ಮಂಗಳೂರಿನಲ್ಲಿ ಜೆಎಲ್‌ಆರ್ ಇಂಡಿಯಾ ನೂತನ ಮಳಿಗೆಗೆ ರಾಜನ್ ಅಂಬಾ ಚಾಲನೆ

ಮಂಗಳೂರು: ಐಷಾರಾಮಿ ಕಾರುಗಳ ವಿಭಾಗದಲ್ಲಿ ಮಂಗಳೂರು, ದಕ್ಷಿಣ ಭಾರತದ ಅತ್ಯಂತ ಪ್ರಮುಖ ಮಾರುಕಟ್ಟೆ ಆಗಿದೆ. ಇಲ್ಲಿ ನಮ್ಮ ನೂತನ ಘಟಕವನ್ನು ಆರಂಭಿಸಲು ನಮಗೆ ಸಂತೋಷ ಆಗಿದೆ. ಕರ್ನಾಟಕದಲ್ಲಿ ಮತ್ತು ಈ ಭಾಗದಲ್ಲಿ ನಮ್ಮ ಗ್ರಾಹಕರ ಸಂಖ್ಯೆ ಹೆಚ್ಚುತ್ತಿರುವುದರಿಂದ ಈ ಹೆಜ್ಜೆ ಇಟ್ಟಿದ್ದೇವೆ” ಎಂದು ಪ್ರತಿಷ್ಠಿತ ಐಷಾರಾಮಿ ಕಾರು ತಯಾರಿಕಾ ಸಂಸ್ಥೆ ಜೆಎಲ್‌ಆರ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ ರಾಜನ್ ಅಂಬಾ ಅವರು ತಿಳಿಸಿದರು. ಮಂಗಳೂರಿನ ಕೊಟ್ಟಾರದಲ್ಲಿ ಇರುವ ಜೆಎಲ್‌ಆರ್ ಇಂಡಿಯಾದ ಸೇವಾ ಮತ್ತು ಬಿಡಿಭಾಗಗಳ ಕೇಂದ್ರದ ಪಕ್ಕದಲ್ಲೇ ಸಂಸ್ಥೆಯು […]

Continue Reading

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರ ಪೀಠ, ಸ್ಥಳ ಪರಿಶೀಲನೆ: ಐವನ್ ಡಿಸೋಜ ಶೀಘ್ರವೇ ಹೈಕೋರ್ಟ್ ಮುಖ್ಯ ನ್ಯಾಯಾಧೀಶರು ಮಂಗಳೂರಿಗೆ

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ , ಚಿಕ್ಕಮಗಳೂರು, ಕೊಡಗು ಜಿಲ್ಲೆಗಳನ್ನು ಒಳಗೊಂಡು ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರ ಹಾಗೂ ಕಾಯಂ ಪೀಠ ಸ್ಥಾಪಿಸಬೇಕು ಎಂಬ ಬೇಡಿಕೆ ಕುರಿತು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅವರಿಗೆ ಮನವರಿಕೆ ಆಗಿದ್ದು, ಅವರೇ ಸ್ಥಳ ಪರಿಶೀಲನೆಗೆ ಬರುವುದಾಗಿ ಒಪ್ಪಿಕೊಂಡಿದ್ದಾರೆ. ಶೀಘ್ರವೇ ಅವರು ಮಂಗಳೂರಿಗೆ ಭೇಟಿ ನೀಡುವ ದಿನವು ನಿಗದಿ ಆಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳೀಸಿದರು. ಹಳೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹೈಕೋರ್ಟ್ ಸಂಚಾರ […]

Continue Reading

ಪಂಚರಾಜ್ಯ ಚುನಾವಣೆ ಫಲಿತಾಂಶ, ಸಂಘಟನಾ ಶಕ್ತಿಗೆ ಸಾಕ್ಷಿ ಪಶ್ಚಿಮ ಬಂಗಾಳ, ಬಿಜೆಪಿ ಚಾರಿತ್ರಿಕ ಗೆಲುವು: ಸಂಸದ ಚೌಟ

ಮಂಗಳೂರು: ಪಂಚರಾಜ್ಯ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಅಸ್ಸಾಂನಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲುವು ಸಾಧಿಸಿರುವುದು ಹಾಗೂ ಪುದುಚೇರಿಯಲ್ಲಿ ಎನ್‌ಡಿಎ ಮೈತ್ರಿಕೂಟ ಸ್ಪಷ್ಟ ಬಹುಮತ ಪಡೆದಿರುವುದು ಹಾಗೂ ಕೇರಳದಲ್ಲಿ ಉತ್ತಮ ಸಾಧನೆ ಮಾಡಿರುವುದು ಪ್ರಧಾನಮಂತ್ರಿ ಮೋದಿ ಅವರ ಸರ್ಕಾರದ ಮೇಲಿರುವ ಜನರ ವಿಶ್ವಾಸಕ್ಕೆ ಹಾಗೂ ‘ವಿಕಸಿತ ಭಾರತ’ದ ಸಂಕಲ್ಪಕ್ಕೆ ಮತ್ತಷ್ಟು ಶಕ್ತಿಯನ್ನು ತುಂಬಿದೆ ಎಂದು ಸಂಸದ ಬ್ರಿಜೇಶ್ ಚೌಟ ಅವರು ತಿಳಿಸಿದ್ದಾರೆ. ಇನ್ನೊಂದೆಡೆ, ಪಶ್ಚಿಮ ಬಂಗಾಲದಲ್ಲಿ ಬಿಜೆಪಿಯ ಗೆಲುವು ಇಡೀ ದೇಶದಲ್ಲಿರುವ ಬಿಜೆಪಿ ಕಾರ್ಯಕರ್ತರಿಗೆ ಸಂದ ಗೆಲುವು. […]

Continue Reading

ನಗರದಲ್ಲಿ ಇಬ್ಬರು ಶಾಸಕರಿದ್ದರು ಮಾಹಿತಿ ನೀಡದೇ ನೀರಿನ ರೇಷನಿಂಗ್ ನಿರ್ಧಾರ   ಎಎಂಆರ್‌ ಡ್ಯಾಂ ನಿಂದ ತುಂಬೆಗೆ ನೀರು ಹರಿಸಿ: ಶಾಸಕ ಕಾಮತ್  

ಮಂಗಳೂರು: ತುಂಬೆ ವೆಂಟೆಡ್ ಡ್ಯಾಂನಲ್ಲಿ ನೀರಿನ ಮಟ್ಟವು ಕನಿಷ್ಠ ಮಟ್ಟಕ್ಕೆ ಕುಸಿದು ಅಣೆಕಟ್ಟಿನಲ್ಲಿ ಕೇವಲ 4 ಮೀಟರ್‌ಗೆ ಇಳಿಕೆ ಆಗುವ ಮೂಲಕ ನಗರದಲ್ಲಿ ಕೃತಕ ಜಲಕ್ಷಾಮ ಸೃಷ್ಟಿಸಲಾಗಿದೆ. ಕೂಡಲೇ ಎಎಂಆರ್‌ ಡ್ಯಾಂ ನಿಂದ ತುಂಬೆ ಡ್ಯಾಂ ಗೆ ನೀರು ಹರಿಸಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಆಗ್ರಹಿಸಿದರು. ತುಂಬೆ ಡ್ಯಾಂ ಗೆ ಅವರು ಖುದ್ದು ಭೇಟಿ ನೀಡಿ ವೀಕ್ಷಣೆ ನಡೆಸಿ ಮಾತನಾಡಿದ ಅವರು, ನಗರ ವ್ಯಾಪ್ತಿಯಲ್ಲಿ ಇಬ್ಬರು ಶಾಸಕರುಗಳು ಇದ್ದರೂ ಯಾವುದೇ ಮಾಹಿತಿ ನೀಡದೇ ಜಿಲ್ಲಾಡಳಿತ […]

Continue Reading

ಸಂವಿಧಾನದ 10 ನೇ ವಿಧಿ ಬಲಿಷ್ಠಗೊಳಿಸುವುದಕ್ಕೆ ಲೋಕಸಭೆ ವರದಿ ಮಂಡನೆ ಪಕ್ಷಾಂತರ ನಿಷೇಧ ಕಾಯ್ದೆ, ಜೂನ್ ನಲ್ಲಿ ಸಮಿತಿ ಸಭೆ- ಸ್ಪೀಕರ್ ಖಾದರ್

ಮಂಗಳೂರು: ಪಕ್ಷಾಂತರ ನಿಷೇಧ ಕಾಯ್ದೆ ಕುರಿತಂತೆ ಲೋಕಸಭೆಯ ಸ್ಪೀಕರ್ ಓಂ ಪ್ರಕಾಶ್ ಬಿರ್ಲಾ ಅವರ ನೇತೃತ್ವದ ಉನ್ನತ ಮಟ್ಟದ ಸಮಿತಿ 3 ನೇ ಸಭೆ ರಾಜ್ಯದಲ್ಲಿ ಜೂನ್ ತಿಂಗಳ ಅಂತ್ಯದಲ್ಲಿ ನಡೆಯಲಿದ್ದು, ಬಳಿಕ ಸಮಿತಿ ತನ್ನ ವರದಿ ಲೋಕಸಭೆಗೆ ಮಂಡಿಸಲಿದೆ ಎಂದು ವಿಧಾನಸಭೆ ಸ್ಪೀಕರ್ ಯು. ಟಿ. ಖಾದರ್ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಚುನಾಯಿತ ಪ್ರತಿನಿಧಿಗಳು ಮತ್ತೇ ಮತ್ತೇ ಪಕ್ಷಾಂತರ ಮಾಡುವುದ್ನು ತಡೆಯುವ ಉದ್ದೇಶದಿಂದ ಸಂವಿಧಾನದ 10 ನೇ ವಿಧಿ ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಮಹಾರಾಷ್ಟ್ರ ಸ್ಪೀಕರ್ […]

Continue Reading

ಮಾತಾ ಅಮೃತಾನಂದಮಯಿಮ ಮಠಕ್ಕೆ 28ಕ್ಕೆ ಅಮ್ಮ ಭೇಟಿ, ಚಪ್ಪರ ಮುಹೂರ್ತ ಅಮ್ಮ ನಡೆದಾಡುವ, ಮಾತನಾಡುವ ದೇವರು: ಮಾಜಿ ಸಂಸದ ಕಟೀಲ್

ಮಂಗಳೂರು: ಮಾತಾ ಅಮೃತಾನಂದಮಯಿ ಮಠಕ್ಕೆ ಮೇ 28 ರಂದು ಆಗಮಿಸುವ ಸದ್ಗುರು ಮಾತಾ ಅಮೃತಾನಂದಮಯಿ ದೇವಿ ಅವರ ಕಾರ್ಯಕ್ರಮ” ಬ್ರಹ್ಮಸ್ಥಾನಂ ಮಹೋತ್ಸವ ಮತ್ತು ಅಮೃತಸಂಗಮ ಅಂಗವಾಗಿ ಚಪ್ಪರ ಮುಹೂರ್ತ ನಡೆಯಿತು. ಸ್ವಾಮಿನಿ ಮಂಗಳಾಮೃತ ಪ್ರಾಣ ಅವರ ಉಪಸ್ಥಿತಿಯಲ್ಲಿ ನಡೆದ ಈ‌ ಕಾರ್ಯಕ್ರಮದಲ್ಲಿ ನಿಕಟಪೂರ್ವ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಅವರು ವಿಧ್ಯುಕ್ತವಾಗಿ ಚಾಲನೆ ನೀಡಿ ಮಾತನಾಡಿ, ಮಾನವ ಮಹಾದೇವತ್ವಕ್ಕೆ ಏರುವ ಪುಣ್ಯಭೂಮಿ ಭಾರತ. ನಡೆದಾಡುವ , ಮಾತನಾಡುವ ದೇವರು ಮಾತಾ ಅಮೃತಾನಂದಮಯಿ ದೇವಿ, ಅವರು ಜಗತ್ತಿಗೆ […]

Continue Reading

ಇಂಧನ ಸಚಿವ ಕೆ.ಜೆ. ಜಾರ್ಜ್ ನಿರ್ದೇಶನ: ಕೆಪಿಟಿಸಿಎಲ್ ಎಂಡಿ ಡಾ. ರಾಮ್ ಪ್ರಸಾತ್ ಮನೋಹರ್-ಜುಲೈ 𝟭𝟱ರೊಳಗೆ ಕಡಂದಲೆ 400 ಕೆ.ವಿ ಉಪಕೇಂದ್ರ ಕಾಮಗಾರಿ ಪೂರ್ಣ ಗುರಿ

ಮಂಗಳೂರು: ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ನಿರ್ದೇಶನದಂತೆ, ದಕ್ಷಿಣ ಕನ್ನಡ ಹಾಗೂ ಉಡುಪಿ ಸೇರಿದಂತೆ ಕರಾವಳಿ ಭಾಗದ ಜಿಲ್ಲೆಗಳಿಗೆ ತಡೆರಹಿತ, ಉತ್ತಮ ಗುಣಮಟ್ಟದ ವಿದ್ಯುತ್ ಸೌಲಭ್ಯ ಒದಗಿಸುವ ‘ಕಡಂದಲೆ 400 ಕೆವಿ ವಿದ್ಯುತ್ ಉಪಕೇಂದ್ರ’ ಕಾಮಗಾರಿ ಜುಲೈ 15 ರ ಒಳಗಾಗಿ ಪೂರ್ಣಗೊಳಿಸಲಾಗುವುದು ಎಂದು ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಡಾ. ರಾಮ್ ಪ್ರಸಾತ್ ಮನೋಹರ್ ಅವರು ಬುಧವಾರ ತಿಳಿಸಿದ್ದಾರೆ. ಭೂವ್ಯಾಜ್ಯದ ಕಾರಣದಿಂದಾಗಿ ಮೂರು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲ್ಲೂಕಿನ ಕಡಂದಲೆ ಗ್ರಾಮದಲ್ಲಿ 400 […]

Continue Reading

ಬಿಜೆಪಿ ಗೆಲುವು ಶಾಸಕ ವೇವದ್ಯಾಸ್ ಕಾಮತ್ ಹರ್ಷ

ಮಂಗಳೂರು: ಅಸ್ಸಾಂ, ಪುದುಚೇರಿ ಜತೆಗೆ ವಿಶೇಷವಾಗಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯು ಚರಿತ್ರೆಯಲ್ಲಿ ದಾಖಲಾಗುವಂತಹ ಅದ್ಭುತ ಗೆಲುವು ಸಾಧಿಸಿದ್ದು ಟಿಎಂಸಿಯ ದುರಾಡಳಿತ ಕೊನೆಗೊಂಡಿದೆ ಎಂದು ಶಾಸಕ ವೇದವ್ಯಾಸ ಕಾಮತ್ ವರು ಹರ್ಷ ವ್ಯಕ್ತಪಡಿಸಿದ್ದಾರೆ. ಟಿಎಂಸಿ ಹಾಗೂ ಕಮ್ಯುನಿಸ್ಟ್ ಎಂಬ ಒಂದೇ ನಾಣ್ಯದ ಎರಡು ಮುಖಗಳು ಬಂಗಾಳದಲ್ಲಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ನಡೆಸಿದ ಮಾರಣಹೋಮ, ಮಿತಿ ಮೀರಿದ ಓಲೈಕೆ, ದೇಶದ ಭದ್ರತೆಗೆ ಸವಾಲು ಇವೆಲ್ಲವೂ ಬಿಜೆಪಿ ಗೆಲುವಿನಿಂದ ಅಂತ್ಯಗೊಂಡಿದೆ. ಭಾರತೀಯ ಜನಸಂಘದ ಸಂಸ್ಥಾಪಕರಾಗಿದ್ದ ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ನಾಡಿನಲ್ಲಿ ಕಮಲ […]

Continue Reading

ಎಸ್ಸೆಸ್ಸೆಲ್ಸಿ, ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಡಾ. ಮೋಹನ್ ಆಳ್ವ ಸನ್ಮಾನ -ಆಳ್ವಾಸ್ ವಿದ್ಯಾರ್ಥಿಗಳು ಸಂಸ್ಥೆ ರಾಯಭಾರಿಗಳು

ಮೂಡುಬಿದಿರೆ: ದ್ವಿತೀಯ ಪಿಯು ಅಂತಿಮ ಪರೀಕ್ಷೆಯಲ್ಲಿ ರಾಜ್ಯದ ಅಗ್ರಗಣ್ಯ 10 ರ‍್ಯಾಂಕ್‌ ವೊಳಗೆ ಸ್ಥಾನ ಪಡೆದ ಆಳ್ವಾಸ್ ಪದವಿಪೂರ್ವ ಕಾಲೇಜಿನ 103 ವಿದ್ಯಾರ್ಥಿಗಳ ಜತೆಯಲ್ಲಿ ಎಸ್‌ಎಸ್‌ಎಲ್‌ಸಿ ಹಂತದಲ್ಲಿ ಶೇ 50 ಕ್ಕಿಂತ ಕಡಿಮೆ ಅಂಕಗಳಿಸಿ, ನಂತರ ಪದವಿಪೂರ್ವ ಶಿಕ್ಷಣಕ್ಕೆ ಆಳ್ವಾಸ್ ಸೇರಿದ ನಂತರ ಶೇ 95ಕ್ಕಿಂತಲೂ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸಂಸ್ಥೆಯ ವತಿಯಿಂದ ಗೌರವಿಸುವ ಕಾರ್ಯಕ್ರಮ ಮೂಡುಬಿದಿರೆ ನುಡಿಸಿರಿ ಸಭಾಂಗಣದಲ್ಲಿ ನಡೆಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಆಳ್ವ ಅವರು ಮಾತನಾಡಿ, ನೀವು […]

Continue Reading

10ರಿಂದ ಶಾರದಾ ವಿದ್ಯಾಲಯದಲ್ಲಿ ‘ಶ್ರೀಮದ್ ಭಾಗವತ ಸಪ್ತಾಹ ಪ್ರವಚನ- ಎಳು ದಿನಗಳ ಕಾಲ ಭಾಗವತ ಸಾರ: ಡಾ.ಪುರಾಣಿಕ್

ಮಂಗಳೂರು: ದಕ್ಷಿಣ ಕನ್ನಡ ದ್ರಾವಿಡ ಬ್ರಾಹ್ಮಣರ ಎಸೋಸಿಯೇಶನ್ ಮತ್ತು ತುಳುನಾಡು ಎಜುಕೇಶನಲ್ ಟ್ರಸ್ಟ್ ವತಿಯಿಂದ ನಗರದ ಕೊಡಿಯಾಲ್‌ಬೈಲ್‌ನಲ್ಲಿ ಮೇ 10ರಿಂದ ಮೇ 16ರವರೆಗೆ ‘ಶ್ರೀಮದ್ ಭಾಗವತ ಸಪ್ತಾಹ ಪ್ರವಚನ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್‌ನ ಅಧ್ಯಕ್ಷ ಡಾ. ಎಂ. ಬಿ. ಪುರಾಣಿಕ್ ಅವರು ಮಂಗಳವಾರ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ಕೊಡಿಯಾಲ್‌ ಬೈಲ್‌ ಎಸ್‌.ಕೆ.ಡಿ.ಬಿ.ಆವರಣದಲ್ಲಿರುವ ಶಾರದಾ ವಿದ್ಯಾಲಯದ ಧ್ಯಾನಮಂದಿರದಲ್ಲಿ ಈ ಪ್ರವಚನ ನಡೆಯಲಿದೆ. ಹುಬ್ಬಳ್ಳಿಯ ಪ್ರಸಿದ್ಧ ಪ್ರವಚನಕಾರರಾದ ಡಾ. ಶ್ರೀಹರಿ ಆಚಾರ್ಯ ವಾಲೈಕರ್ ಅವರು ಏಳು ದಿನಗಳ ಕಾಲ ಭಾಗವತದ […]

Continue Reading