ಜಿಎಂಯು ದಂತ ವೈದ್ಯಕೀಯ ಕಾಲೇಜಿಗೆ ವಿಶ್ವಮಟ್ಟದ ಮಾನ್ಯತೆ, 120 ದಂತ ಚಿಕಿತ್ಸಾ ಘಟಕಗಳ ಮೂಲಕ ಪ್ರಾಯೋಗಿಕ ತರಬೇತಿಗೆ ಆದ್ಯತೆ

ಮಂಗಳೂರು: ಗಲ್ಫ್ ಮೆಡಿಕಲ್ ಯೂನಿವರ್ಸಿಟಿ (ಜಿಎಂಯು)ಯ ದಂತ ವೈದ್ಯಕೀಯ ಕಾಲೇಜು ವಿಶ್ವಮಟ್ಟದ ಕ್ಲಿನಿಕಲ್ ಶಿಕ್ಷಣ ವ್ಯವಸ್ಥೆ ಹಾಗೂ ಅತ್ಯಾಧುನಿಕ ಮೂಲಸೌಕರ್ಯದಿಂದ ಗಮನ ಸೆಳೆದಿದೆ. ವಿಶ್ವವಿದ್ಯಾಲಯದ ಅಧೀನದಲ್ಲಿರುವ ಥಂಬೇ ಡೆಂಟಲ್ ಆಸ್ಪತ್ರೆಯಲ್ಲಿ 120 ದಂತ ಚಿಕಿತ್ಸಾ ಕುರ್ಚಿಗಳ ವ್ಯವಸ್ಥೆ ಕಲ್ಪಿಸಲಾಗಿದ್ದು, ವಿದ್ಯಾರ್ಥಿಗಳಿಗೆ ನೈಜ ರೋಗಿಗಳ ಚಿಕಿತ್ಸೆಯ ಮೂಲಕ ಪ್ರಾಯೋಗಿಕ ತರಬೇತಿ ನೀಡಲಾಗುತ್ತಿದೆ. ದಂತ ಶಿಕ್ಷಣದಲ್ಲಿ ಪ್ರಾಯೋಗಿಕ ಅನುಭವಕ್ಕೆ ಹೆಚ್ಚಿನ ಮಹತ್ವ ನೀಡಿರುವ ಕಾಲೇಜು, ಆರಂಭಿಕ ಹಂತದಿಂದಲೇ ತಜ್ಞ ವೈದ್ಯರ ಮೇಲ್ವಿಚಾರಣೆಯಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸಾ ಕೌಶಲ್ಯ ಬೆಳೆಸುವ ಅವಕಾಶ ಒದಗಿಸಿದೆ. […]

Continue Reading

ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಅಮಾನವೀಯ ಕೃತ್ಯ, ಸಚಿವರ ರಾಜೀನಾಮೆಗೆ ಪದ್ಮರಾಜ್ ಪೂಜಾರಿ ಆಗ್ರಹ

ಮಂಗಳೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ತಡೆಯುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ಅದರ ಪರಿಣಾಮವಾಗಿ ದೇಶದಾದ್ಯಂತ ವಿದ್ಯಾರ್ಥಿಗಳು ಪ್ರತಿಭಟನೆಗೆ ಇಳಿಯುವಂತಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಅವರು ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಆರೋಪಿಸಿದರು. ನವದೆಹಲಿಯಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಪೊಲೀಸರು ನಡೆಸಿಕೊಂಡಿರುವ ರೀತಿಯು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ ತರುವಂತಿದ್ದು, ಕೇಂದ್ರ ಸರ್ಕಾರ ಇದಕ್ಕೆ ಉತ್ತರಿಸಬೇಕಿದೆ. ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ […]

Continue Reading

ಕಾಸರಗೋಡಿನಲ್ಲಿ ಜು.27 ಕ್ಕೆ ಆರ್‌ವಿಆರ್‌ ಹೆಲ್ತ್‌ ಕೇರ್‌ ನ್ಯೂರೋ ಅಂಕಾಲಜಿ ಸೆಂಟರ್‌ ಉದ್ಘಾಟನೆ: ಡಾ. ರಾಘವೇಂದ್ರ

ಮಂಗಳೂರು: ಆರ್‌ವಿಆರ್‌ ಹೆಲ್ತ್‌ ಕೇರ್‌ನ ಉಪ ಶಾಖೆ ಆರ್‌ವಿಆರ್‌ ಹೆಲ್ತ್‌ ಕೇರ್‌ ನ್ಯೂರೋ ಆಂಕಾಲಜಿ ಸೆಂಟರ್‌ ಇದೇ 26 ರಂದು ಕಾಸರಗೋಡಿನಲ್ಲಿ ಕಾರ್ಯಾರಂಭ ಮಾಡಲಿದ್ದು, ಒಂದೂವರೆ ತಿಂಗಳಿನಿಂದ ಮಂಗಳೂರಿನ ಫಳ್ನೀರ್‌ನಲ್ಲಿ ಇರುವ ಕೇಂದ್ರದಲ್ಲಿ ರೋಗಿಗಳಿಗೆ ಅತ್ಯಾಧುನಿಕ ವೈದ್ಯಕೀಯ ಸೇವೆಗಳನ್ನು ಒದಗಿಸಲಾಗುತ್ತಿದೆ ಎಂದು ಆರ್‌ವಿಆರ್‌ ಸೂಪರ್‌ ಸ್ಪೆಷಾಲಿಟಿ ಸೆಂಟರ್‌ ನಿರ್ದೇಶಕ ಡಾ. ರಾಘವೇಂದ್ರ ಬಿ.ಎಸ್‌ ಅವರು ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ನ್ಯೂರೋ ಹಾಗೂ ಕ್ಯಾನ್ಸರ್‌ ರೋಗಗಳ ಚಿಕಿತ್ಸೆಗೆ ವಿಶೇಷ ಒತ್ತು ನೀಡಲಾಗುತ್ತಿದ್ದು, ವಿವಿಧ ತಜ್ಞ ವೈದ್ಯರ ಸೇವೆಯೊಂದಿಗೆ ಒಂದೇ […]

Continue Reading

ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನಲೆ: ಜುಲೈ 25 ರಂದು ಶಾಲೆಗಳಿಗೆ ರಜೆ ಘೋಷಣೆ: ಸ್ವರೂಪ್

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯ   ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು, ಡಿಪ್ಲೊಮೊ, ಐಟಿಐ ಕಾಲೇಜುಗಳಿಗೆ ಜುಲೈ 25 ರಂದು ರಜೆ ಘೋಷಿಸಿ  ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಆದೇಶ ಹೊರಡಿಸಿದ್ದಾರೆ.  

Continue Reading

ಶ್ರೀನಿವಾಸ ವಿವಿಯಲ್ಲಿ ಎಐ ತಂತ್ರಜ್ಞಾನದ ಸಂಚಲನ: ಸ್ವಯಂಚಾಲಿತ ವಿದ್ಯುತ್ ವಾಹನ, ‘ಶ್ರೀನಿಬೋಟ್’ ರೋಬೋಟ್ ಅನಾವರಣ

ಮಂಗಳೂರು: ಕೃತಕ ಬುದ್ಧಿಮತ್ತೆ ರೋಬೋಟಿಕ್ಸ್ ಹಾಗೂ ಸ್ವಯಂಚಾಲಿತ ತಂತ್ರಜ್ಞಾನ ಕ್ಷೇತ್ರದಲ್ಲಿ ಶ್ರೀನಿವಾಸ ವಿಶ್ವವಿದ್ಯಾಲಯದ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು ಮಹತ್ವದ ಸಾಧನೆ ದಾಖಲಿಸಿದ್ದಾರೆ. ಮುಕ್ಕ ಕ್ಯಾಂಪಸ್‌ನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಅಭಿವೃದ್ಧಿಪಡಿಸಿದ ಶ್ರೀ ವಾಹನ್’ ಎಐ ಆಧಾರಿತ ಸ್ವಯಂಚಾಲಿತ ವಿದ್ಯುತ್ ವಾಹನ ಹಾಗೂ ಶ್ರೀನಿಬೋಟ್’ ಎಐ ರಿಸೆಪ್ಷನ್ ರೋಬೋಟ್** ಅನ್ನು ಯಶಸ್ವಿಯಾಗಿ ಪ್ರದರ್ಶಿಸಲಾಯಿತು. ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಆರ್ಥಿಕ ನೆರವು ಹಾಗೂ ಅಧ್ಯಾಪಕರ ಮಾರ್ಗದರ್ಶನದಲ್ಲಿ ರೂಪುಗೊಂಡಿರುವ ಈ ಯೋಜನೆಗಳು ಸಂಶೋಧನೆ, ನವೋದ್ಯಮ ಮತ್ತು […]

Continue Reading

ದೇಶದ ಮೊದಲ ಐಬಿಎಂ ಎಐ ಲ್ಯಾಬ್‌ಗೆ ಆಳ್ವಾಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಚಾಲನೆ

ಮೂಡುಬಿದಿರೆ: ಕೃತಕ ಬುದ್ಧಿಮತ್ತೆ (ಎಐ) ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದ ತಾಂತ್ರಿಕ ಅನುಭವ ಕಲ್ಪಿಸುವ ಮಹತ್ವದ ಹೆಜ್ಜೆಯಾಗಿ, ಐಬಿಎಂ ಸಾಫ್ಟ್‌ವೇರ್ ಲ್ಯಾಬ್ಸ್ ಸಹಯೋಗದಲ್ಲಿ ಮೂಡುಬಿದಿರೆಯ ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿ (ಎಐಇಟಿ)ಯಲ್ಲಿ ದೇಶದ ಮೊದಲ ಐಬಿಎಂ ಎಐ ಲ್ಯಾಬ್‌ಗೆ ಬುಧವಾರ ಚಾಲನೆ ನೀಡಲಾಯಿತು. ವಿದ್ಯಾರ್ಥಿಗಳು ಮತ್ತು ಅಧ್ಯಾಪಕರಿಗೆ ಅತ್ಯಾಧುನಿಕ ಕೃತಕ ಬುದ್ಧಿಮತ್ತೆ ತಂತ್ರಜ್ಞಾನಗಳ ನೇರ ಪ್ರಾಯೋಗಿಕ ಅನುಭವ ಒದಗಿಸುವ ಉದ್ದೇಶದಿಂದ ಸ್ಥಾಪಿಸಲಾದ ಈ ಲ್ಯಾಬ್‌ನಲ್ಲಿ ಐಬಿಎಂ ವಾಟ್ಸನ್‌ಎಕ್ಸ್.ಎಐ, ವಾಟ್ಸನ್‌ಎಕ್ಸ್ ಆರ್ಕೆಸ್ಟ್ರೇಟ್ ಸೇರಿದಂತೆ ಎಐ ಆಧಾರಿತ […]

Continue Reading

119ನೇ ಸಂಸ್ಥಾಪನಾ ದಿನ; ಬ್ಯಾಂಕ್ ಆಫ್ ಬರೋಡಾದಿಂದ ಡಿಜಿಟಲ್ ಸೇವೆಗಳಿಗೆ ಹೊಸ ವೇಗ

ಮಂಗಳೂರು: ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್‌ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾ ತನ್ನ 119 ನೇ ಸಂಸ್ಥಾಪನಾ ದಿನವನ್ನು ಆಚರಿಸಿ, ಗ್ರಾಹಕರಿಗೆ ಇನ್ನಷ್ಟು ಸುಲಭ ಹಾಗೂ ಸುರಕ್ಷಿತ ಸೇವೆ ಒದಗಿಸುವ ಉದ್ದೇಶದಿಂದ ಹಲವು ಹೊಸ ಬ್ಯಾಂಕಿಂಗ್ ಯೋಜನೆಗಳನ್ನು ಪರಿಚಯಿಸಿದೆ. ಈ ವರ್ಷದ ಧ್ಯೇಯವಾಕ್ಯ ‘ವಿಶ್ವಾಸದೊಂದಿಗೆ ಮುನ್ನಡೆ’ಆಗಿದ್ದು, ಗ್ರಾಹಕರ ವಿಶ್ವಾಸವನ್ನು ಮತ್ತಷ್ಟು ಬಲಪಡಿಸುವ ಜೊತೆಗೆ ತಂತ್ರಜ್ಞಾನ ಆಧಾರಿತ ಸೇವೆಗಳನ್ನು ವಿಸ್ತರಿಸಲು ಬ್ಯಾಂಕ್ ಆದ್ಯತೆ ನೀಡಿದೆ. ಸಂಸ್ಥಾಪನಾ ದಿನದ ಅಂಗವಾಗಿ ಬ್ಯಾಂಕಿನ ಜಾಗತಿಕ ರಾಯಭಾರಿ ಸಚಿನ್ ತೆಂಡೂಲ್ಕರ್ ಅವರು ಹೊಸ […]

Continue Reading

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್

ಬೆಂಗಳೂರು: 8 ವರ್ಷಗಳ ನಂತರ ಗಡಿಯಾರ ಚಿತ್ರದ ನಿರ್ದೇಶಕ ಪ್ರಬಿಕ್ ಮೊಗವೀರ್ ಅವರು ಪಿಸ್ತೂಲ್ ಹೆಸರಿನ ಚಿತ್ರವನ್ನು ನಿರ್ದೇಶನ ಮಾಡಲು ಮುಂದಾಗಿದ್ದಾರೆ. ಒಂದು ಗನ್ ಆರು ಬುಲೆಟ್ ಎನ್ನುವ ಅಡಿಬರಹ ಈ ಚಿತ್ರಕ್ಕೆ ಇದೆ. ಪಕ್ಕ ಮಾಸ್ ಜತೆಗೆ ಥ್ರಿಲಿಂಗ್ ಕಂಟೆಂಟ್ ಇದು ಒಳಗೊಂಡಿದೆ. ನಿರ್ದೇಶಕರು ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಚಿತ್ರದ ಚಿತ್ರೀಕರಣ ಶೀಘ್ರದಲ್ಲೇ ಆರಂಭವಾಗಲಿದೆ. ಚಿತ್ರದ ಕಥಾ ವಸ್ತು ವಿಭಿನ್ನವಾಗಿರಲಿದೆ ಎಂದು ಪ್ರಬಿಕ್ ಮೊಗವೀರ್ ಅವರು ಹೇಳಿದ್ದಾರೆ. ಪ್ರಬಿಕ್ ಮೊಗವೀರ್ ಅವರು ಹಿಂದೆ ನಿರ್ದೇಶಿಸಿದ್ದ ಗಡಿಯಾರ […]

Continue Reading

ಮಂಗಳೂರು ವಿಶ್ವವಿದ್ಯಾಲಯ ಹೊಸ ದಾಖಲೆ, 2 ದಿನಗಳಲ್ಲಿ 13,286 ವಿದ್ಯಾರ್ಥಿಗಳ ರಿಸಲ್ಟ್ ಘೋಷಣೆ: ಕುಲಪತಿ ಪ್ರೊ. ಪಿ.ಎಲ್ . ಧರ್ಮ

ಮಂಗಳೂರು: ಸದಾ ಒಂದಿಲ್ಲ ಒಂದು ಸುದ್ದಿಯಲ್ಲಿ ಇರುವ ಮಂಗಳೂರು ವಿವಿ ಈಗ ಮತ್ತೆ ಹೊಸ ದಾಖಲೆ ಮಾಡುವ ಮೂಲಕ ಸುದ್ದಿಯಲ್ಲಿದೆ. ವಿಶ್ವವಿದ್ಯಾಲಯ ವಿವಿಧ ಪದವಿ ಕೋರ್ಸ್‌ಗಳ ಅಂತಿಮ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶವನ್ನು ಮೌಲ್ಯಮಾಪನ ಆಗಿ ಎರಡು ದಿನಗಳಲ್ಲೇ ಪ್ರಕಟಿಸುವ ಮೂಲಕ ಹೊಸ ದಾಖಲೆಗೆ ಸೇರ್ಪಡೆ ಆಗಿದೆ. ಜೂನ್- ಜುಲೈನಲ್ಲಿ ನಡೆದ ವಿವಿಧ ಪದವಿ ಕೋರ್ಸ್‌ಗಳ 6 ನೇ ಸೆಮಿಸ್ಟರ್ ಹಾಗೂ ಬಿ.ಎಚ್.ಎಂ. 8 ನೇ ಸೆಮಿಸ್ಟರ್ ಪರೀಕ್ಷೆಗಳ ಮೌಲ್ಯಮಾಪನ ಜುಲೈ 18 ರಂದು ಪೂರ್ಣಗೊಂಡಿರುವ ಬೆನ್ನಲ್ಲೆ ಜುಲೈ […]

Continue Reading

ಕೆಎಂಸಿ ಅತ್ತಾವರದಲ್ಲಿ ವಿಶೇಷ ‘ಸಂಜೆ ಕ್ಲಿನಿಕ್’ ಆರಂಭ, ಗುಣಮಟ್ಟದ ಆರೋಗ್ಯ ಸೇವೆಗೆ ಹೆಜ್ಜೆ

ಮಂಗಳೂರು: ಉದ್ಯೋಗಿಗಳು, ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಹಾಗೂ ಹಗಲಿನ ವೇಳೆ ಆಸ್ಪತ್ರೆಗೆ ಭೇಟಿ ನೀಡಲು ಸಾಧ್ಯವಾಗದವರಿಗೆ ಅನುಕೂಲವಾಗುವಂತೆ ಕೆಎಂಸಿ ಆಸ್ಪತ್ರೆ ಅತ್ತಾವರದಲ್ಲಿ ತಜ್ಞ ವೈದ್ಯರ ಸಮಾಲೋಚನೆಗಾಗಿ ವಿಶೇಷ ‘ಸಂಜೆ ಕ್ಲಿನಿಕ್’ ಆರಂಭಿಸಲಾಗಿದೆ. ಸಾಮಾನ್ಯ ಕೆಲಸದ ವೇಳೆಯ ನಂತರವೂ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಈ ಹೊಸ ಸೇವೆ ಆರಂಭಿಸಲಾಗಿದೆ ಎಂದು ಆಸ್ಪತ್ರೆ ಪ್ರಕಟಣೆ ತಿಳಿಸಿದೆ. ಸಂಜೆ 5 ರಿಂದ 7 ಗಂಟೆಯವರೆಗೆ ಕಾರ್ಯನಿರ್ವಹಿಸುವ ಈ ಕ್ಲಿನಿಕ್‌ನಲ್ಲಿ ಹೃದ್ರೋಗ, ಸಾಮಾನ್ಯ ವೈದ್ಯಕೀಯ, ಹಸ್ತ ಶಸ್ತ್ರಚಿಕಿತ್ಸೆ, ಮೂತ್ರಪಿಂಡ, ಮೆದುಳಿನ […]

Continue Reading