ತಣ್ಣೀರುಭಾವಿ: ಸರ್ಫಿಂಗ್ ಸ್ಪರ್ಧೆ ಸರ್ಫರ್‌ಗಳ ತೀವ್ರ ಹಣಾಹಣಿ; ‌ಕಮಲಿ ಮೂರ್ತಿ ಶುಭಾರಂಭದ ಮಿಂಚು

ಮಂಗಳೂರು: ಇಲ್ಲಿನ ನಗರದ ತಣ್ಣೀರುಭಾವಿ ಬ್ಲೂ ಬೇ ಇಕೋ ಬೀಚ್‌ನಲ್ಲಿ ಶುಕ್ರವಾರ ಆರಂಭವಾದ ಏಳನೇ ಆವೃತ್ತಿಯ ಎನ್‌ಎಂಪಿಎ ಇಂಡಿಯನ್ ಓಪನ್ ಆಫ್ ಸರ್ಫಿಂಗ್ 2026ರ ಮೊದಲ ದಿನವೇ ದೇಶದ ಪ್ರಮುಖ ಸರ್ಫರ್‌ಗಳು ಅಲೆಗಳ ನಡುವೆ ರೋಮಾಂಚಕ ಪ್ರದರ್ಶನ ನೀಡಿದರು. ರಾಷ್ಟ್ರೀಯ ಚಾಂಪಿಯನ್‌ ಷಿಪ್ ಸರಣಿ ಪ್ರಮುಖ ಹಂತ ಆಗಿರುವ ಈ ಟೂರ್ನಿ, ಏಷ್ಯನ್ ಗೇಮ್ಸ್ ಆಯ್ಕೆ ಪ್ರಕ್ರಿಯೆಯಲ್ಲಿಯೂ ಮಹತ್ವ ಪಡೆದಿದ್ದು, ಉತ್ತಮ ಹವಾಮಾನ ಹಾಗೂ ಅಬ್ಬರದ ಅಲೆಗಳ ನಡುವೆ ಸ್ಪರ್ಧೆಗಳು ಆರಂಭಗೊಂಡವು. ಮಹಿಳೆಯರ ಮುಕ್ತ ವಿಭಾಗದಲ್ಲಿ ಕಮಲಿ […]

Continue Reading

ಸಿದ್ದರಾಮಯ್ಯ ರಾಜೀನಾಮೆ ಅಂಗೀಕಾರ, ಸರಕಾರ ವಿಸರ್ಜನೆ, ಸಿದ್ದು ಇನ್ಮುಂದೇ ಹಂಗಾಮಿ ಸಿಎಂ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿದ್ದ ಸಿಎಂ ಸ್ಥಾನದ ಬದಲಾವಣೆಯ ಪ್ರಕ್ರಿಯೆ ಅಂತಿಮ ಘಟ್ಟ ತಲುಪಿದೆ. ಗುರುವಾರ ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದರು. ಇದೀಗ ಸಿದ್ದರಾಮಯ್ಯ ಸಲ್ಲಿಸಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ಅಧಿಕೃತವಾಗಿ ಅಂಗೀಕರಿಸಿದ್ದು, ಸಿದ್ದರಾಮಯ್ಯ ಅವರು ಹಂಗಾಮಿ ಮುಖ್ಯಮಂತ್ರಿ ಆಗಿ ಕಾರ್ಯನಿರ್ವಹಣೆ ಮಾಡಲಿದ್ದಾರೆ. ಅವರ ಇಡೀ ಸಂಪೂರ್ಣ ಸಂಪುಟವನ್ನಿ ವಿಸರ್ಜನೆ ಮಾಡಿದ್ದು, ಎಲ್ಲರೂ ಮಾಜಿ ಆಗಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಸಿದ್ದರಾಮಯ್ಯ ಅವರು […]

Continue Reading

ಸೆಮಿಕಂಡಕ್ಟರ್ ಶಿಕ್ಷಣಕ್ಕೆ ಮಂಗಳೂರಿನ ಸಹ್ಯಾದ್ರಿ ಕಾಲೇಜು–ಅನ್ಮಯ ಟೆಕ್ನಾಲಜೀಸ್ ಒಪ್ಪಂದ

ಮಂಗಳೂರು: ಸೆಮಿಕಂಡಕ್ಟರ್‌ ಕೇಂದ್ರಿತ ತಾಂತ್ರಿಕ ಶಿಕ್ಷಣವನ್ನು ಉತ್ತೇಜಿಸುವ ಉದ್ದೇಶದಿಂದ ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್‌ (ಎಸ್‌ಸಿಇಎಂ)ನ ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ ಎಂಜಿನಿಯರಿಂಗ್ ವಿಭಾಗವು ಅನ್ಮಯ ಟೆಕ್ನಾಲಜೀಸ್ ಸಂಸ್ಥೆಯೊಂದಿಗೆ ತಿಳುವಳಿಕೆ ಒಪ್ಪಂದಕ್ಕೆ (ಎಂಒಯು) ಸಹಿ ಹಾಕಿದೆ. ಎಫ್ ಪಿಜಿಎ -ಸ್ಥಳೀಯ ಮತ್ತು ಎಂಬೆಡೆಡ್ ಹಾರ್ಡ್‌ವೇರ್ ಪರಿಹಾರಗಳಲ್ಲಿ ಪರಿಣತಿ ಹೊಂದಿರುವ ಅನ್ಮಯ ಟೆಕ್ನಾಲಜೀಸ್ ಜತೆಗೆ ಮಾಡಿಕೊಂಡಿರುವ ಈ ಸಹಭಾಗಿತ್ವವು ವಿದ್ಯಾರ್ಥಿಗಳಿಗೆ ಸೆಮಿಕಂಡಕ್ಟರ್ ತಂತ್ರಜ್ಞಾನ, ವಿಎಲ್ ಎಸ್ ಐ ವಿನ್ಯಾಸ, ಎಫ್ ಪಿಜಿಎ ಅಭಿವೃದ್ಧಿ, ಎಂಬೆಡೆಡ್ ಸಿಸ್ಟಮ್‌, […]

Continue Reading

ಮಂಗಳೂರಿನಲ್ಲಿ ಬ್ರಹ್ಮಸ್ಥಾನಂ ಮಹೋತ್ಸವ, ಅಮ್ಮನ ದರ್ಶನ ಪಡೆದ ಭಕ್ತರ ಪುಳಕ, ವಿವಿಧ ಸಮಾಜಮುಖಿ ಕಾರ್ಯಗಳಿಗೆ ಚಾಲನೆ

ಮಂಗಳೂರು: ಮಕ್ಕಳಲ್ಲಿ ಪ್ರಕೃತಿ, ಸಕಲ ಜೀವಿಗಳು ಹಾಗೂ ಮಾನವ ಸಮುದಾಯದೊಂದಿಗೆ ಸಹಬಾಳ್ವೆ ನಡೆಸುವ ಮನೋಭಾವ ಬೆಳೆಸಬೇಕು ಎಂದು ಮಾತಾ ಅಮೃತಾನಂದಮಯಿ ದೇವಿ ಅವರು ಹೇಳಿದರು. ಮಂಗಳೂರಿನ ಬೋಳೂರಿನ ಮಾತಾ ಅಮೃತಾನಂದಮಯಿ ಮಠದಲ್ಲಿ ನಡೆದ ಬ್ರಹ್ಮಸ್ಥಾನಂ ಮಹೋತ್ಸವದಲ್ಲಿ ಭಕ್ತರನ್ನು ಉದ್ದೇಶಿಸಿ ಅವರು ಮಾತನಾಡಿ, ಮಾನವರು ಪರಸ್ಪರ ಸಹಕಾರದಿಂದ ಬದುಕುವುದನ್ನು ಕಲಿಯಬೇಕು. ಜತೆಗೆ ಪ್ರಕೃತಿಯೊಂದಿಗೆ ಸ್ನೇಹಭಾವ ಮತ್ತು ದೇವರೊಂದಿಗೆ ಆಧ್ಯಾತ್ಮಿಕ ಸಂಪರ್ಕ ಬೆಳೆಸಿಕೊಳ್ಳಬೇಕು ಎಂದರು. ಕೋವಿಡ್ ಮಹಾಮಾರಿ, ಪ್ರಕೃತಿ ವಿಕೋಪಗಳು ಹಾಗೂ ಹವಾಮಾನ ಬದಲಾವಣೆಗಳು ಮಾನವಕುಲವು ಪ್ರಕೃತಿಯೊಂದಿಗಿನ ತನ್ನ ಸಂಬಂಧವನ್ನು […]

Continue Reading

ನಾನು ರಾಜ್ಯ ರಾಜಕಾರಣದ‌ಲ್ಲಿಯೇ ಇರುತ್ತೇನೆ, ಸಕ್ರಿಯ ಆಗಿರುವೆ, ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಾನು ರಾಜ್ಯ ರಾಜಕಾರಣದಲ್ಲಿಯೇ ಇರುತ್ತೇನೆ, ಯಾವುದೇ ಕಾರಣಕ್ಕೂ ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ, ಸಕ್ರಿಯ ರಾಜಕಾರಣವನ್ನು ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬಳಿಕ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು. ಕಾಂಗ್ರೆಸ್ ನನಗೆ ಎರಡು ಬಾರಿ ಮುಖ್ಯಮಂತ್ರಿ ಸ್ಥಾನ ಕೊಟ್ಟಿದೆ. ವಿರೋಧ ಪಕ್ಷ ನಾಯಕ ಸ್ಥಾನವನ್ನೂ ಕೊಟ್ಟಿದೆ, ಇದಕ್ಕಾಗಿ ನನ್ನ ಮೇಲೆ ನಂಬಿಕೆಯಿಟ್ಟ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರಿಗೆ ಅಭಿನಂದನೆ ಹೇಳುತ್ತೇನೆ. ನಾನು ಕೊನೆಯ ಉಸಿರು ಇರೋವರೆಗೂ ರಾಜಕಾರಣದಲ್ಲಿ ಸಕ್ರಿಯ ಆಗಿರುತ್ತೇನೆ. ಕೋಮುವಾದಿ ಶಕ್ತಿಗಳ ವಿರುದ್ಧ […]

Continue Reading

ಸಿಎಂ ಸಿದ್ದರಾಮಯ್ಯ ಕಾಲಿಗೆ ಬಿದ್ದ ಆಶೀರ್ವಾದ ಡಿಕೆಶಿ, ಜಾಲತಾಣದಲ್ಲಿ ಭಾವಚಿತ್ರ ವೈರಲ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಊಹಾಪೋಹಗಳು ಜೋರಾಗಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಒಗ್ಗಟ್ಟಿನ ಸಂದೇಶ ನೀಡಿದ್ದಾರೆ. ಗುರುವಾರ ಬೆಳಗ್ಗೆ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ನಡೆದ ಬ್ರೇಕ್‌ಫಾಸ್ಟ್ ಮೀಟಿಂಗ್ ವೇಳೆ ಡಿಕೆ ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ತಬ್ಬಿಕೊಂಡು ಅಲಿಂಗನ ಮಾಡಿಕೊಂಡರು. ಬಳಿಕ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ದೃಶ್ಯಗಳು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣ ಆಗಿವೆ.  

Continue Reading

ನಾನೇ ರಾಜೀನಾಮೆ ನೀಡಿದ್ದೇನೆ, ಯಾವುದೇ ಒತ್ತಡ ಇಲ್ಲ, ಹೈಕಮಾಂಡ್ ಹೇಳಿದಂತೆ ನಡೆದುಕೊಂಡಿದ್ದೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜಕೀಯ ಹೈಡ್ರಾಮಾದ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಸಲ್ಲಿಕೆ ಮಾಡಿದ್ದು, ನಾನೇ ಸ್ವಯಂ ಆಗಿ ಹೈಕಮಾಂಡ್ ನಿರ್ದೇಶನದ ಮೇಲೆ ರಾಜೀನಾಮೆ ನೀಡಿದ್ದೇನೆ. ಇಲ್ಲಿ ಯಾರ ಒತ್ತಡವು ಇಲ್ಲ, ಹೈಕಮಾಂಡ್ ಅವರು ಹೇಳಿದಾ‌ಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದೆ ಅದರಂತೆ ನಡೆದುಕೊಂಡಿದ್ದೇನೆ, ಇದರಲ್ಲಿ ಯಾವುದೇ ಬೇಸರ, ಒತ್ತಡ ಇಲ್ಲ ಎಂದು ಸಿದ್ದರಾಮಯ್ಯ ಅವರು ರಾಜಭವನಕ್ಕೆ ತೆರಳಿ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ ನಂತರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಕಾಂಗ್ರೆಸ್ ಪಕ್ಷದಲ್ಲಿ ಸುಧೀರ್ಘವಾಗಿ ಮುಖ್ಯಮಂತ್ರಿ ಆಗಿ, ವಿರೋಧ ಪಕ್ಷದ […]

Continue Reading

ತಣ್ಣೀರು ಬಾವಿ ಬೀಚ್‌ನಲ್ಲಿ ರಾಷ್ಟ್ರ ಮಟ್ಟದ ಸರ್ಫಿಂಗ್ ಸ್ಪರ್ಧೆ 29 ರಿಂದ

ಮಂಗಳೂರು: ಇದೇ 29 ರಿಂದ 31 ರವರಿಗೆ ತಣ್ಣೀರು ಬಾವಿ ಬೀಚ್‌ನಲ್ಲಿ ರಾಷ್ಟ್ರ ಮಟ್ಟದ ಸರ್ಫಿಂಗ್ ಸ್ಪರ್ಧೆ ನಡೆಯುತ್ತಿದ್ದು, ಇದಕ್ಕಾಗಿ ಐಚಿ ನಗೋಯಾ ಏಷ್ಯನ್ ಗೇಮ್ಸ್ 2026 ನಲ್ಲಿ ಸರ್ಫಿಂಗ್‌ನಲ್ಲಿ ಭಾರತದ ಸ್ಪರ್ಧಿಗಳು ಚೊಚ್ಚಲ ಪ್ರವೇಶಕ್ಕೆ ಸಿದ್ಧತೆ ನಡೆಸುತ್ತಿದ್ದು, ಸರ್ಫಿಂಗ್ ಸ್ಪರ್ಧಿಗಳಿಗೆ ಒಂದು ರೀತಿಯ ಹಬ್ಬದ ವಾತಾವರಣ ಕಟ್ಟಿಕೊಡುವುದಕ್ಕೆ ವೇದಿಕೆ ಸಿದ್ದವಾಗುತ್ತಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸರ್ಫಿಂಗ್ ಫೆಡರೇಶನ್ ಆಫ್ ಇಂಡಿಯಾ ಮತ್ತು ಕರ್ನಾಟಕದ ಜತೆಗೆ, ಎನ್‌ಎಂಶಿಎ ಸಹಭಾಗಿತ್ವದಲ್ಲಿ ಮೂರು […]

Continue Reading

ಇಂದಿನಿಂದ ಕದ್ರಿ ಉದ್ಯಾನದಲ್ಲಿ ಮಾವು ಮೇಳ, ನೈಸರ್ಗಿಕವಾಗಿ ಮಾಗಿಸಿದ ಮಾವು ಮಾರಾಟ: ರಮೇಶ್

ಮಂಗಳೂರು: ರಾಮನಗರ ಜಿಲ್ಲಾ ಮಾವು ತೋಟದ ಬೆಳೆಗಾರರ ಮಾರಾಟ ಸಂಘದ ವತಿಯಿಂದ ತೋಟಗಾರಿಕಾ ಇಲಾಖೆಯ ಸಹಕಾರದಲ್ಲಿ ಇದೇ ಮೇ 28 ರಿಂದ 31 ರವರೆಗೆ ನಗರದ ಕದ್ರಿ ಉದ್ಯಾನದಲ್ಲಿ ಮಾವು ಮೇಳ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ರಮೇಶ್ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಈ ಮೇಳದಲ್ಲಿ ಉತ್ತಮ ಗುಣಮಟ್ಟದ ಹಾಗೂ ನೈಸರ್ಗಿಕವಾಗಿ ಮಾಗಿಸಲಾದ ಮಾವು ಬೆಳೆಯ ವಿವಿಧ ತಳಿಗಳಾದ ಆಲ್ಫಾನ್ಸೋ, ಬಾದಾಮಿ, ಮಲ್ಲಿಕ, ರಸಪುರಿ, ಮಲಗೋವಾ, ಸಿಂಧೂರ, ಕಾಲಪಾಡಿ, ತೋತಾಪುರಿ, ಬೆಂಗನ್ಪಲ್ಲಿ, ಶುಗರ್ ಬೇಬಿ ಇತ್ಯಾದಿ […]

Continue Reading

ಮೇ 30, 31 ರಂದು ದ.ಕ ಜಿಲ್ಲೆಗೆ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್‌

ಮಂಗಳೂರು: ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್‌ ಅವರು ಮೇ 30 ಹಾಗೂ 31 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದು, ಮೇ 30 ರಂದು ಸಂಜೆ 4.25ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, 5. 05 ಗಂಟೆಗೆ ಧರ್ಮಸ್ಥಳ ಹೆಲಿಪ್ಯಾಡ್ ಆಗಮನ, ಬಳಿಕ ಧರ್ಮಸ್ಥಳ ಅಥಿತಿಗೃಹದಲ್ಲಿ ವಾಸ್ತವ್ಯ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ಮೇ 31 ರಂದು ಬೆಳಿಗ್ಗೆ 8 ಗಂಟೆಗೆ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಾಲಯಕ್ಕೆ ಭೇಟಿ, 11 ಗಂಟೆಗೆ ಬೆಳ್ತಂಗಡಿಯಲ್ಲಿ ಸಿರಿ ಇಂಡಸ್ಟ್ರೀಯಲ್ […]

Continue Reading