ಸಹ್ಯಾದ್ರಿ ಕಾಲೇಜು–ಕ್ರಿಸ್ತು ಜಯಂತಿ ವಿವಿ ನಡುವೆ ಶೈಕ್ಷಣಿಕ ಸಹಕಾರ ಒಪ್ಪಂದಕ್ಕೆ ಸಹಿ

ಮಂಗಳೂರು: ಇಲ್ಲಿನ ಸಹ್ಯಾದ್ರಿ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಕಾಲೇಜು ಹಾಗೂ ಬೆಂಗಳೂರಿನ ಕ್ರಿಸ್ತು ಜಯಂತಿ ಡೀಮ್ಡ್ ಟು ಬಿ ವಿವಿ ನಡುವೆ ಶೈಕ್ಷಣಿಕ ಸಹಕಾರ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಸಹ್ಯಾದ್ರಿ ಕಾಲೇಜು ಆವರಣದಲ್ಲಿ ನಡೆದ ಸಮಾರಂಭದಲ್ಲಿ ಒಪ್ಪಂದ ಕಾರ್ಯಕ್ರಮ ನೆರವೇರಿತು. ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ ಕುಲಪತಿ ರೆವ್. ಡಾ. ಅಗಸ್ಟಿನ್ ಜಾರ್ಜ್ ಸಿ.ಎಂ.ಐ ಹಾಗೂ ಮುಖ್ಯ ಮಾನವ ಸಂಪನ್ಮೂಲ ಅಧಿಕಾರಿ ರೆವ್. ಫಾ. ಜೋಶಿ ಮ್ಯಾಥ್ಯೂ ಸಿ.ಎಂ.ಐ ಇದ್ದರು. ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜಿನ ಸಂಸ್ಥಾಪಕ ಡಾ. ಮಂಜುನಾಥ […]

Continue Reading

16ನೇ ಆವೃತ್ತಿಯ ಆಳ್ವಾಸ್ ಪ್ರಗತಿ ಉದ್ಯೋಗ ಮೇಳ ಅಗಸ್ಟ್ 7, 8ಕ್ಕೆ, ಗ್ರಾಮೀಣ ಮಟ್ಟದ ಪ್ರತಿಭೆಗಳಿಗೆ ಉದ್ಯೋಗ ಒದಗಿಸುವ ವೇದಿಕೆ: ಡಾ. ಮೋಹನ್ ಆಳ್ವ

ಮಂಗಳೂರು: ಗ್ರಾಮೀಣ ಪ್ರತಿಭೆಗಳಿಗೆ ಗುಣಮಟ್ಟದ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸುತ್ತಿರುವ 16ನೇ ಆವೃತ್ತಿಯ ಆಳ್ವಾಸ್ ಪ್ರಗತಿ ಉದ್ಯೋಗ ಮೇಳ ಆಗಸ್ಟ್ 7 ಮತ್ತು 8ರಂದು ಮೂಡುಬಿದಿರೆಯ ವಿದ್ಯಾಗಿರಿ ಆವರಣದಲ್ಲಿ ನಡೆಯಲಿದೆ. ಈ ಬಾರಿ 300ಕ್ಕೂ ಅಧಿಕ ಕಂಪೆನಿಗಳು ಭಾಗವಹಿಸುವ ನಿರೀಕ್ಷೆಯಿದ್ದು, ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯಗಳ ಅಭ್ಯರ್ಥಿಗಳಿಗೆ ಸ್ಥಳೀಯ, ರಾಷ್ಟ್ರೀಯ ಹಾಗೂ ಅಂತರ ರಾಷ್ಟ್ರೀಯ ಮಟ್ಟದ ಉದ್ಯೋಗಾವಕಾಶಗಳು ಲಭ್ಯವಾಗಲಿವೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅವರು ಶನಿವಾರ ಸುದ್ದಿಗೋಷ್ಟಿಯಲ್ಲಿ […]

Continue Reading

ದ.ಕ. ಜಿಲ್ಲೆಯಲ್ಲಿ12 ಕೇಂದ್ರಗಳಲ್ಲಿ ನೀಟ್ ಪರೀಕ್ಷೆ, ಬಿಗಿ ಭದ್ರತೆ: ಹೆಚ್ಚುವರಿ ಜಿಲ್ಲಾಧಿಕಾರಿ ರಾಜು

ಮಂಗಳೂರು: ವೈದ್ಯಕೀಯ ಶಿಕ್ಷಣ ಪ್ರವೇಶಕ್ಕಾಗಿ ಜೂನ್ 21 ರಂದು ರಾಷ್ಟ್ರಾದ್ಯಂತ ನಡೆಯಲಿರುವ ನೀಟ್ ಪರೀಕ್ಷೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5570 ಅಭ್ಯರ್ಥಿಗಳು ನೋಂದಾಯಿಸಿದ್ದಾರೆ. ಜಿಲ್ಲೆಯ 12 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಎಲ್ಲವೂ ಮಂಗಳೂರು ಮಹಾನಗರ ವ್ಯಾಪ್ತಿಯಲ್ಲಿವೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಪೂರ್ವಭಾವಿ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಕೆ. ಅವರು ಮಾತನಾಡಿ, ಪರೀಕ್ಷೆಯನ್ನು ನಕಲು ಮುಕ್ತ, ಪಾರದರ್ಶಕ ಹಾಗೂ ವ್ಯವಸ್ಥಿತವಾಗಿ ನಡೆಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸೂಚಿಸಿದರು. ಪ್ರತಿ ಕೊಠಡಿಯಲ್ಲಿ ಇಬ್ಬರು ಮೇಲ್ವಿಚಾರಕರು ಇರಲಿದ್ದಾರೆ. ಎನ್‌ಟಿಎ ವತಿಯಿಂದ ಪರೀಕ್ಷಾ […]

Continue Reading

ಮೂಡುಬಿದಿರೆ ಆಳ್ವಾಸ್‌ನ 8 ಮಂದಿ ಸಿಎ ಅಂತಿಮ ಪರೀಕ್ಷೆಯಲ್ಲಿ ವಿಶಿಷ್ಟ ಸಾಧನೆ, ದೀಪಕ್‌ಗೆ 28 ನೇ ರ‍್ಯಾಂಕ್

ಮೂಡುಬಿದಿರೆ : ಮೇ 2026 ರಲ್ಲಿ ನಡೆದ ಸಿಎ ಅಂತಿಮ ಪರೀಕ್ಷೆಯಲ್ಲಿ ಆಳ್ವಾಸ್ ಪದವಿ ಕಾಲೇಜಿನ ದೀಪಕ್ ಹೆಗ್ಡೆ ಅಖಿಲ ಭಾರತ ಮಟ್ಟದಲ್ಲಿ 28ನೇ ರ‍್ಯಾಂಕ್‌ಗಳಿಸುವ ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದಿದ್ದಾರೆ. ಇವರ ಜತೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಒಟ್ಟು 8 ಜನ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಅಮೋಘ ಸಾಧನೆ ಮೆರೆದಿದ್ದಾರೆ. ಸಿಎ ಅಂತಿಮ ಪರೀಕ್ಷೆಯಲ್ಲಿ ದೀಪಕ್ ಹೆಗ್ಡೆ, ನಿತೇಶ್ ಕಾಮತ್, ವೀಕ್ಷಾ ಶೆಟ್ಟಿ, ನಾಗರಾಜ ಮಂಜಿತ್ತಾಯ, ಪ್ರಣವ್ ಎಸ್ ಭಟ್, ವೈಷ್ಣವಿ ಜವಾರ್ ಅಕ್ಷಯ ಬಿಎಸ್, ಸುದೀಪ್ […]

Continue Reading

ನೀಟ್ ಮರು ಪರೀಕ್ಷೆ ಜೂನ್ 21: ಪಾರದರ್ಶಕವಾಗಿ ನಡೆಸಲು ಜಿಲ್ಲಾಧಿಕಾರಿ ಸ್ವರೂಪ ಸೂಚನೆ

ಉಡುಪಿ: ಜಿಲ್ಲೆಯಲ್ಲಿ ಜೂನ್ 21ರಂದು ನಡೆವ ನೀಟ್ (ಯುಜಿ) ಮರು ಪರೀಕ್ಷೆಯನ್ನು ಯಾವುದೇ ಲೋಪದೋಷಗಳಿಲ್ಲದೆ ಪಾರದರ್ಶಕವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಗೊಂದಲವಿಲ್ಲದೆ ನಿರಾಳ ವಾತಾವರಣದಲ್ಲಿ ಪರೀಕ್ಷೆ ನಡೆಯಬೇಕು ಎಂದು ಹೇಳಿದರು. ಜಿಲ್ಲೆಯಲ್ಲಿ ಒಟ್ಟು 6 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 2,970 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಪರೀಕ್ಷೆ ಮಧ್ಯಾಹ್ನ 2 ರಿಂದ […]

Continue Reading

ವಿದ್ಯಾರ್ಥಿನಿಗೆ ಕಿರುಕುಳ ಆರೋಪ, ಕವಿವಿ ಪ್ರಾಧ್ಯಾಪಕ ಅಮಾನತು: ಕುಲಪತಿ ಪ್ರೊ. ಖಾನ್ ಆದೇಶ

ಧಾರವಾಡ: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ದೇವರಾಜನ್ ತಂಗುದೊರೈ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಕುಲಪತಿ ಪ್ರೊ. ಖಾನ್ ಆದೇಶ ಹೊರಡಿಸಿದ್ದಾರೆ. ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ ತೀವ್ರಗೊಂಡ ಬೆನ್ನಲ್ಲೇ ವಿಶ್ವವಿದ್ಯಾಲಯ ಈ ಕ್ರಮ ಕೈಗೊಂಡಿದೆ. ಪಿಎಚ್‌ಡಿ ವಿದ್ಯಾರ್ಥಿನಿಯೊಂದಿಗೆ ಅನೈತಿಕ ವರ್ತನೆ ನಡೆಸಿರುವ ಆರೋಪದ ಜೊತೆಗೆ, ಆಕೆ ಅಧ್ಯಯನವನ್ನು ಮಧ್ಯದಲ್ಲೇ ತೊರೆದ ಬಳಿಕ ಮರಳಿ ಬರಲು ಇತರ ವಿದ್ಯಾರ್ಥಿಗಳ ಮೂಲಕ ಒತ್ತಡ ಹೇರಲಾಗುತ್ತಿತ್ತು ಎಂಬ ಆರೋಪವೂ ಕೇಳಿಬಂದಿದೆ. […]

Continue Reading

ಶ್ರೀನಿವಾಸ ವಿಶ್ವವಿದ್ಯಾಲಯಕ್ಕೆ ಮೂರು ಅಂತರ ರಾಷ್ಟ್ರೀಯ ಪ್ರಶಸ್ತಿ, ಶಿಕ್ಷಣ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು: ಕುಲಾಧಿಪತಿ ಡಾ. ಶ್ರೀನಿವಾಸ ರಾವ್

ಮಂಗಳೂರು: ಸ್ಥಳೀಯ ಪ್ರತಿಭೆಗಳಿಗೆ ಜಾಗತಿಕ ಅವಕಾಶಗಳನ್ನು ಕಲ್ಪಿಸುವುದು” ಎಂಬ ಧ್ಯೇಯದೊಂದಿಗೆ ಶಿಕ್ಷಣ, ಸಂಶೋಧನೆ ಹಾಗೂ ನವೀನತೆಯ ಕ್ಷೇತ್ರದಲ್ಲಿ ನಿರಂತರ ಸಾಧನೆ ಮಾಡುತ್ತಿರುವ ಶ್ರೀನಿವಾಸ ಸಂಸ್ಥೆಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ಮಹತ್ವದ ಸಾಧನೆ ಮಾಡಿವೆ ಎಂದು ಕುಲಾಧಿಪತಿ ಡಾ. ಶ್ರೀನಿವಾಸ ರಾವ್ ತಿಳಿಸಿದರು. ಶಿಕ್ಷಣ ತಜ್ಞ ಹಾಗೂ ಸಂಸ್ಥಾಪಕ ದಿವಂಗತ ಡಾ. ಸಿ. ಎ. ಎ. ರಾಘವೇಂದ್ರ ರಾವ್ ಅವರ ದೂರದೃಷ್ಟಿಯ ಫಲವಾಗಿ ಬೆಳೆದಿರುವ ಈ ಸಂಸ್ಥೆಗಳು ಇಂದು ದೇಶದ ಪ್ರಮುಖ ಉನ್ನತ ಶಿಕ್ಷಣ ಸಮೂಹಗಳಲ್ಲಿ ಒಂದಾಗಿ ಗುರುತಿಸಿಕೊಂಡಿವೆ. ಸಂಸ್ಥೆಯು […]

Continue Reading

ವಿದ್ಯಾರ್ಥಿಗಳು ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಲಿ: ಡಾ. ಎಂ.ಬಿ. ಪುರಾಣಿಕ್

ತಲಪಾಡಿ: ಶಾರದಾ ವಿದ್ಯಾನಿಕೇತನ ಪದವಿಪೂರ್ವ ಕಾಲೇಜಿನ ಶೈಕ್ಷಣಿಕ ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರಿಗಾಗಿ ಆಯೋಜಿಸಿದ್ದ ಓರಿಯೆಂಟೇಶನ್ ಕಾರ್ಯಕ್ರಮ ಭಾನುವಾರ ಶಾರದಾ ವಿದ್ಯಾನಿಕೇತನ ಕ್ಯಾಂಪಸ್‌ನ ಭೂವರಾಹ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಎಂ.ಬಿ. ಪುರಾಣಿಕ್, ವಿದ್ಯಾರ್ಥಿಗಳು ಸಂಸ್ಥೆಯು ಒದಗಿಸುವ ವಿವಿಧ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಜೀವನದಲ್ಲಿ ಉನ್ನತ ಸಾಧನೆ ಮಾಡಬೇಕು ಎಂದು ಕರೆ ನೀಡಿದರು. ತಮ್ಮ ವಿದ್ಯಾರ್ಥಿ ಜೀವನದ ಅನುಭವಗಳನ್ನು ಹಂಚಿಕೊಂಡ ಅವರು, ಪೋಷಕರಿಗೆ ಗೌರವ […]

Continue Reading

ಸಿಇಟಿ ಫಲಿತಾಂಶದಲ್ಲಿ ಮಂಗಳೂರಿನ ಎಕ್ಸ್ಪರ್ಟ್ ಕಾಲೇಜು ಮೇಲುಗೈ, 15 ರ‍್ಯಾಂಕ್‌; ಹೊಸ ದಾಖಲೆ

ಮಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶದಲ್ಲಿ ಮಂಗಳೂರಿನ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮೆರೆದಿದ್ದಾರೆ. ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆದ ಪರೀಕ್ಷೆಯ ಆರು ವಿಭಾಗಗಳಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಟಾಪ್-10 ಪಟ್ಟಿಯಲ್ಲಿ ಒಟ್ಟು 15 ರ‍್ಯಾಂಕ್‌ಗಳನ್ನು ಪಡೆದು ಹೊಸ ಇತಿಹಾಸ ನಿರ್ಮಿಸಿದ್ದಾರೆ. ಟಾಪ್-10 ರ‍್ಯಾಂಕ್‌ಗಳಲ್ಲಿ ಮೂವರು ವಿದ್ಯಾರ್ಥಿಗಳು 3ನೇ ರ‍್ಯಾಂಕ್, ಮೂವರು 4ನೇ ರ‍್ಯಾಂಕ್, ಒಬ್ಬ ವಿದ್ಯಾರ್ಥಿ 6ನೇ ರ‍್ಯಾಂಕ್ , ಮೂವರು 7ನೇ […]

Continue Reading

ಕೆಸಿಇಟಿ ಫಲಿತಾಂಶ, ಶಕ್ತಿ ಕಾಲೇಜಿನ ಬಿಪಿಒ ವಿಭಾಗದಲ್ಲಿ ಲಿಖಿತ್ ಗೌಡಗೆ 221ನೇ ರ‍್ಯಾಂಕ್

ಮಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಕೆಸಿಇಟಿ-2026 ಪರೀಕ್ಷೆಯಲ್ಲಿ ಶಕ್ತಿನಗರದ ಶಕ್ತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮೆರೆದಿದ್ದಾರೆ. ವಿಜ್ಞಾನ ವಿಭಾಗದ ವಿದ್ಯಾರ್ಥಿ ಲಿಖಿತ್ ಗೌಡ ಎಸ್.ಡಿ. ಅವರು ಬಿಪಿಒ ವಿಭಾಗದಲ್ಲಿ 221ನೇ ರ‍್ಯಾಂಕ್ ಗಳಿಸಿದ್ದು, ಎಂಜಿನಿಯರಿಂಗ್ ವಿಭಾಗದಲ್ಲಿ 2367ನೇ ರ‍್ಯಾಂಕ್ ಪಡೆದಿದ್ದಾರೆ. ಪವನ್ ಮಲಗಿ ನರ್ಸಿಂಗ್ ವಿಭಾಗದಲ್ಲಿ 1428ನೇ ಹಾಗೂ ವೆಟರಿನರಿ ಸೈನ್ಸ್ ವಿಭಾಗದಲ್ಲಿ 1424ನೇ ರ‍್ಯಾಂಕ್ ಗಳಿಸಿದ್ದಾರೆ. ಸುಹಾಸ್ ಅವರು ನರ್ಸಿಂಗ್‌ನಲ್ಲಿ 1661ನೇ, ನ್ಯಾಚುರೋಪತಿ ಮತ್ತು ಯೋಗ ವಿಭಾಗದಲ್ಲಿ 1153ನೇ ಹಾಗೂ […]

Continue Reading