುಧಾಕರ್ ಅಗ್ನಿಸ್ಪರ್ಶ ಮಾಡುವ ಮೂಲಕ ಅಂತಿಮ ಸಂಸ್ಕಾರ ನೆರವೇರಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಡಾ.ಜಿ.ಪರಮೇಶ್ವರ್, ಎಚ್.ಕೆ.ಪಾಟೀಲ್, ಕೆ.ಜೆ. ಜಾರ್ಜ್, ಸಂತೋಷ್ ಲಾಡ್ […]

Continue Reading