ಕ್ಷಣಿಕ ಸುಖಕ್ಕೆ ಮಾದಕ ವ್ಯಸನ ಬೇಡ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಕಿವಿಮಾತು

ಕಾರವಾರ: ಕ್ಷಣಿಕ ಸುಖಕ್ಕಾಗಿ ಯುವಜನತೆ ಮಾದಕ ದ್ರವ್ಯ ಹಾಗೂ ಮದ್ಯಪಾನದಂತಹ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ವಿದ್ಯಾರ್ಥಿಗಳು ಇಂತಹ ವ್ಯಸನಗಳಿಂದ ಸಂಪೂರ್ಣ ದೂರವಿರಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಹೇಳಿದರು. ನಗರದ ಬಿಣಗಾದ ಸೋಮನಾಥ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮಂಗಳವಾರ ನಡೆದ ಮಾದಕ ವಸ್ತುಗಳ ಬಳಕೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕ್ಷಣಿಕ ಸಂತೋಷಕ್ಕಾಗಿ ಕೆಲವರು ಮಾದಕ ದ್ರವ್ಯ ಮತ್ತು ಮದ್ಯಪಾನದ ಮೊರೆ ಹೋಗುತ್ತಾರೆ. ಆದರೆ ಅದು ಅವರ ಶಿಕ್ಷಣ ಹಾಗೂ ಭವಿಷ್ಯದ […]

Continue Reading

ಬಿಣಗಾದಲ್ಲಿ ಎಸ್ ಐಆರ್ ಕುರಿತು ಜಾಗೃತಿಗೆ ಇಳಿದ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ

ಕಾರವಾರ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಯುಕ್ತ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರು ಮಂಗಳವಾರ ಬಿಣಗಾದಲ್ಲಿ ಮತದಾರರ ಮನೆಗಳಿಗೆ ತೆರಳಿ ಎನ್ಯೂಮರೇಶನ್ ಫಾರ್ಮ್ ಗಳನ್ನು ವಿತರಿಸಿ, ಎಸ್‌ಐಆರ್ ಪ್ರಕ್ರಿಯೆಗಳ ಬಗ್ಗೆ ಮಾಹಿತಿ ನೀಡಿದರು. ಈ ವೇಳೆ ತಹಶೀಲ್ದಾರ್ ನಿಶ್ಚಲ್ ನರೋನಾ ಸೇರಿದಂತೆ ಹಲವರು ಇದ್ದರು.

Continue Reading

ಉ. ಕ ಜಿಲ್ಲೆಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆಗೆ ಡಿಸಿ ಲಕ್ಷ್ಮಿಪ್ರಿಯಾ ಚಾಲನೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಗೆ ಮಂಗಳವಾರ ಚಾಲನೆ ದೊರೆತಿದ್ದು, ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ನಮೂನೆಗಳನ್ನು ವಿತರಿಸುವ ಕಾರ್ಯ ಆರಂಭಿಸಿದ್ದಾರೆ. ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ತಮ್ಮ ನಿವಾಸದಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳಿಂದ ನಮೂನೆಗಳನ್ನು ಸ್ವೀಕರಿಸಿ ಮಾತನಾಡಿ, ಮತದಾರರ ಪಟ್ಟಿಯಲ್ಲಿರುವ ಪ್ರತಿಯೊಬ್ಬರೂ ನೀಡಲಾಗುವ ನಮೂನೆಯನ್ನು ಸರಿಯಾದ ಮಾಹಿತಿಯೊಂದಿಗೆ ಭರ್ತಿ ಮಾಡಿ, ಘೋಷಣೆಯನ್ನು ಓದಿ ಸಹಿ ಹಾಗೂ ದಿನಾಂಕ ನಮೂದಿಸಿ ಅಧಿಕಾರಿಗಳಿಗೆ ಹಿಂದಿರುಗಿಸುವಂತೆ ಮನವಿ ಮಾಡಿದರು. ನಮೂನೆಗಳನ್ನು […]

Continue Reading

ಬೈಕಂಪಾಡಿ: ಕೇರಳ ಉದ್ಯಮಿ ಕಾರು ಅಡ್ಡಗಟ್ಟಿದ ದುಷ್ಕರ್ಮಿಗಳ ತಂಡ, ಪತ್ನಿ-ಪುತ್ರನ ಅಪಹರಣ, 20 ಲಕ್ಷ ಮೌಲ್ಯದ ಸ್ವತ್ತು ದೋಚಿ ಪರಾರಿ

ಮಂಗಳೂರು: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66 ರ ಬೈಕಂಪಾಡಿಯಲ್ಲಿ ಸೋಮವಾರ ಸಿನಿಮೀಯ ರೀತಿಯಲ್ಲಿ ನಡೆದ ದರೋಡೆ ಪ್ರಕರಣ ವ್ಯಾಪಕ ಆತಂಕಕ್ಕೆ ಕಾರಣ ಆಗಿದೆ. ಉದ್ಯಮಿಯೊಬ್ಬರ ಕಾರ ಅನ್ನು ಅಡ್ಡಗಟ್ಟಿದ ದುಷ್ಕರ್ಮಿಗಳ ತಂಡವೊಂದು ಅವರ ಪತ್ನಿ ಹಾಗೂ ಮಗನನ್ನು ಕಾರಿನಲ್ಲೇ ಅಪಹರಿಸಿ, ಚಿನ್ನಾಭರಣ ದೋಚಿದ ಬಳಿಕ ರಸ್ತೆ ಬದಿಯಲ್ಲಿ ಬಿಟ್ಟು ಪರಾರಿ ಆಗಿದೆ. ದರೋಡೆಗೆ ಒಳಗಾದವರು ಕೇರಳ ಮೂಲದವರಾಗಿದ್ದು, ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಉದ್ಯಮ ನಡೆಸುತ್ತಿದ್ದಾರೆ. ಅವರು ಪತ್ನಿ ಹಾಗೂ ಮಗನ ಜತೆಗೆ ಕಾರಿನಲ್ಲಿ ಸಾಂಗ್ಲಿಯಿಂದ ಪಯ್ಯನ್ನೂರಿಗೆ ತೆರಳುತ್ತಿದ್ದ ವೇಳೆ […]

Continue Reading

ಉ. ಕ ಜಿಲ್ಲೆಗೆ ಆರೆಂಜ್ ಅಲರ್ಟ್, ಜುಲೈ 2 ರವರೆಗೆ ಭಾರೀ ಮಳೆ ಸಾಧ್ಯತೆ ಎಚ್ಚರ ವಹಿಸಿ: ಡಿಸಿ ಲಕ್ಷ್ಮೀಪ್ರಿಯಾ

ಕಾರವಾರ: ಭಾರತೀಯ ಹವಾಮಾನ ಇಲಾಖೆ ಉತ್ತರ ಕನ್ನಡ ಜಿಲ್ಲೆಗೆ ಜೂನ್ 30, ಮಧ್ಯಾಹ್ನ 1 ಗಂಟೆಯಿಂದ ಜುಲೈ 2ರ ಬೆಳಗ್ಗೆ 8.30 ರವರೆಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಗಂಟೆಗೆ 30 ರಿಂದ 40 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಜತೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಜನರು ಹಾಗೂ ಮೀನುಗಾರರು ಮುಂಜಾಗ್ರತೆ ವಹಿಸುವಂತೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಮುಂಗಾರು ಪೂರ್ವ ಸಿದ್ಧತೆಗಳನ್ನು ಈಗಾಗಲೇ ಪೂರ್ಣಗೊಳಿಸಲಾಗಿದ್ದು, ಯಾವುದೇ ತುರ್ತು ಪರಿಸ್ಥಿತಿ ಎದುರಾದರೂ ಸಮರ್ಪಕವಾಗಿ […]

Continue Reading

ಮಂಗಳೂರಿನ ದೇರಳಕಟ್ಟೆಯಲ್ಲಿ ಎಂಸಿಸಿ ಬ್ಯಾಂಕ್‌ 22 ನೇ ಶಾಖೆ, ಎಟಿಎಂ ಉದ್ಘಾಟನೆ

ಮಂಗಳೂರು: ಎಂಸಿಸಿ ಬ್ಯಾಂಕ್ ಲಿಮಿಟೆಡ್ ತನ್ನ 22ನೇ ಶಾಖೆ ಹಾಗೂ ನೂತನ ಎಟಿಎಂ ಅನ್ನು ಭಾನುವಾರ ದೇರಳಕಟ್ಟೆಯ ಫಾ. ಮುಲ್ಲರ್ ಕಾಂಪ್ಲೆಕ್ಸ್‌ನಲ್ಲಿ ಉದ್ಘಾಟಿಸಿತು. ಸಹಕಾರ ರತ್ನ ಹಾಗೂ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ನೂತನ ಶಾಖೆಯನ್ನು ಉದ್ಘಾಟಿಸಿದರೆ, ಫಾ. ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ ಆಡಳಿತಾಧಿಕಾರಿ ಫಾ. ನಿಲೇಶ್ ಕ್ರಾಸ್ತಾ ಎಟಿಎಂಗೆ ಚಾಲನೆ ನೀಡಿದರು. ಉರ್ಸುಲಿನ್ ಫ್ರಾನ್ಸಿಸ್ಕನ್ ಸಿಸ್ಟರ್ಸ್‌ನ ಸುಪೀರಿಯರ್ ಜನರಲ್ ಸಿ. ಮಿಲ್ಲಿ ಫೆರ್ನಾಂಡಿಸ್ ಸೇಫ್ ರೂಂ ಉದ್ಘಾಟಿಸಿದರೆ, ಫಾ. ನೆಲ್ಸನ್ ದೀರಜ್ ಪಾಯ್ಸ್ ಇ-ಸ್ಟಾಂಪ್ […]

Continue Reading

3 ವರ್ಷಗಳಲ್ಲಿ ರಾಜ್ಯವನ್ನು ಆರ್ಥಿಕ ಸಂಕಷ್ಟಕ್ಕೆ ತಳ್ಳಿದೆ ಕಾಂಗ್ರೆಸ್ ಸರ್ಕಾರ: ಬಿಜೆಪಿ ವಕ್ತಾರ ಚಂದ್ರಶೇಖರ್

ಕಾರವಾರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮೂರು ವರ್ಷ ಪೂರೈಸಿರುವ ಬೆನ್ನಲ್ಲೇ ಆಡಳಿತದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ಆರ್ಥಿಕವಾಗಿ ಸದೃಢವಾಗಿದ್ದ ಕರ್ನಾಟಕವನ್ನು ಕಾಂಗ್ರೆಸ್ ಸರ್ಕಾರ ಸಾಲದ ಸುಳಿಗೆ ಸಿಲುಕಿಸಿದ್ದು, ಇದೇ ಆಡಳಿತ ಇನ್ನೆರಡು ವರ್ಷ ಮುಂದುವರಿದರೆ ಜನಸಾಮಾನ್ಯರ ಸಂಕಷ್ಟ ಮತ್ತಷ್ಟು ಹೆಚ್ಚಲಿದೆ ಎಂದು ರಾಜ್ಯ ಬಿಜೆಪಿ ವಕ್ತಾರ ಎಚ್.ಎನ್. ಚಂದ್ರಶೇಖರ್ ಅವರು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು. ರಾಜ್ಯದ ಆಡಳಿತ ವ್ಯವಸ್ಥೆ ಎಂಜಿನ್ ಕೆಟ್ಟು, ಟಯರ್ ಪಂಚರ್ ಆಗಿರುವ ಬಸ್ಸಿನಂತಾಗಿದೆ. ಮುಖ್ಯಮಂತ್ರಿ ಬದಲಾದರೂ ಆಡಳಿತ ವ್ಯವಸ್ಥೆಯ ವೈಫಲ್ಯ ಮಾತ್ರ ಬದಲಾಗಿಲ್ಲ. […]

Continue Reading

ಹಾಳದಕಟ್ಟಾ ದರೋಡೆ ಪ್ರಕರಣ ಭೇದಿಸಿದ ಸಿದ್ದಾಪುರ ಪೊಲೀಸರು; ಚಿನ್ನಾಭರಣ ದೋಚಿದ್ದ ಆರೋಪಿಯ ಸೆರೆ

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹಾಳದಕಟ್ಟಾದಲ್ಲಿ ಇತ್ತೀಚೆಗೆ ನಡೆದಿದ್ದ ಒಂಟಿ ಮಹಿಳೆಯ ಮೇಲಿನ ದರೋಡೆ ಪ್ರಕರಣವನ್ನು ಸಿರಸಿ–ಸಿದ್ದಾಪುರ ಪೊಲೀಸರು ಭೇದಿಸಿದ್ದು, ಕೃತ್ಯ ಎಸಗಿದ್ದ ಆರೋಪಿ ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ. ಬಂಧಿತ ಕೊಂಡ್ಲಿ ನಿವಾಸಿ ಹಾಗೂ ಕೂಲಿ ಕಾರ್ಮಿಕ ಮಹೇಶ ಹನುಮಂತ ಮಡಿವಾಳ ಎಂದು ಗುರುತಿಸಲಾಗಿದೆ. ಆರೋಪಿಯಿಂದ ಕಳವು ಮಾಡಿದ್ದ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕ್‌ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜೂನ್ 22ರಂದು ಸಂಜೆ ಹಾಳದಕಟ್ಟಾದ ನಿವಾಸಿ ಪೂನಂ ಗಣಪತಿ ಶೇಟ್ ಅವರ ಮನೆಗೆ […]

Continue Reading

ಕಾನಸೂರು ವಸತಿ ಶಾಲೆಯ ವಿದ್ಯಾರ್ಥಿ ಆತ್ಮಹತ್ಯೆಯ ಪ್ರಕರಣ, ಹಿಂದಿ ಶಿಕ್ಷಕ ಆರೆಸ್ಟ್

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರು ವಸತಿ ಶಾಲೆಯ ವಿದ್ಯಾರ್ಥಿ ಗೋಕುಲ್ ಗೌಡ ಆತ್ಮಹತ್ಯೆ ಪ್ರಕರಣಕ್ಕೆ ದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಹಿಂದಿ ಶಿಕ್ಷಕ ಅಬ್ಬು ತಹಲ ಎಂಬುವವರನ್ನು ಪೊಲೀಸರು ಬಂಧನ ಮಾಡಿದ್ದಾರೆ. ಜೂನ್ 9 ರಂದು ವಿದ್ಯಾರ್ಥಿ ಗೋಕುಲ್ ಗೌಡ ಆತ್ಮಹತ್ಯೆ ಮಾಡಿಕೊಂಡ ಬಳಿಕ, ಮೃತ ವಿದ್ಯಾರ್ಥಿ ತಾಯಿ ನೀಡಿದ ದೂರಿನ ಮೇರೆಗೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ದೂರಿನಲ್ಲಿ ಶಿಕ್ಷಕ ಅಬ್ಬು ತಹಲ ಅವರು […]

Continue Reading

ಸಿ.ಎ. ಇಂಟರ್ ಮೀಡಿಯೇಟ್ ಪರೀಕ್ಷೆ: ಆಳ್ವಾಸ್ ವಿದ್ಯಾರ್ಥಿಗಳ ಸಾಧನೆ

ಮೂಡುಬಿದಿರೆ: ಮೇ 2026ರಲ್ಲಿ ನಡೆದ ಸಿ.ಎ. ಇಂಟರ್ ಮೀಡಿಯೇಟ್ ಪರೀಕ್ಷೆಯಲ್ಲಿ ಆಳ್ವಾಸ್ ಬಿ.ಕಾಂ. ವಿದ್ಯಾರ್ಥಿಗಳಾದ ಗೋಡ್ವಿಲ್ ವಿನ್ಂಟನ್ ವಾಸ್ (355), ಶೆಟ್ಟಿ ರಾಹುಲ್ ಉಮೇಶ್(313), ಎನ್. ಚಿರಂತನಾ(312) ಹಾಗೂ ರೋಹಿತ್ ಪೂಜಾರಿ (304) ಗ್ರೂಪ್-01 ಮತ್ತು ಗ್ರೂಪ್-02 ವಿಭಾಗದಲ್ಲಿ ಮೊದಲ ಪ್ರಯತ್ನದಲ್ಲಿ ಉತ್ತಮ ಫಲಿತಾಂಶದೊಂದಿಗೆ ಉತ್ತೀರ್ಣರಾಗಿದ್ದಾರೆ. ಇಂಟರ್ ಮೀಡಿಯಟ್ ಗ್ರೂಪ್-01 ವಿಭಾಗದಲ್ಲಿ ಪ್ರಸ್ಮಿಯಾ (162), ಪನ್ನಗ ಜೈನ್ (157), ವಿಜಯ್ ಕುಮಾರ್(164), ಸಾನಿಯಾ (150), ಪ್ರಸಿದ್ಧ್ ಪೂಜಾರಿ(150), ಮೋನಿಶಾ ಕುಂದರ್(163) ಹಾಗೂ ಶ್ರೇಯಾ ಸುರೇಂದ್ರ ಪೂಜಾರಿ(150) ಉತ್ತೀರ್ಣರಾಗಿರುತ್ತಾರೆ. […]

Continue Reading