ಬಿಣಗಾ–ಅರಗಾ ರಾಷ್ಟ್ರೀಯ ಹೆದ್ದಾರಿ ಏಕಮುಖ ಸಂಚಾರ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಆದೇಶ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾ ಕರಿದೇವಸ್ಥಾನದಿಂದ ಅರಗಾ ಮಹಾದೇವಸ್ಥಾನ ಕ್ರಾಸ್‌ವರೆಗೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಜುಲೈ 4 ರಿಂದ ಮಳೆಗಾಲ ಮುಗಿಯುವವರೆಗೆ ಏಕಮುಖ ಸಂಚಾರ ವ್ಯವಸ್ಥೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಆದೇಶ ಹೊರಡಿಸಿದ್ದಾರೆ. ಮಳೆಗಾಲದಲ್ಲಿ ಗುಡ್ಡ ಪ್ರದೇಶದಿಂದ ನೀರಿನ ರಭಸಕ್ಕೆ ಕಲ್ಲು ಹಾಗೂ ಮಣ್ಣು ರಾಷ್ಟ್ರೀಯ ಹೆದ್ದಾರಿಯ ಮೇಲೆ ಕುಸಿಯುವ ಸಾಧ್ಯತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಈ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಗುಡ್ಡ ಕುಸಿತದಿಂದ ವಾಹನ ಸವಾರರು ಹಾಗೂ ಪ್ರಯಾಣಿಕರ ಸುರಕ್ಷತೆಗೆ […]

Continue Reading

ಸಚಿವ ಯು.ಟಿ. ಖಾದರ್ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ: ಗಾಯಾಳು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಸಚಿವ ಖಾದರ್

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-66ರ ಬಾಳೆಗುಳಿ ಸಮೀಪ ಶನಿವಾರ ಸಚಿವ ಯು.ಟಿ. ಖಾದರ್ ಅವರ ಬೆಂಗಾವಲು ವಾಹನ ಮತ್ತು ಸ್ಕೂಟಿ ನಡುವೆ ಅಪಘಾತ ಸಂಭವಿಸಿದ್ದು, ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಅಲಗೇರಿ ನಿವಾಸಿ ಸಂದೀಪ್ ನಾಯಕ ಎಂದು ಗುರುತಿಸಲಾಗಿದೆ. ಕಾರವಾರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಕೃತಿ ವಿಕೋಪ ನಿರ್ವಹಣೆಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸಚಿವ ಯು.ಟಿ. ಖಾದರ್ ಅವರು ರಸ್ತೆ ಮಾರ್ಗವಾಗಿ ಉಡುಪಿಯತ್ತ ಪ್ರಯಾಣಿಸುತ್ತಿದ್ದರು. ಈ ವೇಳೆ […]

Continue Reading

ರಾಜ್ಯ ಮಟ್ಟದ ಟೇಬಲ್ ಟೆನಿಸ್: ಫೈನಲ್ , ಸೆಮಿಫೈನಲ್ ನಲ್ಲಿ ತೀವ್ರ ಹಣಾಹಣಿ

ಮಂಗಳೂರು: ರಾಜ್ಯ ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ವಿವಿಧ ವಿಭಾಗಗಳ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳು ರೋಚಕ ಪೈಪೋಟಿಗೆ ಸಾಕ್ಷಿಯಾದವು. ಅಂಡರ್-17 ಬಾಲಕಿಯರ ಸಿಂಗಲ್ಸ್ ವಿಭಾಗದ ಫೈನಲ್‌ನಲ್ಲಿ ಮಿಹಿಕಾ ಉಡುಪ ಅವರು ವಿಭಾ ತಾವಕರಿ ಅವರನ್ನು 11-9, 11-9, 11-6 ನೇರ ಸೆಟ್‌ಗಳಿಂದ ಮಣಿಸಿ ಪ್ರಶಸ್ತಿ ತಮ್ಮದಾಗಿಸಿಕೊಂಡರು. ಸೆಮಿಫೈನಲ್‌ನಲ್ಲಿ ಮಿಹಿಕಾ ಉಡುಪ ಅವರು ಐರಿನ್ ಅಣ್ಣಾ ಸುಭಾಷ್ ವಿರುದ್ಧ 11-5, 12-10, 6-11, 14-12 ಅಂತರದಲ್ಲಿ ಜಯ ಸಾಧಿಸಿದರು. ವಿಭಾ ತಾವಕರಿ ಅವರು ಹಿಯಾ ಸಿಂಗ್ ಅವರನ್ನು […]

Continue Reading

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಭವ್ಯ ಸ್ವಾಗತ

ಬೆಂಗಳೂರು: ಖ್ಯಾತ ಚಲನಚಿತ್ರ ನಿರ್ದೇಶಕ ಇಮ್ತಿಯಾಜ್ ಅಲಿ ತಮ್ಮ ಹೊಸ ಸಿನಿಮಾ ‘ಮೇನ್ ವಾಪಸ್ ಆವುಂಗಾ’ ಯಶಸ್ಸಿನ ಸಂಭ್ರಮಾಚರಣೆಯ ಭಾಗವಾಗಿ ಶುಕ್ರವಾರ ಬೆಂಗಳೂರಿಗೆ ಭೇಟಿ ನೀಡಿದ್ದರು. ಈ ವೇಳೆ ಸಿಲಿಕಾನ್ ಸಿಟಿಯ ಜನತೆ ಅವರಿಗೆ ಅಭೂತಪೂರ್ವ ಸ್ವಾಗತ ನೀಡಿದ್ದಾರೆ. ತಮ್ಮ ನೆಚ್ಚಿನ ನಿರ್ದೇಶಕನ ಕಣ್ಣುಂಬಿಕೊಳ್ಳಲು ಕೋರಮಂಗಲದ ನೆಕ್ಸಸ್ ಮಾಲ್, ಬನ್ನೇರುಘಟ್ಟ ರಸ್ತೆಯ ಪಿವಿಆರ್ ವೇಗಾ ಸಿಟಿ, ಪಿವಿಆರ್ ವಿಆರ್ ಬೆಂಗಳೂರು ಮತ್ತು ಪಿವಿಆರ್ ಫೀನಿಕ್ಸ್ ಮಾರ್ಕೆಟ್‌ಸಿಟಿಗೆ ಅಭಿಮಾನಿಗಳು ಸಾಗರೋಪಾದಿಯಲ್ಲಿ ಹರಿದು ಬಂದಿದ್ದರು. ಚಿತ್ರಮಂದಿರಗಳ ತುಂಬೆಲ್ಲಾ ಹರ್ಷೋದ್ಗಾರ, ಕಿಕ್ಕಿರಿದು […]

Continue Reading

ಮಂಗಳೂರು: ಮನೆ ಮೇಲೆ ಕುಸಿದು ಬಿದ್ದ ತಡೆಗೋಡೆ, ಮೂರು ಮಂದಿ ಸಾವು, ಸಚಿವ ಖಾದರ್ ದೆಹಲಿ ಪ್ರವಾಸ ರದ್ದು, ಅಧಿಕಾರಿಗಳು ಸ್ಥಳಕ್ಕೆ ದೌಡು

ಮಂಗಳೂರು: ಕಳೆದ ಕೆಲ ದಿನಗಳಿಂದ ವ್ಯಾಪಕವಾಗಿ ಸುರಿದ ಮಳೆಗೆ ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ನಾಗುರಿ ಪ್ರದೇಶದಲ್ಲಿ ಮನೆ ಮೇಲೆ ತಡೆಗೋಡೆಯೊಂದು ಕುಸಿದು ಬಿದ್ದು ಪರಿಣಾಮ ಮಹಿಳೆ ಸೇರಿದಂತೆ ಮೂರು ಮಂದಿ ದುರಂತ ಸಾವು ಕಂಡಿರುವ ಘಟನೆ ನಡೆದಿದೆ. ಹೆಂಚಿನ ಚಾವಣಿಯ ಮನೆ ಕುಸಿದ ಪರಿಣಾಮ ಮಹಿಳೆ ಹಾಗೂ ಇಬ್ಬರು ಬಾಲಕಿಯರು ಸಾವು ಕಂಡಿದ್ದಾರೆ. ಘಟನೆ ಸಂಭವಿಸಿದ ವೇಳೆ ಮನೆಯಲ್ಲಿ ಒಟ್ಟು ಆರು ಮಂದಿ ಇದ್ದರು ಎಂದು ತಿಳಿದು ಬಂದಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ರಾಷ್ಟ್ರೀಯ ವಿಪತ್ತು […]

Continue Reading

ತುಮಕೂರು ನಾಡಬಾಂಬ್ ಸ್ಫೋಟ ಪ್ರಕರಣ: ನಾಲ್ಕು ಮಂದಿ ವಶಕ್ಕೆ ಪಡೆದ ಅಂಕೋಲಾ ಪೊಲೀಸರು, ಜಿಲ್ಲೆಯಲ್ಲಿ  ನಾಡಬಾಂಬ್ ಸ್ಪೋಟದ ಕಿಡಿ

ಕಾರವಾರ: ತುಮಕೂರು ಸಮೀಪದಲ್ಲಿ ಕಾರಿನಲ್ಲಿ ನಾಡಬಾಂಬ್ ಸ್ಫೋಟಗೊಂಡು ಅಂಕೋಲಾ ಮೂಲದ ನಾಗೇಂದ್ರ ಗೌಡ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪೊಲೀಸರು ನಾಲ್ಕು ಮಂದಿಯನ್ನ ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದು, ನಾಡಬಾಂಬ್ ತಯಾರಿಕೆ ಮತ್ತು ಪೂರೈಕೆ ಜಾಲದ ಬಗ್ಗೆ ಮಹತ್ವದ ಮಾಹಿತಿ ಕಲೆ ಹಾಕುತ್ತಿದ್ದಾರೆ. ಇದೀಗ ನಾಡಬಾಂಬ್ ಪ್ರಕರಣವೂ ಇಡಿ ಜಿಲ್ಲೆಯಲ್ಲಿಯೇ ಸಂಚಲನಕ್ಕೆ ಕಾರಣ ಆಗಿದೆ. ಪೊಲೀಸ್ ಮೂಲಗಳ ಪ್ರಕಾರ, ವಶಕ್ಕೆ ಪಡೆದಿರುವ ನಾಲ್ಕು […]

Continue Reading

ಬೈಕಂಪಾಡಿ: ಕೇರಳ ಉದ್ಯಮಿ ಕಾರು ಅಡ್ಡಗಟ್ಟಿದ ದುಷ್ಕರ್ಮಿಗಳ ತಂಡ, ಪತ್ನಿ-ಪುತ್ರನ ಅಪಹರಣ, 20 ಲಕ್ಷ ಮೌಲ್ಯದ ಸ್ವತ್ತು ದೋಚಿ ಪರಾರಿ

ಮಂಗಳೂರು: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66 ರ ಬೈಕಂಪಾಡಿಯಲ್ಲಿ ಸೋಮವಾರ ಸಿನಿಮೀಯ ರೀತಿಯಲ್ಲಿ ನಡೆದ ದರೋಡೆ ಪ್ರಕರಣ ವ್ಯಾಪಕ ಆತಂಕಕ್ಕೆ ಕಾರಣ ಆಗಿದೆ. ಉದ್ಯಮಿಯೊಬ್ಬರ ಕಾರ ಅನ್ನು ಅಡ್ಡಗಟ್ಟಿದ ದುಷ್ಕರ್ಮಿಗಳ ತಂಡವೊಂದು ಅವರ ಪತ್ನಿ ಹಾಗೂ ಮಗನನ್ನು ಕಾರಿನಲ್ಲೇ ಅಪಹರಿಸಿ, ಚಿನ್ನಾಭರಣ ದೋಚಿದ ಬಳಿಕ ರಸ್ತೆ ಬದಿಯಲ್ಲಿ ಬಿಟ್ಟು ಪರಾರಿ ಆಗಿದೆ. ದರೋಡೆಗೆ ಒಳಗಾದವರು ಕೇರಳ ಮೂಲದವರಾಗಿದ್ದು, ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಉದ್ಯಮ ನಡೆಸುತ್ತಿದ್ದಾರೆ. ಅವರು ಪತ್ನಿ ಹಾಗೂ ಮಗನ ಜತೆಗೆ ಕಾರಿನಲ್ಲಿ ಸಾಂಗ್ಲಿಯಿಂದ ಪಯ್ಯನ್ನೂರಿಗೆ ತೆರಳುತ್ತಿದ್ದ ವೇಳೆ […]

Continue Reading

ಮಂಗಳೂರಿನ ದೇರಳಕಟ್ಟೆಯಲ್ಲಿ ಎಂಸಿಸಿ ಬ್ಯಾಂಕ್‌ 22 ನೇ ಶಾಖೆ, ಎಟಿಎಂ ಉದ್ಘಾಟನೆ

ಮಂಗಳೂರು: ಎಂಸಿಸಿ ಬ್ಯಾಂಕ್ ಲಿಮಿಟೆಡ್ ತನ್ನ 22ನೇ ಶಾಖೆ ಹಾಗೂ ನೂತನ ಎಟಿಎಂ ಅನ್ನು ಭಾನುವಾರ ದೇರಳಕಟ್ಟೆಯ ಫಾ. ಮುಲ್ಲರ್ ಕಾಂಪ್ಲೆಕ್ಸ್‌ನಲ್ಲಿ ಉದ್ಘಾಟಿಸಿತು. ಸಹಕಾರ ರತ್ನ ಹಾಗೂ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ನೂತನ ಶಾಖೆಯನ್ನು ಉದ್ಘಾಟಿಸಿದರೆ, ಫಾ. ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ ಆಡಳಿತಾಧಿಕಾರಿ ಫಾ. ನಿಲೇಶ್ ಕ್ರಾಸ್ತಾ ಎಟಿಎಂಗೆ ಚಾಲನೆ ನೀಡಿದರು. ಉರ್ಸುಲಿನ್ ಫ್ರಾನ್ಸಿಸ್ಕನ್ ಸಿಸ್ಟರ್ಸ್‌ನ ಸುಪೀರಿಯರ್ ಜನರಲ್ ಸಿ. ಮಿಲ್ಲಿ ಫೆರ್ನಾಂಡಿಸ್ ಸೇಫ್ ರೂಂ ಉದ್ಘಾಟಿಸಿದರೆ, ಫಾ. ನೆಲ್ಸನ್ ದೀರಜ್ ಪಾಯ್ಸ್ ಇ-ಸ್ಟಾಂಪ್ […]

Continue Reading

3 ವರ್ಷಗಳಲ್ಲಿ ರಾಜ್ಯವನ್ನು ಆರ್ಥಿಕ ಸಂಕಷ್ಟಕ್ಕೆ ತಳ್ಳಿದೆ ಕಾಂಗ್ರೆಸ್ ಸರ್ಕಾರ: ಬಿಜೆಪಿ ವಕ್ತಾರ ಚಂದ್ರಶೇಖರ್

ಕಾರವಾರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮೂರು ವರ್ಷ ಪೂರೈಸಿರುವ ಬೆನ್ನಲ್ಲೇ ಆಡಳಿತದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ಆರ್ಥಿಕವಾಗಿ ಸದೃಢವಾಗಿದ್ದ ಕರ್ನಾಟಕವನ್ನು ಕಾಂಗ್ರೆಸ್ ಸರ್ಕಾರ ಸಾಲದ ಸುಳಿಗೆ ಸಿಲುಕಿಸಿದ್ದು, ಇದೇ ಆಡಳಿತ ಇನ್ನೆರಡು ವರ್ಷ ಮುಂದುವರಿದರೆ ಜನಸಾಮಾನ್ಯರ ಸಂಕಷ್ಟ ಮತ್ತಷ್ಟು ಹೆಚ್ಚಲಿದೆ ಎಂದು ರಾಜ್ಯ ಬಿಜೆಪಿ ವಕ್ತಾರ ಎಚ್.ಎನ್. ಚಂದ್ರಶೇಖರ್ ಅವರು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು. ರಾಜ್ಯದ ಆಡಳಿತ ವ್ಯವಸ್ಥೆ ಎಂಜಿನ್ ಕೆಟ್ಟು, ಟಯರ್ ಪಂಚರ್ ಆಗಿರುವ ಬಸ್ಸಿನಂತಾಗಿದೆ. ಮುಖ್ಯಮಂತ್ರಿ ಬದಲಾದರೂ ಆಡಳಿತ ವ್ಯವಸ್ಥೆಯ ವೈಫಲ್ಯ ಮಾತ್ರ ಬದಲಾಗಿಲ್ಲ. […]

Continue Reading

ಕಾನಸೂರು ವಸತಿ ಶಾಲೆಯ ವಿದ್ಯಾರ್ಥಿ ಆತ್ಮಹತ್ಯೆಯ ಪ್ರಕರಣ, ಹಿಂದಿ ಶಿಕ್ಷಕ ಆರೆಸ್ಟ್

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರು ವಸತಿ ಶಾಲೆಯ ವಿದ್ಯಾರ್ಥಿ ಗೋಕುಲ್ ಗೌಡ ಆತ್ಮಹತ್ಯೆ ಪ್ರಕರಣಕ್ಕೆ ದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಹಿಂದಿ ಶಿಕ್ಷಕ ಅಬ್ಬು ತಹಲ ಎಂಬುವವರನ್ನು ಪೊಲೀಸರು ಬಂಧನ ಮಾಡಿದ್ದಾರೆ. ಜೂನ್ 9 ರಂದು ವಿದ್ಯಾರ್ಥಿ ಗೋಕುಲ್ ಗೌಡ ಆತ್ಮಹತ್ಯೆ ಮಾಡಿಕೊಂಡ ಬಳಿಕ, ಮೃತ ವಿದ್ಯಾರ್ಥಿ ತಾಯಿ ನೀಡಿದ ದೂರಿನ ಮೇರೆಗೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ದೂರಿನಲ್ಲಿ ಶಿಕ್ಷಕ ಅಬ್ಬು ತಹಲ ಅವರು […]

Continue Reading