ಬಜ್ಪೆ ಠಾಣೆಯ ಪೊಲೀಸರ ಎಡವಟ್ಟು, ಮಾಹಿತಿ ಕಲೆ ಹಾಕದೇ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್, ಇಬ್ಬರ ಅಮಾನತು

ಮಂಗಳೂರು: ಅಸ್ಸಾಂ ಹಾಗೂ ಬಿಹಾರ ಮೂಲದ 30 ಕ್ಕೂ ಹೆಚ್ಚು ಕಾರ್ಮಿಕರಿಗೆ ಸಮರ್ಪಕವಾಗಿ ಮಾಹಿತಿ ಕಲೆ ಹಾಕದೇ, ಪರಿಶೀಲನೆ ನಡೆಸದೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್ (ಪಿಸಿಸಿ) ನೀಡಿದ ಆರೋಪದ ಹಿನ್ನೆಲೆ ಮಂಗಳೂರಿನ ಬಜ್ಪೆ ಪೊಲೀಸ್ ಠಾಣೆ ಇಬ್ಬರು ಸಿಬ್ಬಂದಿಯನ್ನು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಅವರು ಅಮಾನತು ಮಾಡಿದ್ದಾರೆ. ಈ ಘಟನೆ ಪೊಲೀಸ್ ಇಲಾಖೆಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಅಮಾನತುಗೊಂಡವರಲ್ಲಿ ಮಹಿಳಾ ಸಿಬ್ಬಂದಿ ಆಶಾ ಹಾಗೂ ಹೆಡ್ ಕಾನ್‌ಸ್ಟೇಬಲ್ ಮಂಜುನಾಥ್ ಸೇರಿದ್ದಾರೆ. ವರ್ಷದ ಅವಧಿಯಲ್ಲಿ 31 ಮಂದಿಗೆ […]

Continue Reading

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ; ಮೊದಲ ಜೆಂಡರ್ ಅಫರ್ಮಿಂಗ್ ಯಶಸ್ವಿ ಶಸ್ತ್ರಚಿಕಿತ್ಸೆ, ವೈದ್ಯರ ಸಾಧನೆ

ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಟ್ರಾನ್ಸ್ಜೆಂಡರ್ ಮಹಿಳೆಗೆ ಮೊದಲ ಬಾರಿಗೆ ಜೆಂಡರ್ ಅಫರ್ಮಿಂಗ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನೆರವೇರಿಸಲಾಗಿದೆ. ಈಚೆಗೆ ನಡೆದ ಈ ಶಸ್ತ್ರಚಿಕಿತ್ಸೆ ನಂತರ ರೋಗಿ ವೈದ್ಯಕೀಯ ತಂಡದ ಆರೈಕೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ತಿಳಿಸಿದೆ. ಆಸ್ಪತ್ರೆಯ ಪ್ಲಾಸ್ಟಿಕ್ ಸರ್ಜರಿ ಹಾಗೂ ಮೂತ್ರಶಾಸ್ತ್ರ ವಿಭಾಗಗಳ ಸಂಯುಕ್ತ ತಂಡವು ಈ ಸಂಕೀರ್ಣ ಶಸ್ತ್ರಚಿಕಿತ್ಸೆಯನ್ನು ನಡೆಸಿದ್ದು, ಎರಡೂ ವಿಭಾಗಗಳ ನಿಕಟ ಸಮನ್ವಯದಲ್ಲಿ ಹಲವು ಗಂಟೆಗಳ ಕಾಲ ಕಾರ್ಯ ನಡೆದಿದೆ. ಪ್ಲಾಸ್ಟಿಕ್ ಸರ್ಜರಿ ವಿಭಾಗವು ಇದಕ್ಕೂ ಮುನ್ನ ಮುಖದ ಸ್ತ್ರೀಕರಣ ಮತ್ತು […]

Continue Reading

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ, ರಾಜಕೀಯ ಪಕ್ಷಗಳ ಸಹಕಾರ ಅಗತ್ಯ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ

ಕಾರವಾರ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದ ಯಶಸ್ಸಿಗೆ ಜಿಲ್ಲೆಯ ಎಲ್ಲಾ ರಾಜಕೀಯ ಪಕ್ಷಗಳು ಅಗತ್ಯ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಜಕೀಯ ಪಕ್ಷಗಳ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಜೂನ್ 30 ರಿಂದ ಜುಲೈ 29 ರವರೆಗೆ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಎನ್ಯುಮರೇಷನ್ ಫಾರಂ ವಿತರಣೆ ಹಾಗೂ ಸಂಗ್ರಹ ಕಾರ್ಯ ನಡೆಸಲಿದ್ದಾರೆ ಎಂದು ಹೇಳಿದರು. ಬಿಎಲ್‌ಓಗಳು ನೀಡುವ ಫಾರಂಗಳನ್ನು ಮತದಾರರು […]

Continue Reading

ಎತ್ತಿನಹೊಳೆ ಯೋಜನೆಯ ವೈಜ್ಞಾನಿಕ ಸಮೀಕ್ಷೆ ನಡೆಸಿ: ವೇಕಾನಂದ ಸಾಲಿನ್ಸ್

ಮಂಗಳೂರು: ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ ನೀರುಣಿಸುವ ಉದ್ದೇಶದಿಂದ ಆರಂಭಿಸಿರುವ ಎತ್ತಿನಹೊಳೆ ಯೋಜನೆ ಕುರಿತು ಸಮಗ್ರ ವೈಜ್ಞಾನಿಕ ಸಮೀಕ್ಷೆ ನಡೆಸಬೇಕು ಹಾಗೂ ಕರಾವಳಿಯ ಪರಿಸರ ವ್ಯವಸ್ಥೆ ರಕ್ಷಿಸಲು ಸರ್ಕಾರ ಖಚಿತ ಕ್ರಮ ಕೈಗೊಳ್ಳಬೇಕು ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಸಾಲಿನ್ಸ್ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು. ಉಡುಪಿ ವಾರಾಹಿ ನೀರಾವರಿ ಯೋಜನೆ, ಎಡದಂಡೆ ಕಾಲುವೆ ಹಾಗೂ ಅಕ್ವಿಡಕ್ಟ್ ಯೋಜನೆಗಳಿಗೆ ಸಾವಿರಾರು ಕೋಟಿ ರೂಪಾಯಿ ವೆಚ್ಚವಾಗಿದ್ದರೂ ನಾಲ್ಕು ದಶಕಗಳ ಬಳಿಕವೂ ಪೂರ್ಣಗೊಂಡಿಲ್ಲ. ಇದೇ ರೀತಿಯಾಗಿ […]

Continue Reading

ವಿಧಾನ ಪರಿಷತ್ ಫೈಟ್: ಕಾಂಗ್ರೆಸ್‌ಗೆ 5 ಸ್ಥಾನಗಳ ಭರ್ಜರಿ ಗೆಲುವು, ಅಡ್ಡ ಮತದಾನ ಓಟಿಂಗ್ ಏಟು, ಮೈತ್ರಿ ಸದಸ್ಯರಿಂದಲೇ ಕೈಗೆ ಮತ, ಜೆಡಿಎಸ್ ಗೆ ಹೀನಾಯ ಸೋಲು

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ನಿರೀಕ್ಷೆಗೂ ಮೀರಿ ಅಭೂತಪೂರ್ವ ಗೆಲುವು ಸಾಧಿಸಿದ್ದು, ಪಕ್ಷದ ಐವರು ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಚುನಾವಣಾ ಫಲಿತಾಂಶವು ಬಿಜೆಪಿ–ಜೆಡಿಎಸ್ ಮೈತ್ರಿಯಲ್ಲಿ ಅಸಮಾಧಾನಕ್ಕೆ ಕಾರಣ ಆಗಿದೆ. ಚುನಾವಣೆಯಲ್ಲಿ ಮೈತ್ರಿ ಪಕ್ಷದ ಕೆಲವು ಶಾಸಕರು ಅಡ್ಡಮತದಾನ ಮಾಡಿರುವುದು ಫಲಿತಾಂಶದ ಮೇಲೆ ಮಹತ್ವದ ಪರಿಣಾಮ ಬೀರಿದೆ ಎನ್ನಲಾಗುತ್ತಿದೆ. ಬಿಜೆಪಿ 3 ರಿಂದ 4 ಮಂದಿ ಹಾಗೂ ಜೆಡಿಎಸ್‌ 6 ರಿಂದ 7 ಮಂದಿ ಶಾಸಕರು ಕಾಂಗ್ರೆಸ್ ಪರವಾಗಿ ಮತ ಚಲಾಯಿಸಿದ್ದಾರೆ ಎಂಬ ಮಾಹಿತಿ ಲಭ್ಯ […]

Continue Reading

ಅಲ್ಪಸಂಖ್ಯಾತರ ಸಮಗ್ರ ಅಭಿವೃದ್ಧಿಗೆ ಆಯೋಗ ಬದ್ದ: ಯು. ನಿಸಾರ್ ಅಹಮದ್

ಕಾರವಾರ: ರಾಜ್ಯದಲ್ಲಿನ ಅಲ್ಪಸಂಖ್ಯಾತರ ಕುಂದುಕೊರತೆಗಳನ್ನು ಆಲಿಸಿ, ಸಮಸ್ಯೆಗಳಿಗೆ ಅಧಿಕಾರಿಗಳು ಸೂಕ್ತವಾಗಿ ಸ್ಪಂದಿಸದಿದ್ದರೆ ಅವರನ್ನು ಆಯೋಗಕ್ಕೆ ಕರೆಸಿ ನಿರ್ದೇಶನ ನೀಡುವ ಹಾಗೂ ಅಗತ್ಯವಿದ್ದರೆ ಸರ್ಕಾರಕ್ಕೆ ಶಿಫಾರಸು ಮಾಡುವ ಮೂಲಕ ಅಲ್ಪಸಂಖ್ಯಾತರ ಸಮಗ್ರ ಅಭಿವೃದ್ಧಿಗೆ ರಾಜ್ಯ ಅಲ್ಪಸಂಖ್ಯಾತರ ಆಯೋಗ ಬದ್ದವಾಗಿದೆ ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು. ನಿಸಾರ್ ಅಹಮದ್ ಹೇಳಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಅಲ್ಪಸಂಖ್ಯಾತರ ಕುಂದುಕೊರತೆಗಳ ಅಹವಾಲು ಸ್ವೀಕಾರ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿನ ಮುಸ್ಲಿಂ, ಕ್ರಿಶ್ಚಿಯನ್, ಬೌದ್ಧ, ಜೈನ, ಸಿಖ್ […]

Continue Reading

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಾರ್ವಜನಿಕರು ಸಹಕರಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ

ಕಾರವಾರ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಜೂನ್ 20 ರಿಂದ ಆರಂಭವಾಗಲಿದ್ದು, ಸಾರ್ವಜನಿಕರು ಅಗತ್ಯ ಸಹಕಾರ ನೀಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಮತಗಟ್ಟೆ ಅಧಿಕಾರಿಗಳು ಜೂನ್ 30 ರಿಂದ ಜುಲೈ 29 ರವರೆಗೆ ಮನೆ ಮನೆಗೆ ಭೇಟಿ ನೀಡಿ ಮತದಾರರಿಗೆ ಪ್ರಿ-ಫಿಲ್ಡ್ ಎನ್ಯೂಮರೇಷನ್ ಫಾರ್ಮ್‌ಗಳನ್ನು ವಿತರಿಸಲಿದ್ದು, ಭರ್ತಿ ಮಾಡಿದ ಫಾರ್ಮ್‌ಗಳನ್ನು ಕಡ್ಡಾಯವಾಗಿ ಹಿಂದಿರುಗಿಸಬೇಕು ಎಂದು ಅವರು ತಿಳಿಸಿದರು. […]

Continue Reading

ಅಲ್ಪಸಂಖ್ಯಾತರ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸಿ: ಯು. ನಿಸಾರ್ ಅಹಮದ್

ಕಾರವಾರ: ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ವಿವಿಧ ಇಲಾಖೆಗಳಲ್ಲಿರುವ ಕಾರ್ಯಕ್ರಮಗಳ ಸಂಪೂರ್ಣ ಪ್ರಯೋಜನವನ್ನು ಸಮುದಾಯದ ಜನತೆಗೆ ಸಮರ್ಪಕವಾಗಿ ತಲುಪಿಸುವಂತೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು. ನಿಸಾರ್ ಅಹಮದ್ ಹೇಳಿದರು. ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಅಲ್ಪಸಂಖ್ಯಾತ ಸಮುದಾಯಗಳ ವಿದ್ಯಾರ್ಥಿಗಳು ಕಡ್ಡಾಯ ಶಿಕ್ಷಣ ಪಡೆಯುವಂತೆ ಹಾಗೂ ಶಾಲೆಯಿಂದ ಹೊರಗುಳಿಯದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ […]

Continue Reading

ಜೋಯಿಡಾ ಬಳಿ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳ ಭೀಕರ ಡಿಕ್ಕಿ; 10 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯ

ಕಾರವಾರ( ಜೋಯಿಡಾ): ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಚಾಪೋಲಿ ಸಮೀಪ ಗುರುವಾರ ಬೆಳಿಗ್ಗೆ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 10 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಅಪಘಾತದಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣ ಆಗಿದ್ದು, ಕಾರವಾರ–ಜೋಯಿಡಾ ರಸ್ತೆಯ ಸಂಚಾರದಲ್ಲಿ ಅಸ್ತವ್ಯಸ್ತವಾಗಿತ್ತು. ಉಳವಿ–ಇಚಲಕರಂಜಿ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೆಳಗಾವಿ–ಕಾರವಾರ ಮಾರ್ಗದ ಕೆಎಸ್‌ಆರ್‌ಟಿಸಿ ಬಸ್ ನಡುವೆ ಚಾಪೋಲಿ ಸಮೀಪ ಈ ಅಪಘಾತ ಸಂಭವಿಸಿದೆ. ಡಿಕ್ಕಿ ತೀವ್ರತೆಗೆ ಎರಡೂ ಬಸ್‌ಗಳ ಮುಂಭಾಗ […]

Continue Reading

ಸಾರಿಗೆ ಇಲಾಖೆಯ ಪರಿವಾಹನ್’ ‘ಸಾರಥಿ’ ಸರ್ವರ್‌ ಹಾವು – ಏಣಿ ಆಟ, ನೋಂದಣಿಗಾಗಿ ಜನರ ಪರದಾಟ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸೇರಿದಂತೆ ರಾಜ್ಯದಾದ್ಯಂತ ಪರಿವಾಹನ್’ ಮತ್ತು ‘ಸಾರಥಿ’ ಸರ್ವರ್‌ಗಳ ಪದೇ ಪದೇ ಡೌನ್ ಆಗುವುದರಿಂದ ಸಾರಿಗೆ ಇಲಾಖೆಗೆ ಸಂಬಂಧಿಸಿದ ಆರ್‌ಟಿಒ ಕೆಲಸಗಳು ಮತ್ತು ಚಾಲನಾ ಪರವಾನಗಿ ಕಾರ್ಯಗಳಿಗೆ ಸಾರ್ವಜನಿಕರು ಪರದಾಡುವಂತಾಗಿದೆ. ಸಾರಿಗೆ ಇಲಾಖೆಯ ಸರ್ವರ್ ಡೌನ್ ಕಣ್ಣಾಮುಚ್ಚಾಲೆ ಕಳೆದ ಗುರುವಾರದಿಂದಲೇ ಶುರುವಾಗಿದೆ ಎಂಬ ಮಾಹಿತಿ ಇದೆ. ಗಂಟೆಗೊಮ್ಮೆ ಸರ್ವರ್ ಡೌನ್‌ ಆಗುತ್ತಿರುವುದರಿಂದ ಸಾರಿಗೆ ಇಲಾಖೆಯ ಕೆಲಸ ಕಾರ್ಯಗಳಿಗೆ ಬರುವ ಜನರು ಹಿಡಿಶಾಪ ಹಾಕಿ ವಾಪಸ್ ಆಗುವಂತಹ ಸ್ಥಿತಿ ನಿರ್ಮಾಣ ಆಗಿದೆ. ರಾಷ್ಟ್ರಮಟ್ಟದ ಪರಿವಾಹನ್ […]

Continue Reading