ಸಿರಸಿ: ಪ್ರತಿಭಾವಂತ ಹೆಣ್ಣುಮಕ್ಕಳಿಗೆ ಕೆನರಾ ಬ್ಯಾಂಕ್‌ನಿಂದ ‘ವಿದ್ಯಾಜ್ಯೋತಿ’ ಪ್ರತಿಭಾ ಪುರಸ್ಕಾರ

ಸಿರಸಿ: ಶಿಕ್ಷಣದ ಜತೆಗೆ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಮಕ್ಕಳ ಭವಿಷ್ಯದ ಸಾಧನೆಗೆ ಬಲ ನೀಡುತ್ತದೆ. ಆ ನಿಟ್ಟಿನಲ್ಲಿ ಕೆನರಾ ಬ್ಯಾಂಕ್‌ನ ‘ವಿದ್ಯಾಜ್ಯೋತಿ’ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಪ್ರತಿಭಾವಂತ ಹೆಣ್ಣುಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು. ನಗರದ ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿ ವ್ಯಾಪ್ತಿಯ ಸಿ.ಪಿ. ಬಜಾರ್ ಶಾಖೆಯ ಸಭಾಭವನದಲ್ಲಿ ಸರ್ಕಾರಿ ಹಾಗೂ ಸರ್ಕಾರಿ ಅನುದಾನಿತ ಶಾಲೆಗಳ ವಿದ್ಯಾರ್ಥಿನಿಯರಿಗೆ ಈ ಪುರಸ್ಕಾರ ವಿತರಿಸುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ವೈ.ಎಸ್ ಪಿ ಗೀತಾ ಪಾಟೀಲ್ ಅವರು […]

Continue Reading

ಗ್ರಾಹಕರ ದೂರು, ಆರೋಗ್ಯ, ಆಹಾರ ಸುರಕ್ಷತಾ ಅಧಿಕಾರಿಗಳು ದಿಢೀರ್ ದಾಳಿ, ಹಳಸಿದ ಮಾಂಸ, ಅವಧಿ ಮೀರಿದ ಎಣ್ಣೆ ಪತ್ತೆ

ಮಂಗಳೂರು: ಗ್ರಾಹಕರೊಬ್ಬರು ಆರ್ಡರ್ ಮಾಡಿದ್ದ ಕೋಳಿ ಆಹಾರದಿಂದ ಕೆಟ್ಟ ವಾಸನೆ ಬರುತ್ತಿದೆ ಎಂಬ ದೂರಿನ ಬೆನ್ನಲ್ಲೇ ಮಂಗಳೂರಿನ ಕೆ.ಎಸ್. ರಾವ್ ರಸ್ತೆಯ ಮಾಲ್‌ನಲ್ಲಿರುವ ಮಳಿಗೆಗೆ ಆರೋಗ್ಯ ಹಾಗೂ ಆಹಾರ ಸುರಕ್ಷತಾ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಪರಿಶೀಲನೆ ನಡೆಸಿದ ವೇಳೆ ಹಳಸಿದ ಮಾಂಸ, ಅವಧಿ ಮೀರಿದ ಎಣ್ಣೆ ಹಾಗೂ ಅನೈರ್ಮಲ್ಯ ಪತ್ತೆ ಆಗಿದ್ದು, ಮಳಿಗೆ ಬಂದ್ ಮಾಡಲಾಗಿದೆ. ಗ್ರಾಹಕಯೊಬ್ಬರು ಮಳಿಗೆಯೊಂದರಿಂದ ಚಿಕನ್ ಫೆರಿ ಆರ್ಡರ್ ಮಾಡಿದ್ದರು. ಆಹಾರದ ಬಾಕ್ಸ್ ತೆರೆದಾಗ ಮಾಂಸದಿಂದ ಕೆಟ್ಟ ವಾಸನೆ ಬಂದ ಹಿನ್ನೆಲೆಯಲ್ಲಿ […]

Continue Reading

ಹುಬ್ಬಳ್ಳಿ–ಅಂಕೋಲಾ ರೈಲು ಮಾರ್ಗ ಸಾಕಾರ, ಉತ್ತರ ಕನ್ನಡದ ಅಭಿವೃದ್ಧಿಗೆ ಹೊಸ ಚೈತನ್ಯ: ಮಾಜಿ ಶಾಸಕಿ ರೂಪಾಲಿ ನಾಯ್ಕ್

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಜನತೆಯ ಬಹುಕಾಲದ ಕನಸಾಗಿದ್ದ ಹುಬ್ಬಳ್ಳಿ–ಅಂಕೋಲಾ ರೈಲು ಮಾರ್ಗ ಸಾಕಾರಗೊಳ್ಳುತ್ತಿರುವುದು ಜಿಲ್ಲೆಗೆ ಹೆಮ್ಮೆಯ ವಿಚಾರವಾಗಿದೆ. ಯೋಜನೆಯ ವಿದ್ಯುದ್ದೀಕರಣದೊಂದಿಗೆ ಬ್ರಾಡ್‌ಗೇಜ್ ರೈಲು ಮಾರ್ಗವಾಗಿ ಪರಿವರ್ತನೆಯಾಗುತ್ತಿರುವುದು ಜಿಲ್ಲೆಯ ಸಾರಿಗೆ ಸಂಪರ್ಕಕ್ಕೆ ಮಹತ್ವದ ಬಲ ನೀಡಲಿದೆ ಎಂದು ಮಾಜಿ ಶಾಸಕಿ ರೂಪಾಲಿ ನಾಯ್ಕ್ ಅವರು ತಿಳಿಸಿದ್ದಾರೆ. ಜಿಲ್ಲೆಯ ಸಮಗ್ರ ಅಭಿವೃದ್ಧಿ, ಕೈಗಾರಿಕಾ ಚಟುವಟಿಕೆಗಳ ವಿಸ್ತರಣೆ, ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಗೂ ಜನರ ಸಂಪರ್ಕ ವ್ಯವಸ್ಥೆಯ ಸುಧಾರಣೆಯ ದೃಷ್ಟಿಯಿಂದ ಹುಬ್ಬಳ್ಳಿ–ಅಂಕೋಲಾ ರೈಲು ಮಾರ್ಗ ಮಹತ್ವದ ಯೋಜನೆಯಾಗಿದೆ. ಈ ಮಾರ್ಗದ ಮೂಲಕ […]

Continue Reading

ತಲಪಾಡಿ ಶಾರದಾ ವಿದ್ಯಾನಿಕೇತನದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ, ಧ್ವಜಾರೋಹಣ

ತಲಪಾಡಿ: ದೇಶಭಕ್ತಿ, ರಾಷ್ಟ್ರಾಭಿಮಾನ ಹಾಗೂ ಪರಿಸರ ಕಾಳಜಿಯ ಸಂದೇಶದೊಂದಿಗೆ ತಲಪಾಡಿಯ ಶಾರದಾ ವಿದ್ಯಾನಿಕೇತನದಲ್ಲಿ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನ, ಧ್ವಜಾರೋಹಣ ಹಾಗೂ ದೇಶಭಕ್ತಿ ಸಾರುವ ಸಾಂಸ್ಕೃತಿಕ ಕಾರ್ಯಕ್ರಮಗಳು ಸಮಾರಂಭಕ್ಕೆ ವಿಶೇಷ ಮೆರುಗು ನೀಡಿದವು. ಎನ್‌ಡಿಎ ಮತ್ತು ಎನ್‌ಸಿಸಿ ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನದೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಗೌರವ ರಕ್ಷೆ ಸ್ವೀಕರಿಸಿದ ಶಾರದಾ ವಿದ್ಯಾಸಂಸ್ಥೆಯ ಅಧ್ಯಕ್ಷ ಡಾ. ಎಂ.ಬಿ. ಪುರಾಣಿಕ್ ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಶಿಕ್ಷಕ–ರಕ್ಷಕ ಸಂಘದ ಅಧ್ಯಕ್ಷ ಹರೀಶ್ ಗಟ್ಟಿ ಮಾತನಾಡಿ, ಸ್ವಾತಂತ್ರ್ಯ […]

Continue Reading

ರೋಹನ್ ಸ್ಕ್ವೇರ್‌ನಲ್ಲಿ ಕೃಷಿ ವೃಕ್ಷಾನ್ವೇಷಕ ಸಾಧಕ ಪ್ರಶಸ್ತಿ ಪ್ರದಾನ, ಧ್ವಜಾರೋಹಣ ಸಂಭ್ರಮ

ಮಂಗಳೂರು: ರೋಹನ್ ಕಾರ್ಪೊರೇಶನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ನಗರದ ವಿವಿಧ ಯೋಜನೆಗಳ ಆವರಣದಲ್ಲಿ 80 ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಪಿತಾನಿಯ ರೋಹನ್ ಸ್ಕ್ವೇರ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ. ರೋಹನ್ ಮೊಂತೆರೊ, ನಿರ್ದೇಶಕ ಡಿಯೋನ್ ಮೊಂತೆರೊ, ಪ್ರಧಾನ ವ್ಯವಸ್ಥಾಪಕಿ ಸುಮನಾ ಹಾಗೂ ವಿಶೇಷ ಅತಿಥಿ ಎಂ.ಕೆ. ಅಲಿ ಅವರ ಉಪಸ್ಥಿತಿಯಲ್ಲಿ ಕೃಷಿಕ ಜ್ಯಾಕ್ ಅನಿಲ್ ಧ್ವಜಾರೋಹಣ ನೆರವೇರಿಸಿದರು. ಕೃಷಿ ಕ್ಷೇತ್ರಕ್ಕೆ ಜ್ಯಾಕ್ ಅನಿಲ್ ನೀಡುತ್ತಿರುವ ಗಮನಾರ್ಹ ಕೊಡುಗೆಯನ್ನು ಗುರುತಿಸಿ ‘ಕೃಷಿ ವೃಕ್ಷಾನ್ವೇಷಕ […]

Continue Reading

ಅಂಕೋಲಾ: ಶಾಂತಿನಿಕೇತನ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ಸಂಭ್ರಮ

ಅಂಕೋಲಾ: ಶಾಂತಿನಿಕೇತನ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಸಂಸ್ಥೆಯ ಕಾರ್ಯದರ್ಶಿ ಶಾಂತಿ ನಾಯಕ ಧ್ವಜಾರೋಹಣ ಮಾಡಿ ಹಿರಿಯರು ಒದಗಿಸಿಕೊಟ್ಟ ಸ್ವಾತಂತ್ರ್ಯವನ್ನು ಸರಿಯಾಗಿ ಉಪಯೋಗಿಸಿಕೊಳ್ಳಬೇಕು ಎಂದು ತಿಳಿಸಿದರು. ಕಲಾ ಭಾರತಿ ಟ್ರಸ್ಟ್ ಅಧ್ಯಕ್ಷ ಪ್ರಶಾಂತ ಶೆಟ್ಟಿ ಹಾಗೂ ದಂತವೈದ್ಯ ಡಾ. ಸಂಜು ನಾಯಕ ಹಾಗೂ ವಿದ್ಯಾರ್ಥಿಗಳ ಪಾಲಕರು ಇದ್ದರು. ದೇಶಭಕ್ತಿ ಗೀತೆಯನ್ನು ಮಕ್ಕಳು ಪ್ರಸ್ತುತಪಡಿಸಿದರು. ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಶಿಕ್ಷಕಿಯರಾದ ಶೀತಲ್ ನಾಯ್ಕ್, ಮಮತಾ ನಾಯ್ಕ, ಶ್ರದ್ಧಾ ಆಚಾರ್ಯ, ಮೈತ್ರಿ ಭಟ್, ಲಕ್ಷ್ಮೀ ಪೂಜಾರ, ಜ್ಯೋತಿ ವೆರ್ಣೇಕರ್ ಇದ್ದರು.

Continue Reading

ರಾಜ್ಯದ ಅಭಿವೃದ್ಧಿಯ ತೇರು ಎಳೆಯಲು ಎಲ್ಲರ ಕೈಗಳು ನನ್ನ ಜತೆ ಕೈಜೋಡಿಸಬೇಕು: ಸಿಎಂ ಡಿ. ಕೆ. ಶಿವಕುಮಾರ್

ಬೆಂಗಳೂರು: ರಾಜ್ಯದ ಅಭಿವೃದ್ಧಿಯ ತೇರನ್ನು ಎಳೆಯಲು ಕೇವಲ ಎರಡು ಕೈಗಳು ಸಾಲುವುದಿಲ್ಲ. ಕನ್ನಡ ಕುಲಕೋಟಿಯ ಕೈಗಳು ನನ್ನ ಜೊತೆ ಕೈಜೋಡಿಸಬೇಕು. ಬನ್ನಿ, ಅಭಿವೃದ್ಧಿಯ ತೇರನ್ನು ಒಟ್ಟಾಗಿ ಎಳೆಯೋಣ ಎಂದು ಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು. ಮಾಣಿಕ್ ಷಾ ಮೈದಾನದಲ್ಲಿ ಶನಿವಾರ ನಡೆದ 80 ನೇ ಸ್ವಾತಂತ್ರ್ಯ ದಿನವನ್ನು ಧ್ವಜಾರೋಹಣ ನೆರವೇರಿಸಿದ ನಂತರ ರಾಜ್ಯದ ಜನತೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ನನ್ನನ್ನು ನಂಬಿ ಇಲ್ಲಿಯವರೆಗೆ ಕರೆತಂದ ನಾಡಿನ ಜನತೆಗೆ ನಾನು ಸಾಕ್ಷಿಗುಡ್ಡೆ ಉಳಿಸುತ್ತೇನೆ. ಕರ್ನಾಟಕದ ಅಭಿವೃದ್ಧಿ […]

Continue Reading

ಸರ್ಕಾರಿ ಯೋಜನೆಗಳ ಮಾಹಿತಿ ನೀಡುವ ಡಿಜಿಟಲ್ ಫಲಕ ಉದ್ಘಾಟಿಸಿದ ಸಚಿವ ಲಕ್ಷ್ಮಣ ಸವದಿ

ಕಾರವಾರ: ನಗರದ ಮಿನಿ ವಿಧಾನಸೌಧದ ಆವರಣದಲ್ಲಿ ಸರ್ಕಾರದ ವಿವಿಧ ಯೋಜನೆಗಳ ಮಾಹಿತಿ ಒಳಗೊಂಡ ಡಿಜಿಟಲ್ ಫಲಕವನ್ನು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಶನಿವಾರ ಉದ್ಘಾಟಿಸಿದರು. ಸರ್ಕಾರದ ವಿವಿಧ ಜನಪರ ಯೋಜನೆಗಳು ಹಾಗೂ ಸಾರ್ವಜನಿಕರಿಗೆ ಲಭ್ಯವಿರುವ ಸೌಲಭ್ಯಗಳ ಮಾಹಿತಿಯನ್ನು ಡಿಜಿಟಲ್ ಫಲಕದ ಮೂಲಕ ಸುಲಭವಾಗಿ ತಿಳಿದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಈ ಸಂದರ್ಭದಲ್ಲಿ ಕೆಎಸ್‌ಎಂಸಿಎ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಸೈಲ್, ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, […]

Continue Reading

100 ದಿನಗಳಲ್ಲಿ ಅಭಿವೃದ್ಧಿಯ ಹೊಸ ಹೆಜ್ಜೆ, ಉತ್ತರ ಕನ್ನಡಕ್ಕೆ ಹಲವು ಯೋಜನೆಗಳ ಘೋಷಣೆ: ಸಚಿವ ಸವದಿ

ಕಾರವಾರ: ರೈತರು, ಯುವಜನರು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ರಾಜ್ಯದ ಆಡಳಿತ ವ್ಯವಸ್ಥೆಗೆ ಮತ್ತಷ್ಟು ವೇಗ ನೀಡಲು ಸರ್ಕಾರ ಮುಂದಾಗಿದೆ. ಮುಂದಿನ 100 ದಿನಗಳಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಹಲವು ಮಹತ್ವಾಕಾಂಕ್ಷಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಘೋಷಿಸಿದರು. ಕಾರವಾರದ ಪೊಲೀಸ್ ಪರೇಡ್ ಮೈದಾನದಲ್ಲಿ ಉತ್ತರ ಕನ್ನಡ ಜಿಲ್ಲಾಡಳಿತದಿಂದ ಆಯೋಜಿಸಿದ್ದ 80ನೇ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಹೊಸ ಯೋಜನೆಗಳ ಜಾರಿ: ರೈತ ಮಿತ್ರ–ಬಡವರ […]

Continue Reading

ಕೃಷ್ಣೋತ್ಸವ ಪ್ರಶಸ್ತಿಗೆ ಎಕ್ಸಲೆಂಟ್ ಪಿಯು ಕಾಲೇಜಿನ ಅಧ್ಯಕ್ಷ ಯುವರಾಜ್ ಜೈನ್ ಆಯ್ಕೆ

ಮೂಡುಬಿದಿರೆ: ಗೋಪಾಲಕೃಷ್ಣ ದೇವಸ್ಥಾನದ 110ನೇ ವರ್ಷದ ಮೊಸರು ಕುಡಿಕೆ ಉತ್ಸವದ ಅಂಗವಾಗಿ ಜವನೆರ್ ಬೆದ್ರ ಫೌಂಡೇಶನ್ ಆಯೋಜಿಸಿರುವ ‘ಬೆದ್ರದ ಕೃಷ್ಣೋತ್ಸವ 2026’ರಲ್ಲಿ ಎಕ್ಸಲೆಂಟ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಅವರಿಗೆ ‘ಕೃಷ್ಣೋತ್ಸವ ಪ್ರಶಸ್ತಿ’ ನೀಡಿ ಗೌರವಿಸಲಾಗುವುದು. ಸೆಪ್ಟೆಂಬರ್ 5ರಂದು ಮೂಡುಬಿದಿರೆಯ ಕೆ. ಅಮರನಾಥ ಶೆಟ್ಟಿ ವೃತ್ತದ ಬಳಿಯ ವೇಣೂರು ಕೃಷ್ಣಯ್ಯ ವೇದಿಕೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಜವನೆರ್ ಬೆದ್ರ ಫೌಂಡೇಶನ್ ಸ್ಥಾಪಕ ಅಮರ್ ಕೋಟೆ ತಿಳಿಸಿದ್ದಾರೆ. ಶಿಕ್ಷಣ ಹಾಗೂ ಸಮಾಜಸೇವಾ ಕ್ಷೇತ್ರದ […]

Continue Reading