ಕಾರವಾರ: ಮೊದಲ ಮಳೆಗೆ ಕಡವಾಡ ಹಳೆಯ ಸೇತುವೆ ಕುಸಿತ; ತಪ್ಪಿದ ಭಾರಿ ಅನಾಹುತ
ಕಾರವಾರ: ಮುಂಗಾರು ಮಳೆಯ ಆರಂಭದಲ್ಲೇ ಕಾರವಾರ ತಾಲ್ಲೂಕಿನ ಕಡವಾಡದಲ್ಲಿರುವ ಹಳೆಯ ಸೇತುವೆ ಮಂಗಳವಾರ ಏಕಾಏಕಿ ಕುಸಿದು ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ. ಸುಂಕೇರಿ ಮಾರ್ಗವಾಗಿ ಸಂಪರ್ಕ ಕಲ್ಪಿಸುವ ಈ ಸೇತುವೆ ಹಲವು ವರ್ಷಗಳಷ್ಟು ಹಳೆಯದಾಗಿದ್ದು, ಮಳೆಯಿಂದಾಗಿ ದುರ್ಬಲಗೊಂಡಿದ್ದ ಸೇತುವೆ ಎರಡು-ಮೂರು ತುಂಡುಗಳಾಗಿ ಕುಸಿದಿದೆ. ಸ್ಥಳೀಯರು ಹಾಗೂ ಮೀನುಗಾರರು ಈ ಪ್ರದೇಶದಲ್ಲಿ ಹೆಚ್ಚಾಗಿ ಓಡಾಡುತ್ತಿದ್ದು, ಘಟನೆ ವೇಳೆ ಯಾರೂ ಸೇತುವೆ ಮೇಲೆ ಇಲ್ಲದ ಕಾರಣ ಸಂಭವನೀಯ ದುರಂತ ತಪ್ಪಿದಂತಾಗಿದೆ. ಕಡವಾಡ ಸೇತುವೆಯ ಪಕ್ಕದಲ್ಲೇ ಈಗಾಗಲೇ ಹೊಸ ಸೇತುವೆ […]
Continue Reading