ಮಂಗಳೂರಿನಲ್ಲಿ ಅಗಸ್ಟ್ 2 ರಿಂದ ರಾಷ್ಟ್ರ ಮಟ್ಟದ ಚೆಸ್ ಚಾಂಪಿಯನ್‌ ಷಿಪ್ ಹಬ್ಬ: ಡಾ. ಅಮರಶ್ರೀ ಅಮರನಾಥ ಶೆಟ್ಟಿ

ಮಂಗಳೂರು: ದಕ್ಷಿಣ ಕನ್ನಡ ಚೆಸ್ ಅಸೋಸಿಯೇಷನ್ ವತಿಯಿಂದ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ರಾಷ್ಟ್ರ ಮಟ್ಟದ ಚೆಸ್ ಚಾಂಪಿಯನ್‌ ಷಿಪ್- ಅ. 2 ರಿಂದ 8 ರವರೆಗೆ ನಗರದ ಉರ್ವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಚೆಸ್ ಅಸೋಸಿಯೇಷನ್ ಅಧ್ಯಕ್ಷೆ ಡಾ. ಅಮರಶ್ರೀ ಅಮರನಾಥ ಶೆಟ್ಟಿ ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ದೇಶದ ವಿವಿಧ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಂದ 600 ಕ್ಕೂ ಹೆಚ್ಚು ಮಂದಿ ಆಟಗಾರರು, ತರಬೇತುದಾರರು ಮತ್ತು ಪೋಷಕರು ಭಾಗವಹಿಸುವ ನಿರೀಕ್ಷೆ ಇದ್ದು, […]

Continue Reading

ಉಡುಪಿ ಜಿಲ್ಲಾ ಆಸ್ಪತ್ರೆ ರಕ್ತನಿಧಿ ಕುರಿತು ಹರಿದಾಡುತ್ತಿರುವ ಆರೋಪಗಳು ಸುಳ್ಳು: ಜಿಲ್ಲಾ ಸರ್ಜನ್ ಡಾ. ಅಶೋಕ್ ಸ್ಪಷ್ಟನೆ

ಉಡುಪಿ: ಉಡುಪಿ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದಿಂದ ದಾಖಲಾತಿ ಅಥವಾ ರಶೀದಿ ಇಲ್ಲದೆ ರಕ್ತ ವಿತರಿಸಲಾಗುತ್ತಿದೆ ಎಂಬ ಆರೋಪಗಳು ಸಂಪೂರ್ಣ ಸುಳ್ಳು ಹಾಗೂ ಆಧಾರರಹಿತವಾಗಿದ್ದು, ರಕ್ತ ವಿತರಣೆಯ ಎಲ್ಲ ಪ್ರಕ್ರಿಯೆಗಳೂ ಸರ್ಕಾರದ ಮಾರ್ಗಸೂಚಿ ಮತ್ತು ಕಾನೂನು ನಿಯಮಾವಳಿಗಳ ಪ್ರಕಾರವೇ ನಡೆಯುತ್ತಿವೆ ಎಂದು ಜಿಲ್ಲಾ ಸರ್ಜನ್ ಡಾ. ಅಶೋಕ್ ಅವರು ಸ್ಪಷ್ಟನೆ ನೀಡಿದ್ದಾರೆ. ಜುಲೈ 7 ರಂದು  ಜಾಲತಾಣಗಳಲ್ಲಿ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದಿಂದ ಒಂದೇ ಬಾರಿ 15 ಯುನಿಟ್ ರಕ್ತವನ್ನು ಖಾಸಗಿ ಆಸ್ಪತ್ರೆಗೆ ಯಾವುದೇ ದಾಖಲಾತಿ ಇಲ್ಲದೆ […]

Continue Reading

ಎಂಎಸ್‌ಎಂಇಗಳ ಬೆಳವಣಿಗೆಗೆ ಬ್ಯಾಂಕಿಂಗ್ ಬೆಂಬಲ ಅಗತ್ಯ: ಸಿಎ ಎಸ್.ಎಸ್. ನಾಯಕ್

ಮಂಗಳೂರು: ಅಂತರರಾಷ್ಟ್ರೀಯ ಎಂಎಸ್‌ಎಂಇ ದಿನದ ಅಂಗವಾಗಿ ಮಂಗಳೂರಿನ ಎಸ್‌ಡಿಎಂ ಸ್ನಾತಕೋತ್ತರ ವ್ಯವಹಾರ ನಿರ್ವಹಣಾ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಆಂತರಿಕ ಗುಣಮಟ್ಟ ಭರವಸೆ ಕೋಶ (ಐಕ್ಯೂಎಸಿ) ಹಾಗೂ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಆರ್ಥಿಕ ಪ್ರಕೋಷ್ಠದ ಸಹಯೋಗದಲ್ಲಿ “ಎಂಎಸ್‌ಎಂಇ ಮತ್ತು ಬ್ಯಾಂಕಿಂಗ್ ವ್ಯವಸ್ಥೆ: ಭಾರತೀಯ ಆರ್ಥಿಕತೆಯ ಸಬಲೀಕರಣ” ವಿಷಯದ ಕುರಿತು ವಿಚಾರ ಸಂಕಿರಣ ನಡೆಯಿತು. ಕಾರ್ಯಕ್ರಮವನ್ನು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ ಉದ್ಘಾಟಿಸಿದರು. ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದಕ್ಷಿಣ ಕನ್ನಡ ಜಿಲ್ಲಾ […]

Continue Reading

ರಾಷ್ಟ್ರ ಮಟ್ಟಕ್ಕೆ ಮಂಗಳೂರಿನ ವೀವನ್ ಈಜು ಪಟುಗಳು, 18 ಪದಕಗಳ ಸಾಧನೆ

ಮಂಗಳೂರು: ಕರ್ನಾಟಕ ರಾಜ್ಯ ಈಜು ಸಂಸ್ಥೆ ಹಾಗೂ ವೀ ವನ್ ಅಕ್ವಾ ಸೆಂಟರ್ ಆಶ್ರಯದಲ್ಲಿ ಮಂಗಳೂರಿನ ಎಮ್ಮೆಕೆರೆ ಅಂತರ ರಾಷ್ಟ್ರೀಯ ಈಜುಕೊಳದಲ್ಲಿ ನಡೆದ ಎನ್‌ಆರ್‌ಜೆ ರಾಜ್ಯ ಸಬ್ ಜೂನಿಯರ್ ಈಜು ಸ್ಪರ್ಧೆಯಲ್ಲಿ ವೀ ವನ್ ಅಕ್ವಾ ಸೆಂಟರ್‌ ಈಜುಪಟುಗಳು ಅತ್ಯುತ್ತಮ ಪ್ರದರ್ಶನ ನೀಡಿ ಒಟ್ಟು 18 ಪದಕಗಳನ್ನು ಗೆದ್ದು ಗಮನ ಸೆಳೆದಿದ್ದಾರೆ. ಮೂರು ಮಂದಿ ಈಜುಪಟುಗಳು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಶ್ವಿತಿ ದಿವಾಕರ್, ಅಲಿಟಾ ಡಿಸೋಜಾ ಹಾಗೂ ಸಿದ್ಧಿ ಶೆಟ್ಟಿ ಅವರು ಆಗಸ್ಟ್ 6ರಿಂದ 9ರವರೆಗೆ ಜೈಪುರದಲ್ಲಿ […]

Continue Reading

ಜನನ-ಮರಣ ಪ್ರಮಾಣಪತ್ರ ಅರ್ಜಿ ಸ್ವೀಕಾರ ಬಂದ್ ಎಂಬ ನಾಮಪಲಕ, ಪಾಲಿಕೆ ವಿರುದ್ಧ ಶಾಸಕ ವೇವ್ಯಾಸ್ ಕಾಮತ್ ಕೆಂಡಾಮಂಡಲ

ಮಂಗಳೂರು: ಮಹಾನಗರ ಪಾಲಿಕೆಯಲ್ಲಿ ಎಸ್‌ಐಆರ್ ಕರ್ತವ್ಯಕ್ಕೆ ಸಿಬ್ಬಂದಿ ನಿಯೋಜಿಸಿರುವ ನೆಪದಲ್ಲಿ ಜುಲೈ 29 ರವರೆಗೆ ಜನನ ಮತ್ತು ಮರಣ ನೋಂದಣಿ ಅರ್ಜಿಗಳ ಸ್ವೀಕಾರ ಸ್ಥಗಿತಗೊಳಿಸಿರುವುದು ಖಂಡನೀಯ ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ಹೊರಹಾಕಿದರು. ಜನರ ಅಗತ್ಯ ಸೇವೆಗಳನ್ನು ಸ್ಥಗಿತಗೊಳಿಸಿರುವ ಮಹಾನಗರ ಪಾಲಿಕೆ ಆಡಳಿತ ಕೂಡಲೇ ಈ ನಿರ್ಧಾರ ಹಿಂಪಡೆದು ಅರ್ಜಿ ಸ್ವೀಕಾರ ಹಾಗೂ ಪ್ರಮಾಣ ಪತ್ರ ವಿತರಣೆಯನ್ನು ಸುಗಮಗೊಳಿಸಬೇಕು. ಆಡಳಿತಾಧಿಕಾರಿ ಮೂಲಕ ನಡೆಯುತ್ತಿರುವ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಇನ್ನು ಒಂದು ತಿಂಗಳು […]

Continue Reading

ಯಲ್ಲಾಪುರ: ಭೀಕರ ಅಪಘಾತ, ಕ್ರೂಸರ್, ಲಾರಿ ನಡುವೆ ಮುಖಾಮುಖಿ ಡಿಕ್ಕಿ 6 ಮಂದಿ ಸಾವು, ಮೂರು ಮಂದಿಗೆ ಗಾಯ

ಯಲ್ಲಾಫುರ: ಕ್ರೂಸರ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಅಪಘಾತದಲ್ಲಿ 6 ಜನ ಮೃತಪಟ್ಟಿದ್ದು, ಮೂರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಯಲ್ಲಾಪುರ ತಾಲೂಕಿನ ಅರ್ತಿಬೈಲ್ ಬಳಿ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಗುರುವಾರ ನಸುಕಿನ ವೇಳೆ ಸಂಭವಿಸಿದೆ. ಧಾರವಾಡ ಮೂಲದ ಬಸವರಾಜ, ಆಭಿಷೇಕ, ಅಕ್ಷಯ, ಅಭಿಷೇಕ, ಸಂಜೀವ್, ಮಂಜುನಾಥ ಮತ್ತು ಇನ್ನೊಬ್ಬ ವ್ಯಕ್ತಿ ಮೃತಪಟ್ಟಿದ್ದು ಶಿವರಾಜ, ಚೆನ್ನ ಬಸು, ಸಚಿನ್ ಎಂಬುವವರು ಗಾಯಗೊಂಡಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಧಾರವಾಡದಿಂದ ಗೋಕರ್ಣಕ್ಕೆ ತೆರಳುತ್ತಿದ್ದ […]

Continue Reading

ಚೆಕ್ ಅಮಾನ್ಯ ಪ್ರಕರಣ, ಖುಲಾಸೆ ತೀರ್ಪು ರದ್ದು, ದುಪ್ಪಟ್ಟು ಪರಿಹಾರ ಪಾವತಿಸಲು ನ್ಯಾಯಾಲಯ ಆದೇಶ

ಮಂಗಳೂರು: ಚೆಕ್ ಅಮಾನ್ಯ ಪ್ರಕರಣದಲ್ಲಿ ಮಂಗಳೂರಿನ 4ನೇ ಜೆಎಂಎಫ್‌ಸಿ ನ್ಯಾಯಾಲಯ ನೀಡಿದ್ದ ಖುಲಾಸೆ ತೀರ್ಪ ಅನ್ನು ರದ್ದುಗೊಳಿಸಿರುವ ಮಂಗಳೂರಿನ ಪ್ರಧಾನ ಕೌಟುಂಬಿಕ ನ್ಯಾಯಾಲಯ, ಆರೋಪಿಯನ್ನು ದೋಷಿ ಎಂದು ಪರಿಗಣಿಸಿ ಚೆಕ್ ಮೊತ್ತದ ದುಪ್ಪಟ್ಟು ಪರಿಹಾರವನ್ನು ಬ್ಯಾಂಕ್‌ಗೆ ಪಾವತಿಸುವಂತೆ ಆದೇಶ ನೀಡಿದೆ. ಪ್ರಧಾನ ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶ ಕೆ. ಲಕ್ಷ್ಮೀನಾರಾಯಣ ಭಟ್ ಅವರು ಈ ತೀರ್ಪು ನೀಡಿದ್ದು, ಮರೋಳಿ ನಿವಾಸಿ ಗುರುರಾಜ್ ಹಾಗೂ ಅವರ ಪತ್ನಿ ಲಕ್ಷ್ಮೀ ಗುರುರಾಜ್ ಅವರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ […]

Continue Reading

ನೀಟ್ ಅಕ್ರಮ, ಸಿಡಿದ ಎನ್‌ಎಸ್‌ಯುಐ, ಪ್ರಧಾನಿ ವಿರುದ್ಧ ಸಹಿ ಸಂಗ್ರಹ ಅಭಿಯಾನ: ಸುಹಾನ್ ಆಳ್ವ

ಮಂಗಳೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಎನ್‌ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾ ಘಟಕ ಜಿಲ್ಲೆಯಾದ್ಯಂತ ಕಾಲೇಜು ಕ್ಯಾಂಪಸ್‌ಗಳಲ್ಲಿ ವಿದ್ಯಾರ್ಥಿಗಳ ಸಹಿ ಸಂಗ್ರಹ ಅಭಿಯಾನ ಆರಂಭಿಸಿದೆ. ಸಂಗ್ರಹವಾಗುವ ಪೋಸ್ಟ್‌ಕಾರ್ಡ್‌ಗಳನ್ನು ಪ್ರಧಾನ ಮಂತ್ರಿಗೆ ಕಳುಹಿಸಲಾಗುವುದು ಎಂದು ಎನ್‌ಎಸ್‌ಯುಐ ಜಿಲ್ಲಾ ಘಟಕದ ಅಧ್ಯಕ್ಷ ಸುಹಾನ್ ಆಳ್ವ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಕಾಲೇಜುಗಳಲ್ಲಿ ಸಹಿ ಸಂಗ್ರಹ ನಡೆಯಲಿದ್ದು, ನೀಟ್ ಅಕ್ರಮದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ […]

Continue Reading

ತೂಗುಸೇತುವೆಗಳ ಸರದಾರ ಪದ್ಮಶ್ರೀ ಡಾ. ಗಿರೀಶ್ ಭಾರದ್ವಾಜ್ ನಿಧನಕ್ಕೆ ಸಂಸದ ಕ್ಯಾ. ಚೌಟ ಸಂತಾಪ

ಮಂಗಳೂರು: ವಿಶಿಷ್ಟ ತಂತ್ರಜ್ಞಾನದ ಮೂಲಕ ಪರಿಸರ ಸ್ನೇಹಿ ತೂಗುಸೇತುವೆಗಳನ್ನು ನಿರ್ಮಿಸಿ ದೇಶದ ಗ್ರಾಮೀಣ ಭಾಗಗಳಲ್ಲಿ ಸಂಪರ್ಕ ಕ್ರಾಂತಿಗೆ ಕಾರಣರಾಗಿದ್ದ, ‘ತೂಗುಸೇತುವೆಗಳ ಸರದಾರ’ ಎಂದೇ ಖ್ಯಾತರಾಗಿದ್ದ ತುಳುನಾಡಿನ ಮಹಾನ್ ಸಾಧಕ, ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರ ನಿಧನಕ್ಕೆ ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ದ. ಕ. ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ತಮ್ಮ ಶೋಕ ಸಂದೇಶದಲ್ಲಿ , “ಸಾಮಾನ್ಯ ಹಳ್ಳಿಗಳ ಜನಸಾಮಾನ್ಯರ ಹಾಗೂ ಶಾಲಾ ಮಕ್ಕಳ ಕಷ್ಟಗಳಿಗೆ ಸ್ಪಂದಿಸಿ, ತಮ್ಮ […]

Continue Reading

ತೂಗುಸೇತುವೆಗಳ ಸರದಾರ, ಪದ್ಮಶ್ರೀ ವಿಜೇತ ಗಿರೀಶ್ ಭಾರಧ್ವಾಜ್ ನಿಧನಕ್ಕೆ ಸಚಿವ ಯು.ಟಿ. ಖಾದರ್ ಸಂತಾಪ

ಮಂಗಳೂರು: ದೇಶದ ಖ್ಯಾತ ತೂಗು ಸೇತುವೆ ತಜ್ಞ ಪದ್ಮಶ್ರೀ ಪ್ರಶಸ್ತಿ ವಿಜೇತ ಗಿರೀಶ್ ಭಾರಧ್ವಾಜ್ ಅವರು ವಿಧಿವಶರಾಗಿರುವ ಸುದ್ದಿ ತಿಳಿದು ತೀವ್ರ ಆಘಾತ ಆಗಿದ್ದು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಸಂತಾಪ ಸೂಚಿಸಿದ್ದಾರೆ. ಗಿರೀಶ್ ಭಾರಧ್ವಾಜ್ ಅವರು ತಮ್ಮ ವಿಶಿಷ್ಟ ತಾಂತ್ರಿಕ ಪರಿಣತಿ ಮತ್ತು ಸಮರ್ಪಿತ ಸೇವೆಯಿಂದ ದೇಶದಾದ್ಯಂತ ಅನೇಕ ತೂಗು ಸೇತುವೆಗಳ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸಿದ್ದರು.ಅನೇಕ ದ್ವೀಪ ಪ್ರದೇಶದ ನಾಗರಿಕರಿಗೆ ತಮ್ಮ ದೈನಂದಿನ ಚಟುವಟಿಕೆಗಳಿಗೆ ಇತರ […]

Continue Reading