ವಿಟ್ಲದಲ್ಲಿ ಜಿಲ್ಲಾ ಮಟ್ಟದ ರೇಷ್ಮೆ ಕೃಷಿ ಮೇಳ ಉದ್ಘಾಟಿಸಿದ ಸಚಿವ ವೆಂಕಟೇಶ್

ವಿಟ್ಲ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ರೇಷ್ಮೆ ಕೃಷಿ ಹೆಚ್ಚಿಸಲು ವಿಶೇಷ ಆದ್ಯತೆ ನೀಡಲಾಗುವುದು ಎಂದು ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್ ಅವರು ಹೇಳಿದರು. ಬುಧವಾರ ರೇಷ್ಮೆ ಇಲಾಖೆ ಹಾಗೂ ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ ವತಿಯಿಂದ ವಿಟ್ಲದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರೇಷ್ಮೆ ಕೃಷಿ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು. 30 ವರ್ಷಗಳ ಹಿಂದಿನವರೆಗೂ ಕರಾವಳಿ ಜಿಲ್ಲೆಗಳಲ್ಲಿ ರೇಷ್ಮೆ ಕೃಷಿ ವ್ಯಾಪಕವಾಗಿ ಬೆಳೆಯಲಾಗುತ್ತಿತ್ತು. ಪ್ರಸ್ತುತ ಈ ಭಾಗದಲ್ಲಿ ಅಡಿಕೆ ಬೆಳೆ ಕಡಿಮೆಯಾಗುತ್ತಿರುವುದರಿಂದ ಪರ್ಯಾಯವಾಗಿ […]

Continue Reading

60 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧ: ಜಂಟಿ ನಿರ್ದೇಶಕಿ ದರ್ಶನಾ ಕೆ.ಟಿ 

ಮಂಗಳೂರು:  ಜೂನ್ 1  ರಿಂದ ಜುಲೈ 31 ರವರೆಗೆ ಮೀನುಗಾರಿಕೆಗೆ ನಿಷೇಧವನ್ನು ಹೇರಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿದ್ದು, ಈ ವೇಳೆಯಲ್ಲಿ ಮೀನುಗಾರಿಕೆಗೆ ತೆರಳದಂತೆ  ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕಿ ದರ್ಶನಾ ಕೆ.ಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  ಜಿಲ್ಲೆಯ ಟೆರಿಟೋರಿಯಲ್ ವಾಟರ್ಸ್ ಭಾಗದಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಎಲ್ಲ ಯಾಂತ್ರೀಕೃತ ದೋಣಿಗಳ ಮುಖಾಂತರ ಮೀನುಗಾರಿಕೆಗೆ ನೀಷೆಧ ಹಾಕಲಾಗಿದೆ. 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಮೋಟಾರೀಕೃತ ದೋಣಿ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು  […]

Continue Reading

ನಾಲ್ಕು ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ, ಹರ್ಷ ಗುಪ್ತ ರಾಜ್ಯ ಮೇಲ್ಮನವಿ ಪ್ರಾಧಿಕಾರದ ಮುಖ್ಯಸ್ಥ

ಬೆಂಗಳೂರು: ರಾಜ್ಯ ಸರಕಾರವು ನಾಲ್ಕು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಹುದ್ದೆಯ ನಿರೀಕ್ಷೆಯಲ್ಲಿದ್ದ ಹಿರಿಯ ಐಎಎಸ್ ಅಧಿಕಾರಿ ಹರ್ಷ ಗುಪ್ತ ಅವರನ್ನು ರಾಜ್ಯ ಮೇಲ್ಮನವಿ ಪ್ರಾಧಿಕಾರದ ಮುಖ್ಯಸ್ಥರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲಾಧಿಕಾರಿ ನಾಗರಾಜ ಎನ್.ಎಂ. ಅವರನ್ನು ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿ ಒಂಬುಡ್ಸ್ ಮನ್, ಕಲಬುರಗಿ ಜಿಲ್ಲಾ ಪಂಚಾಯತಿ ಸಿಇಒ ಭನ್ವರ್ ಸಿಂಗ್ ಮೀನಾ ಅವರನ್ನು ಚಿಕ್ಕಮಗಳೂರು ಜಿಲ್ಲಾಧಿಕಾರಿ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ […]

Continue Reading

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಕೇಂದ್ರದ ವೈಫಲ್ಯ, ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಚೆಲ್ಲಾಟ: ರಮಾನಾಥ ರೈ ಆಕ್ರೋಶ

ಮಂಗಳೂರು: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ವೈಫಲ್ಯವನ್ನು ಕೇಂದ್ರ ಸರಕಾರ ಹೊರಬೇಕಾಗಿದೆ. ಪರೀಕ್ಷೆಯ ಪಾವಿತ್ರ್ಯತೆ ಕಾಪಾಡುವಲ್ಲಿ ವಿಫಲವಾಗಿರುವ ಕೇಂದ್ರದ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್‌ ಹಿರಿಯ ಮುಖಂಡ, ಮಾಜಿ ಸಚಿವ ರಮಾನಾಥ ರೈ ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು. 2020 ರಿಂದಲೂ ಹಲವು ಬಾರಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಕಂಡಿರುವ ಬಗ್ಗೆ ಸುದ್ದಿ ಆಗಿತ್ತು. ಈ ವೇಳೆ ಈ ರೀತಿ ಆಗದಂತೆ ಕ್ರಮ ತೆಗೆದುಕೊಳ್ಳುವುದಾಗಿ ಅಗತ್ಯ ತನಿಖೆ ನಡೆಸುವ ಬಗ್ಗೆ ಕೇಂದ್ರ ಸರಕಾರ […]

Continue Reading

ಜಿಲ್ಲಾ ಮಟ್ಟದ ಸಲಹಾ ಸಮಿತಿಯ ಸಭೆ, ಸ್ಕ್ಯಾನಿಂಗ್ ವೇಳೆ ಕೇಂದ್ರಗಳಲ್ಲಿ ತಾಯಿ ಕಾರ್ಡ್ ಕಡ್ಡಾಯ: ಡಾ.ಎಚ್.ಆರ್ ತಿಮ್ಮಯ್ಯ ಸೂಚನೆ

ಮಂಗಳೂರು: ಸ್ಕ್ಯಾನಿಂಗ್ ಕೇಂದ್ರಗಳಲ್ಲಿ ಗರ್ಭಿಣಿಯರ ಸ್ಕ್ಯಾನಿಂಗ್ ಮಾಡುವಾಗ ತಾಯಿ ಕಾರ್ಡ್ ಕಡ್ಡಾಯವಾಗಿ ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಆರ್ ತಿಮ್ಮಯ್ಯ ಅವರು ಸೂಚನೆ ನೀಡಿದ್ದಾರೆ. ಶುಕ್ರವಾರ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿಯಲ್ಲಿ ನಡೆದ ಜನನ ಪೂರ್ವ ಲಿಂಗ ನಿರ್ಣಯ ತಡೆ ಕಾಯಿದೆ 1994 ಕ್ಕೆ ಸಂಬಂಧಿಸಿ ಜಿಲ್ಲಾ ಮಟ್ಟದ ಸಲಹಾ ಸಮಿತಿಯ ಸಭೆಯಲ್ಲಿ ಅವರು ಮಾತನಾಡಿದರು. 18-19 ವರ್ಷದೊಳಗಿನ ಬಾಲ ಗರ್ಭಿಣಿಯರು ಕಂಡು ಬಂದಲ್ಲಿ, ಅವರ ಗರ್ಭಧಾರಣೆಯ ದಿನಾಂಕ ಮತ್ತು ವಯಸ್ಸಿನ ದೃಢೀಕರಣವನ್ನು ಖಚಿತಪಡಿಸಿಕೊಳ್ಳಬೇಕು. ಅಪ್ರಾಪ್ತ […]

Continue Reading

ಹಿರಿಯರ ಮಾರ್ಗದರ್ಶನವಿಲ್ಲದೇ ಸೊರಗುತ್ತಿರುವ ಸಮಾಜ: ವಿಸಿ ಪ್ರೊ. ಧರ್ಮ ಕಳವಳ

ಮಂಗಳೂರು: ಹಿರಿಯರ ಮಾರ್ಗದರ್ಶನ ಇಲ್ಲದೇ ಸಮಾಜ ಸೊರಗುತ್ತಿದೆ. ವಿದ್ಯಾ ಸಂಸ್ಥೆಯನ್ನು ಕೇವಲ ಸಂಸ್ಥೆಯಂತೆ ಕಾಣದೇ ,ಅದೊಂದು ವಿಸ್ತೃತ ಕುಟುಂಬ ಎಂದು ಪರಿಗಣಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದು ಮಂಗಳೂರು ವಿವಿ ಕುಲಪತಿ ಪ್ರೊ. ಪಿ.ಎಲ್. ಧರ್ಮ ಅವರು ಹೇಳಿದರು. ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಆಯೋಜಿಸಿದ್ದ ಹಳೆ ವಿದ್ಯಾರ್ಥಿಗಳ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು. ಇಂದಿನ ವಿದ್ಯಾ ಸಂಸ್ಥೆಗಳಲ್ಲಿ ಮೌಲ್ಯ, ಸಂಸ್ಕಾರ, ಪರಂಪರೆಯ ಶಿಕ್ಷಣದ ಕೊರತೆ ಎದ್ದು ಕಾಣುತ್ತಿದೆ. ಹಿರಿಯ ತಲೆಮಾರಿನ ಶಿಸ್ತು, ಬದುಕಿನ ಆದರ್ಶಗಳು ಮುಂದಿನ […]

Continue Reading

ಆಳ್ವಾಸ್ ವಿದ್ಯಾರ್ಥಿಗಳ ಮಾದರಿ ಕಾರ್ಯ: ‘ಚಿಣ್ಣರ ತಂಗುದಾಣ’ಕ್ಕೆ ನೆರವಿನ ಹಸ್ತ

ಮೂಡುಬಿದಿರೆ: ಸಮಾಜಮುಖಿ ಚಿಂತನೆ ಹಾಗೂ ಸಾಂಸ್ಕೃತಿಕ ಸೌಹಾರ್ದತೆಯ ಸಾರ್ಥಕ ಉದಾಹರಣೆಯಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ಮಂಗಳೂರಿನ ನಿರಾಶ್ರಿತ ಮಕ್ಕಳ ಆಶ್ರಯತಾಣ ‘ಚಿಣ್ಣರ ತಂಗುದಾಣ’ಕ್ಕೆ ಭೇಟಿ ನೀಡಿ 50,000ಕ್ಕೂ ಅಧಿಕ ಮೊತ್ತದ ದೈನಂದಿನ ಅಗತ್ಯ ವಸ್ತುಗಳು, ಆಹಾರ ಸಾಮಗ್ರಿಗಳು, ಕ್ರೀಡಾ ಉಪಕರಣಗಳು ಹಾಗೂ ಶೈಕ್ಷಣಿಕ ಸಾಮಗ್ರಿಗಳನ್ನು ಹಸ್ತಾಂತರಿಸಿದರು. ಇತ್ತೀಚೆಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ಸಂಪ್ರದಾಯ ದಿನಾಚರಣೆಯನ್ನು ವೈವಿಧ್ಯತೆಯಲ್ಲಿ ಏಕತೆ ಎಂಬ ಸಂದೇಶದೊಂದಿಗೆ ಅದ್ದೂರಿಯಾಗಿ ಆಚರಿಸಲಾಗಿತ್ತು. ಕಾರ್ಯಕ್ರಮದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಸ್ಪರ್ಧೆಗಳು, ಸಾಂಪ್ರದಾಯಿಕ ಆಹಾರ ಮೇಳ ಹಾಗೂ […]

Continue Reading

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಕೇಂದ್ರ ಸರಕಾರದ ವೈಫಲ್ಯ: ಮಾಜಿ ಎಂಎಲ್ಸಿ ಹರೀಶ್ ಕುಮಾರ್

ಮಂಗಳೂರು: ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆ ನೀಟ್ ಪರೀಕ್ಷೆ ರದ್ದುಗೊಂಡಿರುವ ಘಟನೆ ದೇಶದ ಶಿಕ್ಷಣ ವ್ಯವಸ್ಥೆಯ ಮೇಲಿನ ನಂಬಿಕೆಗೆ ದೊಡ್ಡ ಹೊಡೆತ ನೀಡಿದ್ದು, ಇದು ಕೇಂದ್ರ ಬಿಜೆಪಿ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ ಆಗಿದೆ ಎಂದು ಮಾಜಿ ಎಂಎಲ್ ಸಿ ಹಾಗೂ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಹರೀಶ್ ಕುಮಾರ್ ಆರೋಪಿಸಿದರು. 22.5 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಕನಸುಗಳನ್ನು ಹೊತ್ತು ಅಪಾರ ಪರಿಶ್ರಮದೊಂದಿಗೆ ಪರೀಕ್ಷೆ ಬರೆದಿದ್ದರು. ಆದರೆ, ಪ್ರಶ್ನೆಪತ್ರಿಕೆ ಸೋರಿಕೆಯಂತಹ ಗಂಭೀರ ಹಗರಣದಿಂದ ವಿದ್ಯಾರ್ಥಿಗಳ ಭವಿಷ್ಯವೇ ಅತಂತ್ರ ಸ್ಥಿತಿಗೆ ತಳ್ಳಲ್ಪಟ್ಟಿದ್ದು, […]

Continue Reading

ಸುಲ್ತಾನ್ ಬತ್ತೇರಿ– ಫಲ್ಗುಣಿ ನದಿ ಸಂಪರ್ಕ ಸೇತುವೆ, 64 ಕೋಟಿ ವೆಚ್ಚ, ಶೀಘ್ರವೇ ಕಾಮಗಾರಿ ಪೂರ್ಣ: ಸಚಿವ ದಿನೇಶ್ ಗುಂಡೂರಾವ್

ಮಂಗಳೂರು: ಸುಲ್ತಾನ್ ಬತ್ತೇರಿ ಬಳಿ ಫಲ್ಗುಣಿ ನದಿಯಿಂದ ತಣ್ಣೀರುಬಾವಿ ಸಂಪರ್ಕಸುವ ಬೋ ಸ್ಟ್ರಿಂಗ್ ಸೇತುವೆ ಕಾಮಗಾರಿ ಸೆಪ್ಟಂಬರ್‌ಗೆ ಪೂರ್ಣಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ನಂತರ ಸುದ್ದಿಗಾರರಿಗೆ ತಿಳಿಸಿದರು. ಸುಲ್ತಾನ್ ಬತ್ತೇರಿಯಿಂದ ತಣ್ಣೀರುಬಾವಿಗೆ ಸಂಪರ್ಕ ಕಲ್ಪಿಸುವ ಸೇತುವೆ ಕಾಮಗಾರಿ ನಡೆಯುತ್ತಿದ್ದು, ಅಲ್ಲಿನ ಜನರು ಮಂಗಳೂರಿನ ನಗರಕ್ಕೆ ಬಂದು ಹೋಗಿ ಮಾಡುವುದಕ್ಕೆ ಸುಲಭವಾಗಲಿದೆ. ಈಗ ಜನರು ಫೆರ್ರಿ ಮೂಲಕ ಅಥವಾ ಸುತ್ತು ಬಳಸಿ ಸುಮಾರು ಅರ್ಧ ಗಂಟೆ ದಾರಿ […]

Continue Reading

17, 18 ರಂದು ಕದ್ರಿ ಪಾರ್ಕ್ ನಲ್ಲಿ ರಾಜ್ಯ ಮಟ್ಟದ ಗೇರು ಮೇಳ, ಕಾರ್ಯಾಗಾರ, ಪೋಸ್ಟರ್ ಬಿಡುಗಡೆಗೊಳಿಸಿದ ಸ್ಪೀಕರ್ ಯು.ಟಿ. ಖಾದರ್

ಮಂಗಳೂರು: ಕರಾವಳಿಯ ವಾಣಿಜ್ಯ ಬೆಳೆ ಗೇರು ಬೆಳೆಯ ಮಹತ್ವದ ಕುರಿತು ಬೆಳೆಗಾರರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ನಿಟ್ಟಿನಲ್ಲಿ ಗೇರು ಮೇಳ ಪ್ರಮುಖ ಹೆಜ್ಜೆಯಾಗಿದೆ ಎಂದು ಸ್ಪೀಕರ್ ಯು. ಟಿ. ಖಾದರ್ ಅವರು ಹೇಳಿದರು. ಶನಿವಾರ ಕರ್ನಾಟಕ ಗೇರು ಅಭಿವೃದ್ಧಿ ನಿಗಮ ನಿಯಮಿತ ಹಾಗೂ ರಾಜ್ಯ ಅರಣ್ಯ ಇಲಾಖೆಯ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಗೇರು ಮೇಳದ ಭಿತ್ತಿ ಪತ್ರ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕರಾವಳಿಯಲ್ಲಿ ಗೇರು ಉದ್ಯಮ ಸಾಕಷ್ಟು ಕುಟುಂಬಕ್ಕೆ ಆಧಾರ ಆಗಿತ್ತು. ಬೆಳೆ ಕುಂಠಿತ ಆದ ಕಾರಣ […]

Continue Reading