ತಣ್ಣೀರು ಬಾವಿ ಬೀಚ್‌ನಲ್ಲಿ ರಾಷ್ಟ್ರ ಮಟ್ಟದ ಸರ್ಫಿಂಗ್ ಸ್ಪರ್ಧೆ 29 ರಿಂದ

ಮಂಗಳೂರು: ಇದೇ 29 ರಿಂದ 31 ರವರಿಗೆ ತಣ್ಣೀರು ಬಾವಿ ಬೀಚ್‌ನಲ್ಲಿ ರಾಷ್ಟ್ರ ಮಟ್ಟದ ಸರ್ಫಿಂಗ್ ಸ್ಪರ್ಧೆ ನಡೆಯುತ್ತಿದ್ದು, ಇದಕ್ಕಾಗಿ ಐಚಿ ನಗೋಯಾ ಏಷ್ಯನ್ ಗೇಮ್ಸ್ 2026 ನಲ್ಲಿ ಸರ್ಫಿಂಗ್‌ನಲ್ಲಿ ಭಾರತದ ಸ್ಪರ್ಧಿಗಳು ಚೊಚ್ಚಲ ಪ್ರವೇಶಕ್ಕೆ ಸಿದ್ಧತೆ ನಡೆಸುತ್ತಿದ್ದು, ಸರ್ಫಿಂಗ್ ಸ್ಪರ್ಧಿಗಳಿಗೆ ಒಂದು ರೀತಿಯ ಹಬ್ಬದ ವಾತಾವರಣ ಕಟ್ಟಿಕೊಡುವುದಕ್ಕೆ ವೇದಿಕೆ ಸಿದ್ದವಾಗುತ್ತಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸರ್ಫಿಂಗ್ ಫೆಡರೇಶನ್ ಆಫ್ ಇಂಡಿಯಾ ಮತ್ತು ಕರ್ನಾಟಕದ ಜತೆಗೆ, ಎನ್‌ಎಂಶಿಎ ಸಹಭಾಗಿತ್ವದಲ್ಲಿ ಮೂರು […]

Continue Reading

ಇಂದಿನಿಂದ ಕದ್ರಿ ಉದ್ಯಾನದಲ್ಲಿ ಮಾವು ಮೇಳ, ನೈಸರ್ಗಿಕವಾಗಿ ಮಾಗಿಸಿದ ಮಾವು ಮಾರಾಟ: ರಮೇಶ್

ಮಂಗಳೂರು: ರಾಮನಗರ ಜಿಲ್ಲಾ ಮಾವು ತೋಟದ ಬೆಳೆಗಾರರ ಮಾರಾಟ ಸಂಘದ ವತಿಯಿಂದ ತೋಟಗಾರಿಕಾ ಇಲಾಖೆಯ ಸಹಕಾರದಲ್ಲಿ ಇದೇ ಮೇ 28 ರಿಂದ 31 ರವರೆಗೆ ನಗರದ ಕದ್ರಿ ಉದ್ಯಾನದಲ್ಲಿ ಮಾವು ಮೇಳ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ರಮೇಶ್ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಈ ಮೇಳದಲ್ಲಿ ಉತ್ತಮ ಗುಣಮಟ್ಟದ ಹಾಗೂ ನೈಸರ್ಗಿಕವಾಗಿ ಮಾಗಿಸಲಾದ ಮಾವು ಬೆಳೆಯ ವಿವಿಧ ತಳಿಗಳಾದ ಆಲ್ಫಾನ್ಸೋ, ಬಾದಾಮಿ, ಮಲ್ಲಿಕ, ರಸಪುರಿ, ಮಲಗೋವಾ, ಸಿಂಧೂರ, ಕಾಲಪಾಡಿ, ತೋತಾಪುರಿ, ಬೆಂಗನ್ಪಲ್ಲಿ, ಶುಗರ್ ಬೇಬಿ ಇತ್ಯಾದಿ […]

Continue Reading

ಮೇ 30, 31 ರಂದು ದ.ಕ ಜಿಲ್ಲೆಗೆ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್‌

ಮಂಗಳೂರು: ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್‌ ಅವರು ಮೇ 30 ಹಾಗೂ 31 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದು, ಮೇ 30 ರಂದು ಸಂಜೆ 4.25ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, 5. 05 ಗಂಟೆಗೆ ಧರ್ಮಸ್ಥಳ ಹೆಲಿಪ್ಯಾಡ್ ಆಗಮನ, ಬಳಿಕ ಧರ್ಮಸ್ಥಳ ಅಥಿತಿಗೃಹದಲ್ಲಿ ವಾಸ್ತವ್ಯ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ಮೇ 31 ರಂದು ಬೆಳಿಗ್ಗೆ 8 ಗಂಟೆಗೆ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಾಲಯಕ್ಕೆ ಭೇಟಿ, 11 ಗಂಟೆಗೆ ಬೆಳ್ತಂಗಡಿಯಲ್ಲಿ ಸಿರಿ ಇಂಡಸ್ಟ್ರೀಯಲ್ […]

Continue Reading

ಮಂಗಳೂರಿಗೆ ಅಮ್ಮನ ಆಗಮನ: ಮೇ 28, 29 ರಂದು ಬ್ರಹ್ಮಸ್ಥಾನ ಮಹೋತ್ಸವ, ಭಕ್ತರ ಸಂಭ್ರಮ

ಮಂಗಳೂರು: ಮಾತಾ ಅಮೃತಾನಂದಮಯಿ ದೇವಿ ಅವರು ಕರ್ನಾಟಕ–ಕೇರಳ ಯಾತ್ರೆಯ ಅಂಗವಾಗಿ ಮಂಗಳೂರಿಗೆ ಮಂಗಳವಾರ ಆಗಮಿಸಿದ್ದಾರೆ. ಮೇ 28 ಮತ್ತು 29 ರಂದು ನಗರದ ಬೋಳೂರಿನಲ್ಲಿರುವ ಮಾತಾ ಅಮೃತಾನಂದಮಯಿ ಮಠದಲ್ಲಿ ನಡೆವ ಬ್ರಹ್ಮಸ್ಥಾನ ಮಹೋತ್ಸವದಲ್ಲಿ ಅಮ್ಮ ಭಾಗವಹಿಸಲಿದ್ದಾರೆ. ಏಳು ವರ್ಷಗಳ ಬಳಿಕ ಅಮ್ಮ ಮಂಗಳೂರಿಗೆ ಭೇಟಿ ನೀಡಿದ್ದು, ಮಾತಾ ಅಮೃತಾನಂದಮಯಿ ಮಠದಲ್ಲಿ ಭಕ್ತರು ಹಾಗೂ ಆಶ್ರಮದ ಪ್ರತಿನಿಧಿಗಳು ವೇದಘೋಷ ಮತ್ತು ಸಾಂಪ್ರದಾಯಿಕ ವಾದ್ಯಗಳೊಂದಿಗೆ ಭವ್ಯ ಸ್ವಾಗತ ಕೋರಿದರು. ಮಂಗಳೂರಿನ ಮಾತಾ ಅಮೃತಾನಂದಮಯಿ ಮಠದ ಮುಖ್ಯಸ್ಥ ಸ್ವಾಮಿನಿ ಮಂಗಳಾಮೃತ ಪ್ರಾಣ […]

Continue Reading

ಎನ್‌ಎಂಡಿಸಿ ಜತೆಗೆ ಕೆಐಓಸಿಎಲ್ ವಿಲೀನಕ್ಕೆ ಕೇಂದ್ರ ಸಚಿವ ಎಚ್ಡಿಕೆಗೆ ಶಾಸಕ ಡಾ. ಭರತ್ ಶೆಟ್ಟಿ ಮನವಿ

ಮಂಗಳೂರು: ಕುದುರೆಮುಖ ಕಬ್ಬಿಣದ ಅದಿರು ಕಂಪನಿಯನ್ನು ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದ (ಎನ್‌ಎಂಡಿಸಿ) ಜತೆ ವಿಲೀನಗೊಳಿಸಬೇಕು. ಕುದುರೆಮುಖ ಸಂಸ್ಥೆಯ ಕಾರ್ಮಿಕರ ಬಹುದಿನಗಳ ಬೇಡಿಕೆಗಳನ್ನು ಈಡೇರಿಸಲು ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಡಾ. ಭರತ್ ಶೆಟ್ಟಿ ಅವರು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್. ಡಿ. ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು. ಬೆಂಗಳೂರಿನಲ್ಲಿ ಸಚಿವರನ್ನು ಭೇಟಿ ಮಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಉದ್ಯೋಗ ಅವಕಾಶಗಳನ್ನು ಸೃಷ್ಟಿಸುವ ನಿಟ್ಟಿನಲ್ಲಿ ಬಂಡವಾಳ ಹೂಡಿಕೆ ಮತ್ತು […]

Continue Reading

ಡಿಕೆಶಿಯತ್ತ ವಾಲಿದ ಕಾಂಗ್ರೆಸ್ ಶಾಸಕರು? ಸಿಎಂ ಬದಲಾವಣೆ ಚರ್ಚೆ ಬೆನ್ನಲ್ಲೇ ರಾಜಕೀಯ ಲೆಕ್ಕಾಚಾರ ಜೋರು, ಖಾದರ್ ಗೆ ಡಿಸಿಎಂ ಸ್ಥಾನ ಸಾಧ್ಯತೆ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ತೀವ್ರವಾಗುತ್ತಿದ್ದಂತೆ ಕಾಂಗ್ರೆಸ್ ಪಾಳಯದಲ್ಲಿ ಹೊಸ ರಾಜಕೀಯ ಬೆಳವಣಿಗೆಗಳು ವೇಗ ಪಡೆದುಕೊಂಡಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಪ್ತರಾಗಿದ್ದ ಹಲವರು ಇದೀಗ ಡಿ.ಕೆ. ಶಿವಕುಮಾರ್ ಬಣದತ್ತ ಮುಖ ಮಾಡುತ್ತಿದ್ದಾರೆ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಜೋರಾಗಿವೆ. ಸದ್ಯ ಲಭ್ಯವಾಗಿರುವ ಮಾಹಿತಿ ಪ್ರಕಾರ, ಸಿದ್ದರಾಮಯ್ಯ ಪರವಾಗಿ ಕೆಲ ಹಿರಿಯ ಶಾಸಕರು ಹಾಗೂ ಸಚಿವರು ಮಾತ್ರ ಉಳಿದಿದ್ದು, ಡಿ.ಕೆ. ಶಿವಕುಮಾರ್ ಪರವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಶಾಸಕರು ಬೆಂಬಲ ಸೂಚಿಸಿದ್ದಾರೆ ಎನ್ನಲಾಗಿದೆ. ಹೈಕಮಾಂಡ್ ಡಿಕೆ ಶಿವಕುಮಾರ್ […]

Continue Reading

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಚರ್ಚೆಗೆ ದೇಶಪಾಂಡೆ ಹೇಳಿಕೆ ಹೊಸ ಟ್ವಿಸ್ಟ್, ವೇಗ ಪಡೆದ ರಾಜಕೀಯ ಚಟುವಟಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕುರಿತ ರಾಜಕೀಯ ಚರ್ಚೆಗಳು ತಾರಕಕ್ಕೇರುತ್ತಿರುವ ನಡುವೆಯೇ, ಹಿರಿಯ ಕಾಂಗ್ರೆಸ್ ನಾಯಕ ಆರ್.ವಿ. ದೇಶಪಾಂಡೆ ನೀಡಿರುವ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳ ಜತೆಗೆ ಮಾತನಾಡಿದ ದೇಶಪಾಂಡೆ, ನವದೆಹಲಿಯಿಂದ ಹಿಂದಿರುಗುವಾಗಲೇ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರ ಮಾಡಿಕೊಂಡು ಬಂದಿದ್ದಾರೆ ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಅವರು ನಮ್ಮೊಂದಿಗೆ ಮಾತನಾಡುವ ವೇಳೆ ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಸ್ಪಷ್ಟಪಡಿಸಿದರು. […]

Continue Reading

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಚಿವ ಈಶ್ವರ್ ಖಂಡ್ರೆ ಹೇಳಿಕೆ: ಏಕಬಳಕೆ ಪ್ಲಾಸ್ಟಿಕ್ ತಪಾಸಣೆಗೆ ಚೆಕ್ ಪೋಸ್ಟ್ ಸ್ಥಾಪನೆಗೆ ಆದೇಶ

 ಕುಕ್ಕೆ ಸುಬ್ರಹ್ಮಣ್ಯ : ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಅವರ ಪರಮಾಧಿಕಾರ ಆಗಿದೆ. ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಸಭಾ ಚುನಾವಣೆ ಕುರಿತು ವರಿಷ್ಠರ ಜತೆಗೆ ಚರ್ಚಿಸಲು ನವದೆಹಲಿಗೆ ತೆರಳಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರಲು ಇರುವ ನಾಲ್ಕೂ ಪ್ರವೇಶ ರಸ್ತೆಗಳಲ್ಲಿ ಏಕಬಳಕೆ ಪ್ಲಾಸ್ಟಿಕ್ ತಪಾಸಣೆಗೆ ಚೆಕ್ ಪೋಸ್ಟ್ ಸ್ಥಾಪಿಸಲು ಆದೇಶ ನೀಡಲಾಗಿದೆ. ರಸ್ತೆಯ ಬದಿ ಪ್ಲಾಸ್ಟಿಕ್ ಬಾಟಲಿ, ತಟ್ಟೆ ಇತ್ಯಾದಿ ತ್ಯಾಜ್ಯಗಳು ಬಿದ್ದಿರುವುದನ್ನು ನೋಡಿದೆ. ಕೂಡಲೇ […]

Continue Reading

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆಗೆ ನಿರ್ಧಾರ? ರಾಜ್ಯ ಸಭೆ ಆಫರ್ ನೀಡಿದ ರಾಹುಲ್

ನವದೆಹಲಿ: ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಕೊನೆಗೂ ತಿರುವು ಪಡೆದುಕೊಂಡಿದೆ. ನವದೆಹಲಿಯಲ್ಲಿ ನಡೆದ ಸುದೀರ್ಘ ಮ್ಯಾರಾಥಾನ್ ಸಭೆಯಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಆಗಿದ್ದು, ಈ ವೇಳೆ ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ ಅವರಿಗೆ ರಾಜ್ಯಸಭೆ ಆಫರ್ ನೀಡುವ ಮೂಲಕ ರಾಷ್ಟ್ರ ರಾಜಕಾರಣಕ್ಕೆ ಬರುವಂತೆ ಆಫರ್ ನೀಡಿದ್ದಾರೆ. ಇದಕ್ಕೆ ಯಾವುದೇ ಸಮ್ಮತಿ ಸೂಚಿಸದ ಸಿದ್ದರಾಮಯ್ಯ, ಸಭೆ ಬಳಿಕ ನೇರವಾಗಿ ಜಾರ್ಜ್​​​ ನಿವಾಸದಲ್ಲಿದ್ದ ಆಪ್ತ ಸಚಿವರು, ಶಾಸಕರೊಂದಿಗೆ ರಹಸ್ಯ ಸಭೆ ನಡೆಸಿ ಚರ್ಚಿಸಿದ್ದಾರೆ. ಈ ವೇಳೆ ಸಿಎಂ ಸ್ಥಾನಕ್ಕೆ […]

Continue Reading

ಮೇ 28 ಸಿಎಂ ಸಿದ್ದರಾಮಯ್ಯ ರಾಜೀನಾಮೆ? ನವದೆಹಲಿಯಿಂದ ಎಂ ಗೌಪ್ಯ ಲಕೋಟೆ ಬರುವ ನಿರೀಕ್ಷೆ!

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಅಧಿಕಾರ ಹಂಚಿಕೆ ನಿರ್ಣಾಯಕ ಘಟ್ಟಕ್ಕೆ ಬಂದು ತಲುಪಿದ್ದು, ನವದೆಹಲಿಯಲ್ಲಿ ನಡೆದ ಸರಣಿ ಸಭೆಯಲ್ಲಿ ರಾಹುಲ್ ಗಾಂಧಿ ಅವರು ನಾಯಕತ್ವ ಬದಲಾವಣೆ ಪ್ರಸ್ತಾಪ ಮಾಡಿದ್ದು, ಸಿಎಂ ಸಿದ್ದರಾಮಯ್ಯ ಅವರಿಗೆ ಆಫರ್ ನೀಡುವ ಮೂಲಕ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಹೇಳಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ರಾಹುಲ್ ಗಾಂಧಿ ಮಾತನ್ನು ತಮ್ಮ ಆಪ್ತರೊಂದಿಗೆ ಸಿದ್ದರಾಮಯ್ಯ ಚರ್ಚಿಸಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಹೀಗಾಗಿ ಈ ವಾರದಲ್ಲೇ ಹೊಸ ಸಿಎಂ ಅಧಿಕಾರಕ್ಕೆ […]

Continue Reading