100 ಕೋಟಿ ವೆಚ್ಚದ ಭೂಕುಸಿತ ತಡೆ ಕಾಮಗಾರಿ, ನಿಗದಿತ ಅವದಿಯೊಳಗೆ ಮುಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಭವನೀಯ ಭೂಕುಸಿತ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕೈಗೊಂಡಿರುವ ₹100 ಕೋಟಿ ವೆಚ್ಚದ ಭೂಕುಸಿತ ತಡೆ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಭೂಕುಸಿತ ತಡೆಗಾಗಿ ₹100 ಕೋಟಿ ವೆಚ್ಚದಲ್ಲಿ ಒಟ್ಟು 99 ಕಾಮಗಾರಿಗಳನ್ನು ಕೈಗೊಳ್ಳಲು ಈಗಾಗಲೇ ಅನುಮೋದನೆ ನೀಡಲಾಗಿದೆ. ಎಲ್ಲಾ ಕಾಮಗಾರಿಗಳ […]

Continue Reading

ಮಂಗಳೂರು: ಮೆಕ್ಡನಾಲ್ಡ್ಸ್ ಫ್ಯಾಮಿಲಿ ರೆಸ್ಟೋರೆಂಟ್‌ಗೆ ಆಹಾರ ಸುರಕ್ಷತಾ ಅಧಿಕಾರಿಗಳ ದಿಢೀರ್ ದಾಳಿ

ಮಂಗಳೂರು: ನಗರದಲ್ಲಿ ಆರೋಗ್ಯ ಇಲಾಖೆ ಹಾಗೂ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ದಿಡೀರ್ ದಾಳಿ ಮುಂದುವರೆಸಿದ್ದು, ಶನಿವಾರ ಸಿಟಿ ಸೆಂಟರ್ ಮಾಲ್ ನಲ್ಲಿ ಇದ್ದ ಮಳಿಗೆ ಮೇಲೆ ದಾಳಿ ಮಾಡಿ, ಸುರಕ್ಷತೆ ಹಾಗೂ ಕೊಳೆತ ಮಾಂಸ ಪತ್ತೆ ಆಗಿರುವ ಹಿನ್ನಲೆಯಲ್ಲಿ ಬಂದ್ ಮಾಡಿಸಿದ್ದರು. ಇದರ ಬೆನ್ನಲ್ಲೆ ಭಾನುವಾರ ಮೆಕ್ಡನಾಲ್ಡ್ಸ್ ಫ್ಯಾಮಿಲಿ ರೆಸ್ಟೋರೆಂಟ್‌ಗೆ ದಾಳಿ ಮಾಡಿ ಅಧಿಕಾರಿಗಳು ಗುಣಮಟ್ಟ ಹಾಗೂ ಶುಚಿತ್ವವನ್ನು ಪರಿಶೀಲನೆ ನಡೆಸಿದರು. ಜಿಲ್ಲಾ ಆರೋಗ್ಯ ಇಲಾಖೆ ಹಾಗೂ ಆಹಾರ ಸುರಕ್ಷತಾ ಅಧಿಕಾರಿಗಳು ಮಳಿಗೆಯ ಅಡುಗೆ ಕೋಣೆ, […]

Continue Reading

ಮತದಾರರ ಪಟ್ಟಿ ಪರಿಷ್ಕರಣೆ, 11.23 ಲಕ್ಷ ಅರ್ಜಿಗಳ ಗಣಕೀಕರಣ: ಡಿಸಿ ಲಕ್ಷ್ಮಿಪ್ರಿಯಾ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ–2026ರ ಪ್ರಕ್ರಿಯೆ ಚುರುಕಿನಿಂದ ಸಾಗಿದ್ದು, ಇದುವರೆಗೆ 11,23,004 ಎನ್ಯುಮರೇಷನ್ ಫಾರ್ಮ್‌ಗಳನ್ನು ಗಣಕೀಕರಣಗೊಳಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 12,30,037 ಮತದಾರರಿದ್ದು, ಪ್ರತಿಯೊಬ್ಬರಿಗೂ ಎನ್ಯುಮರೇಷನ್ ಫಾರ್ಮ್‌ಗಳನ್ನು ವಿತರಿಸಲಾಗಿದೆ. ಈ ಪೈಕಿ 11,23,004 ಫಾರ್ಮ್‌ಗಳ ಗಣಕೀಕರಣ ಪೂರ್ಣಗೊಂಡಿದೆ. ಮನೆ–ಮನೆ ಭೇಟಿ ಸಂದರ್ಭದಲ್ಲಿ ಸ್ಥಳಾಂತರ, ಮರಣ ಹಾಗೂ ದ್ವಿಪ್ರತಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 1,07,033 ಮತದಾರರನ್ನು ಗುರುತಿಸಲಾಗಿದೆ. ಇದರಲ್ಲಿ 45,638 […]

Continue Reading

ಕೊಳೆತ ಮಾಂಸ ಪತ್ತೆ, ಆಹಾರ ಮಳಿಗೆ, ಪಿಜಿ, ಹಾಸ್ಟೆಲ್‌ಗಳಿಗೂ ದಾಳಿ, ನಿಯಮ ಉಲ್ಲಂಘಿಸಿದರೆ ಯಾರನ್ನು ಬಿಡಲ್ಲ: ಸಚಿವ ಖಾದರ್

ಮಂಗಳೂರು: ನಗರದ ಕೆಎಫ್‌ಸಿ ರೆಸ್ಟೋರೆಂಟ್‌ನಲ್ಲಿ ಕೊಳೆತ ಮಾಂಸ ಪತ್ತೆಯಾದ ಹಿನ್ನೆಲೆಯಲ್ಲಿ ಆಹಾರ ಮಳಿಗೆಗಳ ಫ್ರ್ಯಾಂಚೈಸಿಗಳಿಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಎಚ್ಚರಿಕೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಎಲ್ಲೆಡೆ ಇಂತಹ ದಾಳಿ ಹಾಗೂ ತಪಾಸಣೆಗಳು ನಡೆಯಲಿವೆ. ಆಹಾರ ಮಳಿಗೆಗಳ ಅಡುಗೆಮನೆ ಹಾಗೂ ಸಂಗ್ರಹ ಕೊಠಡಿಗಳಲ್ಲಿ ಗುಣಮಟ್ಟದ ಆಹಾರ ಪದಾರ್ಥಗಳನ್ನು ಮಾತ್ರ ಇರಿಸಬೇಕು. ನೈರ್ಮಲ್ಯ ಕಾಪಾಡಬೇಕು. ಯಾವುದೇ ಸಂದರ್ಭದಲ್ಲೂ ದಾಳಿ ನಡೆಸಬಹುದು ಎಂದು ಅವರು ಎಚ್ಚರಿಸಿದರು. ಎಷ್ಟೇ ದೊಡ್ಡವರಾಗಿದ್ದರೂ, ಸಣ್ಣವರಾಗಿದ್ದರೂ ನಿಯಮ ಉಲ್ಲಂಘಿಸಿದರೆ ಬಿಡುವುದಿಲ್ಲ. ನಮಗೆ ಜನರ ಆರೋಗ್ಯವೇ ಮುಖ್ಯ. […]

Continue Reading

ಸಿರಸಿ: ಪ್ರತಿಭಾವಂತ ಹೆಣ್ಣುಮಕ್ಕಳಿಗೆ ಕೆನರಾ ಬ್ಯಾಂಕ್‌ನಿಂದ ‘ವಿದ್ಯಾಜ್ಯೋತಿ’ ಪ್ರತಿಭಾ ಪುರಸ್ಕಾರ

ಸಿರಸಿ: ಶಿಕ್ಷಣದ ಜತೆಗೆ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಮಕ್ಕಳ ಭವಿಷ್ಯದ ಸಾಧನೆಗೆ ಬಲ ನೀಡುತ್ತದೆ. ಆ ನಿಟ್ಟಿನಲ್ಲಿ ಕೆನರಾ ಬ್ಯಾಂಕ್‌ನ ‘ವಿದ್ಯಾಜ್ಯೋತಿ’ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಪ್ರತಿಭಾವಂತ ಹೆಣ್ಣುಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು. ನಗರದ ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿ ವ್ಯಾಪ್ತಿಯ ಸಿ.ಪಿ. ಬಜಾರ್ ಶಾಖೆಯ ಸಭಾಭವನದಲ್ಲಿ ಸರ್ಕಾರಿ ಹಾಗೂ ಸರ್ಕಾರಿ ಅನುದಾನಿತ ಶಾಲೆಗಳ ವಿದ್ಯಾರ್ಥಿನಿಯರಿಗೆ ಈ ಪುರಸ್ಕಾರ ವಿತರಿಸುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ವೈ.ಎಸ್ ಪಿ ಗೀತಾ ಪಾಟೀಲ್ ಅವರು […]

Continue Reading

ಗ್ರಾಹಕರ ದೂರು, ಆರೋಗ್ಯ, ಆಹಾರ ಸುರಕ್ಷತಾ ಅಧಿಕಾರಿಗಳು ದಿಢೀರ್ ದಾಳಿ, ಹಳಸಿದ ಮಾಂಸ, ಅವಧಿ ಮೀರಿದ ಎಣ್ಣೆ ಪತ್ತೆ

ಮಂಗಳೂರು: ಗ್ರಾಹಕರೊಬ್ಬರು ಆರ್ಡರ್ ಮಾಡಿದ್ದ ಕೋಳಿ ಆಹಾರದಿಂದ ಕೆಟ್ಟ ವಾಸನೆ ಬರುತ್ತಿದೆ ಎಂಬ ದೂರಿನ ಬೆನ್ನಲ್ಲೇ ಮಂಗಳೂರಿನ ಕೆ.ಎಸ್. ರಾವ್ ರಸ್ತೆಯ ಮಾಲ್‌ನಲ್ಲಿರುವ ಮಳಿಗೆಗೆ ಆರೋಗ್ಯ ಹಾಗೂ ಆಹಾರ ಸುರಕ್ಷತಾ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಪರಿಶೀಲನೆ ನಡೆಸಿದ ವೇಳೆ ಹಳಸಿದ ಮಾಂಸ, ಅವಧಿ ಮೀರಿದ ಎಣ್ಣೆ ಹಾಗೂ ಅನೈರ್ಮಲ್ಯ ಪತ್ತೆ ಆಗಿದ್ದು, ಮಳಿಗೆ ಬಂದ್ ಮಾಡಲಾಗಿದೆ. ಗ್ರಾಹಕಯೊಬ್ಬರು ಮಳಿಗೆಯೊಂದರಿಂದ ಚಿಕನ್ ಫೆರಿ ಆರ್ಡರ್ ಮಾಡಿದ್ದರು. ಆಹಾರದ ಬಾಕ್ಸ್ ತೆರೆದಾಗ ಮಾಂಸದಿಂದ ಕೆಟ್ಟ ವಾಸನೆ ಬಂದ ಹಿನ್ನೆಲೆಯಲ್ಲಿ […]

Continue Reading

ಹುಬ್ಬಳ್ಳಿ–ಅಂಕೋಲಾ ರೈಲು ಮಾರ್ಗ ಸಾಕಾರ, ಉತ್ತರ ಕನ್ನಡದ ಅಭಿವೃದ್ಧಿಗೆ ಹೊಸ ಚೈತನ್ಯ: ಮಾಜಿ ಶಾಸಕಿ ರೂಪಾಲಿ ನಾಯ್ಕ್

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಜನತೆಯ ಬಹುಕಾಲದ ಕನಸಾಗಿದ್ದ ಹುಬ್ಬಳ್ಳಿ–ಅಂಕೋಲಾ ರೈಲು ಮಾರ್ಗ ಸಾಕಾರಗೊಳ್ಳುತ್ತಿರುವುದು ಜಿಲ್ಲೆಗೆ ಹೆಮ್ಮೆಯ ವಿಚಾರವಾಗಿದೆ. ಯೋಜನೆಯ ವಿದ್ಯುದ್ದೀಕರಣದೊಂದಿಗೆ ಬ್ರಾಡ್‌ಗೇಜ್ ರೈಲು ಮಾರ್ಗವಾಗಿ ಪರಿವರ್ತನೆಯಾಗುತ್ತಿರುವುದು ಜಿಲ್ಲೆಯ ಸಾರಿಗೆ ಸಂಪರ್ಕಕ್ಕೆ ಮಹತ್ವದ ಬಲ ನೀಡಲಿದೆ ಎಂದು ಮಾಜಿ ಶಾಸಕಿ ರೂಪಾಲಿ ನಾಯ್ಕ್ ಅವರು ತಿಳಿಸಿದ್ದಾರೆ. ಜಿಲ್ಲೆಯ ಸಮಗ್ರ ಅಭಿವೃದ್ಧಿ, ಕೈಗಾರಿಕಾ ಚಟುವಟಿಕೆಗಳ ವಿಸ್ತರಣೆ, ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಗೂ ಜನರ ಸಂಪರ್ಕ ವ್ಯವಸ್ಥೆಯ ಸುಧಾರಣೆಯ ದೃಷ್ಟಿಯಿಂದ ಹುಬ್ಬಳ್ಳಿ–ಅಂಕೋಲಾ ರೈಲು ಮಾರ್ಗ ಮಹತ್ವದ ಯೋಜನೆಯಾಗಿದೆ. ಈ ಮಾರ್ಗದ ಮೂಲಕ […]

Continue Reading

ತಲಪಾಡಿ ಶಾರದಾ ವಿದ್ಯಾನಿಕೇತನದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ, ಧ್ವಜಾರೋಹಣ

ತಲಪಾಡಿ: ದೇಶಭಕ್ತಿ, ರಾಷ್ಟ್ರಾಭಿಮಾನ ಹಾಗೂ ಪರಿಸರ ಕಾಳಜಿಯ ಸಂದೇಶದೊಂದಿಗೆ ತಲಪಾಡಿಯ ಶಾರದಾ ವಿದ್ಯಾನಿಕೇತನದಲ್ಲಿ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನ, ಧ್ವಜಾರೋಹಣ ಹಾಗೂ ದೇಶಭಕ್ತಿ ಸಾರುವ ಸಾಂಸ್ಕೃತಿಕ ಕಾರ್ಯಕ್ರಮಗಳು ಸಮಾರಂಭಕ್ಕೆ ವಿಶೇಷ ಮೆರುಗು ನೀಡಿದವು. ಎನ್‌ಡಿಎ ಮತ್ತು ಎನ್‌ಸಿಸಿ ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನದೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಗೌರವ ರಕ್ಷೆ ಸ್ವೀಕರಿಸಿದ ಶಾರದಾ ವಿದ್ಯಾಸಂಸ್ಥೆಯ ಅಧ್ಯಕ್ಷ ಡಾ. ಎಂ.ಬಿ. ಪುರಾಣಿಕ್ ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಶಿಕ್ಷಕ–ರಕ್ಷಕ ಸಂಘದ ಅಧ್ಯಕ್ಷ ಹರೀಶ್ ಗಟ್ಟಿ ಮಾತನಾಡಿ, ಸ್ವಾತಂತ್ರ್ಯ […]

Continue Reading

ರೋಹನ್ ಸ್ಕ್ವೇರ್‌ನಲ್ಲಿ ಕೃಷಿ ವೃಕ್ಷಾನ್ವೇಷಕ ಸಾಧಕ ಪ್ರಶಸ್ತಿ ಪ್ರದಾನ, ಧ್ವಜಾರೋಹಣ ಸಂಭ್ರಮ

ಮಂಗಳೂರು: ರೋಹನ್ ಕಾರ್ಪೊರೇಶನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ನಗರದ ವಿವಿಧ ಯೋಜನೆಗಳ ಆವರಣದಲ್ಲಿ 80 ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಪಿತಾನಿಯ ರೋಹನ್ ಸ್ಕ್ವೇರ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ. ರೋಹನ್ ಮೊಂತೆರೊ, ನಿರ್ದೇಶಕ ಡಿಯೋನ್ ಮೊಂತೆರೊ, ಪ್ರಧಾನ ವ್ಯವಸ್ಥಾಪಕಿ ಸುಮನಾ ಹಾಗೂ ವಿಶೇಷ ಅತಿಥಿ ಎಂ.ಕೆ. ಅಲಿ ಅವರ ಉಪಸ್ಥಿತಿಯಲ್ಲಿ ಕೃಷಿಕ ಜ್ಯಾಕ್ ಅನಿಲ್ ಧ್ವಜಾರೋಹಣ ನೆರವೇರಿಸಿದರು. ಕೃಷಿ ಕ್ಷೇತ್ರಕ್ಕೆ ಜ್ಯಾಕ್ ಅನಿಲ್ ನೀಡುತ್ತಿರುವ ಗಮನಾರ್ಹ ಕೊಡುಗೆಯನ್ನು ಗುರುತಿಸಿ ‘ಕೃಷಿ ವೃಕ್ಷಾನ್ವೇಷಕ […]

Continue Reading

ಅಂಕೋಲಾ: ಶಾಂತಿನಿಕೇತನ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ಸಂಭ್ರಮ

ಅಂಕೋಲಾ: ಶಾಂತಿನಿಕೇತನ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಸಂಸ್ಥೆಯ ಕಾರ್ಯದರ್ಶಿ ಶಾಂತಿ ನಾಯಕ ಧ್ವಜಾರೋಹಣ ಮಾಡಿ ಹಿರಿಯರು ಒದಗಿಸಿಕೊಟ್ಟ ಸ್ವಾತಂತ್ರ್ಯವನ್ನು ಸರಿಯಾಗಿ ಉಪಯೋಗಿಸಿಕೊಳ್ಳಬೇಕು ಎಂದು ತಿಳಿಸಿದರು. ಕಲಾ ಭಾರತಿ ಟ್ರಸ್ಟ್ ಅಧ್ಯಕ್ಷ ಪ್ರಶಾಂತ ಶೆಟ್ಟಿ ಹಾಗೂ ದಂತವೈದ್ಯ ಡಾ. ಸಂಜು ನಾಯಕ ಹಾಗೂ ವಿದ್ಯಾರ್ಥಿಗಳ ಪಾಲಕರು ಇದ್ದರು. ದೇಶಭಕ್ತಿ ಗೀತೆಯನ್ನು ಮಕ್ಕಳು ಪ್ರಸ್ತುತಪಡಿಸಿದರು. ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಶಿಕ್ಷಕಿಯರಾದ ಶೀತಲ್ ನಾಯ್ಕ್, ಮಮತಾ ನಾಯ್ಕ, ಶ್ರದ್ಧಾ ಆಚಾರ್ಯ, ಮೈತ್ರಿ ಭಟ್, ಲಕ್ಷ್ಮೀ ಪೂಜಾರ, ಜ್ಯೋತಿ ವೆರ್ಣೇಕರ್ ಇದ್ದರು.

Continue Reading