ತೂಗುಸೇತುವೆಗಳ ಸರದಾರ ಪದ್ಮಶ್ರೀ ಡಾ. ಗಿರೀಶ್ ಭಾರದ್ವಾಜ್ ನಿಧನಕ್ಕೆ ಸಂಸದ ಕ್ಯಾ. ಚೌಟ ಸಂತಾಪ

ಮಂಗಳೂರು: ವಿಶಿಷ್ಟ ತಂತ್ರಜ್ಞಾನದ ಮೂಲಕ ಪರಿಸರ ಸ್ನೇಹಿ ತೂಗುಸೇತುವೆಗಳನ್ನು ನಿರ್ಮಿಸಿ ದೇಶದ ಗ್ರಾಮೀಣ ಭಾಗಗಳಲ್ಲಿ ಸಂಪರ್ಕ ಕ್ರಾಂತಿಗೆ ಕಾರಣರಾಗಿದ್ದ, ‘ತೂಗುಸೇತುವೆಗಳ ಸರದಾರ’ ಎಂದೇ ಖ್ಯಾತರಾಗಿದ್ದ ತುಳುನಾಡಿನ ಮಹಾನ್ ಸಾಧಕ, ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರ ನಿಧನಕ್ಕೆ ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ದ. ಕ. ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ತಮ್ಮ ಶೋಕ ಸಂದೇಶದಲ್ಲಿ , “ಸಾಮಾನ್ಯ ಹಳ್ಳಿಗಳ ಜನಸಾಮಾನ್ಯರ ಹಾಗೂ ಶಾಲಾ ಮಕ್ಕಳ ಕಷ್ಟಗಳಿಗೆ ಸ್ಪಂದಿಸಿ, ತಮ್ಮ […]

Continue Reading

ತೂಗುಸೇತುವೆಗಳ ಸರದಾರ, ಪದ್ಮಶ್ರೀ ವಿಜೇತ ಗಿರೀಶ್ ಭಾರಧ್ವಾಜ್ ನಿಧನಕ್ಕೆ ಸಚಿವ ಯು.ಟಿ. ಖಾದರ್ ಸಂತಾಪ

ಮಂಗಳೂರು: ದೇಶದ ಖ್ಯಾತ ತೂಗು ಸೇತುವೆ ತಜ್ಞ ಪದ್ಮಶ್ರೀ ಪ್ರಶಸ್ತಿ ವಿಜೇತ ಗಿರೀಶ್ ಭಾರಧ್ವಾಜ್ ಅವರು ವಿಧಿವಶರಾಗಿರುವ ಸುದ್ದಿ ತಿಳಿದು ತೀವ್ರ ಆಘಾತ ಆಗಿದ್ದು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಸಂತಾಪ ಸೂಚಿಸಿದ್ದಾರೆ. ಗಿರೀಶ್ ಭಾರಧ್ವಾಜ್ ಅವರು ತಮ್ಮ ವಿಶಿಷ್ಟ ತಾಂತ್ರಿಕ ಪರಿಣತಿ ಮತ್ತು ಸಮರ್ಪಿತ ಸೇವೆಯಿಂದ ದೇಶದಾದ್ಯಂತ ಅನೇಕ ತೂಗು ಸೇತುವೆಗಳ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸಿದ್ದರು.ಅನೇಕ ದ್ವೀಪ ಪ್ರದೇಶದ ನಾಗರಿಕರಿಗೆ ತಮ್ಮ ದೈನಂದಿನ ಚಟುವಟಿಕೆಗಳಿಗೆ ಇತರ […]

Continue Reading

ತೂಗು ಸೇತುವೆಗಳ ಸರದಾರ, ಬ್ರಿಡ್ಜ್ ಮ್ಯಾನ್ ಡಾ. ಗಿರೀಶ್ ಭಾರದ್ವಾಜ್ ಇನ್ನಿಲ್ಲ, ಸರಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ

ಸುಳ್ಯ: ಗ್ರಾಮೀಣ ಭಾರತದ ಸಂಪರ್ಕ ಕ್ರಾಂತಿಗೆ ತಮ್ಮ ಬದುಕನ್ನೇ ಸಮರ್ಪಿಸಿ, ಅತ್ಯಂತ ಕಡಿಮೆ ವೆಚ್ಚದಲ್ಲಿ ತೂಗು ಸೇತುವೆಗಳನ್ನು ನಿರ್ಮಿಸುವ ಮೂಲಕ ದೇಶದಾದ್ಯಂತ ‘ಬ್ರಿಡ್ಜ್ ಮ್ಯಾನ್’ ಹಾಗೂ ‘ತೂಗು ಸೇತುವೆಗಳ ಸರದಾರ’ ಎಂದೇ ಖ್ಯಾತಿ ಪಡೆದಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ (76) ಅವರು ಸೋಮವಾರ ಬೆಳಿಗ್ಗೆ ಅನಾರೋಗ್ಯದಿಂದ ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ನಿಧನರಾದರು. ಗ್ರಾಮೀಣ ಜನರ ಬದುಕಿಗೆ ಸೇತುವೆಯಾಗಿ ನಿಂತಿದ್ದ ಅಪರೂಪದ ತಾಂತ್ರಿಕ ಸಾಧಕನ ಅಗಲಿಕೆಗೆ ರಾಜ್ಯದಾದ್ಯಂತ ತೀವ್ರ ಶೋಕ ತಂದಿದೆ. ಇಬ್ಬರು ಪುತ್ರರು ಮತ್ತು […]

Continue Reading

ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಮಾಹಿತಿ ಪೋಸ್ಟರ್ ಬಿಡುಗಡೆಗೊಳಿಸಿದ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ

ಕಾರವಾರ: ಪ್ರಸಕ್ತ ಸಾಲಿನ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಕುರಿತ ಮಾಹಿತಿ ನೀಡುವ ಪೋಸ್ಟರ್ ಅನ್ನು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಮಂಗಳವಾರ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್ , ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವಪ್ರಸಾದ್ ಗಾಂವಕರ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಸೋಮಶೇಖರ್ ಮೇಸ್ತಾ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಉಮೇಶ್, ಆಹಾರ ಇಲಾಖೆ […]

Continue Reading

ಎನ್ಯುಮರೇಷನ್ ಫಾರ್ಮ್ ವಿತರಣೆಯಲ್ಲಿ ಉ.ಕ ಜಿಲ್ಲೆಗೆ ರಾಜ್ಯದಲ್ಲಿ 3 ನೇ ಸ್ಥಾನ: ಡಿಸಿ ಲಕ್ಷ್ಮಿಪ್ರಿಯಾ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026 ಪ್ರಕ್ರಿಯೆ ಚುರುಕಿನಿಂದ ಸಾಗಿದ್ದು ಜಿಲ್ಲೆಯಲ್ಲಿ ಇದುವರೆಗೆ 11,91,548 ಎನ್ಯುಮರೇಷನ್ ಫಾರ್ಮ್ ಗಳನ್ನು ವಿತರಿಸಲಾಗಿದ್ದು, ಶೇ.96.87 ಸಾಧನೆಯೊಂದಿಗೆ ಫಾರ್ಮ್ ವಿತರಣೆಯಲ್ಲಿ ಜಿಲ್ಲೆಯು ರಾಜ್ಯದಲ್ಲಿ ಮೂರನೇ ಸ್ಥಾನದಲ್ಲಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 12,30,037 ಮತದಾರರಿದ್ದು,ಈಗಾಗಲೇ 11,58,776 ಮಂದಿಯ ಮ್ಯಾಪಿಂಗ್ ಮಾಡಿದ್ದು, ಇದುವರೆಗೂ ಜಿಲ್ಲೆಯಾದ್ಯಂತ ಒಟ್ಟು 59,123 ಫಾರ್ಮ್ ಗಳನ್ನು ಗಣಕೀಕರಣ ಗೊಳಿಸಲಾಗಿದೆ. ಹಳಿಯಾಳ ಕ್ಷೇತ್ರದಲ್ಲಿ ಒಟ್ಟು 1,87,543 ಮತದಾರರ ಪೈಕಿ 1,73,750 ನಮೂನೆಗಳನ್ನು […]

Continue Reading

ಎಸ್ಐಆರ್ ಅಂಗವಾಗಿ ಪಂಜಿನ ಮೆರವಣಿಗೆ: ಪೌರಾಯುಕ್ತ ಜಗದೀಶ್ ಚಾಲನೆ

ಕಾರವಾರ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾ ಸ್ವೀಪ್ ಸಮಿತಿ ಉತ್ತರ ಕನ್ನಡ ಹಾಗೂ ನಗರಸಭೆ ಕಾರವಾರದ ವತಿಯಿಂದ, ನಗರಸಭೆ ಆವರಣದಲ್ಲಿ ಸೋಮವಾರ ಸಂಜೆ ಆಯೋಜಿಸಿದ್ದ ಪಂಜಿನ ಮೆರವಣಿಗೆ ಕಾರ್ಯಕ್ರಮವನ್ನು ಕಾರವಾರ ನಗರಸಭೆಯ ಪೌರಾಯುಕ್ತ ಜಗದೀಶ್ ಹುಲಗಜ್ಜಿ ಚಾಲನೆ ನೀಡಿದರು. ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಜಹೀರ್ ಅಬ್ಬಾಸ್ ಇದ್ದರು. ನಗರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪಂಜಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ನಗರಸಭೆ ಆವರಣದಿಂದ ನಗರದ ಪ್ರಮುಖ […]

Continue Reading

ಭಾರಿ ಮಳೆ, ಗಾಳಿ ಭೀತಿ: ಉ. ಕ ಜಿಲ್ಲೆಯ 16 ಹೆದ್ದಾರಿ ಪ್ರದೇಶಗಳಲ್ಲಿ ವಾಹನ ನಿಲುಗಡೆ ನಿಷೇಧಿಸಿ ಡಿಸಿ ಲಕ್ಷ್ಮಿಪ್ರಿಯಾ ಆದೇಶ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಗಾಳಿ ಹಾಗೂ ಮುಂಗಾರು ಮಳೆಯ ಹಿನ್ನೆಲೆಯಲ್ಲಿ ಭೂ ಕುಸಿತ ಹಾಗೂ ರಸ್ತೆ ಅಪಘಾತಗಳ ಅಪಾಯ ಹೆಚ್ಚುವ ಸಾಧ್ಯತೆ ಇರುವ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳ 16 ಸೂಕ್ಷ್ಮ ಪ್ರದೇಶಗಳಲ್ಲಿ ಜುಲೈ 6 ರಿಂದ ಮಳೆಗಾಲ ಅಂತ್ಯ ಆಗುವವರಿಗೆ ಎಲ್ಲ ರೀತಿಯ ವಾಹನಗಳ ನಿಲುಗಡೆ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಅವರು ಆದೇಶ ಹೊರಡಿಸಿದ್ದಾರೆ. ಎಲ್ಲೆಲ್ಲಿ ನಿಷೇಧ: ಕಾರವಾರ ತಾಲೂಕಿನ ಲಂಡನ್ ಬ್ರಿಡ್ಜ್‌ನಿಂದ ಬಿನಾಗಾ ಸುರಂಗದವರೆಗೆ 750 ಮೀಟರ್, ಅಗಾರ್‌ನ ಸಂಕುಬಾಗ […]

Continue Reading

ಉ. ಕದಲ್ಲಿ ಭಾರೀ ಗಾಳಿ, ಮಳೆ, 5 ತಾಲೂಕಿನ ಶಾಲೆಗಳಿಗೆ ಜುಲೈ 7 ರಂದು ರಜೆ: ಡಿಸಿ ಲಕ್ಷ್ಮಿಪ್ರಿಯಾ ಆದೇಶ

ಕಾರವಾರ: ಭಾರತೀಯ ಹವಾಮಾನ ಇಲಾಖೆ ಉತ್ತರ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಸಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ ಹಾಗೂ ದಾಂಡೇಲಿ ತಾಲೂಕಿನ ಎಲ್ಲ ಸರ್ಕಾರಿ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳಿಗೆ ಜುಲೈ 7 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಅವರು ಆದೇಶ ಹೊರಡಿಸಿದ್ದಾರೆ. ಭಾರಿ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ಗಮನದಲ್ಲಿಟ್ಟುಕೊಂಡು ಆದೇಶ ಹೊರಡಿಸಲಾಗಿದೆ. ಜಿಲ್ಲೆಯ ಉಳಿದ ತಾಲೂಕುಗಳಿಗೆ ಈ ರಜೆ ಅನ್ವಯಿಸುವುದಿಲ್ಲ. […]

Continue Reading

ಉ.ಕ ಜಿಲ್ಲೆಯಲ್ಲಿ ದತ್ತು ಮಕ್ಕಳ ಪ್ರಕ್ರಿಯೆ; ಮೂರು ಮಕ್ಕಳಿಗೆ ಸ್ವದೇಶಿ, ಒಂದು ಮಗುವಿಗೆ ವಿದೇಶಿ ದತ್ತು ಪ್ರಕ್ರಿಯೆ ಭಾಗ್ಯ

ಕಾರವಾರ: ಅನಾಥ, ತ್ಯಜಿಸಲ್ಪಟ್ಟ ಹಾಗೂ ಪಾಲಕರ ಆರೈಕೆಯಿಂದ ವಂಚಿತ ಮಕ್ಕಳಿಗೆ ಶಾಶ್ವತ ಕುಟುಂಬ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯಲ್ಲಿ ದತ್ತು ಪ್ರಕ್ರಿಯೆಗೆ ಹೆಚ್ಚಿನ ಚುರುಕು ನೀಡಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕುಮಾರ್ ಎನ್. ತಿಳಿಸಿದ್ದಾರೆ. ದತ್ತು ಪ್ರಕ್ರಿಯೆಯನ್ನು ಬಾಲ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆ–2015 ಹಾಗೂ ದತ್ತು ನಿಯಮಾವಳಿ–2022ರ ಪ್ರಕಾರ ನಡೆಸಲಾಗುತ್ತದೆ. ಈ ಪ್ರಕ್ರಿಯೆಯಲ್ಲಿ ಮಕ್ಕಳ ಹಿತಾಸಕ್ತಿಗೆ ಮೊದಲ ಆದ್ಯತೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಸ್ವದೇಶಿ ದತ್ತು ಪ್ರಕ್ರಿಯೆಯಲ್ಲಿ ಭಾರತೀಯ ನಾಗರಿಕರು ದೇಶದೊಳಗಿನ ಮಕ್ಕಳನ್ನು […]

Continue Reading

ಕಾರವಾರ: ಭಾರೀ ಗಾಳಿಗೆ ಬೃಹತ್‌ ಮರ ಉರುಳಿ ಎಪಿಪಿ ಕಚೇರಿಗೆ ಹಾನಿ

ಕಾರವಾರ: ನಗರದಲ್ಲಿ ಭಾನುವಾರ ಬೀಸಿದ ಭಾರೀ ಗಾಳಿಗೆ ಬೃಹತ್‌ ಮರವೊಂದು ಉರುಳಿ ಬಿದ್ದ ಪರಿಣಾಮ ನಗರಸಭೆ ಪಕ್ಕದಲ್ಲಿ ಇರುವ ಸಹಾಯಕ ಸರ್ಕಾರಿ ಅಭಿಯೋಜಕರ ಕಚೇರಿಗೆ ತೀವ್ರ ಹಾನಿ ಉಂಟಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ನ್ಯಾಯಿಕ ದಂಡಾಧಿಕಾರಿ ನ್ಯಾಯಾಲಯಕ್ಕೆ ಸಂಬಂಧಿಸಿದ ಸಹಾಯಕ ಸರ್ಕಾರಿ ಅಭಿಯೋಜಕರ ಕಚೇರಿ ಮೇಲೆ ಮರ ಬಿದ್ದ ಪರಿಣಾಮ ಕಟ್ಟಡಕ್ಕೆ ಭಾರೀ ಹಾನಿ ಆಗಿದೆ. ಕಚೇರಿಯಲ್ಲಿದ್ದ ದಾಖಲೆಗಳು ಹಾಗೂ ಇತರ ಸಾಮಗ್ರಿಗಳಿಗೂ ಹಾನಿ ಆಗಿರುವ ಸಾಧ್ಯತೆ […]

Continue Reading