ಜನವರಿಯಲ್ಲಿ ಆಳ್ವಾಸ್ ನುಡಿಸಿರಿ–ವಿರಾಸತ್: ಡಾ. ಮೋಹನ್ ಆಳ್ವ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸುವ ರಾಷ್ಟ್ರಮಟ್ಟದ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವ ಆಳ್ವಾಸ್ ನುಡಿಸಿರಿ–ವಿರಾಸತ್ ಅನ್ನು ಮುಂಬರುವ ವರ್ಷದ ಜನವರಿಯಲ್ಲಿ ಅದ್ದೂರಿಯಾಗಿ ಆಯೋಜಿಸಲು ತೀರ್ಮಾನಿಸಲಾಗಿದೆ. ಈ ಬಾರಿ ನುಡಿಸಿರಿ ಮತ್ತು ವಿರಾಸತ್ ಉತ್ಸವಗಳನ್ನು ಒಂದೇ ವೇದಿಕೆಯಲ್ಲಿ ನಡೆಸುವ ಮೂಲಕ ಸಾಹಿತ್ಯ, ಕಲೆ ಮತ್ತು ಸಂಸ್ಕೃತಿಯ ವಿಶಿಷ್ಟ ಸಂಗಮಕ್ಕೆ ವೇದಿಕೆ ಕಲ್ಪಿಸಲಾಗುತ್ತಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರ ಸ್ವಗೃಹದಲ್ಲಿ ನಡೆದ ಪ್ರಾಥಮಿಕ ಸಮಾಲೋಚನಾ ಸಭೆಯಲ್ಲಿ ಉತ್ಸವದ ರೂಪುರೇಷೆಗಳ ಕುರಿತು ಸುದೀರ್ಘ […]

Continue Reading

ರಾಜ್ಯದ ಸುದೀರ್ಘ ಸಿಎಂ ಆಗಿದ್ದ ಸಿದ್ದರಾಮಯ್ಯ ಮಹತ್ವದ ಘೋಷಣೆ, ಚುನಾವಣಾ ರಾಜಕೀಯಕ್ಕೆ ಗುಡ್ ಬೈ

ಮಂಡ್ಯ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಘೋಷಣೆ ಮಾಡಿದ್ದು, ಚುನಾವಣಾ ರಾಜಕೀಯದಿಂದ ಹಿಂದೆ ಸರಿದರೂ ಸಾರ್ವಜನಿಕ ಬದುಕಿನಲ್ಲಿ ಸಕ್ರಿಯ ಆಗಿಯೇ ಉಳಿದು ಜನರ ಪರವಾಗಿ ಧ್ವನಿ ಆಗುವುದಾಗಿ ಅವರು ತಿಳಿಸಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಳಿಕ ತಮ್ಮ ನಿರ್ಧಾರವನ್ನು ಸಾಮಾಜಿಕ ಜಾಲತಾಣದಲ್ಲೂ ಹಂಚಿಕೊಂಡಿದ್ದಾರೆ. ಇನ್ನು ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸದಿರಲು ತೀರ್ಮಾನಿಸಿದ್ದೇನೆ. ಹಿಂದೆ ಚುನಾವಣೆಗೆ ಸ್ಪರ್ಧಿಸಿದಾಗ ಕ್ಷೇತ್ರದ ಜನರೇ ಅಭ್ಯರ್ಥಿಯನ್ನು ಬೆಂಬಲಿಸಿ ಗೆಲ್ಲಿಸುತ್ತಿದ್ದರು. […]

Continue Reading

ನೀಟ್ ಪರೀಕ್ಷೆಯಲ್ಲಿ ಮೂಡುಬಿದಿರೆಯ ಎಕ್ಸಲೆಂಟ್ ಪಿಯು ಕಾಲೇಜಿಗೆ ಉತ್ತಮ ಸಾಧನೆ

ಮೂಡುಬಿದಿರೆ: ಇಲ್ಲಿನ ಎಕ್ಸಲೆಂಟ್ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಲ್ಲಿ ಫಲಿತಾಂಶದಲ್ಲಿ ಮೂಡುಬಿದಿರೆ ಗಮನಾರ್ಹ ಸಾಧನೆ ಮೆರೆದಿದ್ದಾರೆ. ಕಾಲೇಜಿನ ನಿಖಿಲ್ ಎಸ್.ಎಸ್. 720 ಕ್ಕೆ 650 ಅಂಕ ಗಳಿಸಿ ಅಗ್ರಸ್ಥಾನ ಪಡೆದುಕೊಂಡಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ತಿಳಿಸಿದ್ದಾರೆ. ನಿಖಿಲ್ ಅವರ ಬಳಿಕ ತನ್ಮಯಿ ಎ. ಕೋಟಿ 647, ಚಿನ್ಮಯಿ ಬೆಳ್ಳೂರು 629, ಹೇಮಾ ಯು. 624, ಶ್ಲೋಕ್ ರಾಘವೇಂದ್ರ ರಾವ್ 615, ಈಶ್ವರ ಪುಂಡಲೀಕಪ್ಪ ಕೊಪ್ಪಲ್ 612 ಹಾಗೂ ಮೋಹಿತ್ ವೈ.ಪಿ. 611 ಅಂಕಗಳನ್ನು […]

Continue Reading

ಜಿಎಂಯು ದಂತ ವೈದ್ಯಕೀಯ ಕಾಲೇಜಿಗೆ ವಿಶ್ವಮಟ್ಟದ ಮಾನ್ಯತೆ, 120 ದಂತ ಚಿಕಿತ್ಸಾ ಘಟಕಗಳ ಮೂಲಕ ಪ್ರಾಯೋಗಿಕ ತರಬೇತಿಗೆ ಆದ್ಯತೆ

ಮಂಗಳೂರು: ಗಲ್ಫ್ ಮೆಡಿಕಲ್ ಯೂನಿವರ್ಸಿಟಿ (ಜಿಎಂಯು)ಯ ದಂತ ವೈದ್ಯಕೀಯ ಕಾಲೇಜು ವಿಶ್ವಮಟ್ಟದ ಕ್ಲಿನಿಕಲ್ ಶಿಕ್ಷಣ ವ್ಯವಸ್ಥೆ ಹಾಗೂ ಅತ್ಯಾಧುನಿಕ ಮೂಲಸೌಕರ್ಯದಿಂದ ಗಮನ ಸೆಳೆದಿದೆ. ವಿಶ್ವವಿದ್ಯಾಲಯದ ಅಧೀನದಲ್ಲಿರುವ ಥಂಬೇ ಡೆಂಟಲ್ ಆಸ್ಪತ್ರೆಯಲ್ಲಿ 120 ದಂತ ಚಿಕಿತ್ಸಾ ಕುರ್ಚಿಗಳ ವ್ಯವಸ್ಥೆ ಕಲ್ಪಿಸಲಾಗಿದ್ದು, ವಿದ್ಯಾರ್ಥಿಗಳಿಗೆ ನೈಜ ರೋಗಿಗಳ ಚಿಕಿತ್ಸೆಯ ಮೂಲಕ ಪ್ರಾಯೋಗಿಕ ತರಬೇತಿ ನೀಡಲಾಗುತ್ತಿದೆ. ದಂತ ಶಿಕ್ಷಣದಲ್ಲಿ ಪ್ರಾಯೋಗಿಕ ಅನುಭವಕ್ಕೆ ಹೆಚ್ಚಿನ ಮಹತ್ವ ನೀಡಿರುವ ಕಾಲೇಜು, ಆರಂಭಿಕ ಹಂತದಿಂದಲೇ ತಜ್ಞ ವೈದ್ಯರ ಮೇಲ್ವಿಚಾರಣೆಯಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸಾ ಕೌಶಲ್ಯ ಬೆಳೆಸುವ ಅವಕಾಶ ಒದಗಿಸಿದೆ. […]

Continue Reading

ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಅಮಾನವೀಯ ಕೃತ್ಯ, ಸಚಿವರ ರಾಜೀನಾಮೆಗೆ ಪದ್ಮರಾಜ್ ಪೂಜಾರಿ ಆಗ್ರಹ

ಮಂಗಳೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ತಡೆಯುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ಅದರ ಪರಿಣಾಮವಾಗಿ ದೇಶದಾದ್ಯಂತ ವಿದ್ಯಾರ್ಥಿಗಳು ಪ್ರತಿಭಟನೆಗೆ ಇಳಿಯುವಂತಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಅವರು ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಆರೋಪಿಸಿದರು. ನವದೆಹಲಿಯಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಪೊಲೀಸರು ನಡೆಸಿಕೊಂಡಿರುವ ರೀತಿಯು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ ತರುವಂತಿದ್ದು, ಕೇಂದ್ರ ಸರ್ಕಾರ ಇದಕ್ಕೆ ಉತ್ತರಿಸಬೇಕಿದೆ. ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ […]

Continue Reading

ಕಾಸರಗೋಡಿನಲ್ಲಿ ಜು.27 ಕ್ಕೆ ಆರ್‌ವಿಆರ್‌ ಹೆಲ್ತ್‌ ಕೇರ್‌ ನ್ಯೂರೋ ಅಂಕಾಲಜಿ ಸೆಂಟರ್‌ ಉದ್ಘಾಟನೆ: ಡಾ. ರಾಘವೇಂದ್ರ

ಮಂಗಳೂರು: ಆರ್‌ವಿಆರ್‌ ಹೆಲ್ತ್‌ ಕೇರ್‌ನ ಉಪ ಶಾಖೆ ಆರ್‌ವಿಆರ್‌ ಹೆಲ್ತ್‌ ಕೇರ್‌ ನ್ಯೂರೋ ಆಂಕಾಲಜಿ ಸೆಂಟರ್‌ ಇದೇ 26 ರಂದು ಕಾಸರಗೋಡಿನಲ್ಲಿ ಕಾರ್ಯಾರಂಭ ಮಾಡಲಿದ್ದು, ಒಂದೂವರೆ ತಿಂಗಳಿನಿಂದ ಮಂಗಳೂರಿನ ಫಳ್ನೀರ್‌ನಲ್ಲಿ ಇರುವ ಕೇಂದ್ರದಲ್ಲಿ ರೋಗಿಗಳಿಗೆ ಅತ್ಯಾಧುನಿಕ ವೈದ್ಯಕೀಯ ಸೇವೆಗಳನ್ನು ಒದಗಿಸಲಾಗುತ್ತಿದೆ ಎಂದು ಆರ್‌ವಿಆರ್‌ ಸೂಪರ್‌ ಸ್ಪೆಷಾಲಿಟಿ ಸೆಂಟರ್‌ ನಿರ್ದೇಶಕ ಡಾ. ರಾಘವೇಂದ್ರ ಬಿ.ಎಸ್‌ ಅವರು ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ನ್ಯೂರೋ ಹಾಗೂ ಕ್ಯಾನ್ಸರ್‌ ರೋಗಗಳ ಚಿಕಿತ್ಸೆಗೆ ವಿಶೇಷ ಒತ್ತು ನೀಡಲಾಗುತ್ತಿದ್ದು, ವಿವಿಧ ತಜ್ಞ ವೈದ್ಯರ ಸೇವೆಯೊಂದಿಗೆ ಒಂದೇ […]

Continue Reading

ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನಲೆ: ಜುಲೈ 25 ರಂದು ಶಾಲೆಗಳಿಗೆ ರಜೆ ಘೋಷಣೆ: ಸ್ವರೂಪ್

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯ   ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು, ಡಿಪ್ಲೊಮೊ, ಐಟಿಐ ಕಾಲೇಜುಗಳಿಗೆ ಜುಲೈ 25 ರಂದು ರಜೆ ಘೋಷಿಸಿ  ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಆದೇಶ ಹೊರಡಿಸಿದ್ದಾರೆ.  

Continue Reading

ಶ್ರೀನಿವಾಸ ವಿವಿಯಲ್ಲಿ ಎಐ ತಂತ್ರಜ್ಞಾನದ ಸಂಚಲನ: ಸ್ವಯಂಚಾಲಿತ ವಿದ್ಯುತ್ ವಾಹನ, ‘ಶ್ರೀನಿಬೋಟ್’ ರೋಬೋಟ್ ಅನಾವರಣ

ಮಂಗಳೂರು: ಕೃತಕ ಬುದ್ಧಿಮತ್ತೆ ರೋಬೋಟಿಕ್ಸ್ ಹಾಗೂ ಸ್ವಯಂಚಾಲಿತ ತಂತ್ರಜ್ಞಾನ ಕ್ಷೇತ್ರದಲ್ಲಿ ಶ್ರೀನಿವಾಸ ವಿಶ್ವವಿದ್ಯಾಲಯದ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು ಮಹತ್ವದ ಸಾಧನೆ ದಾಖಲಿಸಿದ್ದಾರೆ. ಮುಕ್ಕ ಕ್ಯಾಂಪಸ್‌ನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಅಭಿವೃದ್ಧಿಪಡಿಸಿದ ಶ್ರೀ ವಾಹನ್’ ಎಐ ಆಧಾರಿತ ಸ್ವಯಂಚಾಲಿತ ವಿದ್ಯುತ್ ವಾಹನ ಹಾಗೂ ಶ್ರೀನಿಬೋಟ್’ ಎಐ ರಿಸೆಪ್ಷನ್ ರೋಬೋಟ್** ಅನ್ನು ಯಶಸ್ವಿಯಾಗಿ ಪ್ರದರ್ಶಿಸಲಾಯಿತು. ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಆರ್ಥಿಕ ನೆರವು ಹಾಗೂ ಅಧ್ಯಾಪಕರ ಮಾರ್ಗದರ್ಶನದಲ್ಲಿ ರೂಪುಗೊಂಡಿರುವ ಈ ಯೋಜನೆಗಳು ಸಂಶೋಧನೆ, ನವೋದ್ಯಮ ಮತ್ತು […]

Continue Reading

ದೇಶದ ಮೊದಲ ಐಬಿಎಂ ಎಐ ಲ್ಯಾಬ್‌ಗೆ ಆಳ್ವಾಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಚಾಲನೆ

ಮೂಡುಬಿದಿರೆ: ಕೃತಕ ಬುದ್ಧಿಮತ್ತೆ (ಎಐ) ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದ ತಾಂತ್ರಿಕ ಅನುಭವ ಕಲ್ಪಿಸುವ ಮಹತ್ವದ ಹೆಜ್ಜೆಯಾಗಿ, ಐಬಿಎಂ ಸಾಫ್ಟ್‌ವೇರ್ ಲ್ಯಾಬ್ಸ್ ಸಹಯೋಗದಲ್ಲಿ ಮೂಡುಬಿದಿರೆಯ ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿ (ಎಐಇಟಿ)ಯಲ್ಲಿ ದೇಶದ ಮೊದಲ ಐಬಿಎಂ ಎಐ ಲ್ಯಾಬ್‌ಗೆ ಬುಧವಾರ ಚಾಲನೆ ನೀಡಲಾಯಿತು. ವಿದ್ಯಾರ್ಥಿಗಳು ಮತ್ತು ಅಧ್ಯಾಪಕರಿಗೆ ಅತ್ಯಾಧುನಿಕ ಕೃತಕ ಬುದ್ಧಿಮತ್ತೆ ತಂತ್ರಜ್ಞಾನಗಳ ನೇರ ಪ್ರಾಯೋಗಿಕ ಅನುಭವ ಒದಗಿಸುವ ಉದ್ದೇಶದಿಂದ ಸ್ಥಾಪಿಸಲಾದ ಈ ಲ್ಯಾಬ್‌ನಲ್ಲಿ ಐಬಿಎಂ ವಾಟ್ಸನ್‌ಎಕ್ಸ್.ಎಐ, ವಾಟ್ಸನ್‌ಎಕ್ಸ್ ಆರ್ಕೆಸ್ಟ್ರೇಟ್ ಸೇರಿದಂತೆ ಎಐ ಆಧಾರಿತ […]

Continue Reading

119ನೇ ಸಂಸ್ಥಾಪನಾ ದಿನ; ಬ್ಯಾಂಕ್ ಆಫ್ ಬರೋಡಾದಿಂದ ಡಿಜಿಟಲ್ ಸೇವೆಗಳಿಗೆ ಹೊಸ ವೇಗ

ಮಂಗಳೂರು: ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್‌ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾ ತನ್ನ 119 ನೇ ಸಂಸ್ಥಾಪನಾ ದಿನವನ್ನು ಆಚರಿಸಿ, ಗ್ರಾಹಕರಿಗೆ ಇನ್ನಷ್ಟು ಸುಲಭ ಹಾಗೂ ಸುರಕ್ಷಿತ ಸೇವೆ ಒದಗಿಸುವ ಉದ್ದೇಶದಿಂದ ಹಲವು ಹೊಸ ಬ್ಯಾಂಕಿಂಗ್ ಯೋಜನೆಗಳನ್ನು ಪರಿಚಯಿಸಿದೆ. ಈ ವರ್ಷದ ಧ್ಯೇಯವಾಕ್ಯ ‘ವಿಶ್ವಾಸದೊಂದಿಗೆ ಮುನ್ನಡೆ’ಆಗಿದ್ದು, ಗ್ರಾಹಕರ ವಿಶ್ವಾಸವನ್ನು ಮತ್ತಷ್ಟು ಬಲಪಡಿಸುವ ಜೊತೆಗೆ ತಂತ್ರಜ್ಞಾನ ಆಧಾರಿತ ಸೇವೆಗಳನ್ನು ವಿಸ್ತರಿಸಲು ಬ್ಯಾಂಕ್ ಆದ್ಯತೆ ನೀಡಿದೆ. ಸಂಸ್ಥಾಪನಾ ದಿನದ ಅಂಗವಾಗಿ ಬ್ಯಾಂಕಿನ ಜಾಗತಿಕ ರಾಯಭಾರಿ ಸಚಿನ್ ತೆಂಡೂಲ್ಕರ್ ಅವರು ಹೊಸ […]

Continue Reading