ಮುದರಂಗಡಿಯಲ್ಲಿ ಮಾಜಿ ಗ್ರಾ.ಪಂ ಅಧ್ಯಕ್ಷನ ಹತ್ಯೆಯ ಆರೋಪಿ ಬಂಧನ, ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನ; ಆರೋಪಿ ಕಾಲಿಗೆ ಗುಂಡಿನ ಏಟು

ಪಡುಬಿದ್ರೆ: ಮುದರಂಗಡಿ ಪೇಟೆಯಲ್ಲಿ ಹಾಡಹಗಲೇ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಡೇವಿಡ್ ಡಿಸೋಜ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆಯ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಕಾಪು ಪೊಲೀಸ್ ಠಾಣೆಯ ಪಿಎಸ್ ಐ ತೇಜಸ್ವಿ ಹಾಗೂ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ ಐ ಪ್ರಸನ್ನ ಅವರ ನೇತೃತ್ವದ ತಂಡ ಕರೆತರುತ್ತಿದ್ದ ವೇಳೆ ಬೈಂದೂರು ಸಮೀಪದ ಒತ್ತಿನೆಣೆ ಬಳಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ ಎನ್ನಲಾಗಿದೆ. ಈ ವೇಳೆ […]

Continue Reading

ಮುಂಡಗೋಡದಲ್ಲಿ ಭತ್ತದ ಬೆಳೆ ಪ್ರದೇಶ ವೀಕ್ಷಿಸಿದ ಸಚಿವ ಲಕ್ಷ್ಮಣ ಸವದಿ, ಅಧಿಕಾರಿಗಳು, ಶಾಸಕರು ಸಾಥ್

ಮುಂಡಗೋಡ: ಸಚಿವ ಲಕ್ಷ್ಮಣ ಸವದಿ ಅವರು ಶುಕ್ರವಾರ ಮುಂಡಗೋಡ ತಾಲೂಕಿನ ಕಾತ್ತೂರು ಗ್ರಾಮದಲ್ಲಿ ಭತ್ತದ ಬೆಳೆ ಪ್ರದೇಶಕ್ಕೆ ಭೇಟಿ ನೀಡಿ ಬೆಳೆ ಪರಿಸ್ಥಿತಿಯನ್ನು ವೀಕ್ಷಿಸಿದರು. ನಂತರ ಸಚಿವರು ಮುಂಡಗೋಡ ತಾಲೂಕಿನ ಶಿಂಗೇನ ಹಳ್ಳಿಯಲ್ಲಿ ಶುಂಠಿ ಬೆಳೆ ಪ್ರದೇಶ ವೀಕ್ಷಣೆ ಮಾಡಿದರು. ಯಲ್ಲಾಪುರ ಶಾಸಕ ಅರಬೈಲ್ ಶಿವರಾಮ ಹೆಬ್ಬಾರ್, ಶಿರಸಿ–ಸಿದ್ದಾಪುರ ಶಾಸಕ ಭೀಮಣ್ಣ ಟಿ. ನಾಯ್ಕ, ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಶ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಸೇರಿದಂತೆ ಅಧಿಕಾರಿಗಳು […]

Continue Reading

ಆಳ್ವಾಸ್ ಪ್ರಗತಿ–2026ಕ್ಕೆ ಚಾಲನೆ: ಮೊದಲ ದಿನ 13 ಸಾವಿರಕ್ಕೂ ಅಧಿಕ ಉದ್ಯೋಗಾಕಾಂಕ್ಷಿಗಳ ಹಾಜರಿ

ಮೂಡುಬಿದಿರೆ: ದೇಶದ ಅತಿದೊಡ್ಡ ಉದ್ಯೋಗ ಮೇಳಗಳಲ್ಲಿ ಒಂದಾಗಿ ಗುರುತಿಸಿಕೊಂಡಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ‘ಆಳ್ವಾಸ್ ಪ್ರಗತಿ–2026’ರ 16ನೇ ಆವೃತ್ತಿಗೆ ಶುಕ್ರವಾರ ವಿದ್ಯಾಗಿರಿಯ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಚಾಲನೆ ದೊರೆಯಿತು. ಮೊದಲ ದಿನವೇ 13,016 ಉದ್ಯೋಗಾಕಾಂಕ್ಷಿಗಳು ಮೇಳಕ್ಕೆ ಆಗಮಿಸಿದ್ದು, 326 ಕಂಪನಿಗಳು ಉದ್ಯೋಗ ನೇಮಕಾತಿಗಾಗಿ ಭಾಗವಹಿಸಿವೆ. ಕಾರ್ಯಕ್ರಮ ಉದ್ಘಾಟಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್, ಬದಲಾಗುತ್ತಿರುವ ಉದ್ಯೋಗ ಕ್ಷೇತ್ರದ ಅಗತ್ಯಗಳಿಗೆ ತಕ್ಕಂತೆ ಯುವಜನರು ತಮ್ಮ ಕೌಶಲ್ಯಗಳನ್ನು ನಿರಂತರವಾಗಿ ಅಭಿವೃದ್ಧಿಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಶಿಕ್ಷಣ […]

Continue Reading

ಗ್ರಾ.ಪಂ, ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜ ಗುಂಡಿಕ್ಕಿ ಹತ್ಯೆ, ಆರೋಪಿಗಳು ಪರಾರಿ,ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ದೌಡು

ಪಡುಬಿದ್ರೆ: ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ (55) ಎಂಬುವವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಮುದರಂಗಡಿ ಎಂಬಲ್ಲಿ ನಡೆದಿದೆ. ಮುದರಂಗಡಿ ಗ್ರಾಮದ ಪಿಲಾರು ನಿವಾಸಿ ಡೇವಿಡ್ ಡಿಸೋಜ, ಮುದರಂಗಡಿಯಲ್ಲಿರುವ ಕಚೇರಿಯಿಂದ ಹತ್ತಿರ ಮುದರಂಗಡಿ ಸಂತ್ ಫ್ರಾನ್ಸಿಸ್ ಜೆವಿಯರ್ ಚರ್ಚ್‌ನ ಎದುರು ನಿಲ್ಲಿಸಿದ್ದ ಕಾರಿನತ್ತ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಈ ಕೃತ್ಯ ಎಸಗಿ ಪರಾರಿ ಆಗಿದ್ದಾರೆ. ಗಂಭೀರ ಗಾಯಗೊಂಡಿದ್ದ […]

Continue Reading

ಉನ್ನತ ಶಿಕ್ಷಣ ಮನೆ ಬಾಗಿಲಿಗೆ ಕೆಎಸ್‌ಒಯು ಗುರಿ: ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಜ್ಞಾನಪ್ರಕಾಶ್

ಮಂಗಳೂರು: ಉದ್ಯೋಗ, ಕುಟುಂಬ ಅಥವಾ ಇತರ ಕಾರಣಗಳಿಂದ ನಿಯಮಿತ ಕಾಲೇಜುಗಳಲ್ಲಿ ವ್ಯಾಸಂಗ ಮಾಡಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಉನ್ನತ ಶಿಕ್ಷಣವನ್ನು ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ಕೆಎಸ್‌ಒಯು) 2026–27ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ವಿವಿಧ ಪದವಿ, ಸ್ನಾತಕೋತ್ತರ, ಡಿಪ್ಲೊಮ ಹಾಗೂ ಸರ್ಟಿಫಿಕೇಟ್ ಕೋರ್ಸ್‌ಗಳ ಪ್ರವೇಶಾತಿ ಪ್ರಕ್ರಿಯೆಯನ್ನು ಆರಂಭಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕೆಎಸ್‌ಒಯು ಕುಲಪತಿ ಎ.ಪಿ. ಜ್ಞಾನಪ್ರಕಾಶ್ ಅವರು ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ಕರ್ನಾಟಕದಲ್ಲಿ ದೂರಶಿಕ್ಷಣ ನೀಡಲು ಮಾನ್ಯತೆ […]

Continue Reading

ರಾಜ್ಯದ ನಿವೃತ್ತ ಸರ್ಕಾರಿ ನೌಕರರಿಗೆ ‘ಸಂಧ್ಯಾ ಕಿರಣ’ ಆರೋಗ್ಯ ಯೋಜನೆ: ಸಚಿವ ಯು.ಟಿ. ಖಾದರ್

ಮಂಗಳೂರು: ರಾಜ್ಯದ 60 ರಿಂದ 70 ವರ್ಷದ ನಿವೃತ್ತ ಸರ್ಕಾರಿ ನೌಕರರಿಗೆ ಆರೋಗ್ಯ ರಕ್ಷಣೆ ಒದಗಿಸುವ ಉದ್ದೇಶದಿಂದ ‘ಸಂಧ್ಯಾ ಕಿರಣ’ ಯೋಜನೆಯನ್ನು ಶೀಘ್ರದಲ್ಲೇ ಜಾರಿಗೆ ತರಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಗುರುವಾರ ಸುದ್ದೊಗೋಷ್ಠಿಯಲ್ಲಿ ತಿಳಿಸಿದರು. ರಾಜ್ಯದಲ್ಲಿ ತುರ್ತು ವೈದ್ಯಕೀಯ ಸೇವೆ ಬಲಪಡಿಸುವ ನಿಟ್ಟಿನಲ್ಲಿ ಹೊಸ ಅಂಬುಲೆನ್ಸ್‌ಗಳ ಸೇರ್ಪಡೆಗೂ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ 450 ಹೊಸ ಅಂಬುಲೆನ್ಸ್‌ಗಳನ್ನು ಒದಗಿಸಲಾಗಿದ್ದು, ಶೀಘ್ರದಲ್ಲೇ ಹೊಸ ವಾಹನಗಳು ಸೇವೆಗೆ ಬರಲಿವೆ. ಇದರಿಂದ ರಾಜ್ಯದಲ್ಲಿ 750ಕ್ಕೂ ಹೆಚ್ಚು ಅಂಬುಲೆನ್ಸ್‌ಗಳು ಕಾರ್ಯನಿರ್ವಹಿಸಲಿವೆ […]

Continue Reading

ಅತಿವೃಷ್ಠಿ ಹಾನಿಗೆ ತಕ್ಷಣ ಪರಿಹಾರ; ಸಚಿವರ ಸಭೆಯಲ್ಲಿ ಕ್ಷೇತ್ರದ ಸಮಸ್ಯೆಗಳ ಪ್ರಸ್ತಾಪ

ಸಿರಸಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಅತಿವೃಷ್ಠಿ ಹಾಗೂ ಅನಾವೃಷ್ಠಿ ಪರಿಸ್ಥಿತಿಯ ಪರಿಶೀಲನೆಗಾಗಿ ಶಿರಸಿಯ ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಸಭೆ ನಡೆಯಿತು. ಸಭೆಯಲ್ಲಿ ಭಾಗವಹಿಸಿದ್ದ ಶಾಸಕರು, ಬನವಾಸಿ ಸೇರಿದಂತೆ ತಮ್ಮ ಕ್ಷೇತ್ರದಲ್ಲಿ ಅತಿವೃಷ್ಠಿಯಿಂದ ಉಂಟಾಗಿರುವ ಹಾನಿಯ ಕುರಿತು ಸಚಿವರ ಗಮನ ಸೆಳೆದರು. ಕೃಷಿ ಬೆಳೆಗಳು, ರಸ್ತೆ, ಸೇತುವೆಗಳು ಹಾಗೂ ಸಾರ್ವಜನಿಕ ಮೂಲಸೌಕರ್ಯಗಳಿಗೆ ವ್ಯಾಪಕ ಹಾನಿಯಾಗಿದ್ದು, ಸಂತ್ರಸ್ತರಿಗೆ ತಕ್ಷಣ ಪರಿಹಾರ ವಿತರಿಸುವುದರ ಜೊತೆಗೆ ಹಾನಿಗೊಳಗಾದ ಕಾಮಗಾರಿಗಳ ದುರಸ್ತಿಯನ್ನು ತುರ್ತಾಗಿ ಕೈಗೊಳ್ಳುವಂತೆ […]

Continue Reading

ಕರಾವಳಿಯಲ್ಲಿ ಫಿಶಿಂಗ್ ಗೆ ದೋಣಿಗಳು, ಮೀನುಗಾರರಲಿ ಹೆಚ್ಚಿದ ಉತ್ಸಾಹ! ದಕ್ಕೆಯಲ್ಲಿ ಬಿರುಸಿನ ಚಟುವಟಿಕೆ

ಮಂಗಳೂರು: ಎರಡು ತಿಂಗಳ ಕಾಲ ಕರಾವಳಿಯ ಮೀನುಗಾರಿಕಾ ದಕ್ಕೆಗಳಲ್ಲಿ ನಿಶ್ಚಲವಾಗಿ ನಿಂತಿದ್ದ ಯಾಂತ್ರೀಕೃತ ಬೋಟ್‌ಗಳು ಮತ್ತೆ ಸಮುದ್ರದತ್ತ ಮುಖ ಮಾಡುವ ಕ್ಷಣ ಬಂದಿದ್ದರೂ, ಹವಾಮಾನ ಇಲಾಖೆಯ ಎಚ್ಚರಿಕೆ ಮೀನುಗಾರರ ಉತ್ಸಾಹಕ್ಕೆ ತಣ್ಣೀರೆರಚಿದೆ. 61 ದಿನಗಳ ಟ್ರಾಲಿಂಗ್ ನಿಷೇಧ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಆಗಸ್ಟ್‌ ನಿಂದ ಆಳ ಸಮುದ್ರ ಮೀನುಗಾರಿಕೆ ಪುನರಾರಂಭಗೊಳ್ಳಬೇಕಿದ್ದರೂ, ಪ್ರತಿಕೂಲ ಹವಾಮಾನದಿಂದಾಗಿ ಬೋಟ್‌ಗಳು ಸಮುದ್ರಕ್ಕಿಳಿಯದ ಸಾಧ್ಯತೆ ಎದುರಾಗಿದೆ. ಮಂಗಳೂರು ಬಂದರಿನಲ್ಲಿ ಕಳೆದ ನಾಲ್ಕು ದಿನಗಳಿಂದಲೇ ಬಿರುಸಿನ ಸಿದ್ಧತೆಗಳು ನಡೆದಿವೆ. ಎರಡು ತಿಂಗಳ ವಿರಾಮದ ಬಳಿಕ ಮೀನುಗಾರರು, […]

Continue Reading

ಶಾಲೆ–ಕಾಲೇಜುಗಳ ಬಳಿ ಜಂಕ್ ಫುಡ್‌ಗೆ ಬ್ರೇಕ್: ಇಲಾಖೆಯ ಅಧಿಕೃತ ಆದೇಶ

ಬೆಂಗಳೂರು: ವಿದ್ಯಾರ್ಥಿಗಳಿಗೆ ಸುರಕ್ಷಿತ, ಗುಣಮಟ್ಟಯುತ ಹಾಗೂ ಆರೋಗ್ಯಕರ ಆಹಾರ ಲಭ್ಯ ಆಗುವಂತೆ ಮಾಡಲು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯೂ ಶಾಲೆ–ಕಾಲೇಜುಗಳ ಆವರಣ ಹಾಗೂ 50 ಮೀಟರ್ ವ್ಯಾಪ್ತಿಯಲ್ಲಿ ಜಂಕ್ ಫುಡ್‌ ಮತ್ತು ಅನಾರೋಗ್ಯಕರ ಆಹಾರ ಮಾರಾಟ ಮಾಡದಂತೆ ಅಧಿಕೃತ ಆದೇಶ ಹೊರಡಿಸಿದೆ. ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಮಾರ್ಗಸೂಚಿಯಂತೆ ಈ ಕ್ರಮ ಜುಲೈ 21 ರಿಂದ ಜಾರಿಗೆ ಬಂದಿದೆ ಎಂದು ಆರೋಗ್ಯ ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಜುಲೈ ತಿಂಗಳಲ್ಲಿ ರಾಜ್ಯದ […]

Continue Reading

ಭೂಕುಸಿತ ತೆರವು ಬಳಿಕ ಶಿರಾಡಿ ಘಾಟ್ ರೈಲು ಮಾರ್ಗ ಪುನರಾರಂಭ, ಪ್ರಯಾಣಿಕರಿಗೆ ನೆಮ್ಮದಿ

ಸುಬ್ರಮಣ್ಯ: ಭಾರೀ ಮಳೆಯಿಂದ ಭೂಕುಸಿತ ಸಂಭವಿಸಿ ಸ್ಥಗಿತಗೊಂಡಿದ್ದ ಮೈಸೂರು ವಿಭಾಗದ ಶಿರಿಬಾಗಿಲು–ಎಡಕುಮಾರಿ ನಡುವಿನ ಶಿರಾಡಿ ಘಾಟ್ ರೈಲು ಮಾರ್ಗದಲ್ಲಿ ರೈಲು ಸಂಚಾರವನ್ನು ದಕ್ಷಿಣ ಪಶ್ಚಿಮ ರೈಲ್ವೆ ಮರು ಆರಂಭಿಸಿದೆ. ಹಳಿ ಮೇಲಿನ ಮಣ್ಣು, ಕಲ್ಲು ಹಾಗೂ ಮರಗಳ ಅವಶೇಷಗಳನ್ನು ತೆರವುಗೊಳಿಸಿ ಸುರಕ್ಷತಾ ಪರಿಶೀಲನೆ ಪೂರ್ಣಗೊಳಿಸಿದ ಬಳಿಕ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ರೈಲ್ವೆ ಇಲಾಖೆ ಪ್ರಕಟಣೆಯ ಪ್ರಕಾರ, ಆಗಸ್ಟ್ 3ರಂದು ಸಂಜೆ 7.25ಕ್ಕೆ ಹಳಿ ಸುರಕ್ಷತಾ ತಪಾಸಣೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ತಾಂತ್ರಿಕ ತಜ್ಞರು ಮಾರ್ಗವನ್ನು ಸುರಕ್ಷಿತ ಎಂದು ಪ್ರಮಾಣೀಕರಿಸಿದ […]

Continue Reading