ಜೆಇಇ ಅಡ್ವಾನ್ಸ್ : ಮೂಡುಬಿದಿರೆ ಆಳ್ವಾಸ್ ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ, ಡಾ. ಮೋಹನ್ ಆಳ್ವ ಶ್ಲಾಘನೆ

ಮೂಡುಬಿದಿರೆ: ದೇಶದ ಪ್ರತಿಷ್ಠಿತ ಐಐಟಿಗಳಲ್ಲಿ ಎಂಜಿನಿಯರಿAಗ್ ಶಿಕ್ಷಣದ ಪ್ರವೇಶಕ್ಕಾಗಿ ನಡೆಯುವ ಅಖಿಲ ಭಾರತ ಮಟ್ಟದ ಜೆಇಇ ಅಡ್ವಾನ್ಸ್ 2026 ಪರೀಕ್ಷೆಯ ಫಲಿತಾಂಶದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ 17 ವಿದ್ಯಾರ್ಥಿಗಳು ಅಖಿಲ ಭಾರತ ಮಟ್ಟದಲ್ಲಿ ಶ್ರೇಷ್ಠ ಸಾಧನೆ ಮೆರೆದು ಗಮನ ಸೆಳೆದಿದ್ದಾರೆ. ಜನರಲ್ ಹಾಗೂ ಕೆಟಗರಿ ವಿಭಾಗದ ಅಖಿಲ ಭಾರತ ಮಟ್ಟದಲ್ಲಿ ಸ್ವಾತಿ ತಲವಾರ್ (1513 ರ‍್ಯಾಂಕ್) ಹರ್ಷವರ್ಧನ್ ಕೆಪಿ(1698 ರ‍್ಯಾಂಕ್), ಮೆಲ್ರೋಯ್ ಕ್ಯಾಸ್ಟಲಿನೋ(1733 ರ‍್ಯಾಂಕ್), ಕೃತಿಕ್ ಬಿ(1795 ರ‍್ಯಾಂಕ್), ನೀಲಾಂಬಿಕ(2223 ರ‍್ಯಾಂಕ್), ಮಾನಸ ಕೆಎಸ್(2935 ರ‍್ಯಾಂಕ್), ಪಿಯೂಷ್ […]

Continue Reading

ರಥಬೀದಿ ಕಾಲೇಜು ವಿದ್ಯಾರ್ಥಿಗಳಿಂದ ಬೀದಿ ನಾಟಕ; ಸಾರ್ವಜನಿಕರಲ್ಲಿ ಜಾಗೃತಿಯ ಹೆಜ್ಜೆ

ಮಂಗಳೂರು: ತೃತೀಯ ಲಿಂಗೀಯರ ಬದುಕಿನ ವಾಸ್ತವತೆ, ಅವರು ಸಮಾಜದಲ್ಲಿ ಎದುರಿಸುವ ತಾರತಮ್ಯ ಹಾಗೂ ಸಮಾನ ಹಕ್ಕುಗಳ ಅಗತ್ಯತೆಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಲಾಲ್‌ಬಾಗ್ ಆವರಣದಲ್ಲಿ ಪ್ರದರ್ಶಿಸಲಾದ ಬೀದಿ ನಾಟಕ ಸಾರ್ವಜನಿಕರ ಗಮನ ಸೆಳೆಯಿತು. ಡಾ. ಪಿ. ದಯಾನಂದ ಪೈ–ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತ್ತರ ಸಮಾಜ ಕಾರ್ಯ ಅಧ್ಯಯನ ವಿಭಾಗದ ಪಠ್ಯೇತರ ಚಟುವಟಿಕೆಯ ಅಂಗವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ನಾಟಕದಲ್ಲಿ ತೃತೀಯ ಲಿಂಗೀಯರು ಬಾಲ್ಯದಿಂದಲೇ ಅನುಭವಿಸುವ […]

Continue Reading

ಕಾರವಾರ ಭಝಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮಕ್ಕಳಿಗೆ ಅದ್ದೂರಿ ಸ್ವಾಗತ; ಶಾಲಾ ಪ್ರಾರಂಭೋತ್ಸವ ಸಂಭ್ರಮ

ಕಾರವಾರ: ನಗರದ ಭಝಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಹಾಗೂ ಪಾಲಕ–ಪೋಷಕರ ಸಭೆಯನ್ನು ಸಂಭ್ರಮದಿಂದ ಆಯೋಜಿಸಲಾಯಿತು. ಶಾಲೆಗೆ ಹೊಸದಾಗಿ ಸೇರ್ಪಡೆಯಾದ ಮಕ್ಕಳಿಗೆ ಆತ್ಮೀಯ ಸ್ವಾಗತ ಕೋರಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯ ಶಿಕ್ಷಕಿ ಶೀಲಾ ಪಿ. ಬಂಟ್ ಅವರು, ಉತ್ತಮ ಕಲಿಕೆ–ಉಜ್ವಲ ಭವಿಷ್ಯ ಎಂಬ ಶಿಕ್ಷಣ ಇಲಾಖೆಯ ಧ್ಯೇಯವನ್ನು ಸಾಕಾರಗೊಳಿಸಲು ಪಾಲಕರು ಮತ್ತು ಶಿಕ್ಷಕರು ಒಟ್ಟಾಗಿ ಕಾರ್ಯನಿರ್ವಹಿಸಬೇಕು ಎಂದರು. ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಾಲೆ ಹಾಗೂ ಪೋಷಕರ ಸಹಭಾಗಿತ್ವ ಮಹತ್ವದ್ದಾಗಿದೆ. ಶಾಲೆಗೆ ಸಂಬಂಧಿಸಿದ ಯಾವುದೇ […]

Continue Reading

ಅಮದಳ್ಳಿಯ ಕರ್ನಾಟಕ ಪಬ್ಲಿಕ್ ಸ್ಕೂಲ್‌, ಜಿಲ್ಲಾ ಮಟ್ಟದ ಶಾಲಾ ಪ್ರಾರಂಭೋತ್ಸವಕ್ಕೆ ಸಿಇಒ ಡಾ. ದಿಲೀಷ್ ಶಶಿ ಅದ್ದೂರಿ ಚಾಲನೆ

ಕಾರವಾರ: ಜಿಲ್ಲೆಯ ಪ್ರತಿಯೊಂದು ಮಗುವಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು. ಶಾಲೆಗಳು ಮಕ್ಕಳ ಕಲಿಕೆಗೆ ಪೂರಕವಾದ ಸ್ನೇಹಪರ ವಾತಾವರಣ ನಿರ್ಮಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದಿಲೀಷ್ ಶಶಿ ಹೇಳಿದರು. ಅಮದಳ್ಳಿಯ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಣವು ಕೇವಲ ಅಕ್ಷರಜ್ಞಾನಕ್ಕೆ ಸೀಮಿತವಲ್ಲ, ಅದು ಮಕ್ಕಳ ಬದುಕು ರೂಪಿಸುವ ಶಕ್ತಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಪ್ರತಿಯೊಂದು ಹಳ್ಳಿಯ ಕೊನೆಯ ಮಗುವಿಗೂ ಉನ್ನತ […]

Continue Reading

ಎಕ್ಸ್ ಪರ್ಟ್ ಪಿಯು ಕಾಲೇಜು: ಜೆಇಇ ಅಡ್ವಾನ್ಸ್ಡ್‌ನಲ್ಲಿ ವಿದ್ಯಾರ್ಥಿಗಳ ಸಾಧನೆಯ ಗರಿ

ಮಂಗಳೂರು: ದೇಶದ ಪ್ರತಿಷ್ಠಿತ ಭಾರತೀಯ ತಾಂತ್ರಿಕ ಶಿಕ್ಷಣ ಸಂಸ್ಥೆಗಳ (ಐಐಟಿ) ಪ್ರವೇಶಕ್ಕಾಗಿ ನಡೆದ ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ಮಂಗಳೂರಿನ ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಜನರಲ್ ಮೆರಿಟ್ ವಿಭಾಗದಲ್ಲಿ ಸುಹಾಸ್ ಬಸನಗೌಡ ಬಾಲನಗೌಡ್ರ 2,593ನೇ ರ‍್ಯಾಂಕ್ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಅರಳೆ ವಿರೂಪಾಕ್ಷಿ 7,885 ನೇ ರ‍್ಯಾಂಕ್, ನಿಖಿಲ್ ಭೂಷಣ್ ಶ್ರೀನಿವಾಸ್ 9,150ನೇ ರ‍್ಯಾಂಕ್ ಹಾಗೂ ಪ್ರಖ್ಯಾತ್ ತಿರುಪತಿರಡ್ಡಿ ನೀಲಣ್ಣವರ್ 9,806 ನೇ ರ‍್ಯಾಂಕ್ ಗಳಿಸಿದ್ದಾರೆ. ಕ್ಯಾಟಗರಿ ವಿಭಾಗದಲ್ಲಿ […]

Continue Reading

ಶಾರದಾ ಪಿಯು ಕಾಲೇಜಿನಲ್ಲಿ ಮಾರ್ಗದರ್ಶನ ಕಾರ್ಯಕ್ರಮ, ಮೌಲ್ಯ ಶಿಕ್ಷಣದ ಪಾಠ ಮಾಡಿದ ಡಾ. ಎಂ.ಬಿ. ಪುರಾಣಿಕ್

ತಲಪಾಡಿ: ಶಾರದಾ ವಿದ್ಯಾನಿಕೇತನ ಪಿ.ಯು. ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರಿಗಾಗಿ ಆಯೋಜಿಸಿದ್ದ ಮಾರ್ಗದರ್ಶನ ಕಾರ್ಯಕ್ರಮ ಕಾಲೇಜಿನ ಭೂ ವರಾಹ ಸಭಾಂಗಣದಲ್ಲಿ ಸೋಮವಾರ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಶಾರದಾ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ ಅಧ್ಯಕ್ಷ ಡಾ. ಎಂ.ಬಿ. ಪುರಾಣಿಕ್, ವಿದ್ಯಾರ್ಥಿಗಳು ತಮ್ಮ ಗುರಿ ಸಾಧನೆಗಾಗಿ ಕಠಿಣ ಪರಿಶ್ರಮ ಮತ್ತು ದೃಢ ಸಂಕಲ್ಪದೊಂದಿಗೆ ಅಧ್ಯಯನ ನಡೆಸಬೇಕು. ಸಂಸ್ಥೆ ಒದಗಿಸುವ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಂಡು ಜೀವನದಲ್ಲಿ ಉನ್ನತ ಸಾಧನೆ ಮಾಡಬೇಕೆಂದು ಕರೆ ನೀಡಿದರು. ನಿರ್ದೇಶಕ ಸಮೀರ್ ಪುರಾಣಿಕ್ […]

Continue Reading

ಮೂಡುಬಿದಿರೆ ಆಳ್ವಾಸ್ ಪದವಿ ಪ್ರದಾನ ಸಮಾರಂಭ, ಪದವಿ ಪ್ರಮಾಣ ಪತ್ರಕ್ಕಿಂತ ಮೌಲ್ಯಗಳೇ ಶ್ರೇಷ್ಠ ಎಂದ ಡಾ. ಚಿನ್ನಪ್ಪ ಗೌಡ

ಮೂಡುಬಿದಿರೆ : ಶಿಕ್ಷಣದ ನಿಜವಾದ ಉದ್ದೇಶವು ಕೇವಲ ಪದವಿ ಪಡೆಯುವುದಲ್ಲ, ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವುದಾಗಿದೆ. ಪದವಿ ಪ್ರಮಾಣಪತ್ರವು ಕೇವಲ ಒಂದು ಕಾಗದದ ತುಣುಕಾಗಿದ್ದು, ಅದಕ್ಕೆ ನಿಜವಾದ ಮೌಲ್ಯ ದೊರೆಯುವುದು ವ್ಯಕ್ತಿಯ ಜ್ಞಾನ, ಸಾಮರ್ಥ್ಯ, ಪ್ರಾಮಾಣಿಕತೆ ಹಾಗೂ ಜೀವನ ಮೌಲ್ಯಗಳಿಂದ ಮಾತ್ರ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ. ಚಿನ್ನಪ್ಪ ಗೌಡ ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಶನಿವಾರ ಆಳ್ವಾಸ್ ನುಡಿಸಿರಿ ವೇದಿಕೆಯಲ್ಲಿ ಆಯೋಜಿಸಲಾದ ಪದವಿ ಪ್ರದಾನ ಸಮಾರಂಭದಲ್ಲಿ ಆಳ್ವಾಸ್‌ನ ವಿವಿಧ ಶಿಕ್ಷಣ ಸಂಸ್ಥೆಗಳ […]

Continue Reading

ಎನ್‌ಎಂಪಿಎ ಇಂಡಿಯನ್ ಓಪನ್ ಆಫ್ ಸರ್ಫಿಂಗ್ : ಅಲೆಗಳ ವಯ್ಯಾರ ಅಬ್ಬರದಲ್ಲಿ ಸರ್ಫರ್ ಗಳ ತೀವ್ರ ಹಣಾಹಣಿ

ಮಂಗಳೂರು: ಇಲ್ಲಿನ ತಣ್ಣೀರು ಭಾವಿಯಲ್ಲಿ ನಡೆಯುತ್ತಿರುವ 7 ನೇ ಆವೃತ್ತಿಯ ಎನ್‌ಎಂಪಿಎ ಇಂಡಿಯನ್ ಓಪನ್ ಆಫ್ ಸರ್ಫಿಂಗ್ ಸ್ಪರ್ಧೆಯ 2ನೇ ದಿನ ಪುರುಷರ ಓಪನ್ ವಿಭಾಗದ ಸೆಮಿಫೈನಲಿಸ್ಟ್‌ಗಳು ಭರ್ಜರಿ ಪ್ರದರ್ಶನ ನೀಡಿದರು. ಶನಿವಾರ ನಡೆದ ಐದು ವಿಭಾಗಗಳಲ್ಲಿ ಒಟ್ಟು ಆರು ಕ್ವಾರ್ಟರ್‌ಫೈನಲ್ ಹಾಗೂ ಆರು ಸೆಮಿಫೈನಲ್ ಪಂದ್ಯಗಳು ನಡೆದವು. ಪುರುಷರ ಮುಕ್ತ ವಿಭಾಗದ ಕ್ವಾರ್ಟರ್‌ ಫೈನಲ್‌ ನಲ್ಲಿ ಕೇರಳದ ರಮೇಶ್ ಬೂದಿಹಾಳ್ 14.83 ಅಂಕ ಗಳಿಸಿ ಅಗ್ರಸ್ಥಾನ ದಾಖಲಿಸಿದರು. ಶ್ರೀಕಾಂತ್ ಡಿ 13 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದ್ದರೆ, […]

Continue Reading

ಸೇವೆಯಲ್ಲಿ ಇರುವ ಶಿಕ್ಷಕರಿಗೂ ಟಿಇಟಿ ಕಡ್ಡಾಯ, ಮರುಪರಿಶೀಲನಾ ಅರ್ಜಿಗಳ ವಜಾ; 2028 ರ ಅಗಸ್ಟ್‌ 31 ರವರೆಗೆ ಸುಪ್ರೀಂ ಗಡುವು ವಿಸ್ತರಣೆ

ನವದೆಹಲಿ: ಸೇವೆಯಲ್ಲಿ ಇರುವ ಶಿಕ್ಷಕರಿಗೂ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಕಡ್ಡಾಯ ಎಂಬ ತನ್ನ ಹಿಂದಿನ ತೀರ್ಪ ಅನ್ನು ಸುಪ್ರೀಂ ಕೋರ್ಟ್ ಮತ್ತೊಮ್ಮೆ ಎತ್ತಿ ಹಿಡಿದಿದೆ. 2025ರ ತೀರ್ಪಿನ ಮರುಪರಿಶೀಲನೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ವಜಾಗೊಳಿಸಿರುವ ನ್ಯಾಯಾಲಯ, ಟಿಇಟಿ ಅರ್ಹತೆ ಪಡೆಯಲು ಶಿಕ್ಷಕರಿಗೆ 2028 ರ ಅಗಸ್ಟ್‌ 31 ರವರೆಗೆ ಕಾಲಾವಕಾಶ ನೀಡಿದೆ. ಮಕ್ಕಳ ಗುಣಮಟ್ಟದ ಶಿಕ್ಷಣದ ಹಕ್ಕು ಸಂರಕ್ಷಿಸುವ ದೃಷ್ಟಿಯಿಂದ ಟಿಇಟಿ ಅಗತ್ಯವಾಗಿದ್ದು, ನಿಗದಿತ ಅವಧಿಯೊಳಗೆ ಅರ್ಹತೆ ಪಡೆಯದ ಶಿಕ್ಷಕರು ಸೇವೆಯಲ್ಲಿ ಮುಂದುವರಿಯಲು ಅವಕಾಶವಿರುವುದಿಲ್ಲ ಎಂದು […]

Continue Reading

ಸೆಮಿಕಂಡಕ್ಟರ್ ಶಿಕ್ಷಣಕ್ಕೆ ಮಂಗಳೂರಿನ ಸಹ್ಯಾದ್ರಿ ಕಾಲೇಜು–ಅನ್ಮಯ ಟೆಕ್ನಾಲಜೀಸ್ ಒಪ್ಪಂದ

ಮಂಗಳೂರು: ಸೆಮಿಕಂಡಕ್ಟರ್‌ ಕೇಂದ್ರಿತ ತಾಂತ್ರಿಕ ಶಿಕ್ಷಣವನ್ನು ಉತ್ತೇಜಿಸುವ ಉದ್ದೇಶದಿಂದ ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್‌ (ಎಸ್‌ಸಿಇಎಂ)ನ ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ ಎಂಜಿನಿಯರಿಂಗ್ ವಿಭಾಗವು ಅನ್ಮಯ ಟೆಕ್ನಾಲಜೀಸ್ ಸಂಸ್ಥೆಯೊಂದಿಗೆ ತಿಳುವಳಿಕೆ ಒಪ್ಪಂದಕ್ಕೆ (ಎಂಒಯು) ಸಹಿ ಹಾಕಿದೆ. ಎಫ್ ಪಿಜಿಎ -ಸ್ಥಳೀಯ ಮತ್ತು ಎಂಬೆಡೆಡ್ ಹಾರ್ಡ್‌ವೇರ್ ಪರಿಹಾರಗಳಲ್ಲಿ ಪರಿಣತಿ ಹೊಂದಿರುವ ಅನ್ಮಯ ಟೆಕ್ನಾಲಜೀಸ್ ಜತೆಗೆ ಮಾಡಿಕೊಂಡಿರುವ ಈ ಸಹಭಾಗಿತ್ವವು ವಿದ್ಯಾರ್ಥಿಗಳಿಗೆ ಸೆಮಿಕಂಡಕ್ಟರ್ ತಂತ್ರಜ್ಞಾನ, ವಿಎಲ್ ಎಸ್ ಐ ವಿನ್ಯಾಸ, ಎಫ್ ಪಿಜಿಎ ಅಭಿವೃದ್ಧಿ, ಎಂಬೆಡೆಡ್ ಸಿಸ್ಟಮ್‌, […]

Continue Reading