ಬಾಲಕಿಗೆ ಲೈಂಗಿಕ ಕಿರುಕುಳ, ಪೋಕ್ಸೊ ಪ್ರಕರಣದಲ್ಲಿ ಮಂಕಿ ಪಿಎಸ್ಐ ಅಭಿನಂದನ್ ಬಂಧನ

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಪೋಕ್ಸೊ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಘಟನೆ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಹೊನ್ನಾವರ ತಾಲೂಕಿನ ಮಂಕಿ ಪೊಲೀಸ್ ಠಾಣೆಯ ಸಬ್ ಇನ್ ಸ್ಪೆಕ್ಟರ್ ಅಭಿನಂದನ್ ಅವರನ್ನು ಭಟ್ಕಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೂಲಗಳ ಪ್ರಕಾರ, ಯಲ್ಲಾಪುರ ಮೂಲದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಸಂತ್ರಸ್ತೆ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದರು. ತನಿಖೆಯ […]

Continue Reading

ಮಂಗಳೂರು ಪೊಲೀಸರು ಭರ್ಜರಿ ಕಾರ್ಯಾಚರಣೆ: ಅಪಹರಣ–ದರೋಡೆ ಪ್ರಕರಣ, ಮೂರು ಮಂದಿ ಬಂಧನ

ಮಂಗಳೂರು: ಮಹಾರಾಷ್ಟ್ರದಿಂದ ಕೇರಳಕ್ಕೆ ಕುಟುಂಬದ ಜತೆಗೆ ಪ್ರಯಾಣಿಸುತ್ತಿದ್ದ ವ್ಯಕ್ತಿ ಅಪಹರಿಸಿ, ಕಾರು ಹಾಗೂ ಚಿನ್ನಾಭರಣ ದರೋಡೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಣಂಬೂರು ಪೊಲೀಸರು ಮೂರು ಮಂದಿ ಆರೋಪಿಗಳನ್ನು ಬಂಧಿಸಿದ್ದು, ಉಳಿದ ಆರೋಪಿಗಳ ಪತ್ತೆಗೆ ವಿಶೇಷ ತಂಡಗಳು ಕಾರ್ಯಾಚರಣೆ ಮುಂದುವರೆಸಿವೆ ಎಂದು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ತಿಳಿಸಿದ್ದಾರೆ. ಕೇರಳದ ಕಣ್ಣೂರು ಜಿಲ್ಲೆಯ ತಲಶ್ಶೇರಿ ನಿವಾಸಿ ನಿಮಿಲ್ ಆರ್.ಕೆ. (37), ಆರೋಪಿಗಳಿಗೆ ತಲೆಮರೆಸಿಕೊಳ್ಳಲು ನೆರವು ನೀಡಿದ ಕೊಡಗು ಜಿಲ್ಲೆಯ ಅಕ್ಕತ್ತೂರು ನಿವಾಸಿ ಇರ್ಷಾದ್ (40) […]

Continue Reading

ಸೇತುವೆ ಇಲ್ಲದ ಸಂಕಷ್ಟ: ಉಕ್ಕಿ ಹರಿಯುತ್ತಿದ್ದ ಭಾಸ್ಕೇರಿ ಹೊಳೆಯಲ್ಲಿ ಶವ ಹೊತ್ತು ಅಂತ್ಯಸಂಸ್ಕಾರ, ಮೂಲ ಸೌಕರ್ಯದಿಂದ ವಂಚಿತ ಗ್ರಾಮಸ್ಥರು

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ದೊಡ್ಡ ಹಿತ್ತಲ ಗ್ರಾಮದಲ್ಲಿ ಮೂಲ ಸೌಕರ್ಯಗಳ ಕೊರತೆಯ ಮತ್ತೊಂದು ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಗ್ರಾಮದಲ್ಲಿ ಮೃತಪಟ್ಟ ವ್ಯಕ್ತಿಯೊಬ್ಬರ ಮೃತದೇಹವನ್ನು ಅಂತ್ಯಸಂಸ್ಕಾರಕ್ಕೆ ಕೊಂಡೊಯ್ಯಲು ಉಕ್ಕಿ ಹರಿಯುತ್ತಿದ್ದ ಹೊಳೆಯನ್ನು ಗ್ರಾಮಸ್ಥರು ಜೀವದ ಹಂಗು ತೊರೆದು ದಾಟಿದ ಘಟನೆ ನಡೆದಿದೆ. ಈ ಘಟನೆ ಜಾಲತಾಣದಲ್ಲಿ ವೈರಲ್ ಅಗುತ್ತಿದ್ದು, ಬಾರಿ ಚರ್ಚೆಗೆ ಗ್ರಾಸವಾಗುತ್ತಿದೆ. ನಿರಂತರ ಮಳೆಯಿಂದ ಭಾಸ್ಕೇರಿ ಹೊಳೆ ತುಂಬಿ ಹರಿಯುತ್ತಿದ್ದು, ಗ್ರಾಮದ ಸಂಪರ್ಕ ರಸ್ತೆಯೂ ಜಲಾವೃತ ಆಗಿದೆ. ಈ ಹಿನ್ನೆಲೆಯಲ್ಲಿ ಅಂತ್ಯಸಂಸ್ಕಾರಕ್ಕೆ […]

Continue Reading

ಓವರ್‌ಲೋಡ್ ವಾಹನಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಸೂಚನೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ನಿಗದಿತ ಮಿತಿಗಿಂತ ಹೆಚ್ಚಿನ ಸರಕು ಸಾಗಿಸುತ್ತಿರುವ ಓವರ್‌ಲೋಡ್ ವಾಹನಗಳ ವಿರುದ್ಧ ತಕ್ಷಣ ಪ್ರಕರಣ ದಾಖಲಿಸುವಂತೆ ಹಾಗೂ ಜಿಲ್ಲೆಯಾದ್ಯಂತ ತಪಾಸಣೆಗಳನ್ನು ಮತ್ತಷ್ಟು ತೀವ್ರಗೊಳಿಸುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಒಂದೇ ರಸ್ತೆಗೆ ಸೀಮಿತವಾಗದೆ ಎಲ್ಲಾ ಪ್ರಮುಖ ರಸ್ತೆಗಳಲ್ಲಿ ನಿಯಮಿತ ತಪಾಸಣೆ ನಡೆಸಿ ನಿಯಮ ಉಲ್ಲಂಘಿಸುವ ವಾಹನಗಳ ವಿರುದ್ಧ […]

Continue Reading

ಬಿಣಗಾ–ಅರಗಾ ರಾಷ್ಟ್ರೀಯ ಹೆದ್ದಾರಿ ಏಕಮುಖ ಸಂಚಾರ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಆದೇಶ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾ ಕರಿದೇವಸ್ಥಾನದಿಂದ ಅರಗಾ ಮಹಾದೇವಸ್ಥಾನ ಕ್ರಾಸ್‌ವರೆಗೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಜುಲೈ 4 ರಿಂದ ಮಳೆಗಾಲ ಮುಗಿಯುವವರೆಗೆ ಏಕಮುಖ ಸಂಚಾರ ವ್ಯವಸ್ಥೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಆದೇಶ ಹೊರಡಿಸಿದ್ದಾರೆ. ಮಳೆಗಾಲದಲ್ಲಿ ಗುಡ್ಡ ಪ್ರದೇಶದಿಂದ ನೀರಿನ ರಭಸಕ್ಕೆ ಕಲ್ಲು ಹಾಗೂ ಮಣ್ಣು ರಾಷ್ಟ್ರೀಯ ಹೆದ್ದಾರಿಯ ಮೇಲೆ ಕುಸಿಯುವ ಸಾಧ್ಯತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಈ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಗುಡ್ಡ ಕುಸಿತದಿಂದ ವಾಹನ ಸವಾರರು ಹಾಗೂ ಪ್ರಯಾಣಿಕರ ಸುರಕ್ಷತೆಗೆ […]

Continue Reading

ಸಚಿವ ಯು.ಟಿ. ಖಾದರ್ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ: ಗಾಯಾಳು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಸಚಿವ ಖಾದರ್

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-66ರ ಬಾಳೆಗುಳಿ ಸಮೀಪ ಶನಿವಾರ ಸಚಿವ ಯು.ಟಿ. ಖಾದರ್ ಅವರ ಬೆಂಗಾವಲು ವಾಹನ ಮತ್ತು ಸ್ಕೂಟಿ ನಡುವೆ ಅಪಘಾತ ಸಂಭವಿಸಿದ್ದು, ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಅಲಗೇರಿ ನಿವಾಸಿ ಸಂದೀಪ್ ನಾಯಕ ಎಂದು ಗುರುತಿಸಲಾಗಿದೆ. ಕಾರವಾರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಕೃತಿ ವಿಕೋಪ ನಿರ್ವಹಣೆಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸಚಿವ ಯು.ಟಿ. ಖಾದರ್ ಅವರು ರಸ್ತೆ ಮಾರ್ಗವಾಗಿ ಉಡುಪಿಯತ್ತ ಪ್ರಯಾಣಿಸುತ್ತಿದ್ದರು. ಈ ವೇಳೆ […]

Continue Reading

ಸಾರ್ವಜನಿಕರ ಸಂಕಷ್ಟಕ್ಕೆ ತಕ್ಷಣ ಸ್ಪಂದಿಸುವುದೇ ಸರ್ಕಾರದ ಆದ್ಯತೆ: ಸಚಿವ ಖಾದರ್, ಜಿಲ್ಲಾಡಳಿತ ಸನ್ನದ್ಧ, ಡಿಸಿ ಲಕ್ಷ್ಮಿಪ್ರಿಯಾ

ಕಾರವಾರ: ಪ್ರಕೃತಿ ವಿಕೋಪಗಳು ಯಾವಾಗ, ಹೇಗೆ ಸಂಭವಿಸುತ್ತವೆ ಎಂಬುದನ್ನು ಊಹಿಸಲು ಸಾಧ್ಯವಿಲ್ಲ. ಇಂತಹ ಸಂದರ್ಭಗಳಲ್ಲಿ ಸಂತ್ರಸ್ತರು ಹಾಗೂ ಸಾರ್ವಜನಿಕರ ನೋವಿಗೆ ತಕ್ಷಣ ಸ್ಪಂದಿಸಿ, ಅವರಿಗೆ ನೆಮ್ಮದಿಯ ಜೀವನ ಕಲ್ಪಿಸುವುದು ಸರ್ಕಾರದ ಪ್ರಥಮ ಆದ್ಯತೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಕೃತಿ ವಿಕೋಪ ನಿರ್ವಹಣೆ ಪೂರ್ವತಯಾರಿ ಹಾಗೂ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಕೃತಿ ವಿಕೋಪದಂತಹ ತುರ್ತು […]

Continue Reading

ರಾಜ್ಯ ಮಟ್ಟದ ಟೇಬಲ್ ಟೆನಿಸ್: ಫೈನಲ್ , ಸೆಮಿಫೈನಲ್ ನಲ್ಲಿ ತೀವ್ರ ಹಣಾಹಣಿ

ಮಂಗಳೂರು: ರಾಜ್ಯ ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ವಿವಿಧ ವಿಭಾಗಗಳ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳು ರೋಚಕ ಪೈಪೋಟಿಗೆ ಸಾಕ್ಷಿಯಾದವು. ಅಂಡರ್-17 ಬಾಲಕಿಯರ ಸಿಂಗಲ್ಸ್ ವಿಭಾಗದ ಫೈನಲ್‌ನಲ್ಲಿ ಮಿಹಿಕಾ ಉಡುಪ ಅವರು ವಿಭಾ ತಾವಕರಿ ಅವರನ್ನು 11-9, 11-9, 11-6 ನೇರ ಸೆಟ್‌ಗಳಿಂದ ಮಣಿಸಿ ಪ್ರಶಸ್ತಿ ತಮ್ಮದಾಗಿಸಿಕೊಂಡರು. ಸೆಮಿಫೈನಲ್‌ನಲ್ಲಿ ಮಿಹಿಕಾ ಉಡುಪ ಅವರು ಐರಿನ್ ಅಣ್ಣಾ ಸುಭಾಷ್ ವಿರುದ್ಧ 11-5, 12-10, 6-11, 14-12 ಅಂತರದಲ್ಲಿ ಜಯ ಸಾಧಿಸಿದರು. ವಿಭಾ ತಾವಕರಿ ಅವರು ಹಿಯಾ ಸಿಂಗ್ ಅವರನ್ನು […]

Continue Reading

ಮಳೆ ಹಾನಿ ಪರಿಶೀಲನೆಗೆ ಕಾರವಾರಕ್ಕೆ ಸಚಿವ ಯು.ಟಿ. ಖಾದರ್, ಅಧಿಕಾರಿಗಳ ಜತೆಗೆ ಪ್ರಗತಿ ಪರಿಶೀಲನೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಉಂಟಾಗಿರುವ ಹಾನಿ ಹಾಗೂ ಪರಿಹಾರ ಕಾರ್ಯಗಳ ಪ್ರಗತಿ ಪರಿಶೀಲನೆ ನಡೆಸಲು ಆರೋಗ್ಯ ಸಚಿವ ಹಾಗೂ ಉತ್ತರ ಕನ್ನಡ ಪ್ರಕೃತಿ ವಿಕೋಪ ಮೇಲುಸ್ತುವಾರಿ ಯು.ಟಿ. ಖಾದರ್ ಅವರು ಶನಿವಾರ ಕಾರವಾರಕ್ಕೆ ಭೇಟಿ ನೀಡಲಿದ್ದಾರೆ. ಮಂಗಳೂರಿನಿಂದ ಕಾರವಾರಕ್ಕೆ ಬರಲಿರುವ ಅವರು ‌ಬೆಳಿಗ್ಗೆ 10.30 ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಮಳೆಯಿಂದ ಉಂಟಾದ ಹಾನಿಯ ಸಂಪೂರ್ಣ ವಿವರ, […]

Continue Reading

ಉ.ಕ ಜಿಲ್ಲೆಯಾದ್ಯಂತ 7.46 ಲಕ್ಷ ಮನೆ ಮನೆ ಗಣತಿ ನಮೂನೆ ವಿತರಣೆ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ–2026 ರ ಕಾರ್ಯ ಚುರುಕಿನಿಂದ ಸಾಗುತ್ತಿದ್ದು, ಜಿಲ್ಲೆಯಲ್ಲಿ ಒಟ್ಟು 12,30,037 ಮತದಾರರು ಇದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಇದೂವರೆಗೆ 11,58,776 ಮತದಾರರ ವಿವರಗಳ ಹೊಂದಾಣಿಕೆ ಪೂರ್ಣಗೊಂಡಿದ್ದು, ಮನೆಮನೆಗೆ ಭೇಟಿ ನೀಡಿ 7,46,938 ಗಣತಿ ನಮೂನೆಗಳನ್ನು ವಿತರಿಸಲಾಗಿದೆ. ಅಲ್ಲದೆ, 8,331 ನಮೂನೆಗಳ ಮಾಹಿತಿಯನ್ನು ಗಣಕೀಕರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಮನೆಮನೆ ಭೇಟಿ ವೇಳೆ ಮತದಾರರ ವಿವರಗಳ ಪರಿಶೀಲನೆ […]

Continue Reading