ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್

ಬೆಂಗಳೂರು: 8 ವರ್ಷಗಳ ನಂತರ ಗಡಿಯಾರ ಚಿತ್ರದ ನಿರ್ದೇಶಕ ಪ್ರಬಿಕ್ ಮೊಗವೀರ್ ಅವರು ಪಿಸ್ತೂಲ್ ಹೆಸರಿನ ಚಿತ್ರವನ್ನು ನಿರ್ದೇಶನ ಮಾಡಲು ಮುಂದಾಗಿದ್ದಾರೆ. ಒಂದು ಗನ್ ಆರು ಬುಲೆಟ್ ಎನ್ನುವ ಅಡಿಬರಹ ಈ ಚಿತ್ರಕ್ಕೆ ಇದೆ. ಪಕ್ಕ ಮಾಸ್ ಜತೆಗೆ ಥ್ರಿಲಿಂಗ್ ಕಂಟೆಂಟ್ ಇದು ಒಳಗೊಂಡಿದೆ. ನಿರ್ದೇಶಕರು ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಚಿತ್ರದ ಚಿತ್ರೀಕರಣ ಶೀಘ್ರದಲ್ಲೇ ಆರಂಭವಾಗಲಿದೆ. ಚಿತ್ರದ ಕಥಾ ವಸ್ತು ವಿಭಿನ್ನವಾಗಿರಲಿದೆ ಎಂದು ಪ್ರಬಿಕ್ ಮೊಗವೀರ್ ಅವರು ಹೇಳಿದ್ದಾರೆ. ಪ್ರಬಿಕ್ ಮೊಗವೀರ್ ಅವರು ಹಿಂದೆ ನಿರ್ದೇಶಿಸಿದ್ದ ಗಡಿಯಾರ […]

Continue Reading

ಮಂಗಳೂರು ವಿಶ್ವವಿದ್ಯಾಲಯ ಹೊಸ ದಾಖಲೆ, 2 ದಿನಗಳಲ್ಲಿ 13,286 ವಿದ್ಯಾರ್ಥಿಗಳ ರಿಸಲ್ಟ್ ಘೋಷಣೆ: ಕುಲಪತಿ ಪ್ರೊ. ಪಿ.ಎಲ್ . ಧರ್ಮ

ಮಂಗಳೂರು: ಸದಾ ಒಂದಿಲ್ಲ ಒಂದು ಸುದ್ದಿಯಲ್ಲಿ ಇರುವ ಮಂಗಳೂರು ವಿವಿ ಈಗ ಮತ್ತೆ ಹೊಸ ದಾಖಲೆ ಮಾಡುವ ಮೂಲಕ ಸುದ್ದಿಯಲ್ಲಿದೆ. ವಿಶ್ವವಿದ್ಯಾಲಯ ವಿವಿಧ ಪದವಿ ಕೋರ್ಸ್‌ಗಳ ಅಂತಿಮ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶವನ್ನು ಮೌಲ್ಯಮಾಪನ ಆಗಿ ಎರಡು ದಿನಗಳಲ್ಲೇ ಪ್ರಕಟಿಸುವ ಮೂಲಕ ಹೊಸ ದಾಖಲೆಗೆ ಸೇರ್ಪಡೆ ಆಗಿದೆ. ಜೂನ್- ಜುಲೈನಲ್ಲಿ ನಡೆದ ವಿವಿಧ ಪದವಿ ಕೋರ್ಸ್‌ಗಳ 6 ನೇ ಸೆಮಿಸ್ಟರ್ ಹಾಗೂ ಬಿ.ಎಚ್.ಎಂ. 8 ನೇ ಸೆಮಿಸ್ಟರ್ ಪರೀಕ್ಷೆಗಳ ಮೌಲ್ಯಮಾಪನ ಜುಲೈ 18 ರಂದು ಪೂರ್ಣಗೊಂಡಿರುವ ಬೆನ್ನಲ್ಲೆ ಜುಲೈ […]

Continue Reading

ಕೆಎಂಸಿ ಅತ್ತಾವರದಲ್ಲಿ ವಿಶೇಷ ‘ಸಂಜೆ ಕ್ಲಿನಿಕ್’ ಆರಂಭ, ಗುಣಮಟ್ಟದ ಆರೋಗ್ಯ ಸೇವೆಗೆ ಹೆಜ್ಜೆ

ಮಂಗಳೂರು: ಉದ್ಯೋಗಿಗಳು, ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಹಾಗೂ ಹಗಲಿನ ವೇಳೆ ಆಸ್ಪತ್ರೆಗೆ ಭೇಟಿ ನೀಡಲು ಸಾಧ್ಯವಾಗದವರಿಗೆ ಅನುಕೂಲವಾಗುವಂತೆ ಕೆಎಂಸಿ ಆಸ್ಪತ್ರೆ ಅತ್ತಾವರದಲ್ಲಿ ತಜ್ಞ ವೈದ್ಯರ ಸಮಾಲೋಚನೆಗಾಗಿ ವಿಶೇಷ ‘ಸಂಜೆ ಕ್ಲಿನಿಕ್’ ಆರಂಭಿಸಲಾಗಿದೆ. ಸಾಮಾನ್ಯ ಕೆಲಸದ ವೇಳೆಯ ನಂತರವೂ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಈ ಹೊಸ ಸೇವೆ ಆರಂಭಿಸಲಾಗಿದೆ ಎಂದು ಆಸ್ಪತ್ರೆ ಪ್ರಕಟಣೆ ತಿಳಿಸಿದೆ. ಸಂಜೆ 5 ರಿಂದ 7 ಗಂಟೆಯವರೆಗೆ ಕಾರ್ಯನಿರ್ವಹಿಸುವ ಈ ಕ್ಲಿನಿಕ್‌ನಲ್ಲಿ ಹೃದ್ರೋಗ, ಸಾಮಾನ್ಯ ವೈದ್ಯಕೀಯ, ಹಸ್ತ ಶಸ್ತ್ರಚಿಕಿತ್ಸೆ, ಮೂತ್ರಪಿಂಡ, ಮೆದುಳಿನ […]

Continue Reading

ಮಿಥ್ಯ ಕನ್ನಡ ಚಿತ್ರಕ್ಕೆ ಒಲಿದು ಬಂದ ಮೂರು ಪ್ರಶಸ್ತಿ, ರೂಪಶ್ರೀ ವರ್ಕಾಡಿ ಅಭಿನಯಕ್ಕೆ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ

ಮಂಗಳೂರು: ಮಿಥ್ಯ ಕನ್ನಡ ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ಪೋಷಕ ನಟಿ ವಿಭಾಗದ ರಾಷ್ಟ್ರೀಯ ಪ್ರಶಸ್ತಿ ಬಂದಿದೆ. ಈ ಗೌರವ ತಮ್ಮ ಕಲಾ ಬದುಕಿನ ಅತ್ಯಂತ ಸ್ಮರಣೀಯ ಕ್ಷಣ. ಪ್ರಶಸ್ತಿ ಸಿಗುವ ನಿರೀಕ್ಷೆಯೇ ಇರಲಿಲ್ಲ. ಎರಡು ದಶಕಗಳಿಗೂ ಅಧಿಕ ಕಲಾ ಪಯಣದ ಏಳುಬೀಳುಗಳ ನಡುವೆ ಈ ಗೌರವ ಹೊಸ ಉತ್ಸಾಹ ತುಂಬಿದೆ ಎಂದು ಮಂಗಳೂರು ಮೂಲದ ನಟಿ ರೂಪಶ್ರೀ ವರ್ಕಾಡಿ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮಿಥ್ಯ ಚಿತ್ರದ ನಿರ್ದೇಶಕ ಸುಮಂತ್ ಭಟ್ ಹಾಗೂ ಇದೇ ಚಿತ್ರಕ್ಕಾಗಿ ಬಾಲನಟ […]

Continue Reading

ನೀಟ್ ಅಕ್ರಮ, ಶಿಕ್ಷಣ ಸಚಿವರ ರಾಜೀನಾಮೆಗೆ ಸಚಿವ ಖಾದರ್ ಒತ್ತಾಯ

ಮಂಗಳೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಚರ್ಚೆಗೆ ಅವಕಾಶ ನೀಡದೆ, ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಬಲಪ್ರಯೋಗ ನಡೆಸುವ ಮೂಲಕ ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ ತಂದಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಬುಧವಾರ ಸುದ್ದಿಗೋಷ್ಟಿಯಲ್ಲಿ ಆರೋಪಿಸಿದರು. ಕೇಂದ್ರ ಶಿಕ್ಷಣ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಸಾವಿಗೀಡಾದ 20 ವಿದ್ಯಾರ್ಥಿಗಳ ಕುಟುಂಬಗಳಿಗೆ ಪರಿಹಾರ ಘೋಷಿಸುವವರೆಗೆ ಕಾಂಗ್ರೆಸ್ ಹೋರಾಟ ಮುಂದುವರೆಸಲಿದೆ. ಅನ್ಯಾಯವೇ ಕಾನೂನಾದರೆ, ಪ್ರತಿಭಟನೆ ಕರ್ತವ್ಯ ಆಗುತ್ತದೆ ಎಂದರು. […]

Continue Reading

ಐಎನ್‌ಎಸ್ ಮಾಲ್ವನ್ ಭಾರತೀಯ ನೌಕಾಪಡೆಗೆ ಸೇರ್ಪಡೆ: ಕಾರವಾರ ನೌಕಾನೆಲೆಯಲ್ಲಿ ಅಧಿಕೃತ ನಿಯೋಜನೆ

ಕಾರವಾರ: ಭಾರತೀಯ ನೌಕಾಪಡೆಯ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಅತ್ಯಾಧುನಿಕ ಆಂಟಿ-ಸಬ್‌ಮರೀನ್ ವಾರ್‌ಫೇರ್ ಶ್ಯಾಲೋ ವಾಟರ್ ಕ್ರಾಫ್ಟ್ ಶ್ರೇಣಿಯ ಐಎನ್‌ಎಸ್ ಮಾಲ್ವನ್ ಯುದ್ಧನೌಕೆಯನ್ನು ಕಾರವಾರದ ಕದಂಬ ನೌಕಾನೆಲೆಯಲ್ಲಿ ಬುಧವಾರ ಭಾರತೀಯ ನೌಕಾಪಡೆಗೆ ಅಧಿಕೃತವಾಗಿ ಸೇರ್ಪಡೆಗೊಳಿಸಲಾಯಿತು. ಇದು ಕಾರವಾರದ ಪ್ರಾಜೆಕ್ಟ್ ಸೀಬರ್ಡ್ ನೌಕಾನೆಲೆಯಲ್ಲಿ ಅಧಿಕೃತವಾಗಿ ನಿಯೋಜನೆಗೊಂಡ ಮೊದಲ ಯುದ್ಧನೌಕೆಯಾಗಿದೆ. ನಿಯೋಜನಾ ಸಮಾರಂಭದಲ್ಲಿ ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಎ.ಪಿ. ಸಿಂಗ್ ಮಾತನಾಡಿ, ಭವಿಷ್ಯದ ಭದ್ರತಾ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ನೌಕಾಪಡೆ, ವಾಯುಪಡೆ ಹಾಗೂ ಭೂಸೇನೆ ನಡುವೆ […]

Continue Reading

ಅಮೆರಿಕದ ಶಿಕಾಗೊದಲ್ಲಿ ಆರೋಗ್ಯ ಸಚಿವ ಖಾದರ್‌ಗೆ ಜಾಗತಿಕ ನಾಗರಿಕ ನಾಯಕತ್ವ ಪ್ರಶಸ್ತಿ

‌ಮಂಗಳೂರು: ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಫರೀದ್ ಅವರಿಗೆ ಅಮೆರಿಕದ ಪ್ರತಿಷ್ಠಿತ ಅಮೆರಿಕನ್ ಮಲ್ಟಿ ಎಥ್ನಿಕ್ ಕಮಿಷನ್ (ಎಎಂಇಸಿ) ವತಿಯಿಂದ ನೀಡಲಾಗುವ ‘ಜಾಗತಿಕ ನಾಗರಿಕ ನಾಯಕತ್ವ ಪ್ರಶಸ್ತಿ’ಘೋಷಿಸಲಾಗಿದೆ. ಅಮೆರಿಕದ ಇಲಿನಾಯ್ಸ್ ರಾಜ್ಯದ ನೇಪರ್‌ವಿಲ್‌ನ ಯೆಲ್ಲೋ ಬಾಕ್ಸ್ ಸಭಾಂಗಣದಲ್ಲಿ ಇದೇ 25 ರಂದು ನಡೆವ 15ನೇ ವಾರ್ಷಿಕ ಕಾಂಗ್ರೆಸ್ ಜಾಗತಿಕ ಚಾಂಪಿಯನ್ಸ್ ಗಾಲಾ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಸಾರ್ವಜನಿಕ ಆರೋಗ್ಯ ಸೇವೆ, ಸಮಗ್ರ ಆಡಳಿತ, ಜನಕೇಂದ್ರಿತ ಅಭಿವೃದ್ಧಿ ಹಾಗೂ ಹಲವು […]

Continue Reading

ಬಂಟ್ವಾಳ ಬಸ್ ದುರಂತ: ಮೃತ ಬಾಲಕಿಯ ಕುಟುಂಬಕ್ಕೆ ತಕ್ಷಣ ಪರಿಹಾರ ನೀಡಿ, ಗಾಯಾಳುಗಳಿಗೆ ಸಂಪೂರ್ಣ ಚಿಕಿತ್ಸೆ: ಸಚಿವ ಖಾದರ್ ಸೂಚನೆ

ಬಂಟ್ವಾಳ: ತಾಲೂಕಿನ ಬರಿಮಾರು ಸಮೀಪದ ಕಲೆಟ್ಟಿ ಪ್ರದೇಶದಲ್ಲಿ ಖಾಸಗಿ ಶಾಲಾ ಬಸ್ ಮೇಲೆ ಮರವೊಂದು ಬಿದ್ದು ಬಾಲಕಿ ಮೃತಪಟ್ಟಿದ್ದು, ಹಲವು ವಿದ್ಯಾರ್ಥಿಗಳು ಗಾಯಗೊಂಡಿರುವ ದುರ್ಘಟನೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಮೆರಿಕದ ಚಿಕಾಗೋ ಪ್ರವಾಸದಲ್ಲಿರುವ ಸಚಿವರು ಘಟನೆ ಕುರಿತು ಮಾಹಿತಿ ದೊರಕುತ್ತಿದ್ದಂತೆಯೇ ಜಿಲ್ಲಾಧಿಕಾರಿಯೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿ, ಮೃತ ಬಾಲಕಿಯ ಕುಟುಂಬಕ್ಕೆ ಸರ್ಕಾರದ ವತಿಯಿಂದ ತಕ್ಷಣ ಪರಿಹಾರ ಒದಗಿಸುವಂತೆ […]

Continue Reading

ಅಪಘಾತ ಸಂತ್ರಸ್ತರಿಗೆ ಮೊದಲ 7 ದಿನ ರೂ 2.5 ಲಕ್ಷವರೆಗೆ ಉಚಿತ ಚಿಕಿತ್ಸೆಗೆ ಸರಕಾರದ ಚಿಂತನೆ: ಆರೋಗ್ಯ ಸಚಿವ ಖಾದರ್

ಕುಮಟಾ: ರಾಜ್ಯದಲ್ಲಿ ಅಪಘಾತಕ್ಕೊಳಗಾಗುವ ಯಾವುದೇ ವ್ಯಕ್ತಿಗೆ, ಅವರು ರಾಜ್ಯದವರಾಗಲಿ, ದೇಶದ ಇತರ ಭಾಗದವರಾಗಲಿ ಅಥವಾ ವಿದೇಶಿಯರಾಗಲಿ ಆಸ್ಪತ್ರೆಗೆ ದಾಖಲಾದ ಮೊದಲ ಏಳು ದಿನಗಳವರೆಗೆ 2.5 ಲಕ್ಷದವರೆಗೆ ಉಚಿತ ಚಿಕಿತ್ಸೆ ನೀಡುವ ಮಹತ್ವಾಕಾಂಕ್ಷಿ ಯೋಜನೆಯನ್ನು ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಕುಮಟಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ಸಂಸ್ಥೆಯ ಸಿಎಸ್‌ಆರ್ ನಿಧಿಯಿಂದ ನಿರ್ಮಿಸಲಾದ ಟ್ರಾಮಾ ಕೇರ್ ಸೆಂಟರ್ ಮತ್ತು ತುರ್ತು ಚಿಕಿತ್ಸಾ […]

Continue Reading

ಎಲೆ ಚುಕ್ಕೆ, ಹಳದಿ, ಕೊಳೆ ರೋಗ ನಿಯಂತ್ರಣಕ್ಕೆ ವೈಜ್ಞಾನಿಕ ಅಧ್ಯಯನಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ನವದೆಹಲಿ: ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಹಾಗೂ ಮಲೆನಾಡು ಭಾಗದ ಅಡಿಕೆ ಬೆಳೆಗಾರರನ್ನು ಕಾಡುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಹಾಗೂ ಕೊಳೆ ರೋಗಗಳಿಗೆ ಶಾಶ್ವತ ವೈಜ್ಞಾನಿಕ ಪರಿಹಾರ ಕಲ್ಪಿಸುವಂತೆ ಹಾಗೂ ತೋಟಗಾರಿಕೆ ಅಭಿವೃದ್ಧಿ ರಾಷ್ಟ್ರೀಯ ಮಿಷನ್ (ಎಂಐಡಿಎಚ್) ನಿಯಮಾವಳಿಗೆ ತಿದ್ದುಪಡಿ ತರುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಲೋಕಸಭೆಯಲ್ಲಿ ಒತ್ತಾಯಿಸಿದರು. ಸದನದಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಅಡಿಕೆ ತೋಟಗಳಲ್ಲಿ ಪುನರಾವರ್ತಿತವಾಗಿ ಕಾಣಿಸಿಕೊಳ್ಳುತ್ತಿರುವ ವಿವಿಧ ರೋಗಗಳಿಂದ ರೈತರು ಭಾರೀ ನಷ್ಟ ಅನುಭವಿಸುತ್ತಿದ್ದಾರೆ. ರೋಗ ನಿರ್ಣಯ, […]

Continue Reading