ಪೌರಕಾರ್ಮಿಕರಿಗೆ ನೆಪ ಹೇಳದೇ ಆದ್ಯತೆಯಲ್ಲಿ ಎಲ್ಲರಿಗೂ ಮನೆ ನಿರ್ಮಾಣ ಮಾಡಿಕೊಡಿ: ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ. ರಘು

ಕಾರವಾರ: ಜಿಲ್ಲೆಯ ಎಲ್ಲಾ ನಗರಸ್ಥಳಿಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ ವಸತಿ ವ್ಯವಸ್ಥೆಯನ್ನು ಕಲ್ಪಿಸುವಂತೆ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ಉತ್ತರ ಕನ್ನಡ, ಕಾರವಾರ ಇವರ ಸಹಯೋಗದಲ್ಲಿ ಉತ್ತರ ಕನ್ನಡ ಜಿಲ್ಲೆಯ ನಗರ ಸ್ಥಳಿಯ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತಾ ಕಾರ್ಮಿಕರು/ಪೌರಕಾರ್ಮಿಕರೊಂದಿಗೆ ನೇರ ಸಂವಾದ ಕಾರ್ಯಕ್ರಮ ಹಾಗೂ ಅಧಿಕಾರಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. […]

Continue Reading

ಮಂಗಳೂರಿಗೆ ತಮಿಳುನಾಡು ಸಿಎಂ ವಿಜಯ್, ಆರೋಗ್ಯ ಸಚಿವ ಖಾದರ್ ಸ್ವಾಗತ

ಮಂಗಳೂರು: ಕೊಲ್ಲೂರು ಭೇಟಿ ಹಿನ್ನೆಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಜೋಸೆಫ್ ಗುರುವಾರ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಮುಖ್ಯಮಂತ್ರಿಗಳನ್ನು ಆರೋಗ್ಯ ಸಚಿವ ಯು.ಟಿ. ಖಾದರ್ ಸ್ವಾಗತಿಸಿದರು. ಈ ವೇಳೆ ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಇದ್ದರು. ಬಳಿಕ ವಿಜಯ್ ಜೋಸೆಫ್ ಅವರು ರಸ್ತೆ ಮಾರ್ಗದ ಮೂಲಕ ಕೊಲ್ಲೂರಿಗೆ ಪ್ರಯಾಣ ಬೆಳೆಸಿದರು. ಮುಖ್ಯಾಂಶಗಳು * ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ತಮಿಳುನಾಡು ಮುಖ್ಯಮಂತ್ರಿ * ಆರೋಗ್ಯ ಸಚಿವ ಯು.ಟಿ. ಖಾದರ್ ಅವರಿಂದ ಸ್ವಾಗತ * ರಸ್ತೆ ಮಾರ್ಗದ ಮೂಲಕ […]

Continue Reading

ಗೃಹಲಕ್ಷ್ಮೀ ಹಣ ಪಾವತಿ ಸ್ಥಗಿತ, ರಾಜ್ಯ ಸರಕಾರದಿಂದ ಅನ್ಯಾಯ: ಶಾಸಕ ಭರತ್ ಶೆಟ್ಟಿ ಆರೋಪ

ಮಂಗಳೂರು: ಗೃಹಲಕ್ಷ್ಮೀ ಯೋಜನೆಯ ಹಣ ಪಾವತಿಯನ್ನು ಸ್ಥಗಿತಗೊಳಿಸುವ ಮೂಲಕ ರಾಜ್ಯ ಸರ್ಕಾರ ಲಕ್ಷಾಂತರ ಮಹಿಳೆಯರಿಗೆ ಅನ್ಯಾಯ ಮಾಡಿದೆ ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಆರೋಪಿಸಿದರು. ಚುನಾವಣೆ ಪೂರ್ವದಲ್ಲಿ ಬಿಪಿಎಲ್ ಅಥವಾ ಎಪಿಎಲ್ ಎಂಬ ಭೇದವಿಲ್ಲದೆ ಮಹಿಳೆಯರ ಖಾತೆಗೆ ಹಣ ಜಮೆ ಮಾಡುವುದಾಗಿ ಕಾಂಗ್ರೆಸ್ ನಾಯಕರು ಭರವಸೆ ನೀಡಿದ್ದರು. ಆದರೆ ಇದೀಗ ಬಿಪಿಎಲ್ ನೆಪ ಒಡ್ಡಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳನ್ನು ಹೊರಗಿಡುವ ಮೂಲಕ ಮಹಿಳೆಯರಿಗೆ ದ್ರೋಹ ಮಾಡಲಾಗಿದೆ ಎಂದು ಅವರು ಟೀಕಿಸಿದರು. ಗೃಹಲಕ್ಷ್ಮೀ ಯೋಜನೆಯಡಿ […]

Continue Reading

ದ.ಕ ಸೇರಿದಂತೆ ಅಡಿಕೆ ಬೆಳೆಗಾರರ ಸಂಕಷ್ಟಕ್ಕೆ ಪರಿಹಾರ ನೀಡುವಂತೆ ಸಂಸದ ಬ್ರಿಜೇಶ್ ಚೌಟ ಮನವಿ

ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಹಾಗೂ ಮಲೆನಾಡು ಭಾಗದ ಸಾವಿರಾರು ಅಡಿಕೆ ಬೆಳೆಗಾರರನ್ನು ಕಂಗೆಡಿಸಿರುವ ಹಳದಿ ರೋಗ ಮತ್ತು ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ತುರ್ತು ಕ್ರಮ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಅಡಿಕೆ ಬೆಳೆಯುವ ಪ್ರಮುಖ ಪ್ರದೇಶಗಳಲ್ಲಿ ಹಳದಿ ಎಲೆ ರೋಗವು ವ್ಯಾಪಕವಾಗಿ ಹರಡಿದ್ದು, ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಸುಮಾರು 16 […]

Continue Reading

ಹನಿಟ್ರ್ಯಾಪ್‌ ಹೆಸರಿನಲ್ಲಿ 2.57 ಕೋಟಿ ವಸೂಲಿ: ಉರ್ವ ಪೊಲೀಸರ ಭರ್ಜರಿ ಕಾರ್ಯಾಚರಣೆ, ಇಬ್ಬರ ಬಂಧನ

ಮಂಗಳೂರು: ಗುತ್ತಿಗೆದಾರರೊಬ್ಬರನ್ನು ಹನಿಟ್ರ್ಯಾಪ್‌ ಮಾಡಿ ಅಶ್ಲೀಲ ವಿಡಿಯೊ ಹಾಗೂ ಫೋಟೊಗಳ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ವಸೂಲಿ ಮಾಡಿದ ಆರೋಪದಡಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸೇರಿ ಇಬ್ಬರನ್ನು ಉರ್ವ ಪೊಲೀಸರು ಬಂಧನ ಮಾಡಿದ್ದಾರೆ. ಗುತ್ತಿಗೆದಾರರ ಜತೆಗೆ ಕೆಲಸ ಮಾಡುತ್ತಿದ್ದ ಜಿತೇಶ್ ಹಾಗೂ ನಿಜಾಮ್ ಯಾನೆ ಇಬ್ರಾಹಿಂ ಬಂಧಿತರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ನಿಜಾಮ್ ಅವರನ್ನು ಯುವ ಕಾಂಗ್ರೆಸ್ ಹುದ್ದೆಯಿಂದ ವಜಾ ಮಾಡಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಗುತ್ತಿಗೆದಾರನೊಂದಿಗೆ […]

Continue Reading

ಮಕ್ಕಳ ಹಕ್ಕುಗಳ ಆಯೋಗಕ್ಕೆ ಅನರ್ಹರ ನೇಮಕ: ರೆನ್ನಿ ಡಿಸೋಜ ತೀವ್ರ ಆಕ್ರೋಶ

ಮಂಗಳೂರು: ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರಾಗಿ ನೇಮಕಗೊಂಡಿರುವ ಕೆಲವರು ನಿಗದಿತ ಅರ್ಹತಾ ಮಾನದಂಡಗಳನ್ನು ಪೂರೈಸಿಲ್ಲ. ಆದ್ದರಿಂದ ಸರ್ಕಾರ ತಕ್ಷಣ ನೇಮಕಾತಿ ಅಧಿಸೂಚನೆ ಹಿಂಪಡೆದು, ಕಾನೂನುಬದ್ಧ ಅರ್ಹತೆ ಹಾಗೂ ಮಕ್ಕಳ ಹಕ್ಕುಗಳ ಕ್ಷೇತ್ರದಲ್ಲಿ ಅನುಭವ ಹೊಂದಿರುವವರನ್ನು ನೇಮಕ ಮಾಡಬೇಕು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಮಕ್ಕಳ ಹಕ್ಕುಗಳ ಕುರಿತು ಕಾರ್ಯನಿರ್ವಹಿಸುವ ಸಮಾನಾಸಕ್ತ ಸಂಘಟನೆಗಳು ಗುರುವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿವೆ. ಪಡಿ ಸಂಸ್ಥೆಯ ಸಂಚಾಲಕ ರೆನ್ನಿ ಡಿಸೋಜ ಅವರು ಈ ವೇಳೆ ಮಾತನಾಡಿ, ಮಕ್ಕಳ ಕಲ್ಯಾಣ […]

Continue Reading

ಕಾರವಾರ ರೈಲು ನಿಲ್ದಾಣದಲ್ಲಿ ಮಹಿಳೆಯರಿಗಾಗಿ ವಿಶೇಷ ಸೌಲಭ್ಯ, ಪಿಂಕ್ ಬಬಲ್: ಸಂಸದ ಕಾಗೇರಿ ಉದ್ಘಾಟನೆ

ಕಾರವಾರ: ಮಹಿಳಾ ಪ್ರಯಾಣಿಕರ ಸುರಕ್ಷತೆ ಹಾಗೂ ಆರಾಮದಾಯಕ ಪ್ರಯಾಣಕ್ಕೆ ಆದ್ಯತೆ ನೀಡುವ ಉದ್ದೇಶದಿಂದ ಕಾರವಾರ ರೈಲು ನಿಲ್ದಾಣದಲ್ಲಿ ಮಹಿಳೆಯರಿಗಾಗಿ ವಿಶೇಷವಾಗಿ ವಿನ್ಯಾಸಗೊಳಿಸಲಾದ ‘ಪಿಂಕ್ ಬಬಲ್’ ವಿಶ್ರಾಂತಿ ಆಸನ ವ್ಯವಸ್ಥೆ ನಿರ್ಮಿಸಲಾಗಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ಕಾರವಾರ ರೋಟರಿ ಕ್ಲಬ್ ವತಿಯಿಂದ ಸುಮಾರು ₹1 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ‘ಪಿಂಕ್ ಬಬಲ್’ ಸೌಲಭ್ಯವನ್ನು ಗುರುವಾರ ಉದ್ಘಾಟಿಸಿ ಹಾಗೂ ಕಾರವಾರ–ಮಡಗಾಂವ್ ಖಾಯಂ ರೈಲು ಸೇವೆಯನ್ನು ಸ್ವಾಗತಿಸಿ ಅವರು ಮಾತನಾಡಿದರು. ರೈಲು ಬರುವವರೆಗೆ ಮಹಿಳೆಯರು ಸುರಕ್ಷಿತ ಹಾಗೂ […]

Continue Reading

₹4.34 ಕೋಟಿ ವೆಚ್ಚದಲ್ಲಿ ಗಂಗಾವಳಿ ನದಿಯ ಮಣ್ಣಿನ ದಿಬ್ಬ ತೆರವು ಕಾಮಗಾರಿ: ಶಾಸಕ ಸತೀಶ್ ಸೈಲ್ ಚಾಲನೆ

ಅಂಕೋಲಾ: ತಾಲ್ಲೂಕಿನ ಶಿರೂರು ಗ್ರಾಮದಲ್ಲಿ ಭೂಕುಸಿತದಿಂದ ಗಂಗಾವಳಿ ನದಿಗೆ ಬಿದ್ದಿರುವ ಮಣ್ಣಿನ ದಿಬ್ಬವನ್ನು ತೆರವುಗೊಳಿಸುವ ಕಾಮಗಾರಿಗೆ ಶಾಸಕ ಹಾಗೂ ಕೆಎಂಸಿಎ ಅಧ್ಯಕ್ಷ ಸತೀಶ್ ಕೆ. ಸೈಲ್ ಗುರುವಾರ ಚಾಲನೆ ನೀಡಿದರು. ₹4.34 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಕಾಮಗಾರಿಯಿಂದ ನದಿಯಲ್ಲಿ ನಿರ್ಮಾಣವಾಗಿರುವ ಕೃತಕ ಮಣ್ಣಿನ ದಿಬ್ಬವನ್ನು ತೆರವುಗೊಳಿಸಿ ನೀರಿನ ಹರಿವನ್ನು ಸುಗಮಗೊಳಿಸುವ ಉದ್ದೇಶ ಹೊಂದಲಾಗಿದೆ. ಈ ಹಿಂದೆ ಉಳುವರೆ ಗ್ರಾಮ ಮತ್ತು ರಾಷ್ಟ್ರೀಯ ಹೆದ್ದಾರಿಗೆ ತೊಂದರೆಯಾಗದಂತೆ ಮಣ್ಣಿನ ದಿಬ್ಬ ತೆರವುಗೊಳಿಸಲು ಜಿಲ್ಲಾಡಳಿತದ ಮೂಲಕ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಅದರಂತೆ ರಾಷ್ಟ್ರೀಯ […]

Continue Reading

ಶ್ರೀನಿವಾಸ ವಿಶ್ವವಿದ್ಯಾಲಯಕ್ಕೆ ಮೂರು ಅಂತರ ರಾಷ್ಟ್ರೀಯ ಪ್ರಶಸ್ತಿ, ಶಿಕ್ಷಣ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು: ಕುಲಾಧಿಪತಿ ಡಾ. ಶ್ರೀನಿವಾಸ ರಾವ್

ಮಂಗಳೂರು: ಸ್ಥಳೀಯ ಪ್ರತಿಭೆಗಳಿಗೆ ಜಾಗತಿಕ ಅವಕಾಶಗಳನ್ನು ಕಲ್ಪಿಸುವುದು” ಎಂಬ ಧ್ಯೇಯದೊಂದಿಗೆ ಶಿಕ್ಷಣ, ಸಂಶೋಧನೆ ಹಾಗೂ ನವೀನತೆಯ ಕ್ಷೇತ್ರದಲ್ಲಿ ನಿರಂತರ ಸಾಧನೆ ಮಾಡುತ್ತಿರುವ ಶ್ರೀನಿವಾಸ ಸಂಸ್ಥೆಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ಮಹತ್ವದ ಸಾಧನೆ ಮಾಡಿವೆ ಎಂದು ಕುಲಾಧಿಪತಿ ಡಾ. ಶ್ರೀನಿವಾಸ ರಾವ್ ತಿಳಿಸಿದರು. ಶಿಕ್ಷಣ ತಜ್ಞ ಹಾಗೂ ಸಂಸ್ಥಾಪಕ ದಿವಂಗತ ಡಾ. ಸಿ. ಎ. ಎ. ರಾಘವೇಂದ್ರ ರಾವ್ ಅವರ ದೂರದೃಷ್ಟಿಯ ಫಲವಾಗಿ ಬೆಳೆದಿರುವ ಈ ಸಂಸ್ಥೆಗಳು ಇಂದು ದೇಶದ ಪ್ರಮುಖ ಉನ್ನತ ಶಿಕ್ಷಣ ಸಮೂಹಗಳಲ್ಲಿ ಒಂದಾಗಿ ಗುರುತಿಸಿಕೊಂಡಿವೆ. ಸಂಸ್ಥೆಯು […]

Continue Reading

ತಾಯಿಯ ನೆನಪು ಚಿರಸ್ಥಾಯಿಗೊಳಿಸಿದ ಪುತ್ರರು, ಬಡ ಕುಟುಂಬಕ್ಕೆ 10 ಲಕ್ಷ ವೆಚ್ಚದ ಮನೆ ನಿರ್ಮಾಣ

ಮಂಗಳೂರು: ತಾಯಿಯ ಸ್ಮರಣೆಯನ್ನು ಅರ್ಥಪೂರ್ಣ ಸಾಮಾಜಿಕ ಸೇವೆಯ ಮೂಲಕ ಆಚರಿಸುವ ಅಪರೂಪದ ಉದಾಹರಣೆಗೆ ಮೂಡುಶೆಡ್ಡೆ ಸಾಕ್ಷಿಯಾಯಿತು. ದಿವಂಗತ ದೇವಕಿ ಸಂಜೀವ ಶೆಟ್ಟಿ ಅವರ ನಾಲ್ಕನೇ ವರ್ಷದ ಪುಣ್ಯಸ್ಮರಣೆಯ ಅಂಗವಾಗಿ ಅವರ ಪುತ್ರರು ಕೊರಗ ಸಮುದಾಯದ ಬಡ ಕುಟುಂಬಕ್ಕೆ ನೂತನ ಮನೆ ನಿರ್ಮಿಸಿಕೊಟ್ಟು ಮಾನವೀಯತೆ ಮೆರೆದರು. ಮೂಡುಶೆಡ್ಡೆ ಹೊಸಲಕ್ಕೆಯಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ನೂತನ ಮನೆಯ ಕೀಲಿಯನ್ನು ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಅತಿಥಿಗಳು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ವಕೀಲ ಉಮೇಶ್ ಶೆಟ್ಟಿ ಹೊಸಲಕ್ಕೆ, ತಮ್ಮ ತಾಯಿ […]

Continue Reading