ದೊಡ್ಡ ಸಾಮ್ರಾಜ್ಯಕ್ಕೆ ಅಧಿಪತಿ ಡಾ.ತುಂಬೆ ಮೊಯ್ದೀನ್…ತುಂಬೆ ಗ್ರಾಮದಿಂದ ಆರಂಭದ ಪಯಣದ ಹಾದಿ

ಮಂಗಳೂರು: ಸಣ್ಣ ಉದ್ಯಮ ಕನಸಿನೊಂದಿಗೆ ಆರಂಭವಾದ ಪ್ರಯತ್ನವನ್ನು ನಿರಂತರ ಪರಿಶ್ರಮ, ದೂರದೃಷ್ಟಿ ಹಾಗೂ ಸಾಮಾಜಿಕ ಬದ್ಧತೆಯೊಂದಿಗೆ ಬೆಳೆಸಿದ ತುಂಬೆ ಗ್ರೂಪ್‌, ಹಲವು ಕ್ಷೇತ್ರಗಳಲ್ಲಿ ತನ್ನದೇ ಆದ ಛಾಪು ಮೂಡಿಸಿದೆ. ಸಂಸ್ಥೆಯ ಮುಂದಿನ ಬೆಳವಣಿಗೆಗೆ ಹಲವು ಮಹತ್ವಾಕಾಂಕ್ಷಿ ಯೋಜನೆಗಳನ್ನು ರೂಪಿಸಲಾಗಿದೆ ಎಂದು ತುಂಬೆ ಗ್ರೂಪ್‌ ಸಂಸ್ಥಾಪಕ ಡಾ.ತುಂಬೆ ಮೊಯ್ದೀನ್ ಅವರು ಪತ್ರಿಕಾಗೋಷ್ಠಿಯಲ್ಲಿ ಮನಬಿಚ್ಚಿ ಮಾತನಾಡಿದರು. ಮಂಗಳೂರಿನ ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಯುವಕನಾಗಿ ಉದ್ಯಮ ಕ್ಷೇತ್ರದ ಕನಸು ಕಂಡಿದ್ದೆ. ಮೂರು ದಶಕಗಳ ಹಿಂದೆ ಗಲ್ಫ್‌ಗೆ ತೆರಳಿ ತಮ್ಮ ಉದ್ಯಮ […]

Continue Reading

ಕಾರವಾರದಲ್ಲಿ ರಾಜೀವ್ ಗಾಂಧಿ, ದೇವರಾಜ ಅರಸು ಜನ್ಮದಿನ ಆಚರಣೆ

ಕಾರವಾರ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮದಿನವನ್ನು ಕಾರವಾರ ತಾಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಗೌರವಪೂರ್ವಕವಾಗಿ ಆಚರಿಸಲಾಯಿತು. ಕಾರವಾರ ತಾಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜೀವ್ ಗಾಂಧಿ ಅವರ 82ನೇ ಹಾಗೂ ದೇವರಾಜ ಅರಸು ಅವರ 111ನೇ ಜನ್ಮದಿನೋತ್ಸವದ ಅಂಗವಾಗಿ ಇಬ್ಬರು ನಾಯಕರ ಭಾವಚಿತ್ರಗಳಿಗೆ ಪುಷ್ಪಹಾರ ಅರ್ಪಿಸಿ ಗೌರವ ಸಲ್ಲಿಸಲಾಯಿತು. ಕಾರ್ಯಕ್ರಮ ರಾಷ್ಟ್ರಗೀತೆಯೊಂದಿಗೆ ಆರಂಭಗೊಂಡಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, […]

Continue Reading

ಎಂ.ಡಿ. ಶಿಕ್ಷಣಕ್ಕೆ 1.5 ಕೋಟಿ ವಿದ್ಯಾರ್ಥಿವೇತನ, ತುಂಬೆ ಟರ್‌ನ್ಯಾಷನಲ್ ಪಾಥ್‌ವೇ ನೆರವು

ಮಂಗಳೂರು: ಅರ್ಹ ಹಾಗೂ ಪ್ರತಿಭಾವಂತ ವಿದ್ಯಾರ್ಥಿನಿಯೊಬ್ಬರ ವೈದ್ಯಕೀಯ ಸ್ನಾತಕೋತ್ತರ ಪದವಿ ಎಂ.ಡಿ. ಶಿಕ್ಷಣಕ್ಕಾಗಿ ತುಂಬೆ ಗ್ರೂಪ್‌ನ ಸಂಸ್ಥಾಪಕ ಅಧ್ಯಕ್ಷ ಡಾ. ತುಂಬೆ ಮೊಯ್ದೀನ್ ಅವರು 1.5 ಕೋಟಿ ಮೊತ್ತದ ವಿದ್ಯಾರ್ಥಿವೇತನ ಘೋಷಣೆ ಮಾಡಿದ್ದಾರೆ. ಮಂಗಳೂರಿನ ಪುರಭವನದಲ್ಲಿ ನಡೆದ ಬ್ಯಾರೀಸ್ ಕಲ್ಚರಲ್ ಫೋರಂ (ಬಿಸಿಎಫ್) ವಿದ್ಯಾರ್ಥಿವೇತನ ವಿತರಣೆ, ಮಹಿಳೆಯರಿಗೆ ಸ್ವ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ವಿತರಣೆ ಹಾಗೂ ‘ಗ್ಲೋಬಲ್ ಲೀಡರ್‌ಶಿಪ್ ಅವಾರ್ಡ್‌–2026’ ಪ್ರದಾನ ಸಮಾರಂಭದಲ್ಲಿ ವಿದ್ಯಾರ್ಥಿನಿಗೆ ‘ತುಂಬೆ ಇಂಟರ್‌ನ್ಯಾಷನಲ್ ಪಾಥ್‌ವೇ ಪ್ರೋಗ್ರಾಂ’ನ ವಿದ್ಯಾರ್ಥಿವೇತನ ಮಂಜೂರಾತಿ ಪತ್ರವನ್ನು ಹಸ್ತಾಂತರಿಸಲಾಯಿತು. ಬಿಸಿಎಫ್ […]

Continue Reading

ಆಳ್ವಾಸ್ ಪ್ರಗತಿ ಉದ್ಯೋಗ ಮೇಳದಲ್ಲಿ 15,539 ಅಭ್ಯರ್ಥಿಗಳು, ಸ್ಥಳದಲ್ಲಿಯೇ 2416 ಮಂದಿಗೆ ಆಫರ್: ವಿವೇಕ್ ಆಳ್ವ

ಮಂಗಳೂರು; ಉದ್ಯೋಗ ಅರಸಿ ಬಂದ ಸಾವಿರಾರು ಅಭ್ಯರ್ಥಿಗಳ ಪೈಕಿ 2,416 ಮಂದಿಗೆ ಸ್ಥಳದಲ್ಲೇ ಉದ್ಯೋಗದ ಆಫರ್ ದೊರೆತಿದ್ದು, ಮತ್ತೊಂದು 6,183 ಮಂದಿ ಮುಂದಿನ ಹಂತದ ನೇಮಕಾತಿ ಪ್ರಕ್ರಿಯೆಗೆ ಆಯ್ಕೆಯಾಗಿದ್ದಾರೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನಡೆದ 16ನೇ ಆವೃತ್ತಿಯ ‘ಆಳ್ವಾಸ್ ಪ್ರಗತಿ’ ಉದ್ಯೋಗ ಮೇಳ ಈ ಬಾರಿ ಗಮನಾರ್ಹ ಫಲಿತಾಂಶ ದಾಖಲಿಸಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. 332 ಕಂಪನಿಗಳು ಮೇಳದಲ್ಲಿ ಭಾಗವಹಿಸಿದ್ದು, 15,539 ಅಭ್ಯರ್ಥಿಗಳು ವಿವಿಧ […]

Continue Reading

ರೋಹನ್ ಕಾರ್ಪೊರೇಷನ್‌ನ ವ್ಯವಸ್ಥಾಪಕ ನಿರ್ದೇಶಕ ರೋಹನ್ ಮೊಂತೆರೊಗೆ ಮಾತೃ ವಿಯೋಗ

ಮಂಗಳೂರು: ಮೂಡುಜೆಪ್ಪು–ಕೆಲರಾಯಿ ನಿವಾಸಿ, ದಿವಂಗತ ಗಿಲ್ಬರ್ಟ್ ಮೊಂತೆರೊ ಅವರ ಪತ್ನಿ ಪ್ರೆಸಿಲ್ಲಾ ಮೊಂತೆರೊ (81) ಅವರು ಅಲ್ಪಕಾಲದ ಅಸೌಖ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನರಾದರು. ಪರೋಪಕಾರಿ ಸ್ವಭಾವದವರಾಗಿದ್ದ ಪ್ರೆಸಿಲ್ಲಾ ಮೊಂತೆರೊ ಅವರು ನೆರೆಹೊರೆಯವರು ಹಾಗೂ ಪರಿಚಿತರ ಜತೆಗೆ ಆತ್ಮೀಯ ಬಾಂಧವ್ಯ ಹೊಂದಿದ್ದರು. ಸರಳತೆ ಹಾಗೂ ಸೌಹಾರ್ದ ಸ್ವಭಾವದಿಂದ ಎಲ್ಲರೊಂದಿಗೂ ಉತ್ತಮ ಸಂಬಂಧ ಹೊಂದಿದ್ದ ಅವರು, ಕುಟುಂಬ ಹಾಗೂ ಸಮಾಜದಲ್ಲಿ ಗೌರವಕ್ಕೆ ಪಾತ್ರರಾಗಿದ್ದರು. ಮೃತರು ರೋಹನ್ ಕಾರ್ಪೊರೇಷನ್‌ನ ವ್ಯವಸ್ಥಾಪಕ ನಿರ್ದೇಶಕ ರೋಹನ್ ಮೊಂತೆರೊ ಸೇರಿದಂತೆ ಮೂರು ಮಂದಿ […]

Continue Reading

ಜನರ ಸಮಸ್ಯೆಗಳಿಗೆ ಧ್ವನಿಯಾಗುವ ಮಾಧ್ಯಮ:ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ

ಕಾರವಾರ: ಸರ್ಕಾರದ ಯೋಜನೆಗಳು ಮತ್ತು ಸೌಲಭ್ಯಗಳ ಮಾಹಿತಿ ಜನರಿಗೆ ತಲುಪಿಸುವುದರ ಜತೆಗೆ, ಸಾರ್ವಜನಿಕರ ಸಮಸ್ಯೆಗಳನ್ನು ಆಡಳಿತದ ಗಮನಕ್ಕೆ ತಂದು ಪರಿಹಾರ ಕಲ್ಪಿಸುವಲ್ಲಿಯೂ ಮಾಧ್ಯಮಗಳು ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾರತ ಸರ್ಕಾರದ ವಾರ್ತಾ ಶಾಖೆ (ಪಿಐಬಿ), ಬೆಂಗಳೂರು ಹಾಗೂ ಉತ್ತರ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಜಿಲ್ಲಾ ಮಾಧ್ಯಮ ಪ್ರತಿನಿಧಿಗಳಿಗಾಗಿ ಆಯೋಜಿಸಿದ್ದ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತ […]

Continue Reading

100 ಕೋಟಿ ವೆಚ್ಚದ ಭೂಕುಸಿತ ತಡೆ ಕಾಮಗಾರಿ, ನಿಗದಿತ ಅವದಿಯೊಳಗೆ ಮುಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಭವನೀಯ ಭೂಕುಸಿತ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕೈಗೊಂಡಿರುವ ₹100 ಕೋಟಿ ವೆಚ್ಚದ ಭೂಕುಸಿತ ತಡೆ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಭೂಕುಸಿತ ತಡೆಗಾಗಿ ₹100 ಕೋಟಿ ವೆಚ್ಚದಲ್ಲಿ ಒಟ್ಟು 99 ಕಾಮಗಾರಿಗಳನ್ನು ಕೈಗೊಳ್ಳಲು ಈಗಾಗಲೇ ಅನುಮೋದನೆ ನೀಡಲಾಗಿದೆ. ಎಲ್ಲಾ ಕಾಮಗಾರಿಗಳ […]

Continue Reading

ಮಂಗಳೂರು: ಮೆಕ್ಡನಾಲ್ಡ್ಸ್ ಫ್ಯಾಮಿಲಿ ರೆಸ್ಟೋರೆಂಟ್‌ಗೆ ಆಹಾರ ಸುರಕ್ಷತಾ ಅಧಿಕಾರಿಗಳ ದಿಢೀರ್ ದಾಳಿ

ಮಂಗಳೂರು: ನಗರದಲ್ಲಿ ಆರೋಗ್ಯ ಇಲಾಖೆ ಹಾಗೂ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ದಿಡೀರ್ ದಾಳಿ ಮುಂದುವರೆಸಿದ್ದು, ಶನಿವಾರ ಸಿಟಿ ಸೆಂಟರ್ ಮಾಲ್ ನಲ್ಲಿ ಇದ್ದ ಮಳಿಗೆ ಮೇಲೆ ದಾಳಿ ಮಾಡಿ, ಸುರಕ್ಷತೆ ಹಾಗೂ ಕೊಳೆತ ಮಾಂಸ ಪತ್ತೆ ಆಗಿರುವ ಹಿನ್ನಲೆಯಲ್ಲಿ ಬಂದ್ ಮಾಡಿಸಿದ್ದರು. ಇದರ ಬೆನ್ನಲ್ಲೆ ಭಾನುವಾರ ಮೆಕ್ಡನಾಲ್ಡ್ಸ್ ಫ್ಯಾಮಿಲಿ ರೆಸ್ಟೋರೆಂಟ್‌ಗೆ ದಾಳಿ ಮಾಡಿ ಅಧಿಕಾರಿಗಳು ಗುಣಮಟ್ಟ ಹಾಗೂ ಶುಚಿತ್ವವನ್ನು ಪರಿಶೀಲನೆ ನಡೆಸಿದರು. ಜಿಲ್ಲಾ ಆರೋಗ್ಯ ಇಲಾಖೆ ಹಾಗೂ ಆಹಾರ ಸುರಕ್ಷತಾ ಅಧಿಕಾರಿಗಳು ಮಳಿಗೆಯ ಅಡುಗೆ ಕೋಣೆ, […]

Continue Reading

ಮತದಾರರ ಪಟ್ಟಿ ಪರಿಷ್ಕರಣೆ, 11.23 ಲಕ್ಷ ಅರ್ಜಿಗಳ ಗಣಕೀಕರಣ: ಡಿಸಿ ಲಕ್ಷ್ಮಿಪ್ರಿಯಾ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ–2026ರ ಪ್ರಕ್ರಿಯೆ ಚುರುಕಿನಿಂದ ಸಾಗಿದ್ದು, ಇದುವರೆಗೆ 11,23,004 ಎನ್ಯುಮರೇಷನ್ ಫಾರ್ಮ್‌ಗಳನ್ನು ಗಣಕೀಕರಣಗೊಳಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 12,30,037 ಮತದಾರರಿದ್ದು, ಪ್ರತಿಯೊಬ್ಬರಿಗೂ ಎನ್ಯುಮರೇಷನ್ ಫಾರ್ಮ್‌ಗಳನ್ನು ವಿತರಿಸಲಾಗಿದೆ. ಈ ಪೈಕಿ 11,23,004 ಫಾರ್ಮ್‌ಗಳ ಗಣಕೀಕರಣ ಪೂರ್ಣಗೊಂಡಿದೆ. ಮನೆ–ಮನೆ ಭೇಟಿ ಸಂದರ್ಭದಲ್ಲಿ ಸ್ಥಳಾಂತರ, ಮರಣ ಹಾಗೂ ದ್ವಿಪ್ರತಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 1,07,033 ಮತದಾರರನ್ನು ಗುರುತಿಸಲಾಗಿದೆ. ಇದರಲ್ಲಿ 45,638 […]

Continue Reading

ಕೊಳೆತ ಮಾಂಸ ಪತ್ತೆ, ಆಹಾರ ಮಳಿಗೆ, ಪಿಜಿ, ಹಾಸ್ಟೆಲ್‌ಗಳಿಗೂ ದಾಳಿ, ನಿಯಮ ಉಲ್ಲಂಘಿಸಿದರೆ ಯಾರನ್ನು ಬಿಡಲ್ಲ: ಸಚಿವ ಖಾದರ್

ಮಂಗಳೂರು: ನಗರದ ಕೆಎಫ್‌ಸಿ ರೆಸ್ಟೋರೆಂಟ್‌ನಲ್ಲಿ ಕೊಳೆತ ಮಾಂಸ ಪತ್ತೆಯಾದ ಹಿನ್ನೆಲೆಯಲ್ಲಿ ಆಹಾರ ಮಳಿಗೆಗಳ ಫ್ರ್ಯಾಂಚೈಸಿಗಳಿಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಎಚ್ಚರಿಕೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಎಲ್ಲೆಡೆ ಇಂತಹ ದಾಳಿ ಹಾಗೂ ತಪಾಸಣೆಗಳು ನಡೆಯಲಿವೆ. ಆಹಾರ ಮಳಿಗೆಗಳ ಅಡುಗೆಮನೆ ಹಾಗೂ ಸಂಗ್ರಹ ಕೊಠಡಿಗಳಲ್ಲಿ ಗುಣಮಟ್ಟದ ಆಹಾರ ಪದಾರ್ಥಗಳನ್ನು ಮಾತ್ರ ಇರಿಸಬೇಕು. ನೈರ್ಮಲ್ಯ ಕಾಪಾಡಬೇಕು. ಯಾವುದೇ ಸಂದರ್ಭದಲ್ಲೂ ದಾಳಿ ನಡೆಸಬಹುದು ಎಂದು ಅವರು ಎಚ್ಚರಿಸಿದರು. ಎಷ್ಟೇ ದೊಡ್ಡವರಾಗಿದ್ದರೂ, ಸಣ್ಣವರಾಗಿದ್ದರೂ ನಿಯಮ ಉಲ್ಲಂಘಿಸಿದರೆ ಬಿಡುವುದಿಲ್ಲ. ನಮಗೆ ಜನರ ಆರೋಗ್ಯವೇ ಮುಖ್ಯ. […]

Continue Reading