ಉ. ಕ ಜಿಲ್ಲೆಗೆ ಆರೆಂಜ್ ಅಲರ್ಟ್, ಜುಲೈ 2 ರವರೆಗೆ ಭಾರೀ ಮಳೆ ಸಾಧ್ಯತೆ ಎಚ್ಚರ ವಹಿಸಿ: ಡಿಸಿ ಲಕ್ಷ್ಮೀಪ್ರಿಯಾ

ಕಾರವಾರ: ಭಾರತೀಯ ಹವಾಮಾನ ಇಲಾಖೆ ಉತ್ತರ ಕನ್ನಡ ಜಿಲ್ಲೆಗೆ ಜೂನ್ 30, ಮಧ್ಯಾಹ್ನ 1 ಗಂಟೆಯಿಂದ ಜುಲೈ 2ರ ಬೆಳಗ್ಗೆ 8.30 ರವರೆಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಗಂಟೆಗೆ 30 ರಿಂದ 40 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಜತೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಜನರು ಹಾಗೂ ಮೀನುಗಾರರು ಮುಂಜಾಗ್ರತೆ ವಹಿಸುವಂತೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಮುಂಗಾರು ಪೂರ್ವ ಸಿದ್ಧತೆಗಳನ್ನು ಈಗಾಗಲೇ ಪೂರ್ಣಗೊಳಿಸಲಾಗಿದ್ದು, ಯಾವುದೇ ತುರ್ತು ಪರಿಸ್ಥಿತಿ ಎದುರಾದರೂ ಸಮರ್ಪಕವಾಗಿ […]

Continue Reading

ಮಂಗಳೂರಿನ ದೇರಳಕಟ್ಟೆಯಲ್ಲಿ ಎಂಸಿಸಿ ಬ್ಯಾಂಕ್‌ 22 ನೇ ಶಾಖೆ, ಎಟಿಎಂ ಉದ್ಘಾಟನೆ

ಮಂಗಳೂರು: ಎಂಸಿಸಿ ಬ್ಯಾಂಕ್ ಲಿಮಿಟೆಡ್ ತನ್ನ 22ನೇ ಶಾಖೆ ಹಾಗೂ ನೂತನ ಎಟಿಎಂ ಅನ್ನು ಭಾನುವಾರ ದೇರಳಕಟ್ಟೆಯ ಫಾ. ಮುಲ್ಲರ್ ಕಾಂಪ್ಲೆಕ್ಸ್‌ನಲ್ಲಿ ಉದ್ಘಾಟಿಸಿತು. ಸಹಕಾರ ರತ್ನ ಹಾಗೂ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ನೂತನ ಶಾಖೆಯನ್ನು ಉದ್ಘಾಟಿಸಿದರೆ, ಫಾ. ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ ಆಡಳಿತಾಧಿಕಾರಿ ಫಾ. ನಿಲೇಶ್ ಕ್ರಾಸ್ತಾ ಎಟಿಎಂಗೆ ಚಾಲನೆ ನೀಡಿದರು. ಉರ್ಸುಲಿನ್ ಫ್ರಾನ್ಸಿಸ್ಕನ್ ಸಿಸ್ಟರ್ಸ್‌ನ ಸುಪೀರಿಯರ್ ಜನರಲ್ ಸಿ. ಮಿಲ್ಲಿ ಫೆರ್ನಾಂಡಿಸ್ ಸೇಫ್ ರೂಂ ಉದ್ಘಾಟಿಸಿದರೆ, ಫಾ. ನೆಲ್ಸನ್ ದೀರಜ್ ಪಾಯ್ಸ್ ಇ-ಸ್ಟಾಂಪ್ […]

Continue Reading

3 ವರ್ಷಗಳಲ್ಲಿ ರಾಜ್ಯವನ್ನು ಆರ್ಥಿಕ ಸಂಕಷ್ಟಕ್ಕೆ ತಳ್ಳಿದೆ ಕಾಂಗ್ರೆಸ್ ಸರ್ಕಾರ: ಬಿಜೆಪಿ ವಕ್ತಾರ ಚಂದ್ರಶೇಖರ್

ಕಾರವಾರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮೂರು ವರ್ಷ ಪೂರೈಸಿರುವ ಬೆನ್ನಲ್ಲೇ ಆಡಳಿತದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ಆರ್ಥಿಕವಾಗಿ ಸದೃಢವಾಗಿದ್ದ ಕರ್ನಾಟಕವನ್ನು ಕಾಂಗ್ರೆಸ್ ಸರ್ಕಾರ ಸಾಲದ ಸುಳಿಗೆ ಸಿಲುಕಿಸಿದ್ದು, ಇದೇ ಆಡಳಿತ ಇನ್ನೆರಡು ವರ್ಷ ಮುಂದುವರಿದರೆ ಜನಸಾಮಾನ್ಯರ ಸಂಕಷ್ಟ ಮತ್ತಷ್ಟು ಹೆಚ್ಚಲಿದೆ ಎಂದು ರಾಜ್ಯ ಬಿಜೆಪಿ ವಕ್ತಾರ ಎಚ್.ಎನ್. ಚಂದ್ರಶೇಖರ್ ಅವರು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು. ರಾಜ್ಯದ ಆಡಳಿತ ವ್ಯವಸ್ಥೆ ಎಂಜಿನ್ ಕೆಟ್ಟು, ಟಯರ್ ಪಂಚರ್ ಆಗಿರುವ ಬಸ್ಸಿನಂತಾಗಿದೆ. ಮುಖ್ಯಮಂತ್ರಿ ಬದಲಾದರೂ ಆಡಳಿತ ವ್ಯವಸ್ಥೆಯ ವೈಫಲ್ಯ ಮಾತ್ರ ಬದಲಾಗಿಲ್ಲ. […]

Continue Reading

ಹಾಳದಕಟ್ಟಾ ದರೋಡೆ ಪ್ರಕರಣ ಭೇದಿಸಿದ ಸಿದ್ದಾಪುರ ಪೊಲೀಸರು; ಚಿನ್ನಾಭರಣ ದೋಚಿದ್ದ ಆರೋಪಿಯ ಸೆರೆ

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹಾಳದಕಟ್ಟಾದಲ್ಲಿ ಇತ್ತೀಚೆಗೆ ನಡೆದಿದ್ದ ಒಂಟಿ ಮಹಿಳೆಯ ಮೇಲಿನ ದರೋಡೆ ಪ್ರಕರಣವನ್ನು ಸಿರಸಿ–ಸಿದ್ದಾಪುರ ಪೊಲೀಸರು ಭೇದಿಸಿದ್ದು, ಕೃತ್ಯ ಎಸಗಿದ್ದ ಆರೋಪಿ ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ. ಬಂಧಿತ ಕೊಂಡ್ಲಿ ನಿವಾಸಿ ಹಾಗೂ ಕೂಲಿ ಕಾರ್ಮಿಕ ಮಹೇಶ ಹನುಮಂತ ಮಡಿವಾಳ ಎಂದು ಗುರುತಿಸಲಾಗಿದೆ. ಆರೋಪಿಯಿಂದ ಕಳವು ಮಾಡಿದ್ದ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕ್‌ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜೂನ್ 22ರಂದು ಸಂಜೆ ಹಾಳದಕಟ್ಟಾದ ನಿವಾಸಿ ಪೂನಂ ಗಣಪತಿ ಶೇಟ್ ಅವರ ಮನೆಗೆ […]

Continue Reading

ಕಾನಸೂರು ವಸತಿ ಶಾಲೆಯ ವಿದ್ಯಾರ್ಥಿ ಆತ್ಮಹತ್ಯೆಯ ಪ್ರಕರಣ, ಹಿಂದಿ ಶಿಕ್ಷಕ ಆರೆಸ್ಟ್

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರು ವಸತಿ ಶಾಲೆಯ ವಿದ್ಯಾರ್ಥಿ ಗೋಕುಲ್ ಗೌಡ ಆತ್ಮಹತ್ಯೆ ಪ್ರಕರಣಕ್ಕೆ ದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಹಿಂದಿ ಶಿಕ್ಷಕ ಅಬ್ಬು ತಹಲ ಎಂಬುವವರನ್ನು ಪೊಲೀಸರು ಬಂಧನ ಮಾಡಿದ್ದಾರೆ. ಜೂನ್ 9 ರಂದು ವಿದ್ಯಾರ್ಥಿ ಗೋಕುಲ್ ಗೌಡ ಆತ್ಮಹತ್ಯೆ ಮಾಡಿಕೊಂಡ ಬಳಿಕ, ಮೃತ ವಿದ್ಯಾರ್ಥಿ ತಾಯಿ ನೀಡಿದ ದೂರಿನ ಮೇರೆಗೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ದೂರಿನಲ್ಲಿ ಶಿಕ್ಷಕ ಅಬ್ಬು ತಹಲ ಅವರು […]

Continue Reading

ಸಿ.ಎ. ಇಂಟರ್ ಮೀಡಿಯೇಟ್ ಪರೀಕ್ಷೆ: ಆಳ್ವಾಸ್ ವಿದ್ಯಾರ್ಥಿಗಳ ಸಾಧನೆ

ಮೂಡುಬಿದಿರೆ: ಮೇ 2026ರಲ್ಲಿ ನಡೆದ ಸಿ.ಎ. ಇಂಟರ್ ಮೀಡಿಯೇಟ್ ಪರೀಕ್ಷೆಯಲ್ಲಿ ಆಳ್ವಾಸ್ ಬಿ.ಕಾಂ. ವಿದ್ಯಾರ್ಥಿಗಳಾದ ಗೋಡ್ವಿಲ್ ವಿನ್ಂಟನ್ ವಾಸ್ (355), ಶೆಟ್ಟಿ ರಾಹುಲ್ ಉಮೇಶ್(313), ಎನ್. ಚಿರಂತನಾ(312) ಹಾಗೂ ರೋಹಿತ್ ಪೂಜಾರಿ (304) ಗ್ರೂಪ್-01 ಮತ್ತು ಗ್ರೂಪ್-02 ವಿಭಾಗದಲ್ಲಿ ಮೊದಲ ಪ್ರಯತ್ನದಲ್ಲಿ ಉತ್ತಮ ಫಲಿತಾಂಶದೊಂದಿಗೆ ಉತ್ತೀರ್ಣರಾಗಿದ್ದಾರೆ. ಇಂಟರ್ ಮೀಡಿಯಟ್ ಗ್ರೂಪ್-01 ವಿಭಾಗದಲ್ಲಿ ಪ್ರಸ್ಮಿಯಾ (162), ಪನ್ನಗ ಜೈನ್ (157), ವಿಜಯ್ ಕುಮಾರ್(164), ಸಾನಿಯಾ (150), ಪ್ರಸಿದ್ಧ್ ಪೂಜಾರಿ(150), ಮೋನಿಶಾ ಕುಂದರ್(163) ಹಾಗೂ ಶ್ರೇಯಾ ಸುರೇಂದ್ರ ಪೂಜಾರಿ(150) ಉತ್ತೀರ್ಣರಾಗಿರುತ್ತಾರೆ. […]

Continue Reading

ದಕ್ಷಿಣ ಕನ್ನಡ ಜಿಲ್ಲಾ ಕುಪ್ಮಾ ಸಮಿತಿ ಚಿಂತನಾ ಸಭೆ: ಕುಪ್ಮಾ ರಾಜ್ಯಾಧ್ಯಕ್ಷ ಡಾ. ಮೋಹನ್ ಆಳ್ವ

ಮಂಗಳೂರು: ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಸ್ಪಂದಿಸಬೇಕು ಎಂದು ಕರ್ನಾಟಕ ಅನುದಾನರಹಿತ ಖಾಸಗಿ ಕಾಲೇಜು ಆಡಳಿತ ಮಂಡಳಿಗಳ ಸಂಘದ (ಕುಪ್ಮಾ) ರಾಜ್ಯಾಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಒತ್ತಾಯಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕುಪ್ಮಾ ಸಮಿತಿಯ ವತಿಯಿಂದ ನಗರದಲ್ಲಿ ಆಯೋಜಿಸಿದ್ದ ‘ಚಿಂತನಾ ಸಭೆ’ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಖಾಸಗಿ ಶಿಕ್ಷಣ ಸಂಸ್ಥೆಗಳು ಸರ್ಕಾರದೊಂದಿಗೆ ಸಂಘರ್ಷದ ಮಾರ್ಗವನ್ನು ಬಯಸುವುದಿಲ್ಲ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಹಕಾರದ ಮನೋಭಾವದಿಂದ ಸಮಸ್ಯೆಗಳನ್ನು ಪರಿಹರಿಸಬೇಕು. ಸಾರಿಗೆ, ಅರಣ್ಯ, […]

Continue Reading

ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ವ್ಯಾಪಕ ಭ್ರಷ್ಟಾಚಾರ, ಪಕ್ಷ ಸಂಘಟನೆಗೆ ರಾಜ್ಯದಾದ್ಯಂತ ಪ್ರವಾಸ: ವಿಜಯೇಂದ್ರ

ಬೆಳ್ತಂಗಡಿ: ವಿಧಾನ ಪರಿಷತ್ ಚುನಾವಣೆಯ ಅಡ್ಡಮತದಾನ ಪ್ರಕರಣದ ಕುರಿತು ತಮ್ಮ ವಿರುದ್ಧ ಕೇಳಿಬರುತ್ತಿರುವ ಆರೋಪಗಳನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಳ್ಳಿಹಾಕಿದ್ದು, ಈ ಬೆಳವಣಿಗೆಯೊಂದಿಗೆ ತಮ್ಮ ಯಾವುದೇ ಸಂಬಂಧ ಇಲ್ಲ. ಪಕ್ಷದ ವಿರುದ್ಧ ನಡೆದುಕೊಳ್ಳುವ ಅಥವಾ ದ್ರೋಹ ಮಾಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಶುಕ್ರವಾರ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ದರ್ಶನದ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಧರ್ಮಸ್ಥಳಕ್ಕೆ ಆಗಮಿಸುವ ಮೊದಲು ನಾಲ್ಕು ದಿನಗಳ ಕಾಲ ನವದೆಹಲಿಯಲ್ಲಿ ಬಿಜೆಪಿ […]

Continue Reading

ಲೇಡಿಗೋಷನ್ ಆಸ್ಪತ್ರೆಗೆ ಆಧುನಿಕ ಸ್ಪರ್ಶ: ಸುಸಜ್ಜಿತ ವಿಡಿಯೊ ಕಾನ್ಫರೆನ್ಸ್ ಹಾಲ್, ನೂತನ ಸಭಾಗೃಹ

ಮಂಗಳೂರು: ನಗರದ ಸರಕಾರಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ಆರೋಗ್ಯ ಸೇವೆಗಳ ಜತೆಗೆ ಆಡಳಿತಾತ್ಮಕ ಮತ್ತು ಶೈಕ್ಷಣಿಕ ಚಟುವಟಿಕೆಗಳಿಗೆ ಮತ್ತಷ್ಟು ಉತ್ತೇಜನ ನೀಡುವ ನಿಟ್ಟಿನಲ್ಲಿ ಸುಸಜ್ಜಿತ ಮಾರ್ಪಡಿತ ವಿಡಿಯೋ ಕಾನ್ಫರೆನ್ಸ್ ಹಾಲ್ ಹಾಗೂ ಆಧುನೀಕೃತ ಸಭಾಗೃಹ ಸೌಲಭ್ಯವನ್ನು ಅಭಿವೃದ್ಧಿಪಡಿಸಲಾಗಿದೆ. ಈ ವಿಡಿಯೋ ಕಾನ್ಫರೆನ್ಸ್ ಹಾಲ್‌ನ್ನು ಈ ಹಿಂದೆ ಲಯನ್ಸ್ ಕ್ಲಬ್ ಇಂಟರ್ನೇಶನಲ್ ಸಂಸ್ಥೆಯ ಸಹಕಾರದೊಂದಿಗೆ, ಅಂದಿನ ಲಯನ್ಸ್ ಗವರ್ನರ್ ವಸಂತ್ ಶೆಟ್ಟಿ ಅವರ ಅನುದಾನದ ಮೂಲಕ ಆಸ್ಪತ್ರೆಗೆ ಕೊಡುಗೆಯಾಗಿ ನೀಡಲಾಗಿತ್ತು. ಇದೀಗ ಹೆಚ್ಚುವರಿ ತಾಂತ್ರಿಕ ಸೌಲಭ್ಯಗಳ ಅಳವಡಿಕೆಯಿಂದ ಸಭಾಂಗಣವು ಇನ್ನಷ್ಟು […]

Continue Reading

ಮಂಗಳೂರಿನಲ್ಲಿ ಕಿಂಗ್ ಖಾನ್‌ ಹವಾ: ರೋಹನ್‌ ಕಾರ್ಪೊರೇಶನ್‌ ಅನ್‌ ಈವ್ನಿಂಗ್‌ ವಿತ್‌ ಶಾರುಖ್‌ ಖಾನ್‌ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ

ಮಂಗಳೂರು: ಬಾಲಿವುಡ್‌ ನಟ ಶಾರುಖ್‌ ಖಾನ್‌ ಅವರ ಉಪಸ್ಥಿತಿಯಿಂದ ರೋಹನ್‌ ಕಾರ್ಪೊರೇಶನ್‌ ಆಯೋಜಿಸಿದ್ದ ‘ಅನ್‌ ಈವ್ನಿಂಗ್‌ ವಿತ್‌ ಶಾರುಖ್‌ ಖಾನ್‌’ ಕಾರ್ಯಕ್ರಮ ಗುರುವಾರ ನಗರದ ಅಡ್ಯಾರ್‌ ಗಾರ್ಡನ್‌ನಲ್ಲಿ ಗಮನ ಸೆಳೆಯಿತು. ಉದ್ಯಮ ವಲಯದ ಗಣ್ಯರು, ವಿವಿಧ ಕ್ಷೇತ್ರಗಳ ಪ್ರಮುಖರು, ಸಮಾಜದ ಪ್ರತಿನಿಧಿಗಳು ಮತ್ತು ಸಂಸ್ಥೆಯ ಹಿತೈಷಿಗಳು ಕಾರ್ಯಕ್ರಮದಲ್ಲಿ ಇದ್ದರು. ಸಂಜೆ ಆರಂಭವಾದ ಕಾರ್ಯಕ್ರಮ ರಾತ್ರಿ ತನಕ ಉತ್ಸಾಹಭರಿತ ವಾತಾವರಣದಲ್ಲಿ ನಡೆಯಿತು. ಕರಾವಳಿಯ ಕಲಾತಂಡಗಳ ಸಾಂಸ್ಕೃತಿಕ ಪ್ರದರ್ಶನಗಳು ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿದವು. ಇಂಡಿಯನ್‌ ಐಡಲ್‌ ಖ್ಯಾತಿಯ ಗಾಯಕ […]

Continue Reading