ಮತದಾರರ ಪಟ್ಟಿ ಪರಿಷ್ಕರಣೆ, ಶೇ 99.97 ಎನ್ಯುಮರೇಷನ್ ನಮೂನೆಗಳ ಡಿಜಿಟಲೀಕರಣ ಪೂರ್ಣ: ಅನ್ಬುಕುಮಾರ್

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)-2026ರ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಮನೆಮನೆ ಸಮೀಕ್ಷೆಯಲ್ಲಿ ಸಂಗ್ರಹಿಸಲಾದ ಎನ್ಯುಮರೇಷನ್ ನಮೂನೆಗಳಲ್ಲಿ ಶೇ.99.97ರಷ್ಟು ಡಿಜಿಟಲೀಕರಣ ಪೂರ್ಣಗೊಂಡಿದೆ. ಇದೇ ವೇಳೆ, ಒಟ್ಟು ಮತದಾರರಲ್ಲಿ ಶೇ.20.02ರಷ್ಟು ಮಂದಿ ಗೈರು, ಸ್ಥಳಾಂತರ, ಮೃತರು, ನಕಲಿ ಹಾಗೂ ಇತರೆ (ಎಎಸ್‌ಡಿಡಿಒ) ವಿಭಾಗದಲ್ಲಿ ಗುರುತಿಸಲ್ಪಟ್ಟಿದ್ದಾರೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಜೂನ್ 16ರ ಅಂಕಿ-ಅಂಶದ ಪ್ರಕಾರ ರಾಜ್ಯದಲ್ಲಿ ಒಟ್ಟು 5,54,32,314 ಮತದಾರರಿದ್ದು, ಈ ಪೈಕಿ 1,10,97,426 ಮಂದಿ […]

Continue Reading

ಉ. ಕ ದಲ್ಲಿ ಶೇ100 ರಷ್ಟು ಎನ್ಯುಮರೇಷನ್ ಫಾರಂ ಗಣಕೀಕರಣ ಪೂರ್ಣ: ಡಿಸಿ ಲಕ್ಷ್ಮಿಪ್ರೀಯಾ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ–2026ರ ಅಂಗವಾಗಿ ವಿತರಿಸಲಾಗಿದ್ದ ಎಲ್ಲಾ ಎನ್ಯುಮರೇಷನ್ ಫಾರಂಗಳನ್ನು ಯಶಸ್ವಿಯಾಗಿ ಗಣಕೀಕರಣಗೊಳಿಸಲಾಗಿದ್ದು, ಜಿಲ್ಲೆ ಶೇ100 ಸಾಧನೆ ಮಾಡಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮಿಪ್ರೀಯಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 12,30,037 ಮತದಾರರಿದ್ದು, ಪ್ರತಿಯೊಬ್ಬರಿಗೂ ಎನ್ಯುಮರೇಷನ್ ಫಾರಂ ವಿತರಿಸಲಾಗಿತ್ತು. ಮನೆ ಮನೆ ಭೇಟಿ ವೇಳೆ ಸಂಗ್ರಹಿಸಿದ ಎಲ್ಲಾ ಫಾರಂಗಳನ್ನು ಗಣಕೀಕರಣಗೊಳಿಸುವ ಕಾರ್ಯ ಪೂರ್ಣಗೊಂಡಿದೆ. ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸ್ಥಳಾಂತರ, ಶಾಶ್ವತ ವಲಸೆ, ಮರಣ, ದ್ವಿಪ್ರತಿ ಸೇರಿದಂತೆ ವಿವಿಧ ಕಾರಣಗಳಿಂದ ಒಟ್ಟು […]

Continue Reading

ಹರ್ ಘರ್ ತಿರಂಗಾ’ ರಾಜ್ಯ ಸಂಚಾಲಕಿಯಾಗಿ ರೂಪಾಲಿ ನಾಯ್ಕ ನೇಮಕ

ಕಾರವಾರ: ಬಿಜೆಪಿ ಮಹತ್ವಾಕಾಂಕ್ಷೆಯ ‘ಹರ್ ಘರ್ ತಿರಂಗಾ’ ಅಭಿಯಾನದ ಕರ್ನಾಟಕ ರಾಜ್ಯ ಸಂಚಾಲಕಿಯಾಗಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಹಾಗೂ ಕಾರವಾರ–ಅಂಕೋಲಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಅವರನ್ನು ನೇಮಕ ಮಾಡಲಾಗಿದೆ. ಸ್ವಾತಂತ್ರ್ಯೋತ್ಸವ ಅಂಗವಾಗಿ ರಾಜ್ಯಾದ್ಯಂತ ನಡೆಯಲಿರುವ ಅಭಿಯಾನದ ನೇತೃತ್ವವನ್ನು ಅವರು ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ರೂಪಾಲಿ ನಾಯ್ಕ ಅವರಿಗೆ ಈ ಮಹತ್ವದ ಜವಾಬ್ದಾರಿ ವಹಿಸಲಾಗಿದ್ದು, ಸಮಿತಿಯ ಸಹ ಸಂಚಾಲಕರಾಗಿ ಶಾಸಕರಾದ ಹರೀಶ್ ಪೂಂಜಾ, ಬಸವರಾಜ್ ಹಾಗೂ ಲಿಂಗರಾಜ್ […]

Continue Reading

ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನಲ್ಲಿ ಮಾದಕ ವಸ್ತು ಜಾಗೃತಿ ಕಾರ್ಯಕ್ರಮ, ವಿದ್ಯಾರ್ಥಿಗಳಿಗೆ ಇನ್ ಸ್ಪೆಕ್ಟರ್ ರಾಜೇಂದ್ರ ಕಿವಿಮಾತು

ಮೂಡುಬಿದಿರೆ: ವಿದ್ಯಾರ್ಥಿಗಳು ಮಾದಕ ವ್ಯಸನದಂತಹ ದುಶ್ಚಟಗಳಿಂದ ದೂರವಿದ್ದು, ಉತ್ತಮ ಮೌಲ್ಯಗಳೊಂದಿಗೆ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಮೂಡುಬಿದಿರೆ ಇನ್ ಸ್ಪೆಕ್ಟರ್ ರಾಜೇಂದ್ರ ಬಿ. ಅವರು ಹೇಳಿದರು. ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳನ್ನು ಮಾದಕ ವಸ್ತುಗಳ ದುಷ್ಪರಿಣಾಮದಿಂದ ದೂರವಿರಿಸಿ ಆರೋಗ್ಯವಂತ ಹಾಗೂ ಮೌಲ್ಯಾಧಾರಿತ ಬದುಕಿನತ್ತ ಪ್ರೇರೇಪಿಸುವ ಉದ್ದೇಶದಿಂದ ಆಯೋಜಿಸಿದ್ದ ಮಾದಕ ವಸ್ತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಾದಕ ವಸ್ತುಗಳ ಸೇವನೆಯು ವ್ಯಕ್ತಿಯ ಬದುಕು ಮಾತ್ರವಲ್ಲದೆ ಕುಟುಂಬದ ನೆಮ್ಮದಿ ಮತ್ತು ಸಮಾಜದ ಶಾಂತಿಯನ್ನೂ ಹಾಳುಮಾಡುವ ಗಂಭೀರ ಪಿಡುಗಾಗಿದೆ. […]

Continue Reading

ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾವ್ 146 ನೇ ಜನ್ಮದಿನ, ಸಹಕಾರಿ ದಿಗ್ಗಜನ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ರಾಜೇಂದ್ರ ಕುಮಾರ್

ಮಂಗಳೂರು: ಮೊಳಹಳ್ಳಿ ಶಿವರಾವ್ ಅವರು ತಮ್ಮ ಇಡೀ ಜೀವನವನ್ನು ಸಹಕಾರಿ ಚಳವಳಿಯ ಅಭಿವೃದ್ಧಿಗೆ ಮುಡಿಪಾಗಿಟ್ಟ ಮಹಾನ್ ವ್ಯಕ್ತಿ. ಅವರು ಹಾಕಿಕೊಟ್ಟ ಮಾರ್ಗದರ್ಶನ ಮತ್ತು ಮೌಲ್ಯಗಳನ್ನು ಅನುಸರಿಸುತ್ತಲೇ ಸಹಕಾರಿ ಕ್ಷೇತ್ರ ಮತ್ತಷ್ಟು ಬಲಿಷ್ಠವಾಗಿ ಬೆಳೆಯುತ್ತಿದೆ, ಸಹಕಾರಿ ಕ್ಷೇತ್ರಕ್ಕೆ ದಿಕ್ಸೂಚಿ ಹಾಕಿಕೊಟ್ಟ ಮಹಾನ್ ವ್ಯಕ್ತಿ ಎಂದು ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಹೇಳಿದರು. ಸಹಕಾರಿ ಪಿತಾಮಹ’ ಮೊಳಹಳ್ಳಿ ಶಿವರಾವ್ ಅವರ 146 ನೇ ಜನ್ಮದಿನದ ಅಂಗವಾಗಿ ಮಂಗಳವಾರ ನಡೆದ ಕಾರ್ಯಕ್ರಮಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ […]

Continue Reading

ವಿಶೇಷ ಪ್ರದರ್ಶನಗಳಲ್ಲೇ ಪ್ರೇಕ್ಷಕರ ಮನ ಗೆದ್ದ ‘ಓಹ್ ಮೈ ಡಾಗ್’; ಅ. 7 ರಂದು ವಿಶ್ವಾದ್ಯಂತ ತೆರೆಗೆ

ಬೆಂಗಳೂರು: ಬಿಡುಗಡೆಯಾಗುವ ಮುನ್ನವೇ ದೇಶದಾದ್ಯಂತ ನಡೆದ ವಿಶೇಷ ಪ್ರದರ್ಶನಗಳ ಮೂಲಕ ಸಿನಿಪ್ರಿಯರ ಮೆಚ್ಚುಗೆ ಗಳಿಸಿರುವ ‘ಓಹ್ ಮೈ ಡಾಗ್’ ಚಿತ್ರವು ಆಗಸ್ಟ್ 7ರಂದು ವಿಶ್ವಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ. ನಿರ್ಮಾಪಕ-ನಿರ್ದೇಶಕ ಅಮಿತ್ ರೈ ಅವರ ಈ ಕೌಟುಂಬಿಕ ಮನರಂಜನಾ ಚಿತ್ರವು ಭಾವನಾತ್ಮಕ ಕಥಾಹಂದರ, ಮನುಷ್ಯ ಮತ್ತು ಶ್ವಾನಗಳ ನಡುವಿನ ಆತ್ಮೀಯ ಸಂಬಂಧ ಹಾಗೂ ಪ್ರಾಣಿ ದಯೆಯ ಸಂದೇಶದ ಮೂಲಕ ಪ್ರೇಕ್ಷಕರ ಮನಸ್ಸನ್ನು ಗೆದ್ದಿದೆ. ಸಾಮಾನ್ಯವಾಗಿ ಬಿಡುಗಡೆಯ ಮುನ್ನ ಭಾರೀ ಪ್ರಮಾಣದ ಜಾಹೀರಾತು ಮತ್ತು ಪ್ರಚಾರಕ್ಕೆ ಒತ್ತು ನೀಡುವ […]

Continue Reading

ಲೇಖಕ ಜಗದೀಶ್ ಅಂಚನ್ ಅವರ ’ತ್ಯಾಗಮಯಿ ಮೊಳಹಳ್ಳಿ’ ಕೃತಿ ಬಿಡುಗಡೆಗೊಳಿಸಿದ ಡಾ. ರಾಜೇಂದ್ರಕುಮಾರ್

ಮಂಗಳೂರು: ಸಹಕಾರ ಚಳವಳಿಗೆ ಜೀವನವನ್ನೇ ಸಮರ್ಪಿಸಿದ ದಾರ್ಶನಿಕ ನಾಯಕ ಮೊಳಹಳ್ಳಿ ಶಿವರಾವ್ ಅವರ ಜೀವನ ಸಾಧನೆ, ಸಮಾಜಮುಖಿ ಚಿಂತನೆ ಹಾಗೂ ಸಹಕಾರ ಕ್ಷೇತ್ರಕ್ಕೆ ನೀಡಿದ ಅಪೂರ್ವ ಕೊಡುಗೆಯನ್ನು ದಾಖಲಿಸುವ ‘ತ್ಯಾಗಮಯಿ ಮೊಳಹಳ್ಳಿ’ ಕೃತಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಬಿಡುಗಡೆಗೊಳಿಸಿದರು. ಬ್ಯಾಂಕ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ರಚಿಸಿರುವ ಈ ಕೃತಿ ಲೋಕಾರ್ಪಣೆಗೊಂಡಿತು. ಬಳಿಕ ಮಾತನಾಡಿದ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಸಹಕಾರ […]

Continue Reading

ಮರಣ ನೋಂದಣಿಯಲ್ಲಿ ಸರಿಯಾದ ಆಧಾರ್ ಸಂಖ್ಯೆ ಕಡ್ಡಾಯ, ತಪ್ಪಾದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ

ಕಾರವಾರ: ಮರಣ ನೋಂದಣಿ ವೇಳೆ ಮೃತರ ಸರಿಯಾದ ಆಧಾರ್ ಸಂಖ್ಯೆಯನ್ನು ಪರಿಶೀಲಿಸಿ ದಾಖಲಿಸುವುದು ಕಡ್ಡಾಯವಾಗಿದ್ದು, ತಪ್ಪು ಆಧಾರ್ ಸಂಖ್ಯೆ ನಮೂದಿಸಿದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ  ಅವರು ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಜನನ-ಮರಣ ನೋಂದಣಿ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮರಣ ಪ್ರಮಾಣಪತ್ರದಲ್ಲಿ ಜೀವಂತ ವ್ಯಕ್ತಿಯ ಆಧಾರ್ ಸಂಖ್ಯೆ ನಮೂದಿಸಿದರೆ, ಆ ವ್ಯಕ್ತಿ ವಿವಿಧ […]

Continue Reading

ಸಾವಿರಾರು ಉದ್ಯೋಗಗಳ ಅವಕಾಶ: ಅ. 7-8ರಂದು ಮೂಡುಬಿದಿರೆಯಲ್ಲಿ ‘ಆಳ್ವಾಸ್ ಪ್ರಗತಿ-2026’: ಪ್ರಸಾದ ಶೆಟ್ಟಿ

ಕಾರವಾರ: ಉದ್ಯೋಗದ ನಿರೀಕ್ಷೆಯಲ್ಲಿ ಇರುವ ಪದವೀಧರರು, ತಾಂತ್ರಿಕ ಶಿಕ್ಷಣ ಪಡೆದವರು ಹಾಗೂ ಅನುಭವಿ ಅಭ್ಯರ್ಥಿಗಳಿಗೆ ಒಂದೇ ವೇದಿಕೆಯಲ್ಲಿ ಸಾವಿರಾರು ಉದ್ಯೋಗಾವಕಾಶಗಳನ್ನು ಕಲ್ಪಿಸುವ ‘ಆಳ್ವಾಸ್ ಪ್ರಗತಿ-2026’ ಬೃಹತ್ ಉದ್ಯೋಗ ಮೇಳವು ಆಗಸ್ಟ್ 7 ಮತ್ತು 8ರಂದು ಮೂಡುಬಿದಿರೆಯ ಆಳ್ವಾಸ್ ವಿದ್ಯಾಗಿರಿ ಆವರಣದಲ್ಲಿ ನಡೆಯಲಿದೆ. ದೇಶದ ವಿವಿಧ ಕ್ಷೇತ್ರಗಳ 350ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿದ್ದು, 24 ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ನೇರ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ ಶೆಟ್ಟಿ […]

Continue Reading

ನಾಲ್ಕನೇ ಬಾರಿ ಸಚಿವರಾಗಿ ಶಿವರಾಜ್ ತಂಗಡಗಿ: ವಿದ್ಯಾರ್ಥಿ ನಾಯಕನಿಂದ ಸಂಪುಟದ ಹಿರಿಯ ಮುಖಂಡ,ನಾಗುವವರೆಗೆ ರಾಜಕೀಯ ಪಯಣ

ಬೆಂಗಳೂರು: ಬಾಗಲಕೋಟೆ ಜಿಲ್ಲೆಯ ಇಳಕಲ್‌ ಸಾಮಾನ್ಯ ಕುಟುಂಬದಿಂದ ರಾಜಕೀಯ ಬದುಕು ಆರಂಭಿಸಿ ರಾಜ್ಯ ರಾಜಕಾರಣದಲ್ಲಿ ತಮ್ಮದೇ ಛಾಪು ಮೂಡಿಸಿರುವ ಶಿವರಾಜ್ ಎಸ್. ತಂಗಡಗಿ ಅವರು ಮತ್ತೊಮ್ಮೆ ಸಚಿವ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಅವರು ನಾಲ್ಕನೇ ಬಾರಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಅವರ ರಾಜಕೀಯ ಜೀವನಕ್ಕೆ ಮತ್ತೊಂದು ಮಹತ್ವದ ಮೈಲಿಗಲ್ಲು ಸೇರ್ಪಡೆಯಾಗಿದೆ. 1971ರ ಜೂನ್ 10ರಂದು ಸಂಗಪ್ಪ ತಂಗಡಗಿ ಹಾಗೂ ಹುಲಿಗೆಮ್ಮ ದಂಪತಿಯ ಹಿರಿಯ ಪುತ್ರನಾಗಿ ಜನಿಸಿದ ಶಿವರಾಜ್ ತಂಗಡಗಿ ಅವರು […]

Continue Reading