ಜಂಕ್ಷನ್‌ಗಳಲ್ಲಿ ಟ್ರಾಫಿಕ್ ಸಮಸ್ಯೆಗೆ ಬ್ರೇಕ್, ಒತ್ತುವರಿ, ಬೀದಿ ವ್ಯಾಪಾರ, ಅಕ್ರಮ ಪಾರ್ಕಿಂಗ್ ತೆರವಿಗೆ ಜಂಟಿ ಕಾರ್ಯಾಚರಣೆ ಡಿಸಿ ದರ್ಶನ್

ಮಂಗಳೂರು: ನಗರದ ಪ್ರಮುಖ ಜಂಕ್ಷನ್‌ಗಳು ಹಾಗೂ ವೃತ್ತಗಳಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿರುವ ಒತ್ತುವರಿ, ಅಕ್ರಮ ಪಾರ್ಕಿಂಗ್ ಮತ್ತು ಬೀದಿ ವ್ಯಾಪಾರ ತೆರವಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಹಲವು ಜಂಕ್ಷನ್‌ಗಳು ಮತ್ತು ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರಿಂದ ನಿರಂತರ ದೂರುಗಳು ಬರುತ್ತಿವೆ. ಈ ಹಿನ್ನೆಲೆಯಲ್ಲಿ ಸಂಬಂಧಿತ ಇಲಾಖೆಗಳು […]

Continue Reading

ತಾಯಿಯ ನೆನಪು ಚಿರಸ್ಥಾಯಿಗೊಳಿಸಿದ ಪುತ್ರರು, ಬಡ ಕುಟುಂಬಕ್ಕೆ 10 ಲಕ್ಷ ವೆಚ್ಚದ ಮನೆ ನಿರ್ಮಾಣ

ಮಂಗಳೂರು: ತಾಯಿಯ ಸ್ಮರಣೆಯನ್ನು ಅರ್ಥಪೂರ್ಣ ಸಾಮಾಜಿಕ ಸೇವೆಯ ಮೂಲಕ ಆಚರಿಸುವ ಅಪರೂಪದ ಉದಾಹರಣೆಗೆ ಮೂಡುಶೆಡ್ಡೆ ಸಾಕ್ಷಿಯಾಯಿತು. ದಿವಂಗತ ದೇವಕಿ ಸಂಜೀವ ಶೆಟ್ಟಿ ಅವರ ನಾಲ್ಕನೇ ವರ್ಷದ ಪುಣ್ಯಸ್ಮರಣೆಯ ಅಂಗವಾಗಿ ಅವರ ಪುತ್ರರು ಕೊರಗ ಸಮುದಾಯದ ಬಡ ಕುಟುಂಬಕ್ಕೆ ನೂತನ ಮನೆ ನಿರ್ಮಿಸಿಕೊಟ್ಟು ಮಾನವೀಯತೆ ಮೆರೆದರು. ಮೂಡುಶೆಡ್ಡೆ ಹೊಸಲಕ್ಕೆಯಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ನೂತನ ಮನೆಯ ಕೀಲಿಯನ್ನು ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಅತಿಥಿಗಳು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ವಕೀಲ ಉಮೇಶ್ ಶೆಟ್ಟಿ ಹೊಸಲಕ್ಕೆ, ತಮ್ಮ ತಾಯಿ […]

Continue Reading

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸಚಿವ ಖಾದರ್ ಖಡಕ್ ಎಚ್ಚರಿಕೆ

ಮಂಗಳೂರು: ಮಳೆಗಾಲದಲ್ಲಿ ರಸ್ತೆ ಹೊಂಡಗಳಲ್ಲಿ ನೀರು ನಿಂತು ಅಪಘಾತ ಸಂಭವಿಸಿ ಸಾರ್ವಜನಿಕರ ಪ್ರಾಣಹಾನಿಯಾದರೆ ಸಂಬಂಧಿಸಿದ ಇಲಾಖೆಯ ಇಂಜಿನಿಯರ್‌ಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಎಚ್ಚರಿಕೆ ನೀಡಿದರು. ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಳೆಗಾಲದ ಸಿದ್ಧತೆ ಕುರಿತು ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಮಳೆಗಾಲದಲ್ಲಿ ಎದುರಾಗುವ ಯಾವುದೇ ವಿಪತ್ತುಗಳನ್ನು ಅಧಿಕಾರಿಗಳು ಪರಸ್ಪರ ಸಮನ್ವಯದೊಂದಿಗೆ ನಿರ್ವಹಿಸಬೇಕು ಎಂದು ಸೂಚಿಸಿದರು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ರಸ್ತೆಯಲ್ಲಿ […]

Continue Reading

ಮಂಗಳೂರಿನ ವೆನ್ಲಾಕ್‌, ಲೇಡಿಗೋಷನ್‌ಗೆ ಸ್ಟಾಫ್ ನರ್ಸ್ ನೇಮಕ ಶೀಘ್ರ: ಸಚಿವ ಯು. ಟಿ. ಖಾದರ್

ಮಂಗಳೂರು: ನಗರದ ವೆನ್ಲಾಕ್ ಹಾಗೂ ಲೇಡಿಗೋಷನ್ ಸರ್ಕಾರಿ ಆಸ್ಪತ್ರೆಗಳಲ್ಲಿ ಉಂಟಾಗಿರುವ ಸ್ಟಾಫ್ ನರ್ಸ್ ಕೊರತೆಯನ್ನು ಶೀಘ್ರದಲ್ಲೇ ಬಗೆಹರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಆರೋಗ್ಯ ಇಲಾಖೆಯ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಲೇಡಿಗೋಷನ್ ಹೆರಿಗೆ ಆಸ್ಪತ್ರೆಗೆ 22 ಹಾಗೂ ವೆನ್ಲಾಕ್ ಆಸ್ಪತ್ರೆಗೆ 10 ಸ್ಟಾಫ್ ನರ್ಸ್‌ಗಳ ತುರ್ತು ಅಗತ್ಯವಿದೆ. ತಲಾ17 ಸಾವಿರ ವೇತನದ ಆಧಾರದಲ್ಲಿ ತಕ್ಷಣ ನೇಮಕಾತಿ ಆದೇಶ […]

Continue Reading

ಅಗಸ್ಟ್‌ನಲ್ಲಿ ಬೆಂಗಳೂರಿನಲ್ಲಿ ಅಖಿಲ ಭಾರತ ಫುಟ್‌ಬಾಲ್ ಟೂರ್ನಿ

ಬೆಂಗಳೂರು: 15 ವರ್ಷ ವಯೋಮಿತಿಯೊಳಗಿನ ಬಾಲಕರಿಗಾಗಿ 14 ನೇ ಅಖಿಲ ಭಾರತ ಫುಟ್‌ಬಾಲ್ (5–ಎ–ಸೈಡ್) ಟೂರ್ನಿಯು ಆಗಸ್ಟ್ 23 ಮತ್ತು 24ರಂದು ಇಲ್ಲಿನ ಕುಕ್‌ಟೌನ್‌ ರಶ್ ಅರೆನಾ ಫುಟ್‌ಬಾಲ್ ಮೈದಾನದಲ್ಲಿ ನಡೆಯಲಿದೆ ಎಂದು ಆಯೋಜಕರಾದ ಡೆಂಜಿಲ್ ಫರ್ನಾಂಡಿಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶಾಲೆಗಳು, ಕ್ಲಬ್‌ಗಳು, ಕ್ರೀಡಾ ಅಕಾಡೆಮಿಗಳು, ಸಂಘಗಳು ಹಾಗೂ ವಿವಿಧ ಕ್ರೀಡಾ ಗುಂಪುಗಳಿಗೆ ಟೂರ್ನಿಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. 2011ರ ಜನವರಿ 1 ಅಥವಾ ನಂತರ ಜನಿಸಿದ ಆಟಗಾರರು ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಅರ್ಹರಾಗಿರುತ್ತಾರೆ ಎಂದು ತಿಳಿಸಿದ್ದಾರೆ. […]

Continue Reading

ವಿದ್ಯಾರ್ಥಿಗಳು ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಲಿ: ಡಾ. ಎಂ.ಬಿ. ಪುರಾಣಿಕ್

ತಲಪಾಡಿ: ಶಾರದಾ ವಿದ್ಯಾನಿಕೇತನ ಪದವಿಪೂರ್ವ ಕಾಲೇಜಿನ ಶೈಕ್ಷಣಿಕ ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರಿಗಾಗಿ ಆಯೋಜಿಸಿದ್ದ ಓರಿಯೆಂಟೇಶನ್ ಕಾರ್ಯಕ್ರಮ ಭಾನುವಾರ ಶಾರದಾ ವಿದ್ಯಾನಿಕೇತನ ಕ್ಯಾಂಪಸ್‌ನ ಭೂವರಾಹ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಎಂ.ಬಿ. ಪುರಾಣಿಕ್, ವಿದ್ಯಾರ್ಥಿಗಳು ಸಂಸ್ಥೆಯು ಒದಗಿಸುವ ವಿವಿಧ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಜೀವನದಲ್ಲಿ ಉನ್ನತ ಸಾಧನೆ ಮಾಡಬೇಕು ಎಂದು ಕರೆ ನೀಡಿದರು. ತಮ್ಮ ವಿದ್ಯಾರ್ಥಿ ಜೀವನದ ಅನುಭವಗಳನ್ನು ಹಂಚಿಕೊಂಡ ಅವರು, ಪೋಷಕರಿಗೆ ಗೌರವ […]

Continue Reading

ಜೂನ್ 10 ರಿಂದ ಕರಾವಳಿಯಲ್ಲಿ ಮುಂಗಾರು ಚುರುಕು; ಜಿಲ್ಲೆಯಲ್ಲಿ ಮತ್ತೆ ಮಳೆ ಚಟುವಟಿಕೆ ಆರಂಭ

ಮಂಗಳೂರು: ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸೋಮವಾರ ಮೋಡ ಕವಿದ ವಾತಾವರಣ ಮುಂದುವರೆದಿದ್ದು, ದಿನವಿಡೀ ಹವಾಮಾನದಲ್ಲಿ ಏರುಪೇರು ಕಂಡುಬಂತು. ಜಿಲ್ಲೆಯ ಹಲವೆಡೆ ಬಿಟ್ಟುಬಿಟ್ಟು ಮಳೆಯಾಗಿದ್ದು, ಸಂಜೆ ವೇಳೆಗೆ ಬೆಳ್ತಂಗಡಿ, ಸುಳ್ಯ ಹಾಗೂ ಪುತ್ತೂರು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಮಂಗಳೂರು, ಉಳ್ಳಾಲ, ಬಂಟ್ವಾಳ ಮತ್ತು ಮೂಲ್ಕಿ ತಾಲೂಕಿನ ಕೆಲವೆಡೆ ಸಾಧಾರಣ ಮಳೆಯಾದ ಬಗ್ಗೆ ವರದಿಯಾಗಿದೆ. ಕಳೆದ ಕೆಲವು ದಿನಗಳಿಂದ ಕುಂಠಿತಗೊಂಡಿದ್ದ ಮಳೆ ಚಟುವಟಿಕೆ ಮತ್ತೆ ಚುರುಕುಗೊಳ್ಳುವ ನಿರೀಕ್ಷೆ ಇದೆ. ಜಿಲ್ಲಾಡಳಿತದ ಮಳೆ ಅಂಕಿ-ಅಂಶಗಳ […]

Continue Reading

ಕರಿಕಾಡ ಖ್ಯಾತಿಯ ಕಾಡ ನಟರಾಜ್‌ಗೆ ಡಬಲ್ ಸಂಭ್ರಮ, ಜನ್ಮದಿನದಂದೇ ಅಭಿನಯಕ್ಕೆ ಮೆಚ್ಚುಗೆಯ ಮಳೆ

ಬೆಂಗಳೂರು:‘ ಕರಿಕಾಡ’ ಚಿತ್ರದ ಮೂಲಕ ಸಿನಿಪ್ರಿಯರ ಗಮನ ಸೆಳೆದಿರುವ ನಟ ಕಾಡ ನಟರಾಜ್ ಅವರಿಗೆ ಈ ಬಾರಿಯ ಜನ್ಮದಿನ ಡಬಲ್ ಖುಷಿ ತಂದಿದೆ. ಜೂನ್ 6ರಂದು ಜನ್ಮದಿನ ಆಚರಿಸಿಕೊಂಡ ನಟರಾಜ್, ತಮ್ಮ ಅಭಿನಯಕ್ಕೆ ದೊರೆಯುತ್ತಿರುವ ಮೆಚ್ಚುಗೆಯೇ ಈ ವರ್ಷದ ದೊಡ್ಡ ಉಡುಗೊರೆ ಎಂದು ಸಂತಸ ಹಂಚಿಕೊಂಡಿದ್ದಾರೆ. ಗಿಲ್ಲಿ ವೆಂಕಟೇಶ್ ನಿರ್ದೇಶನದ ‘ಕರಿಕಾಡ’ ಚಿತ್ರದಲ್ಲಿ ಶೀರ್ಷಿಕೆ ಪಾತ್ರದಲ್ಲಿ ನಟಿಸಿದ್ದ ಕಾಡ ನಟರಾಜ್, ಹಳ್ಳಿ ಯುವಕನ ಪಾತ್ರವನ್ನು ಸಹಜವಾಗಿ ನಿರ್ವಹಿಸಿ ಪ್ರೇಕ್ಷಕರ ಮನ ಗೆದ್ದಿದ್ದರು. ಚಿತ್ರ ಬಿಡುಗಡೆಯಾದಾಗಲೇ ಅವರ ಅಭಿನಯಕ್ಕೆ […]

Continue Reading

ಸಿಇಟಿ ಫಲಿತಾಂಶದಲ್ಲಿ ಮಂಗಳೂರಿನ ಎಕ್ಸ್ಪರ್ಟ್ ಕಾಲೇಜು ಮೇಲುಗೈ, 15 ರ‍್ಯಾಂಕ್‌; ಹೊಸ ದಾಖಲೆ

ಮಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶದಲ್ಲಿ ಮಂಗಳೂರಿನ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮೆರೆದಿದ್ದಾರೆ. ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆದ ಪರೀಕ್ಷೆಯ ಆರು ವಿಭಾಗಗಳಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಟಾಪ್-10 ಪಟ್ಟಿಯಲ್ಲಿ ಒಟ್ಟು 15 ರ‍್ಯಾಂಕ್‌ಗಳನ್ನು ಪಡೆದು ಹೊಸ ಇತಿಹಾಸ ನಿರ್ಮಿಸಿದ್ದಾರೆ. ಟಾಪ್-10 ರ‍್ಯಾಂಕ್‌ಗಳಲ್ಲಿ ಮೂವರು ವಿದ್ಯಾರ್ಥಿಗಳು 3ನೇ ರ‍್ಯಾಂಕ್, ಮೂವರು 4ನೇ ರ‍್ಯಾಂಕ್, ಒಬ್ಬ ವಿದ್ಯಾರ್ಥಿ 6ನೇ ರ‍್ಯಾಂಕ್ , ಮೂವರು 7ನೇ […]

Continue Reading

ಕೇರಳಕ್ಕೆ ಮುಂಗಾರು ಪ್ರವೇಶ: ಇನ್ನೆರಡು ದಿನದಲ್ಲಿ ಕರ್ನಾಟಕಕ್ಕೂ ಮಳೆ ಅಬ್ಬರ!ವಾಡಿಕೆಗಿಂತ 3 ದಿನ ತಡ

ಬೆಂಗಳೂರು: ನೈಋತ್ಯ ಮುಂಗಾರು ಗುರುವಾರ ಕೇರಳ ಕರಾವಳಿಯನ್ನು ಪ್ರವೇಶಿಸಿದ್ದು, ವಾಡಿಕೆಗಿಂತ ಮೂರು ದಿನ ತಡವಾಗಿ ಮುಂಗಾರು ಆರಂಭವಾಗಿದೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲೂ ಇನ್ನೆರಡು ದಿನಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಮುಂಗಾರು ಅಧಿಕೃತವಾಗಿ ಯಾವ ದಿನ ಪ್ರವೇಶಿಸಲಿದೆ ಎಂಬುದನ್ನು ಮುಂಗಾರು ಗಾಳಿಯ ಚಲನವಲನ ಮತ್ತು ವಾತಾವರಣದ ಸ್ಥಿತಿಗತಿಗಳನ್ನು ಪರಿಶೀಲಿಸಿದ ಬಳಿಕ ಘೋಷಿಸಲಾಗುವುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ರಾಜ್ಯದ ಹಲವೆಡೆ ಮಳೆಯ ಚಟುವಟಿಕೆ ಚುರುಕುಗೊಂಡಿದ್ದು, […]

Continue Reading