ದರ್ಶನ್ – ವಿಜಯಲಕ್ಷ್ಮೀ ದಂಪತಿಗೆ 23 ನೇ ವರ್ಷದ ಮದುವೆ ಸಂಭ್ರಮ, ಜಾಲತಾಣದಲ್ಲಿ ಮದುವೆ ಆಮಂತ್ರಣ ಪತ್ರಿಕೆ ವೈರಲ್

ಬೆಂಗಳೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ – ವಿಜಯಲಕ್ಷ್ಮೀ ದಂಪತಿಗೆ 23 ನೇ ವೈವಾಹಿಕ ವಾರ್ಷಿಕ ದಿನದ ಸಂಭ್ರಮ. ಆದರೆ ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣದಲ್ಲಿ ದರ್ಶನ್‌ ಜೈಲಿನಲ್ಲಿದ್ದಾರೆ. ವಿವಾಹ ದಿನವನ್ನು ಸಂಭ್ರಮಿಸಲಾಗದೆ ದರ್ಶನ್‌ ಕುಗ್ಗಿದ್ದಾರೆ. ಅವರ ಪತ್ನಿ ಕೂಡ ನಿರಾಶರಾಗಿದ್ದಾರೆ. ಆದರೆ ತಮ್ಮ ನೆಚ್ಚಿನ ದಂಪತಿಗೆ ಅಭಿಮಾನಿಗಳು ವೈವಾಹಿಕ ದಿನದ ಶುಭಾಶಯ ತಿಳಿಸಿದ್ದಾರೆ. ಎಲ್ಲವೂ ಸರಿ ಆಗಲಿದೆ ಎಂದು ಧೈರ್ಯ ತುಂಬುತ್ತಿದ್ದಾರೆ. ವಿವಾಹದ ದಿನವೇ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ಅವರು ಜಾಲತಾಣದಲ್ಲಿ ಪತಿ ಭಾವಚಿತ್ರ […]

Continue Reading

10 ಸಾವಿರ ಡಯಾಲಿಸಿಸ್, ಕಟೀಲು ದುರ್ಗಾ ಸಂಜೀವಿನಿ ಮಣಿಪಾಲ್ ಆಸ್ಪತ್ರೆಯ ಐತಿಹಾಸಿಕ ಮೈಲುಗಲ್ಲು, ರೋಗಿಗಳಿಗೆ ರಿಯಾಯಿತಿ ಚಿಕಿತ್ಸೆ

ಮಂಗಳೂರು(ಕಟೀಲು): ದಕ್ಷಿಣ ಕನ್ನಡ ಜಿಲ್ಲೆಯ ಕಟೀಲಿನಲ್ಲಿ ಇರುವ ದುರ್ಗಾ ಸಂಜೀವಿನಿ ಮಣಿಪಾಲ್ ಆಸ್ಪತ್ರೆಯು ತನ್ನ ಡಯಾಲಿಸಿಸ್ ಘಟಕವು 2022 ರ ಜನವರಿಯಿಂದ ಇಂದಿನವರೆಗೆ ಯಶಸ್ವಿಯಾಗಿ 10,000 ಡಯಾಲಿಸಿಸ್ ಚಿಕಿತ್ಸೆ ಪೂರ್ಣಗೊಳಿಸುವ ಮೂಲಕ ಮಹತ್ವದ ಆರೋಗ್ಯ ಸೇವೆಯಲ್ಲಿ ಸಾಧನೆ ಮಾಡಿದೆ. ಈ ಸಾಧನೆ ಗ್ರಾಮೀಣ ಹಾಗೂ ಹಿಂದುಳಿದ ಸಮುದಾಯಗಳಿಗೆ ಗುಣಮಟ್ಟದ ಮೂತ್ರಪಿಂಡ ಚಿಕಿತ್ಸೆ ಸುಲಭ ಹಾಗೂ ಕೈಗೆಟುಕುವ ದರದಲ್ಲಿ ಒದಗಿಸುವ ಆಸ್ಪತ್ರೆಯ ಬದ್ಧತೆಗೆ ಸಾಕ್ಷಿಯಾಗಿದೆ. ದೇಶದ ಹೆಸರಾಂತ ಧಾರ್ಮಿಕ ಕೇಂದ್ರ ಕಟೀಲು, ಆಧುನಿಕ ಡಯಾಲಿಸಿಸ್ ಸೇವೆಗಳನ್ನು ನೀಡುವ ವಿಶೇಷ […]

Continue Reading

ಚಂಡಮಾರುತ, ಕಡಲ, ನದಿ ತೀರಗಳಲ್ಲಿ ಬೋಟಿಂಗ್, ಜಲ ಸಾಹಸ ಕ್ರೀಡೆಗಳಿಗೆ ನಿರ್ಭಂಧ ವಿಧಿಸಿ ಆದೇಶ

ಕಾರವಾರ: ಚಂಡಮಾರುತ ಹಾಗೂ ಭಾರಿ ಗಾಳಿ ಬೀಸುವ ಕುರಿತು ಭಾರತೀಯ ಹವಾಮಾನ ಇಲಾಖೆಯ ಮೂನ್ಸಚನೆ ನೀಡಿದ್ದು, ಅಲೆಗಳು ಮಳಗಾಲಕ್ಕಿಂತಲೂ ಹೆಚ್ಚು ಅಪ್ಪಳಿಸಲಿರುವ ಹಿನ್ನಲೆಯಲ್ಲಿ ಕಡಲ ತೀರಗಳಲ್ಲಿ ಹಾಗೂ ನದಿ ತೀರಗಳಲ್ಲಿ ನಡೆಸುತ್ತಿರುವ ಬೋಟಿಂಗ್ ಹಾಗೂ ಜಲ ಸಾಹಸ ಕ್ರೀಡೆಗಳನ್ನು ಹಾಗೂ ಅಪ್ಸರಕೊಂಡ ಬೀಚ್ ನಲ್ಲಿ ಪ್ಯಾರಾ ಮೋಟರ್ ಆಳವಡಿಕೆಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಸ್ಥಗಿತಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಮೇನ್ […]

Continue Reading

ರಕ್ಕಿ ಚಿತ್ರದ ಮೊದಲ ಹಾಡು “ರಗಡೋ ರಕ್ಕಿ ಬಿಡುಗಡೆ, ನಾಯಕನ ಹೆಸರೆ ಸಿನಿಮಾ ಶೀರ್ಷಿಕೆ!

ಬೆಂಗಳೂರು: ಬಹು ನಿರೀಕ್ಷಿತ “ರಕ್ಕಿ” ಚಿತ್ರದ “ರಗಡೋ ರಕ್ಕಿ” ಹಾಡು ಇತ್ತೀಚೆಗೆ ಪಿಆರ್ ಕ ಅಡಿಯೊ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆ ಆಗಿದೆ. ಯುವಜನತೆ ಹಾಗೂ ಸಂಗೀತ ಪ್ರೇಮಿಗಳಲ್ಲಿ ಭಾರಿ ಸಂಚಲನ ಮೂಡಿಸಿರುವ ಈ ಹಾಡು ಅಧಿಕ ಸಂಖ್ಯೆಯಲ್ಲಿ ವೀಕ್ಷಣೆ ಆಗುತ್ತಿದೆ. ಇದು “ರಕ್ಕಿ” ಚಿತ್ರದ ಮೊದಲ ಗೀತೆ ಆಗಿದೆ. ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿರುವ ರಕ್ಕಿ ಸುರೇಶ್, ಈ ಹಾಡಿನಲ್ಲಿ ತಮ್ಮ ಎನರ್ಜಿಟಿಕ್ ಸ್ಕ್ರೀನ್ ಪ್ರೆಸೆನ್ಸ್, ಸ್ಟೈಲಿಷ ಲುಕ್ ಹಾಗೂ ಅದ್ಭುತ ಡಾನ್ಸ್ ಮೂಲಕ […]

Continue Reading

ಆಳ್ವಾಸ್ ಎಂಜಿನಿಯರಿಂಗ್ ಕಾಲೇಜಿನ ಮೂರು ವಿಭಾಗಗಳ ಗುಣಮಟ್ಟಕ್ಕೆ ಎನ್‌ಬಿಎ ಮುದ್ರೆ

ಮೂಡುಬಿದಿರೆ: ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಆ್ಯಂಡ್ ಇಂಜಿನಿಯರಿAಗ್ ಹಾಗೂ ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಶನ್ ಎಂಜಿನಿಯರಿಂಗ್ ವಿಭಾಗಗಳಿಗೆ ಈ ಹಿಂದೆ ಲಭಿಸಿದ್ದ ರಾಷ್ಟ್ರೀಯ ಮಾನ್ಯತಾ ಮಂಡಳಿ(ಎನ್‌ಬಿಎ) ಮಾನ್ಯತೆಯನ್ನು ಮುಂದಿನ ಮೂರು ಶೈಕ್ಷಣಿಕ ವರ್ಷಗಳಿಗೆ ವಿಸ್ತರಿಸಲಾಗಿದೆ. ಇದೇ ವೇಳೆ, ಇನ್ಫರ್ಮೇಶನ್ ಸೈನ್ಸ್ ಅಂಡ್ ಎಂಜಿನಿಯರಿಂಗ್ ವಿಭಾಗಕ್ಕೂ ಮೊದಲ ಬಾರಿಗೆ ಮುಂದಿನ ಮೂರು ಶೈಕ್ಷಣಿಕ ವರ್ಷಗಳ ಅವಧಿಗೆ ಎನ್‌ಬಿಎ ಮಾನ್ಯತೆ ಲಭಿಸಿದೆ. ಆಳ್ವಾಸ್ ಸಂಸ್ಥೆಗೆ ಸತತ ಮೂರನೇ ಬಾರಿ ಎನ್‌ಬಿಎ ಮಾನ್ಯತೆ ದೊರೆತಿರುವುದು ಶಿಕ್ಷಣದ ಗುಣಮಟ್ಟ, ಆಧುನಿಕ ಪ್ರಯೋಗಾಲಯ […]

Continue Reading

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರ ಪೀಠಕ್ಕೆ ಗ್ರಿನ್ ಸಿಗ್ನಲ್ : ಎಂಎಲ್ಸಿ ಐವನ್ ಡಿಸೋಜ

ಮಂಗಳೂರು: ಕರಾವಳಿ ಭಾಗದ ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರ ಪೀಠ ಸ್ಥಾಪಿಸಬೇಕು ಎಂಬ ಎರಡು ವರ್ಷಗಳ ಬೇಡಿಕೆಗೆ ರಾಜ್ಯ ಸರಕಾರ ಗ್ರೀನ್ ಸಿಗ್ನಲ್ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಪೀಠಕ್ಕೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಲು ಸಿದ್ಧ ಇರುವುದಾಗಿ ಮುಖ್ಯ ನ್ಯಾಯಾಧೀಶರಿಗೆ ಪತ್ರದ ಮೂಲಕ ತಿಳಿಸಿದ್ದಾರೆ. ಈ ಮೂಲಕ ಪೀಠ ಸ್ಥಾಪನೆ ಶೇ 80 ರಷ್ಟು ಕಾರ್ಯ ಪೂರ್ಣಗೊಂಡಂತಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕೋರ್ಟ್ […]

Continue Reading

ದಾಸನಕೊಪ್ಪ ಕಾಳಂಗಿ ಸೊಸೈಟಿಯಲ್ಲಿ ಭಾರಿ ಭ್ರಷ್ಟಾಚಾರ, ತನಿಖೆಗೆ ಆಗ್ರಹಿಸಿ ರೈತರ ಪ್ರತಿಭಟನೆ, ರೈತರ ಹಣ ಪಂಗನಾಮ, ಭುಗಿಲೆದ್ದ ಆಕ್ರೋಶ

ಸಿರಸಿ: ಉತ್ತರ ಕನ್ನಡ ಜಿಲ್ಲೆಯ ಸಿರಸಿ ತಾಲ್ಲೂಕಿನ ದಾಸನಕೊಪ್ಪದ ಕಾಳಂಗಿ ಸೊಸೈಟಿಯಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಭಾರಿ ಸಂಖ್ಯೆಯಲ್ಲಿ ರೈತರು ಸೊಸೈಟಿ ಎದರಿನಲ್ಲಿಯೇ ಪ್ರತಿಭಟನೆ ಮಾಡಿದ ಘಟನೆ ನಡೆದಿದೆ. ರೈತರ ಹಣವನ್ನು ಲೂಟಿ ಮಾಡಿರುವ ಆಡಳಿತ ಮಂಡಳಿಯ ವಿರುದ್ಧ ಹಣ ಕಳೆದುಕೊಂಡ ನೂರಾರು ಸಂಖ್ಯೆಯ ಠೇವಣಿದಾರರು ಹಾಗೂ ರೈತರು ಬೃಹತ್ ಪ್ರತಿಭಟನೆ ನಡೆಸಿರುವುದು ಕಾಳಂಗಿ ವ್ಯವಸಾಯ ಸೇವಾ ಸಹಕಾರಿ ಸೊಸೈಟಿಯಲ್ಲಿ ಯಾವುದು ಸರಿಯಾಗಿಲ್ಲ ಎನ್ನುವುದಕ್ಕೆ ಸಾಕ್ಷಿಯಾಗಿದೆ. ಸೊಸೈಟಿಯ ಆಡಳಿತ ಮಂಡಳಿಯು ಠೇವಣಿದಾರರ ಕೋಟ್ಯಂತರ ರೂಪಾಯಿ […]

Continue Reading

ಆಳ್ವಾಸ್ ವಿದ್ಯಾರ್ಥಿಗಳ ಮಾದರಿ ಕಾರ್ಯ: ‘ಚಿಣ್ಣರ ತಂಗುದಾಣ’ಕ್ಕೆ ನೆರವಿನ ಹಸ್ತ

ಮೂಡುಬಿದಿರೆ: ಸಮಾಜಮುಖಿ ಚಿಂತನೆ ಹಾಗೂ ಸಾಂಸ್ಕೃತಿಕ ಸೌಹಾರ್ದತೆಯ ಸಾರ್ಥಕ ಉದಾಹರಣೆಯಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ಮಂಗಳೂರಿನ ನಿರಾಶ್ರಿತ ಮಕ್ಕಳ ಆಶ್ರಯತಾಣ ‘ಚಿಣ್ಣರ ತಂಗುದಾಣ’ಕ್ಕೆ ಭೇಟಿ ನೀಡಿ 50,000ಕ್ಕೂ ಅಧಿಕ ಮೊತ್ತದ ದೈನಂದಿನ ಅಗತ್ಯ ವಸ್ತುಗಳು, ಆಹಾರ ಸಾಮಗ್ರಿಗಳು, ಕ್ರೀಡಾ ಉಪಕರಣಗಳು ಹಾಗೂ ಶೈಕ್ಷಣಿಕ ಸಾಮಗ್ರಿಗಳನ್ನು ಹಸ್ತಾಂತರಿಸಿದರು. ಇತ್ತೀಚೆಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ಸಂಪ್ರದಾಯ ದಿನಾಚರಣೆಯನ್ನು ವೈವಿಧ್ಯತೆಯಲ್ಲಿ ಏಕತೆ ಎಂಬ ಸಂದೇಶದೊಂದಿಗೆ ಅದ್ದೂರಿಯಾಗಿ ಆಚರಿಸಲಾಗಿತ್ತು. ಕಾರ್ಯಕ್ರಮದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಸ್ಪರ್ಧೆಗಳು, ಸಾಂಪ್ರದಾಯಿಕ ಆಹಾರ ಮೇಳ ಹಾಗೂ […]

Continue Reading

ಅಡತಡೆಗಳನ್ನು ಮೀರಿ ಗುರಿ ಮುಟ್ಟುವುದೇ ನಿಜವಾದ ಶೈಕ್ಷಣಿಕ ಸಾಧನೆ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ

ಕಾರವಾರ: ಆತ್ಮಸ್ಥೈರ್ಯ ಮತ್ತು ಸತತ ಪ್ರಯತ್ನದಿಂದ ಯಾವುದೇ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಪ್ರಾಚಾರ್ಯರ ಸಂಘದ ವತಿಯಿಂದ ಆಯೋಜಿಸಲಾದ ದ್ವಿತೀಯ ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿದ ಜಿಲ್ಲೆಯ ವಿದ್ಯಾರ್ಥಿಗಳಿಗೆ ಆಯೋಜಿಸಿದ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಯುವ ಜನರು ದುಶ್ಚಟಗಳಿಗೆ ಬಲಿಯಾಗುತ್ತಿದ್ದು, ಇಂತಹ ಅನೇಕ ಅಡೆತಡೆಗಳ […]

Continue Reading

ಭಟ್ಕಳ ವಿವಿಧ ಕಾಮಗಾರಿ ಸ್ಥಳಕ್ಕೆ ಸಚಿವ ಮಂಕಾಳ ವೈದ್ಯ, ಡಿಸಿ ಲಕ್ಷ್ಮಿಪ್ರಿಯಾ ಭೇಟಿ

ಭಟ್ಕಳ: ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಯಿಂದ ನೀರು ನಿಲ್ಲುವ ಹಾಗೂ ತಾತ್ಕಾಲಿಕ ಪ್ರವಾಹ ಪರಿಸ್ಥಿತಿ ಉಂಟಾಗುವ ಭಟ್ಕಳ ನಗರದ ವಿವಿಧ ಕಾಮಗಾರಿ ಸ್ಥಳಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹಾಗೂ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಅವರು ಪರಿಶೀಲಿಸಿದರು. ಬಸ್ತಿಯ ಸೇತುವೆ ಹಾಗೂ ಕೆಳ ಸೇತುವೆ ಕಾಮಗಾರಿ ಶೀಘ್ರವೇ ಪೂರ್ಣಗೊಳಿಸಬೇಕು. ವೆಂಕಟಾಪುರ ಸೇತುವೆಯನ್ನು ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಬೇಕು. ಭಟ್ಕಳ ವೃತ್ತದಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಗೆ ವೇಗ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಳೆಗಾಲದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು […]

Continue Reading