ಮಳೆಗಾಲದಲ್ಲಿ ಹೊಸ ಕಾಮಗಾರಿಗಳಿಗೆ ಬ್ರೇಕ್: ಜಿಲ್ಲಾಧಿಕಾರಿ ದರ್ಶನ್ ಕಠಿಣ ಎಚ್ಚರಿಕೆ
ಮಂಗಳೂರು: ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ಮಳೆಗಾಲಕ್ಕೆ ಸಂಬಂಧಿಸಿದ ಅಗತ್ಯ ಕಾಮಗಾರಿಗಳನ್ನು ಹೊರತುಪಡಿಸಿ ಯಾವುದೇ ಹೊಸ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳದಂತೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಿಪತ್ತು ನಿರ್ವಹಣಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಈಗಾಗಲೇ ವಿವಿಧ ಯೋಜನೆಗಳಿಗಾಗಿ ಅಗೆದಿರುವ ರಸ್ತೆಗಳನ್ನು ಕೂಡಲೇ ಯಥಾಸ್ಥಿತಿಗೆ ತಂದು ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಸೂಚಿಸಿದರು. ಮಳೆ ನೀರಿನ ಸರಾಗ ಹರಿವಿಗೆ ಅಡ್ಡಿಯಾಗಿರುವ ಒತ್ತುವರಿಗಳನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಬೇಕು. […]
Continue Reading