ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಹೆಚ್ಚಳ, ಜೂನ್ 1 ರಿಂದಲೇ ಎಫೆಕ್ಟ್, ತಿಂಡಿ ಬೆಲೆ ಏರಿಕೆ ಸಾಧ್ಯತೆ!

ಬೆಂಗಳೂರು: ಇಂಧನ ಬಿಕ್ಕಟ್ಟಿನ ನಡುವೆ ದೇಶದಲ್ಲಿ ಮತ್ತೆ ಜನರಿಗೆ ಬೆಲೆ ಏರಿಕೆ ಬಿಸಿ ಮುಟ್ಟಲಿದೆ. 19 ಕೆಜಿಯ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ 42 ರೂಪಾಯಿಗಳು ಹೆಚ್ಚಳ ಆಗಿದೆ. ಪರಿಷ್ಕೃತ ದರ ಜೂನ್ 1 ರಿಂದಲೇ ಅಸ್ತಿತ್ವಕ್ಕೆ ಬಂದಿದೆ. ಈ ಪರಿಷ್ಕರಣೆಯೊಂದಿಗೆ ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ ರಿಟೇಲ್ ದರ 3,113.50 ರೂಪಾಯಿಗೆ ಏರಿಕೆ ಆಗಿದೆ. ಹೋಟೆಲ್, ರೆಸ್ಟೋರೆಂಟ್ ಮತ್ತು ಉದ್ಯಮಗಳಿಗೆ ಈ ದರ ಏರಿಕೆ ಇನ್ನಷ್ಟು ಆರ್ಥಿಕ ಹೊರೆಯಾಗಿ ಪರಿಣಮಿಸಲಿದೆ. ಬೆಂಗಳೂರಿನಲ್ಲಿ ವಾಣಿಜ್ಯ ಎಲ್​ಪಿಜಿ ಸಿಲಿಂಡರ್ […]

Continue Reading

ಎನ್‌ಎಂಪಿಎ ಇಂಡಿಯನ್ ಓಪನ್ ಆಫ್ ಸರ್ಫಿಂಗ್‌ಗೆ ತೆರೆ: ಸರ್ಫಿಂಗ್ ಓಪನ್‌ನಲ್ಲಿ ಕಮಲಿ ಮೂರ್ತಿಗೆ ಡಬಲ್ ಕಿರೀಟ

ಮಂಗಳೂರು: ಎನ್‌ಎಂಪಿಎ ಇಂಡಿಯನ್ ಓಪನ್ ಆಫ್ ಸರ್ಫಿಂಗ್ ಅಂತಿಮ ದಿನ ತಮಿಳುನಾಡಿನ ಯುವ ಸರ್ಫರ್ ಕಮಲಿ ಮೂರ್ತಿ ಮಹಿಳೆಯರ ಓಪನ್ ಹಾಗೂ 18 ವರ್ಷ ವಯೋಮಿತಿಯೊಳಗಿನ ಬಾಲಕಿಯರ ವಿಭಾಗದಲ್ಲಿ ಪ್ರಶಸ್ತಿ ಗೆದ್ದು ಡಬಲ್ ಸಾಧನೆ ಮಾಡಿದ್ದಾರೆ. ಪುರುಷರ ಓಪನ್ ವಿಭಾಗದಲ್ಲಿ ತಮಿಳುನಾಡಿನ ಕಿಶೋರ್ ಕುಮಾರ್ ಚಾಂಪಿಯನ್ ಆಗಿ ಹೊರಹೊಮ್ಮಿದರೆ, 18 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಪ್ರಥ್ವೀಪ್ ಪೂಜಾರ್ ಗೆದ್ದು ಕರ್ನಾಟಕಕ್ಕೆ ಟೂರ್ನಿಯ ಏಕೈಕ ಪ್ರಶಸ್ತಿ ತಂದುಕೊಟ್ಟರು. 14 ವರ್ಷದೊಳಗಿನ (ಗ್ರೋಮ್ಸ್) ವಿಭಾಗದಲ್ಲಿ ಹರೀಶ್ ಪಿ ಮತ್ತು ಧಮಯಂತಿ […]

Continue Reading

ಬ್ಯಾಕ್ ಟು ಬ್ಯಾಕ್ ಆರ್ ಸಿಬಿ ಗೆಲುವಿನ ಪತಾಕೆ, ಐಪಿಎಲ್ ನಲ್ಲಿ ಮತ್ತೇ ಅಜೇಯ, ಕೊಹ್ಲಿ ಆಟಕ್ಕೆ ಪ್ರೇಕ್ಷಕರ ಪಿಧಾ

ಬೆಂಗಳೂರು: ಕ್ರಿಕೆಟ್ ಪ್ರೇಮಿಗಳ ದಶಕಗಳ ಕನಸನ್ನು ನನಸು ಮಾಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಈಗ ಸತತ 2 ನೇ ಬಾರಿಗೆ ಐಪಿಎಲ್ ಟ್ರೋಫಿ ಎತ್ತಿ ಹಿಡಿಯುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದೆ. ಅಹಮದಾಬಾದ್‌ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಗುಜರಾತ್ ತಂಡದ ವಿರುದ್ಧ ಭರ್ಜರಿ ಜಯಭೇರಿ ಬಾರಿಸಿದ ಆರ್​​ಸಿಬಿ, ಮತ್ತೊಮ್ಮೆ ಐಪಿಎಲ್ ಕಿರೀಟ ಮುಡಿಗೇರಿಸಿಕೊಂಡಿದೆ. ಈ ಸಲವೂ ಕಪ್ ನಮ್ಮದೇ ಎಂದು ಸಾರಿದ್ದ ಅಭಿಮಾನಿಗಳ ಸಂಭ್ರಮವೀಗ ಮುಗಿಲು ಮುಟ್ಟಿದೆ. ಆರ್​​ಸಿಬಿ ಜಯಭೇರಿ […]

Continue Reading

ಧರ್ಮಸ್ಥಳದಲ್ಲಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ಉದ್ಘಾಟಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್

 ಉಜಿರೆ: ಗ್ರಾಮೀಣ ಮಹಿಳೆಯರ ಸಂಕಷ್ಟದ ಬದುಕನ್ನು ಕಣ್ಣಾರೆ ಕಂಡ ಬಳಿಕ ಅವರಿಗೆ ಶಾಶ್ವತ ಜೀವನೋಪಾಯ ಕಲ್ಪಿಸುವ ಉದ್ದೇಶದಿಂದ ಆರಂಭವಾದ ಪ್ರಯತ್ನವೇ ‘ಸಿರಿ’ ಎಂಬ ಮಹಿಳಾ ಆರ್ಥಿಕ ಸಬಲೀಕರಣದ ಚಳವಳಿಯಾಗಿ ಬೆಳೆದು ಬರುತ್ತಿದೆ ಎಂದು ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಹೇಳಿದರು. ಬೆಳ್ತಂಗಡಿಯ ಮಾತೃಶ್ರೀ ಸಿರಿ ಇಂಡಸ್ಟ್ರಿಯಲ್ ಪಾರ್ಕ್ ಉದ್ಘಾಟನೆ ಮಾಡಿ ಭಾನುವಾರ ಧರ್ಮಸ್ಥಳದಲ್ಲಿ ಅವರು ಮಾತನಾಡಿ, ಸರ್ವಧರ್ಮೀಯರನ್ನೂ, ಎಲ್ಲ ಜಾತಿಯವರನ್ನೂ ಸಮಾನತೆ ಮತ್ತು ಗೌರವಭಾವದಿಂದ ಪರಿಗಣಿಸಿ ಸಾಮಾಜಿಕ ಸಾಮರಸ್ಯದ ಜತೆಗೆ ಅವರು ಮಾಡುತ್ತಿರುವ ಸೇವೆ ಆದರ್ಶ […]

Continue Reading

ಮೂಡುಬಿದಿರೆ ಆಳ್ವಾಸ್ ಪದವಿ ಪ್ರದಾನ ಸಮಾರಂಭ, ಪದವಿ ಪ್ರಮಾಣ ಪತ್ರಕ್ಕಿಂತ ಮೌಲ್ಯಗಳೇ ಶ್ರೇಷ್ಠ ಎಂದ ಡಾ. ಚಿನ್ನಪ್ಪ ಗೌಡ

ಮೂಡುಬಿದಿರೆ : ಶಿಕ್ಷಣದ ನಿಜವಾದ ಉದ್ದೇಶವು ಕೇವಲ ಪದವಿ ಪಡೆಯುವುದಲ್ಲ, ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವುದಾಗಿದೆ. ಪದವಿ ಪ್ರಮಾಣಪತ್ರವು ಕೇವಲ ಒಂದು ಕಾಗದದ ತುಣುಕಾಗಿದ್ದು, ಅದಕ್ಕೆ ನಿಜವಾದ ಮೌಲ್ಯ ದೊರೆಯುವುದು ವ್ಯಕ್ತಿಯ ಜ್ಞಾನ, ಸಾಮರ್ಥ್ಯ, ಪ್ರಾಮಾಣಿಕತೆ ಹಾಗೂ ಜೀವನ ಮೌಲ್ಯಗಳಿಂದ ಮಾತ್ರ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ. ಚಿನ್ನಪ್ಪ ಗೌಡ ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಶನಿವಾರ ಆಳ್ವಾಸ್ ನುಡಿಸಿರಿ ವೇದಿಕೆಯಲ್ಲಿ ಆಯೋಜಿಸಲಾದ ಪದವಿ ಪ್ರದಾನ ಸಮಾರಂಭದಲ್ಲಿ ಆಳ್ವಾಸ್‌ನ ವಿವಿಧ ಶಿಕ್ಷಣ ಸಂಸ್ಥೆಗಳ […]

Continue Reading

ಕೈ ಹೈಕಮಾಂಡ್ ಚಾಣಾಕ್ಷ ನಡೆ, ಸಿದ್ದು ಬಾಯಿಂದಲೇ ಡಿಕೆಶಿ ಹೆಸರು ಪ್ರಸ್ತಾಪ, ಡಿಕೆಶಿ ಸಿಎಲ್ ಪಿಗೆ ಅವಿರೋಧ ಆಯ್ಕೆ

ಬೆಂಗಳೂರು: ಕೈ ಹೈಕಮಾಂಡ್ ಕೊನೆಗೂ ತನ್ನ ಚಾಣಾಕ್ಷ ನಡೆಯಿಂದ ಅಧಿಕಾರ ಹಂಚಿಕೆಯ ಬಿಕ್ಕಟ್ಟನ್ನು ಪರಿಹಾರ ಮಾಡುವಲ್ಲಿ ಯಶಸ್ಸು ಕಂಡಿದೆ. ಸಿದ್ದರಾಮಯ್ಯ ಅವರಿಂದಲೇ ಡಿಕೆಶಿ ಹೆಸರನ್ನು ಸಿಎಂ ಪಟ್ಟಕ್ಕೆ ಹೇಳಿಸಿದ್ದು ಅಚ್ಚರಿಯ ನಡೆಗೆ ಕಾರಣ ಆಗಿದೆ. ಎಲ್ಲ ಶಾಸಕರು ಕೈ ಎತ್ತುವ ಮೂಲಕ ಡಿಕೆಶಿಗೆ ಬೆಂಬಲ ಸೂಚನೆ ಮಾಡಿದರು. ಡಿಕೆಶಿ ಅವರು ಸರಕಾರ ರಚನೆಗೆ ಹಕ್ಕು ಮಂಡಿಸುವುದಕ್ಕೆ ರಾಜ್ಯಪಾಲರನ್ನು ಭೇಟಿ ಮಾಡಿದರು. ಬುಧವಾರ ಸಿಎಂ ಆಗಿ ಡಿಕೆಶಿ ಅವರು ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಈ ವೇಳೆ ಮಾತನಾಡಿದ ಕೆಸಿ […]

Continue Reading

ಮಂಗಳೂರಿಗೆ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಆಗಮನ, ಸ್ವಾಗತಿಸಿದ ಜಿಲ್ಲಾಡಳಿತ

ಮಂಗಳೂರು: ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಶನಿವಾರ ಮಂಗಳೂರಿಗೆ ಆಗಮಿಸಿದರು. ವಾಯುಪಡೆ ವಿಶೇಷ ವಿಮಾನದಲ್ಲಿ ಮಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಉಪ ರಾಷ್ಟ್ರಪತಿ ಅವರನ್ನು ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಅವರು ಕರಾವಳಿಯ ಮಲ್ಲಿಗೆ ಹಾರವನ್ನು ಹಾಕಿ ಸ್ವಾಗತಿಸಿದರು. ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮತ್ತು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ, ಅವರು ಉಪರಾಷ್ಟ್ರಪತಿಗಳನ್ನು ಸ್ವಾಗತಿಸಿದರು. ಬಳಿಕ ಅವರು ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ತೆರಳಿ, ಧರ್ಮಸ್ಥಳ ಅಥಿತಿಗೃಹದಲ್ಲಿ ವಾಸ್ತವ್ಯ ಹೂಡಿದರು. ಭಾನುವಾರ […]

Continue Reading

ಎನ್‌ಎಂಪಿಎ ಇಂಡಿಯನ್ ಓಪನ್ ಆಫ್ ಸರ್ಫಿಂಗ್ : ಅಲೆಗಳ ವಯ್ಯಾರ ಅಬ್ಬರದಲ್ಲಿ ಸರ್ಫರ್ ಗಳ ತೀವ್ರ ಹಣಾಹಣಿ

ಮಂಗಳೂರು: ಇಲ್ಲಿನ ತಣ್ಣೀರು ಭಾವಿಯಲ್ಲಿ ನಡೆಯುತ್ತಿರುವ 7 ನೇ ಆವೃತ್ತಿಯ ಎನ್‌ಎಂಪಿಎ ಇಂಡಿಯನ್ ಓಪನ್ ಆಫ್ ಸರ್ಫಿಂಗ್ ಸ್ಪರ್ಧೆಯ 2ನೇ ದಿನ ಪುರುಷರ ಓಪನ್ ವಿಭಾಗದ ಸೆಮಿಫೈನಲಿಸ್ಟ್‌ಗಳು ಭರ್ಜರಿ ಪ್ರದರ್ಶನ ನೀಡಿದರು. ಶನಿವಾರ ನಡೆದ ಐದು ವಿಭಾಗಗಳಲ್ಲಿ ಒಟ್ಟು ಆರು ಕ್ವಾರ್ಟರ್‌ಫೈನಲ್ ಹಾಗೂ ಆರು ಸೆಮಿಫೈನಲ್ ಪಂದ್ಯಗಳು ನಡೆದವು. ಪುರುಷರ ಮುಕ್ತ ವಿಭಾಗದ ಕ್ವಾರ್ಟರ್‌ ಫೈನಲ್‌ ನಲ್ಲಿ ಕೇರಳದ ರಮೇಶ್ ಬೂದಿಹಾಳ್ 14.83 ಅಂಕ ಗಳಿಸಿ ಅಗ್ರಸ್ಥಾನ ದಾಖಲಿಸಿದರು. ಶ್ರೀಕಾಂತ್ ಡಿ 13 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದ್ದರೆ, […]

Continue Reading

ಸೇವೆಯಲ್ಲಿ ಇರುವ ಶಿಕ್ಷಕರಿಗೂ ಟಿಇಟಿ ಕಡ್ಡಾಯ, ಮರುಪರಿಶೀಲನಾ ಅರ್ಜಿಗಳ ವಜಾ; 2028 ರ ಅಗಸ್ಟ್‌ 31 ರವರೆಗೆ ಸುಪ್ರೀಂ ಗಡುವು ವಿಸ್ತರಣೆ

ನವದೆಹಲಿ: ಸೇವೆಯಲ್ಲಿ ಇರುವ ಶಿಕ್ಷಕರಿಗೂ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಕಡ್ಡಾಯ ಎಂಬ ತನ್ನ ಹಿಂದಿನ ತೀರ್ಪ ಅನ್ನು ಸುಪ್ರೀಂ ಕೋರ್ಟ್ ಮತ್ತೊಮ್ಮೆ ಎತ್ತಿ ಹಿಡಿದಿದೆ. 2025ರ ತೀರ್ಪಿನ ಮರುಪರಿಶೀಲನೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ವಜಾಗೊಳಿಸಿರುವ ನ್ಯಾಯಾಲಯ, ಟಿಇಟಿ ಅರ್ಹತೆ ಪಡೆಯಲು ಶಿಕ್ಷಕರಿಗೆ 2028 ರ ಅಗಸ್ಟ್‌ 31 ರವರೆಗೆ ಕಾಲಾವಕಾಶ ನೀಡಿದೆ. ಮಕ್ಕಳ ಗುಣಮಟ್ಟದ ಶಿಕ್ಷಣದ ಹಕ್ಕು ಸಂರಕ್ಷಿಸುವ ದೃಷ್ಟಿಯಿಂದ ಟಿಇಟಿ ಅಗತ್ಯವಾಗಿದ್ದು, ನಿಗದಿತ ಅವಧಿಯೊಳಗೆ ಅರ್ಹತೆ ಪಡೆಯದ ಶಿಕ್ಷಕರು ಸೇವೆಯಲ್ಲಿ ಮುಂದುವರಿಯಲು ಅವಕಾಶವಿರುವುದಿಲ್ಲ ಎಂದು […]

Continue Reading

ಧರ್ಮಸ್ಥಳ: ವೃದ್ಧೆಗೆ ಪ್ರಸಾದ, ಜ್ಯೂಸ್ ನೀಡಿ ಅಸ್ವಸ್ಥ ಮಾಡಿ ಚಿನ್ನಾಭರಣ ಅಪಹರಣ

ಬೆಳ್ತಂಗಡಿ: ಧರ್ಮಸ್ಥಳಕ್ಕೆ ದೇವರ ದರ್ಶನಕ್ಕೆ ಬಂದಿದ್ದ ವೃದ್ದೆಗೆ ಮತ್ತು ಬರುವ ಲಡ್ಡು ಮತ್ತು ಜ್ಯೂಸ್ ಕೊಟ್ಟು ವೃದ್ಧೆಯನ್ನು ಅಸ್ವಸ್ಥರನ್ನಾಗಿ ಮಾಡಿ ಹತ್ತು ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಅಪಹರಣ ಮಾಡಿ ಪರಾರಿ ಆಗಿರುವ ಘಟನೆ ನಡೆದಿದ್ದು, ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರು ಜೆ.ಪಿ.ನಗರ ನಿವಾಸಿ ಪ್ರೇಮಾ.ಕೆ (70) ಎಂಬುವವರು ಮೇ 23 ರಂದು ಬೆಂಗಳೂರಿನಿಂದ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ಇರುವ ತನ್ನ ಚಿಕ್ಕಮ್ಮನ ಮಗಳ ಮನೆಗೆ ಪೂಜಾ ಕಾರ್ಯಕ್ರಮಕ್ಕೆ ಬಂದಿದ್ದರು. ಮೇ […]

Continue Reading